Homeಕರ್ನಾಟಕಬೆಂಗಳೂರು: ಫೇಸ್‌ಬುಕ್‌ ಗೆಳತಿಯಿಂದ ವಂಚನೆ, 37 ಲಕ್ಷ ರೂ. ಕಳೆದುಕೊಂಡ ಸ್ವಾಮೀಜಿ

ಬೆಂಗಳೂರು: ಫೇಸ್‌ಬುಕ್‌ ಗೆಳತಿಯಿಂದ ವಂಚನೆ, 37 ಲಕ್ಷ ರೂ. ಕಳೆದುಕೊಂಡ ಸ್ವಾಮೀಜಿ

- Advertisement -
- Advertisement -

ಸಾಮಾಜಿಕ ಮಾಧ್ಯಮವಾದ ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವತಿಯೊಬ್ಬರು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರಿಗೆ 37 ಲಕ್ಷ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ.

ಫೇಸ್‌ಬುಕ್‌ನಲ್ಲಿ ಪರಿಚಯವಾಗಿ, ನಂತರ ವಿಡಿಯೊ ಕಾಲ್‌ಗಳ ಮೂಲಕ ಸಲುಗೆ ತೋರುತ್ತಿದ್ದ ಯುವತಿಯು ಚನ್ನವೀರ ಶಿವಾಚಾರ್ಯ ಸ್ವಾಮೀಜಿಯಿಂದ 37 ಲಕ್ಷ ರೂಪಾಯಿ ಕಸಿದುಕೊಂಡಿರುವ ಸಂಬಂಧ ದಾಬಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಆಗಿದೆ.

“ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರು ಹಣ ವರ್ಗಾವಣೆ ದಾಖಲೆ ಸಮೇತ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಯುವತಿ ವರ್ಷಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಏನಿದು ಪ್ರಕರಣ?

ಶಿವಾಚಾರ್ಯ ಸ್ವಾಮೀಜಿಗೆ 2020ರಲ್ಲಿ ವರ್ಷಾ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್‌ ಬಂದಿತ್ತು. ಅವರನ್ನು ಸ್ವಾಮೀಜಿ ಫ್ರೆಂಡ್ ಮಾಡಿಕೊಂಡಿದ್ದರು. ಅಧ್ಯಾತ್ಮದಲ್ಲಿ ಆಸಕ್ತಿ ಇದೆ ಎನ್ನುತ್ತಾ ಯುವತಿಯು ಸ್ವಾಮೀಜಿಯೊಂದಿಗೆ ಚಾಟ್ ಮಾಡುತ್ತಿದ್ದಳು. ಸ್ವಾಮೀಜಿಯ ಮೊಬೈಲ್ ನಂಬರ್‌ ಪಡೆದು, ತನ್ನ ನಂಬರ್‌ ಕೂಡ ಶೇರ್‌ ಮಾಡಿಕೊಂಡಿದ್ದಳು ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮೊಬೈಲ್ ನಂಬರ್ ಪಡೆದ ಬಳಿಕ ವಾಟ್ಸ್‌ಆ್ಯಪ್‌ನಲ್ಲಿ ಚಾಟ್‌ ಕೂಡ ಮಾಡುತ್ತಿದ್ದರು. ತಾನೊಬ್ಬ ಅನಾಥೆ ಎನ್ನುತ್ತಿದ್ದ ವರ್ಷಾ, ವಿಡಿಯೊ ಕಾಲ್‌ ಮಾಡಲಾರಂಭಿಸಿದ್ದಳು. ಹಲವು ಬಾರಿ ವಿಡಿಯೊ ಕರೆ ಮಾಡಿದ್ದ ಯುವತಿ, ಎಂದಿಗೂ ಮುಖ ತೋರಿಸಿರಲಿಲ್ಲ. ಕೈ–ಕಾಲುಗಳನ್ನು ಮಾತ್ರ ತೋರಿಸಿ ಮಾತನಾಡುತ್ತಿದ್ದಳು” ಎಂದೂ ಸ್ವಾಮೀಜಿ ದೂರಿನಲ್ಲಿ ಹೇಳಿದ್ದಾರೆ.

“ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್ ಮಾಡುತ್ತಿರುವುದಾಗಿ ಹೇಳಿಕೊಂಡು 2 ಲಕ್ಷ ರೂಪಾಯಿ ನನ್ನಿಂದ ಪಡೆದುಕೊಂಡಿದ್ದಳು. ತನ್ನ ಹೆಸರಿನಲ್ಲಿರುವ ಜಮೀನನ್ನು ಮಠದ ಹೆಸರಿಗೆ ಬರೆದುಕೊಡುವುದಾಗಿ ಹೇಳಿ, ಹಂತಹಂತವಾಗಿ ಹೆಚ್ಚುವರಿಯಾಗಿ 35 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿಕೊಂಡಿದ್ದಳು” ಎಂದು ಸ್ವಾಮೀಜಿ ತಿಳಿಸಿದ್ದಾರೆ.

“ಜಮೀನು ದಾಖಲೆ ತರುವ ವೇಳೆ ನನ್ನ ಮೇಲೆ ಹಲ್ಲೆಯಾಗಿದೆ, ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವರ್ಷಾ ಹೇಳಿಕೊಂಡಿದ್ದರು. ಆಸ್ಪತ್ರೆಯ ಬಿಲ್ ಪಾವತಿಗಾಗಿ ಮತ್ತೆ ಹಣದ ಕೋರಿಕೆ ಇಟ್ಟಿದ್ದಳು. ಆನಂತರ ಅನುಮಾನಗೊಂಡು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಪರಿಚಯಸ್ಥರೊಬ್ಬರನ್ನು ಕಳಿಸಿ ವಿಚಾರಿಸಿದೆ. ವರ್ಷಾ ಎಂಬವರು ಯಾರೂ ದಾಖಲಾಗಿಲ್ಲ ಎಂದು ತಿಳಿಯಿತು” ಎಂದಿದ್ದಾರೆ ಸ್ವಾಮೀಜಿ.

ಇದನ್ನೂ ಓದಿರಿ: ಚಂಡೀಗಢ: ಬಿಜೆಪಿ ಸಂಸದೆ ಜೊತೆ ವಾಗ್ವಾದ; ಸದನದಿಂದ ಎಎಪಿ ಕೌನ್ಸಿಲರ್‌ಗಳ ಅಮಾನತು

“ವರ್ಷಾ ಸ್ನೇಹಿತೆ ಎನ್ನಲಾದ ಮಂಜುಳಾಗೆ ಕಾಲ್‌ ಮಾಡಿದಾಗ, 55 ಲಕ್ಷ ರೂಪಾಯಿ ಸಾಲ ಮಾಡಿ ವರ್ಷಾರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದ್ದರು. ಆಸ್ಪತ್ರೆಗೆ ನೀಡಿರುವ ಹಣವನ್ನು ಸಾಲದ ರೂಪದಲ್ಲಿ ತಂದಿದ್ದು, ಅದನ್ನು ತೀರಿಸಬೇಕು. ನೀವು ಹಣ ನೀಡದಿದ್ದರೆ ವರ್ಷಾ ಜೊತೆಗಿನ ಸಲುಗೆಯ ವಿಷಯವನ್ನು ಎಲ್ಲರಿಗೂ ಹೇಳಿ ಮರ್ಯಾದೆ ತೆಗೆಯುತ್ತೇನೆ ಎಂದು ಬೆದರಿಸಲಾಗಿತ್ತು” ಎಂದು ಸ್ವಾಮೀಜಿ ಹೇಳಿರುವುದಾಗಿ ವರದಿಯಾಗಿದೆ.

ವರ್ಷಾ ಕಡೆಯವರು ಎನ್ನಲಾದ ಮಂಜುಳಾ ಹಾಗೂ ಇತರರು ಮೇ 23ರಂದು ಮಠಕ್ಕೆ ಹೋಗಿ ಗಲಾಟೆ ಮಾಡಿದ್ದರು. 55 ಲಕ್ಷ ರೂಪಾಯಿ ವಾಪಸ್‌ ಕೊಡುವಂತೆ ಸ್ವಾಮೀಜಿಗೆ ಧಮ್ಕಿ ಹಾಕಿದ್ದರು. ಇದಾದ ನಂತರ ಸ್ವಾಮೀಜಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.

ಸ್ವಾಮೀಜಿ ಸುಮಾರು 50 ಲಕ್ಷ ರೂಪಾಯಿವರೆಗೂ ಹಣ ಕಳೆದುಕೊಂಡಿರುವ ಸಾಧ್ಯತೆ ಇದೆ. ವರ್ಷಾ ಮತ್ತು ಮಂಜುಳಾ ನಡುವಿನ ಸಂಬಂಧ ಏನೆಂಬುದು ತನಿಖೆಯಿಂದ ಬಯಲಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೇಸ್‌ಬುಕ್‌ ಮೂಲಕ ಪರಿಚಯವಾಗಿ, ಬೆತ್ತಲೆ ವಿಡಿಯೊ ಕಾಲ್ ಮಾಡುವ ಮೂಲಕ ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಸಾಕಷ್ಟು ವರದಿಯಾಗಿವೆ. ಸ್ವಾಮೀಜಿಯೇ ಇಂತಹದ್ದೊಂದು ಜಾಲಕ್ಕೆ ಸಿಲುಕಿರುವುದು ಹಲವು ಚರ್ಚೆಗೆ ಅವಕಾಶ ನೀಡಿದೆ. ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರು ಇಷ್ಟು ಕಾಲ ಎಚ್ಚೆತ್ತುಕೊಳ್ಳದೆ ಇದ್ದದ್ದು ಏಕೆ? 37 ಲಕ್ಷ ರೂಪಾಯಿಯವರೆಗೂ ಅಪರಿಚಿತ ಯುವತಿಗೆ ಹಣ ವರ್ಗಾಯಿಸಿದ್ದು ಹೇಗೆ? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...