Homeಕರ್ನಾಟಕಬೆಂಗಳೂರು: ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲು ಬಿಎಂಟಿಸಿ ನಿರ್ಧಾರ

ಬೆಂಗಳೂರು: ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲು ಬಿಎಂಟಿಸಿ ನಿರ್ಧಾರ

- Advertisement -
- Advertisement -

ಬೆಂಗಳೂರಿನಲ್ಲಿರುವ ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡಲು ವನಿತಾ ಸಂಗಾತಿ ಯೋಜನೆ ಅಡಿಯಲ್ಲಿ ಉಚಿತ ಬಸ್‌ ಪಾಸ್‌ ನೀಡಲು ಸರ್ಕಾರ ಮುಂದಾಗಿದೆ. ಮುಂದಿನ ತಿಂಗಳಿಂದ ಪಾಸ್ ದೊರೆಯಲಿದ್ದು, ಅರ್ಹರು ಅರ್ಜಿ ಸಲ್ಲಿಸಲು ಬಿಎಂಟಿಸಿ ಅರ್ಜಿ ಆಹ್ವಾನಿಸಿದೆ.

ಗಾರ್ಮೆಂಟ್ಸ್‌ಗಳಲ್ಲಿ ದುಡಿಯುವ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ಉಚಿತ ಬಸ್‌ ನೀಡುವುದಾಗಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಮಂಡನೆಯ ಸಂದರ್ಭದಲ್ಲಿ ಘೋಷಿಸಿದ್ದರು. ಇದೀಗ, ಅವರ ಭರವಸೆ ಜಾರಿಗೆ ಬಂದಿದ್ದು, ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣೆಗಾಗಿ ಬಿಎಂಟಿಸಿ ಅರ್ಜಿ ಆಹ್ವಾನಿಸಿದೆ.

ನಗರದಲ್ಲಿ ಸುಮಾರು 850ಕ್ಕಿಂತಲೂ ಹೆಚ್ಚಿನ ಗಾರ್ಮೆಂಟ್ಸ್ ಕಾರ್ಖಾನೆಗಳಿವೆ. ಈ ಎಲ್ಲಾ ಕಾರ್ಖಾನೆಗಳಲ್ಲಿ ಸುಮಾರು 3 ಲಕ್ಷಕ್ಕಿಂತಲೂ ಹೆಚ್ಚಿನ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ, ಶೇ.80 ಕ್ಕಿಂತ ಹೆಚ್ಚು ಕಾರ್ಮಿಕರು ಮಹಿಳೆಯರಾಗಿದ್ದಾರೆ. ಈ ಎಲ್ಲಾ ಮಹಿಳಾ ಕಾರ್ಮಿಕರು ಪ್ರತಿ ನಿತ್ಯ ತಮ್ಮ ಕರ್ತವ್ಯ ಸ್ಥಳಕ್ಕೆ ಹೋಗಲು ಹಾಗೂ ವಾಸಸ್ಥಳಕ್ಕೆ ಹಿಂದಿರುಗಲು ಖಾಸಗಿ ಬಸ್ಸು, ಆಟೋ ಹಾಗೂ ಇತರೆ ಖಾಸಗಿ ಸಂಸ್ಥೆಯ ವಾಹನಗಳನ್ನು ಹೆಚ್ಚಾಗಿ ಅವಲಂಬಿಸಿರುವುದು ಕಂಡುಬಂದಿರುತ್ತದೆ. ಅವರಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲು ಹಾಗೂ ಆರ್ಥಿಕ ಸಹಾಯವನ್ನು ಮಾಡಲು ‘ವನಿತಾ ಸಂಗಾತಿ’ ಯೋಜನೆಯಡಿಯಲ್ಲಿ ಉಚಿತವಾಗಿ ಮಾಸಿಕ ಬಸ್‌ ಪಾಸುಗಳನ್ನು ಜನವರಿ-22 ರಿಂದ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

ಇದನ್ನೂ ಓದಿ: ಐತಿಹಾಸಿಕ ನಿರ್ಧಾರ:ಟ್ರಾನ್ಸ್‌ಜೆಂಡರ್‌ಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆ

’ವನಿತಾ ಸಂಗಾತಿ’ ಪಾಸ್ ಪಡೆಯಲು ಬಯಸುವ ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರು, ತಾವು ಕರ್ತವ್ಯ ನಿರ್ವಹಿಸುವ ಗಾರ್ಮೆಂಟ್ಸ್‌ ಕಾರ್ಖಾನೆಯ ಮಾಲೀಕರಿಗೆ ಮನವಿ ಸಲ್ಲಿಸಬೇಕು. ಮಾಲೀಕರು ಅರ್ಜಿ ಸಲ್ಲಿಸಿರುವ ಮಹಿಳಾ ಕಾರ್ಮಿಕರ ಪಟ್ಟಿಯನ್ನು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಇ-ಮೇಲ್‌ ವಿಳಾಸ [email protected] ಗೆ ಸಲ್ಲಿಸಬೇಕು.

ಅರ್ಜಿ ಪರಿಶೀಲಿಸಿದ ಬಳಿಕ ಅರ್ಹ ಮಹಿಳಾ ಕಾರ್ಮಿಕರ ಪಟ್ಟಿಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಒದಗಿಸುತ್ತದೆ ಎಂದು ಸಂಸ್ಥೆ ಹೇಳಿದೆ. ವನಿತಾ ಸಂಗಾತಿ ಪಾಸುಗಳನ್ನು ಪಡೆದ ಮಹಿಳಾ ಕಾರ್ಮಿಕರು ಸಂಸ್ಥೆಯ ಎಲ್ಲಾ ಸಾಮಾನ್ಯ ಸೇವೆಗಳಲ್ಲಿ ಅನಿಯಮಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದೆ.

ಬಿಎಂಟಿಸಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸ್ವೀಕರಿಸುವ ಪಟ್ಟಿಗನುಸಾರವಾಗಿ, ಗಾರ್ಮೆಂಟ್ಸ್‌ ಮಾಲೀಕರಿಂದ ಅವ‍ಶ್ಯ ದಾಖಲೆಗಳ ಪ್ರತಿಗಳನ್ನು (ಹಾರ್ಡ್‌ ಕಾಫಿ) ಹಾಗೂ ಗಾರ್ಮೆಂಟ್ಸ್‌ ಮಾಲೀಕರ ಪಾಲಿನ ಮೊತ್ತ ಶೇ.40 ರಷ್ಟನ್ನು ಪಡೆದು (ಆರ್‌.ಟಿ.ಜಿ.ಎಸ್‌/ ಎನ್.ಇ.ಎಫ್‌.ಟಿ ಮೂಲಕ), ವನಿತಾ ಸಂಗಾತಿ ಪಾಸುಗಳನ್ನು ಕೆಂಪೇಗೌಡ ಬಸ್‌ ನಿಲ್ದಾಣ ಪಾಸು ಕೌಂಟರ್‌ನಿಂದ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.


ಇದನ್ನೂ ಓದಿ: ಕಂಪೆನಿಯ ಹೊಸ ನೀತಿಗಳ ವಿರುದ್ಧ ಸಿಡಿದೆದ್ದ ‘ಅರ್ಬನ್ ಕಂಪನಿ’ಯ ಮಹಿಳಾ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...