Homeಕರ್ನಾಟಕಬೆಂಗಳೂರು: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ಬೆಂಗಳೂರು: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

- Advertisement -
- Advertisement -

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ಜನವಿರೋಧಿ ನೀತಿಗಳು, ಇಂಧನ ಬೆಲೆ ಹೆಚ್ಚಳ ಹಾಗೂ ಇದರ ಪರಿಣಾಮವಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ ನಡೆಸಲಾಯಿತು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಯಿತು.

ವಿಧಾನ ಮಂಡಲ ಅಧಿವೇಶನ ಆರಂಭದ ದಿನದಂದು ಎತ್ತಿನಗಾಡಿ ಚಲೋ ಪ್ರತಿಭಟನೆ ನಡೆಸಿ ಒಕ್ಕೂಟ ಸರ್ಕಾರದ ನೀತಿಗಳನ್ನು ಖಂಡಿಸಲಾಗಿತ್ತು.  ಈ ಹಿಂದೆ ರಾಜ್ಯಾದ್ಯಂತ ಸೈಕಲ್ ಜಾಥಾ, 100 ನಾಟೌಟ್ ನಂತಹ ಕಾರ್ಯಕ್ರಮಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿತ್ತು.

“ಸರ್ಕಾರದ ಈ ಜನವಿರೋಧಿ ನೀತಿ ವಿರೋಧಿಸಿ ನಾವಿಂದು ಈ ಪ್ರತಿಭಟನೆ ಮಾಡಿದ್ದೇವೆ. ಜನರ ಪರ ಧ್ವನಿ ಎತ್ತಲು ನಾವು ಮೊನ್ನೆ ಎತ್ತಿನ ಗಾಡಿಯಲ್ಲಿ ಸದನಕ್ಕೆ ಆಗಮಿಸಿದ್ದೆವು. ಇಂದು ಸೈಕಲ್ ಮೂಲಕ ಆಗಮಿಸಿದ್ದೇವೆ. ಸರ್ಕಾರ ಬೆಲೆ ಇಳಿಸಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರಿಯಲಿದೆ. ಜನರು ಕೂಡ ಈ ಕೆಟ್ಟ ಸರ್ಕಾರ ಕಿತ್ತೊಗೆಯಲು ಸಜ್ಜಾಗಬೇಕು ಎಂದು ಕರೆ ನೀಡುತ್ತೇನೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ’ಎತ್ತಿನಗಾಡಿ ಚಲೋ’ ಪ್ರತಿಭಟನೆ

“ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆ ಇರುವಾಗ ಅದರ ಲಾಭ ಮಾತ್ರ ಜನಸಾಮಾನ್ಯರಿಗೆ ಸಿಗುವಂತೆ ಮಾಡಿಲ್ಲ. ಪೆಟ್ರೋಲ್ ಬೆಲೆ 100 ರ ಗಡಿ ದಾಟಿದೆ, ಡೀಸೆಲ್ 94 ಆಗಿದೆ, ಅಡುಗೆ ಅನಿಲ 880 ರೂ. ಆಗಿದೆ. ಇದರಿಂದ ಇತರೆ ದಿನಬಳಕೆ ವಸ್ತುಗಳ ಬೆಲೆಯೂ ಹೆಚ್ಚಾಗಿದೆ. ಪೆಟ್ರೋಲ್ ಬೆಲೆಯಲ್ಲಿ 25 ರೂ. ಡೀಸೆಲ್ ಬೆಲೆಯಲ್ಲಿ 20 ರೂ. ಹಾಗೂ ಅಡುಗೆ ಅನಿಲದ ಬೆಲೆ 150 ರೂ. ಕಡಿಮೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸುತ್ತಿದ್ದೇವೆ” ಎಂದಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್‌.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯರಾದ ಯು.ಬಿ. ವೆಂಕಟೇಶ್, ಗೋವಿಂದರಾಜು ಸೇರಿದಂತೆ ಮಾಜಿ ಮಂತ್ರಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಜಾಥಾದಲ್ಲಿ ಭಾಗವಹಿಸಿದ್ದರು.

“ಯುಪಿಎ ಸರ್ಕಾರದ ಅವಧಿಯಲ್ಲಿ ಇದ್ದ ಇಂಧನತೈಲಗಳ ಮೇಲಿನ ತೆರಿಗೆ ಪೆಟ್ರೋಲ್ -₹ 9.21, ಡೀಸೆಲ್ – ₹ 3.45 ಇತ್ತು. ಮೋದಿಯವರ ದರೋಡೆ ಸರ್ಕಾರದಲ್ಲಿ ಪೆಟ್ರೋಲ್ – ₹ 32.90, ಡೀಸೆಲ್ -₹ 31.80 ಇದೆ. ಸುಮಾರು 300% ತೆರಿಗೆ ಏರಿಸಿ ಜನರ ಸುಲಿಯನ್ನು ದರೋಡೆ ಎನ್ನದೆ ಇನ್ನೇನು ಹೇಳಬೇಕು? ದೋಚಿದ ಈ ಹಣ ಎಲ್ಲಿ ಹೋಗುತ್ತಿದೆ ಎಂದು ಬಿಜೆಪಿ ಹೇಳಬೇಕು” ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಕರ್ನಾಟಕ ಗೂಂಡಾರಾಜ್ ಆಗುತ್ತಿದೆ- ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...