Homeಕರ್ನಾಟಕಬೆಂಗಳೂರು: ಫೇಸ್‌ಬುಕ್‌ ಗೆಳತಿಯಿಂದ ವಂಚನೆ, 37 ಲಕ್ಷ ರೂ. ಕಳೆದುಕೊಂಡ ಸ್ವಾಮೀಜಿ

ಬೆಂಗಳೂರು: ಫೇಸ್‌ಬುಕ್‌ ಗೆಳತಿಯಿಂದ ವಂಚನೆ, 37 ಲಕ್ಷ ರೂ. ಕಳೆದುಕೊಂಡ ಸ್ವಾಮೀಜಿ

- Advertisement -
- Advertisement -

ಸಾಮಾಜಿಕ ಮಾಧ್ಯಮವಾದ ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವತಿಯೊಬ್ಬರು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರಿಗೆ 37 ಲಕ್ಷ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ.

ಫೇಸ್‌ಬುಕ್‌ನಲ್ಲಿ ಪರಿಚಯವಾಗಿ, ನಂತರ ವಿಡಿಯೊ ಕಾಲ್‌ಗಳ ಮೂಲಕ ಸಲುಗೆ ತೋರುತ್ತಿದ್ದ ಯುವತಿಯು ಚನ್ನವೀರ ಶಿವಾಚಾರ್ಯ ಸ್ವಾಮೀಜಿಯಿಂದ 37 ಲಕ್ಷ ರೂಪಾಯಿ ಕಸಿದುಕೊಂಡಿರುವ ಸಂಬಂಧ ದಾಬಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಆಗಿದೆ.

“ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರು ಹಣ ವರ್ಗಾವಣೆ ದಾಖಲೆ ಸಮೇತ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಯುವತಿ ವರ್ಷಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಏನಿದು ಪ್ರಕರಣ?

ಶಿವಾಚಾರ್ಯ ಸ್ವಾಮೀಜಿಗೆ 2020ರಲ್ಲಿ ವರ್ಷಾ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್‌ ಬಂದಿತ್ತು. ಅವರನ್ನು ಸ್ವಾಮೀಜಿ ಫ್ರೆಂಡ್ ಮಾಡಿಕೊಂಡಿದ್ದರು. ಅಧ್ಯಾತ್ಮದಲ್ಲಿ ಆಸಕ್ತಿ ಇದೆ ಎನ್ನುತ್ತಾ ಯುವತಿಯು ಸ್ವಾಮೀಜಿಯೊಂದಿಗೆ ಚಾಟ್ ಮಾಡುತ್ತಿದ್ದಳು. ಸ್ವಾಮೀಜಿಯ ಮೊಬೈಲ್ ನಂಬರ್‌ ಪಡೆದು, ತನ್ನ ನಂಬರ್‌ ಕೂಡ ಶೇರ್‌ ಮಾಡಿಕೊಂಡಿದ್ದಳು ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮೊಬೈಲ್ ನಂಬರ್ ಪಡೆದ ಬಳಿಕ ವಾಟ್ಸ್‌ಆ್ಯಪ್‌ನಲ್ಲಿ ಚಾಟ್‌ ಕೂಡ ಮಾಡುತ್ತಿದ್ದರು. ತಾನೊಬ್ಬ ಅನಾಥೆ ಎನ್ನುತ್ತಿದ್ದ ವರ್ಷಾ, ವಿಡಿಯೊ ಕಾಲ್‌ ಮಾಡಲಾರಂಭಿಸಿದ್ದಳು. ಹಲವು ಬಾರಿ ವಿಡಿಯೊ ಕರೆ ಮಾಡಿದ್ದ ಯುವತಿ, ಎಂದಿಗೂ ಮುಖ ತೋರಿಸಿರಲಿಲ್ಲ. ಕೈ–ಕಾಲುಗಳನ್ನು ಮಾತ್ರ ತೋರಿಸಿ ಮಾತನಾಡುತ್ತಿದ್ದಳು” ಎಂದೂ ಸ್ವಾಮೀಜಿ ದೂರಿನಲ್ಲಿ ಹೇಳಿದ್ದಾರೆ.

“ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್ ಮಾಡುತ್ತಿರುವುದಾಗಿ ಹೇಳಿಕೊಂಡು 2 ಲಕ್ಷ ರೂಪಾಯಿ ನನ್ನಿಂದ ಪಡೆದುಕೊಂಡಿದ್ದಳು. ತನ್ನ ಹೆಸರಿನಲ್ಲಿರುವ ಜಮೀನನ್ನು ಮಠದ ಹೆಸರಿಗೆ ಬರೆದುಕೊಡುವುದಾಗಿ ಹೇಳಿ, ಹಂತಹಂತವಾಗಿ ಹೆಚ್ಚುವರಿಯಾಗಿ 35 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿಕೊಂಡಿದ್ದಳು” ಎಂದು ಸ್ವಾಮೀಜಿ ತಿಳಿಸಿದ್ದಾರೆ.

“ಜಮೀನು ದಾಖಲೆ ತರುವ ವೇಳೆ ನನ್ನ ಮೇಲೆ ಹಲ್ಲೆಯಾಗಿದೆ, ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವರ್ಷಾ ಹೇಳಿಕೊಂಡಿದ್ದರು. ಆಸ್ಪತ್ರೆಯ ಬಿಲ್ ಪಾವತಿಗಾಗಿ ಮತ್ತೆ ಹಣದ ಕೋರಿಕೆ ಇಟ್ಟಿದ್ದಳು. ಆನಂತರ ಅನುಮಾನಗೊಂಡು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಪರಿಚಯಸ್ಥರೊಬ್ಬರನ್ನು ಕಳಿಸಿ ವಿಚಾರಿಸಿದೆ. ವರ್ಷಾ ಎಂಬವರು ಯಾರೂ ದಾಖಲಾಗಿಲ್ಲ ಎಂದು ತಿಳಿಯಿತು” ಎಂದಿದ್ದಾರೆ ಸ್ವಾಮೀಜಿ.

ಇದನ್ನೂ ಓದಿರಿ: ಚಂಡೀಗಢ: ಬಿಜೆಪಿ ಸಂಸದೆ ಜೊತೆ ವಾಗ್ವಾದ; ಸದನದಿಂದ ಎಎಪಿ ಕೌನ್ಸಿಲರ್‌ಗಳ ಅಮಾನತು

“ವರ್ಷಾ ಸ್ನೇಹಿತೆ ಎನ್ನಲಾದ ಮಂಜುಳಾಗೆ ಕಾಲ್‌ ಮಾಡಿದಾಗ, 55 ಲಕ್ಷ ರೂಪಾಯಿ ಸಾಲ ಮಾಡಿ ವರ್ಷಾರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದ್ದರು. ಆಸ್ಪತ್ರೆಗೆ ನೀಡಿರುವ ಹಣವನ್ನು ಸಾಲದ ರೂಪದಲ್ಲಿ ತಂದಿದ್ದು, ಅದನ್ನು ತೀರಿಸಬೇಕು. ನೀವು ಹಣ ನೀಡದಿದ್ದರೆ ವರ್ಷಾ ಜೊತೆಗಿನ ಸಲುಗೆಯ ವಿಷಯವನ್ನು ಎಲ್ಲರಿಗೂ ಹೇಳಿ ಮರ್ಯಾದೆ ತೆಗೆಯುತ್ತೇನೆ ಎಂದು ಬೆದರಿಸಲಾಗಿತ್ತು” ಎಂದು ಸ್ವಾಮೀಜಿ ಹೇಳಿರುವುದಾಗಿ ವರದಿಯಾಗಿದೆ.

ವರ್ಷಾ ಕಡೆಯವರು ಎನ್ನಲಾದ ಮಂಜುಳಾ ಹಾಗೂ ಇತರರು ಮೇ 23ರಂದು ಮಠಕ್ಕೆ ಹೋಗಿ ಗಲಾಟೆ ಮಾಡಿದ್ದರು. 55 ಲಕ್ಷ ರೂಪಾಯಿ ವಾಪಸ್‌ ಕೊಡುವಂತೆ ಸ್ವಾಮೀಜಿಗೆ ಧಮ್ಕಿ ಹಾಕಿದ್ದರು. ಇದಾದ ನಂತರ ಸ್ವಾಮೀಜಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.

ಸ್ವಾಮೀಜಿ ಸುಮಾರು 50 ಲಕ್ಷ ರೂಪಾಯಿವರೆಗೂ ಹಣ ಕಳೆದುಕೊಂಡಿರುವ ಸಾಧ್ಯತೆ ಇದೆ. ವರ್ಷಾ ಮತ್ತು ಮಂಜುಳಾ ನಡುವಿನ ಸಂಬಂಧ ಏನೆಂಬುದು ತನಿಖೆಯಿಂದ ಬಯಲಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೇಸ್‌ಬುಕ್‌ ಮೂಲಕ ಪರಿಚಯವಾಗಿ, ಬೆತ್ತಲೆ ವಿಡಿಯೊ ಕಾಲ್ ಮಾಡುವ ಮೂಲಕ ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಸಾಕಷ್ಟು ವರದಿಯಾಗಿವೆ. ಸ್ವಾಮೀಜಿಯೇ ಇಂತಹದ್ದೊಂದು ಜಾಲಕ್ಕೆ ಸಿಲುಕಿರುವುದು ಹಲವು ಚರ್ಚೆಗೆ ಅವಕಾಶ ನೀಡಿದೆ. ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರು ಇಷ್ಟು ಕಾಲ ಎಚ್ಚೆತ್ತುಕೊಳ್ಳದೆ ಇದ್ದದ್ದು ಏಕೆ? 37 ಲಕ್ಷ ರೂಪಾಯಿಯವರೆಗೂ ಅಪರಿಚಿತ ಯುವತಿಗೆ ಹಣ ವರ್ಗಾಯಿಸಿದ್ದು ಹೇಗೆ? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....