Homeಕರ್ನಾಟಕಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

- Advertisement -
- Advertisement -

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20) ತೆರವುಗೊಳಿಸಿದ್ದು, ಬಡ ಜನರು ಬೀದಿಗೆ ಬಿದ್ದಿದ್ದಾರೆ.

ಯಲಹಂಕ ಹೋಬಳಿ ಕೋಗಿಲು ಗ್ರಾಮದ ಸರ್ವೆ ನಂ. 99ರಲ್ಲಿ ಒಟ್ಟು 14 ಎಕರೆ 36 ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ, ಬಿಎಸ್‌ಡಬ್ಲ್ಯುಎಂಎಲ್‌ ವತಿಯಿಂದ ಪ್ರಸ್ತಾವಿತ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿತ್ತು.

ಬಿಎಸ್‌ಡಬ್ಲ್ಯುಎಂಎಲ್‌ಗೆ ಮೀಸಲಿರಿಸಿದ್ದ ಜಾಗದಲ್ಲಿ ಜನರು 200ರಷ್ಟು ಶೆಡ್/ ಮನೆಗಳನ್ನು ನಿರ್ಮಾಣ ಮಾಡಿಕೊಂಡಿದ್ದರು. ಹಾಗಾಗಿ, ನಿಯಮನುಸಾರ ತೆರವುಗೊಳಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮುಂಜಾನೆ 4 ಗಂಟೆಗೆ ಅಧಿಕಾರಿಗಳು ಬುಲ್ಡೋಝರ್‌ಗಳನ್ನು ತಂದು ಮನೆಗಳನ್ನು ಕೆಡವಲು ಶುರು ಮಾಡಿದರು. ತಕ್ಷಣ ಮನೆಗಳನ್ನು ಕಾಲಿ ಮಾಡುವಂತೆ ಸೂಚಿಸಿದರು. ನಮಗೆ ನಮ್ಮ ದಾಖಲೆ ಪತ್ರಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಸಮಯ ನೀಡಿಲ್ಲ ಎಂದು ನಿರಾಶ್ರಿತರಾದ ಜನರು ಆರೋಪಿಸಿದ್ದಾರೆ.

ಆದರೆ, ಅಧಿಕಾರಿಗಳು ನಾವು ಒಂದು ತಿಂಗಳಲ್ಲಿ ಎರಡು ಬಾರಿ ನೋಟಿಸ್ ಕೊಟ್ಟು ಮನೆಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದೆವು. ಅದರ ನಂತರ ಕಾನೂನಿನಂತೆ ತೆರವು ಕಾರ್ಯಚರಣೆ ನಡೆಸಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.

ಕೋಗಿಲು ಗ್ರಾಮದ ಸರ್ಕಾರಿ ಉರ್ದು ಶಾಲೆಯ ಬಳಿಯ ಸಣ್ಣ ಕೊಳದ ಪಕ್ಕದಲ್ಲಿರುವ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಜನರು ಮನೆಗಳನ್ನು ಕಟ್ಟಿಕೊಂಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮನೆಗಳಲ್ಲಿದ್ದ ಎಲ್‌ಪಿಜಿ ಸಿಲಿಂಡರ್, ಗ್ಯಾಸ್ ಸ್ಟವ್ ಸೇರಿದಂತೆ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ತೆರವುಗೊಳಿಸಿದ ಬಳಿಕ ಅಧಿಕಾರಿಗಳು ಮನೆಗಳನ್ನು ಕೆಡವಲು ಪ್ರಾರಂಭಿಸಿದರು. ಸ್ಥಳದಲ್ಲಿ 150ಕ್ಕೂ ಹೆಚ್ಚು ಪೊಲೀಸರು, ಜೊತೆಗೆ ಜಿಬಿಎ ಮಾರ್ಷಲ್‌ಗಳನ್ನು ನಿಯೋಜಿಸಲಾಗಿತ್ತು. ಹಿರಿಯ ಅಧಿಕಾರಿಗಳೂ ಸ್ಥಳದಲ್ಲಿ ಇದ್ದರು. ತೆರವು ಕಾರ್ಯಾಚರಣೆಗೆ ತೀವ್ರ ಅಡ್ಡಿಪಡಿಸಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದರು ಎಂದು ವರದಿಗಳು ಹೇಳಿವೆ.

ಜನರು ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದರು. ಅವರಲ್ಲಿ ಹೆಚ್ಚಿನವರು ಹೈದರಾಬಾದ್ ಮತ್ತು ಆಂಧ್ರಪ್ರದೇಶದ ವಿವಿಧ ಭಾಗಗಳಿಂದ ವಲಸೆ ಬಂದ ಅಲ್ಪಸಂಖ್ಯಾತ ದರ್ವೇಶ್ ಸಮುದಾಯಕ್ಕೆ ಸೇರಿದವರು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ನಿರಾಶ್ರಿತರಾದ ಜನರು ನಾವು 25 ವರ್ಷಗಳಿಂದ ಇಲ್ಲೇ ಇದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ದುಡಿಯುವ ಜನರ ವೇದಿಕೆಯ ಸದಸ್ಯೆ ಪೂಜಾ ಹೆಚ್.ಎಂ, “ನಿರಾಶ್ರಿತರಾದ ಕುಟುಂಬಗಳು ಆಧಾರ್‌ ಕಾರ್ಡ್‌, ವೋಟರ್ ಐಡಿ ಸೇರಿದಂತೆ ಮಾನ್ಯ ದಾಖಲೆಗಳನ್ನು ಹೊಂದಿದ್ದು, ಭಿಕ್ಷಾಟನೆ ಮತ್ತು ಸಣ್ಣಪುಟ್ಟ ಕೆಲಸಗಳ ಮೂಲಕ ತಮ್ಮ ಜೀವನೋಪಾಯವನ್ನು ಗಳಿಸುತ್ತಿದ್ದರು” ಎಂದು ಹೇಳಿದ್ದಾರೆ.

“ಹಲವು ಕುಟುಂಬಗಳು ಬ್ಯಾಂಕ್‌ಗಳಿಂದ ಸಾಲ ಪಡೆದಿವೆ. ಮನೆಗಳನ್ನು ಕೆಡವುವ ಮೊದಲು ಯಾವುದೇ ಪೂರ್ವ ಸೂಚನೆ ನೀಡಿರಲಿಲ್ಲ. ಹಲವು ಮಹಿಳೆಯರು ಗರ್ಭಿಣಿಯರಾಗಿದ್ದಾರೆ. ಅಧಿಕಾರಿಗಳು ಅವರ ಸ್ಥಿತಿಯ ಬಗ್ಗೆ ಯಾವುದೇ ಕಾಳಜಿ ತೋರಿಸಿಲ್ಲ” ಎಂದು ತಿಳಿಸಿದ್ದಾರೆ.

ಕಾರ್ಯಾಚರಣೆಯ ಸಮಯದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದರೆ, ಅವರು ನಮಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ. ನಮ್ಮ ಕಳವಳಗಳನ್ನು ಪರಿಹರಿಸಿಲ್ಲ ಎಂದು ಜನರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...