Homeಕರ್ನಾಟಕಬೆಂಗಳೂರು: ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲು ಬಿಎಂಟಿಸಿ ನಿರ್ಧಾರ

ಬೆಂಗಳೂರು: ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲು ಬಿಎಂಟಿಸಿ ನಿರ್ಧಾರ

- Advertisement -
- Advertisement -

ಬೆಂಗಳೂರಿನಲ್ಲಿರುವ ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡಲು ವನಿತಾ ಸಂಗಾತಿ ಯೋಜನೆ ಅಡಿಯಲ್ಲಿ ಉಚಿತ ಬಸ್‌ ಪಾಸ್‌ ನೀಡಲು ಸರ್ಕಾರ ಮುಂದಾಗಿದೆ. ಮುಂದಿನ ತಿಂಗಳಿಂದ ಪಾಸ್ ದೊರೆಯಲಿದ್ದು, ಅರ್ಹರು ಅರ್ಜಿ ಸಲ್ಲಿಸಲು ಬಿಎಂಟಿಸಿ ಅರ್ಜಿ ಆಹ್ವಾನಿಸಿದೆ.

ಗಾರ್ಮೆಂಟ್ಸ್‌ಗಳಲ್ಲಿ ದುಡಿಯುವ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ಉಚಿತ ಬಸ್‌ ನೀಡುವುದಾಗಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಮಂಡನೆಯ ಸಂದರ್ಭದಲ್ಲಿ ಘೋಷಿಸಿದ್ದರು. ಇದೀಗ, ಅವರ ಭರವಸೆ ಜಾರಿಗೆ ಬಂದಿದ್ದು, ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣೆಗಾಗಿ ಬಿಎಂಟಿಸಿ ಅರ್ಜಿ ಆಹ್ವಾನಿಸಿದೆ.

ನಗರದಲ್ಲಿ ಸುಮಾರು 850ಕ್ಕಿಂತಲೂ ಹೆಚ್ಚಿನ ಗಾರ್ಮೆಂಟ್ಸ್ ಕಾರ್ಖಾನೆಗಳಿವೆ. ಈ ಎಲ್ಲಾ ಕಾರ್ಖಾನೆಗಳಲ್ಲಿ ಸುಮಾರು 3 ಲಕ್ಷಕ್ಕಿಂತಲೂ ಹೆಚ್ಚಿನ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ, ಶೇ.80 ಕ್ಕಿಂತ ಹೆಚ್ಚು ಕಾರ್ಮಿಕರು ಮಹಿಳೆಯರಾಗಿದ್ದಾರೆ. ಈ ಎಲ್ಲಾ ಮಹಿಳಾ ಕಾರ್ಮಿಕರು ಪ್ರತಿ ನಿತ್ಯ ತಮ್ಮ ಕರ್ತವ್ಯ ಸ್ಥಳಕ್ಕೆ ಹೋಗಲು ಹಾಗೂ ವಾಸಸ್ಥಳಕ್ಕೆ ಹಿಂದಿರುಗಲು ಖಾಸಗಿ ಬಸ್ಸು, ಆಟೋ ಹಾಗೂ ಇತರೆ ಖಾಸಗಿ ಸಂಸ್ಥೆಯ ವಾಹನಗಳನ್ನು ಹೆಚ್ಚಾಗಿ ಅವಲಂಬಿಸಿರುವುದು ಕಂಡುಬಂದಿರುತ್ತದೆ. ಅವರಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲು ಹಾಗೂ ಆರ್ಥಿಕ ಸಹಾಯವನ್ನು ಮಾಡಲು ‘ವನಿತಾ ಸಂಗಾತಿ’ ಯೋಜನೆಯಡಿಯಲ್ಲಿ ಉಚಿತವಾಗಿ ಮಾಸಿಕ ಬಸ್‌ ಪಾಸುಗಳನ್ನು ಜನವರಿ-22 ರಿಂದ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

ಇದನ್ನೂ ಓದಿ: ಐತಿಹಾಸಿಕ ನಿರ್ಧಾರ:ಟ್ರಾನ್ಸ್‌ಜೆಂಡರ್‌ಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆ

’ವನಿತಾ ಸಂಗಾತಿ’ ಪಾಸ್ ಪಡೆಯಲು ಬಯಸುವ ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರು, ತಾವು ಕರ್ತವ್ಯ ನಿರ್ವಹಿಸುವ ಗಾರ್ಮೆಂಟ್ಸ್‌ ಕಾರ್ಖಾನೆಯ ಮಾಲೀಕರಿಗೆ ಮನವಿ ಸಲ್ಲಿಸಬೇಕು. ಮಾಲೀಕರು ಅರ್ಜಿ ಸಲ್ಲಿಸಿರುವ ಮಹಿಳಾ ಕಾರ್ಮಿಕರ ಪಟ್ಟಿಯನ್ನು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಇ-ಮೇಲ್‌ ವಿಳಾಸ [email protected] ಗೆ ಸಲ್ಲಿಸಬೇಕು.

ಅರ್ಜಿ ಪರಿಶೀಲಿಸಿದ ಬಳಿಕ ಅರ್ಹ ಮಹಿಳಾ ಕಾರ್ಮಿಕರ ಪಟ್ಟಿಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಒದಗಿಸುತ್ತದೆ ಎಂದು ಸಂಸ್ಥೆ ಹೇಳಿದೆ. ವನಿತಾ ಸಂಗಾತಿ ಪಾಸುಗಳನ್ನು ಪಡೆದ ಮಹಿಳಾ ಕಾರ್ಮಿಕರು ಸಂಸ್ಥೆಯ ಎಲ್ಲಾ ಸಾಮಾನ್ಯ ಸೇವೆಗಳಲ್ಲಿ ಅನಿಯಮಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದೆ.

ಬಿಎಂಟಿಸಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸ್ವೀಕರಿಸುವ ಪಟ್ಟಿಗನುಸಾರವಾಗಿ, ಗಾರ್ಮೆಂಟ್ಸ್‌ ಮಾಲೀಕರಿಂದ ಅವ‍ಶ್ಯ ದಾಖಲೆಗಳ ಪ್ರತಿಗಳನ್ನು (ಹಾರ್ಡ್‌ ಕಾಫಿ) ಹಾಗೂ ಗಾರ್ಮೆಂಟ್ಸ್‌ ಮಾಲೀಕರ ಪಾಲಿನ ಮೊತ್ತ ಶೇ.40 ರಷ್ಟನ್ನು ಪಡೆದು (ಆರ್‌.ಟಿ.ಜಿ.ಎಸ್‌/ ಎನ್.ಇ.ಎಫ್‌.ಟಿ ಮೂಲಕ), ವನಿತಾ ಸಂಗಾತಿ ಪಾಸುಗಳನ್ನು ಕೆಂಪೇಗೌಡ ಬಸ್‌ ನಿಲ್ದಾಣ ಪಾಸು ಕೌಂಟರ್‌ನಿಂದ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.


ಇದನ್ನೂ ಓದಿ: ಕಂಪೆನಿಯ ಹೊಸ ನೀತಿಗಳ ವಿರುದ್ಧ ಸಿಡಿದೆದ್ದ ‘ಅರ್ಬನ್ ಕಂಪನಿ’ಯ ಮಹಿಳಾ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...