Homeಕರ್ನಾಟಕಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

- Advertisement -
- Advertisement -

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20) ತೆರವುಗೊಳಿಸಿದ್ದು, ಬಡ ಜನರು ಬೀದಿಗೆ ಬಿದ್ದಿದ್ದಾರೆ.

ಯಲಹಂಕ ಹೋಬಳಿ ಕೋಗಿಲು ಗ್ರಾಮದ ಸರ್ವೆ ನಂ. 99ರಲ್ಲಿ ಒಟ್ಟು 14 ಎಕರೆ 36 ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ, ಬಿಎಸ್‌ಡಬ್ಲ್ಯುಎಂಎಲ್‌ ವತಿಯಿಂದ ಪ್ರಸ್ತಾವಿತ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿತ್ತು.

ಬಿಎಸ್‌ಡಬ್ಲ್ಯುಎಂಎಲ್‌ಗೆ ಮೀಸಲಿರಿಸಿದ್ದ ಜಾಗದಲ್ಲಿ ಜನರು 200ರಷ್ಟು ಶೆಡ್/ ಮನೆಗಳನ್ನು ನಿರ್ಮಾಣ ಮಾಡಿಕೊಂಡಿದ್ದರು. ಹಾಗಾಗಿ, ನಿಯಮನುಸಾರ ತೆರವುಗೊಳಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮುಂಜಾನೆ 4 ಗಂಟೆಗೆ ಅಧಿಕಾರಿಗಳು ಬುಲ್ಡೋಝರ್‌ಗಳನ್ನು ತಂದು ಮನೆಗಳನ್ನು ಕೆಡವಲು ಶುರು ಮಾಡಿದರು. ತಕ್ಷಣ ಮನೆಗಳನ್ನು ಕಾಲಿ ಮಾಡುವಂತೆ ಸೂಚಿಸಿದರು. ನಮಗೆ ನಮ್ಮ ದಾಖಲೆ ಪತ್ರಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಸಮಯ ನೀಡಿಲ್ಲ ಎಂದು ನಿರಾಶ್ರಿತರಾದ ಜನರು ಆರೋಪಿಸಿದ್ದಾರೆ.

ಆದರೆ, ಅಧಿಕಾರಿಗಳು ನಾವು ಒಂದು ತಿಂಗಳಲ್ಲಿ ಎರಡು ಬಾರಿ ನೋಟಿಸ್ ಕೊಟ್ಟು ಮನೆಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದೆವು. ಅದರ ನಂತರ ಕಾನೂನಿನಂತೆ ತೆರವು ಕಾರ್ಯಚರಣೆ ನಡೆಸಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.

ಕೋಗಿಲು ಗ್ರಾಮದ ಸರ್ಕಾರಿ ಉರ್ದು ಶಾಲೆಯ ಬಳಿಯ ಸಣ್ಣ ಕೊಳದ ಪಕ್ಕದಲ್ಲಿರುವ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಜನರು ಮನೆಗಳನ್ನು ಕಟ್ಟಿಕೊಂಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮನೆಗಳಲ್ಲಿದ್ದ ಎಲ್‌ಪಿಜಿ ಸಿಲಿಂಡರ್, ಗ್ಯಾಸ್ ಸ್ಟವ್ ಸೇರಿದಂತೆ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ತೆರವುಗೊಳಿಸಿದ ಬಳಿಕ ಅಧಿಕಾರಿಗಳು ಮನೆಗಳನ್ನು ಕೆಡವಲು ಪ್ರಾರಂಭಿಸಿದರು. ಸ್ಥಳದಲ್ಲಿ 150ಕ್ಕೂ ಹೆಚ್ಚು ಪೊಲೀಸರು, ಜೊತೆಗೆ ಜಿಬಿಎ ಮಾರ್ಷಲ್‌ಗಳನ್ನು ನಿಯೋಜಿಸಲಾಗಿತ್ತು. ಹಿರಿಯ ಅಧಿಕಾರಿಗಳೂ ಸ್ಥಳದಲ್ಲಿ ಇದ್ದರು. ತೆರವು ಕಾರ್ಯಾಚರಣೆಗೆ ತೀವ್ರ ಅಡ್ಡಿಪಡಿಸಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದರು ಎಂದು ವರದಿಗಳು ಹೇಳಿವೆ.

ಜನರು ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದರು. ಅವರಲ್ಲಿ ಹೆಚ್ಚಿನವರು ಹೈದರಾಬಾದ್ ಮತ್ತು ಆಂಧ್ರಪ್ರದೇಶದ ವಿವಿಧ ಭಾಗಗಳಿಂದ ವಲಸೆ ಬಂದ ಅಲ್ಪಸಂಖ್ಯಾತ ದರ್ವೇಶ್ ಸಮುದಾಯಕ್ಕೆ ಸೇರಿದವರು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ನಿರಾಶ್ರಿತರಾದ ಜನರು ನಾವು 25 ವರ್ಷಗಳಿಂದ ಇಲ್ಲೇ ಇದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ದುಡಿಯುವ ಜನರ ವೇದಿಕೆಯ ಸದಸ್ಯೆ ಪೂಜಾ ಹೆಚ್.ಎಂ, “ನಿರಾಶ್ರಿತರಾದ ಕುಟುಂಬಗಳು ಆಧಾರ್‌ ಕಾರ್ಡ್‌, ವೋಟರ್ ಐಡಿ ಸೇರಿದಂತೆ ಮಾನ್ಯ ದಾಖಲೆಗಳನ್ನು ಹೊಂದಿದ್ದು, ಭಿಕ್ಷಾಟನೆ ಮತ್ತು ಸಣ್ಣಪುಟ್ಟ ಕೆಲಸಗಳ ಮೂಲಕ ತಮ್ಮ ಜೀವನೋಪಾಯವನ್ನು ಗಳಿಸುತ್ತಿದ್ದರು” ಎಂದು ಹೇಳಿದ್ದಾರೆ.

“ಹಲವು ಕುಟುಂಬಗಳು ಬ್ಯಾಂಕ್‌ಗಳಿಂದ ಸಾಲ ಪಡೆದಿವೆ. ಮನೆಗಳನ್ನು ಕೆಡವುವ ಮೊದಲು ಯಾವುದೇ ಪೂರ್ವ ಸೂಚನೆ ನೀಡಿರಲಿಲ್ಲ. ಹಲವು ಮಹಿಳೆಯರು ಗರ್ಭಿಣಿಯರಾಗಿದ್ದಾರೆ. ಅಧಿಕಾರಿಗಳು ಅವರ ಸ್ಥಿತಿಯ ಬಗ್ಗೆ ಯಾವುದೇ ಕಾಳಜಿ ತೋರಿಸಿಲ್ಲ” ಎಂದು ತಿಳಿಸಿದ್ದಾರೆ.

ಕಾರ್ಯಾಚರಣೆಯ ಸಮಯದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದರೆ, ಅವರು ನಮಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ. ನಮ್ಮ ಕಳವಳಗಳನ್ನು ಪರಿಹರಿಸಿಲ್ಲ ಎಂದು ಜನರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...