Homeಕರ್ನಾಟಕಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

- Advertisement -
- Advertisement -

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20) ತೆರವುಗೊಳಿಸಿದ್ದು, ಬಡ ಜನರು ಬೀದಿಗೆ ಬಿದ್ದಿದ್ದಾರೆ.

ಯಲಹಂಕ ಹೋಬಳಿ ಕೋಗಿಲು ಗ್ರಾಮದ ಸರ್ವೆ ನಂ. 99ರಲ್ಲಿ ಒಟ್ಟು 14 ಎಕರೆ 36 ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ, ಬಿಎಸ್‌ಡಬ್ಲ್ಯುಎಂಎಲ್‌ ವತಿಯಿಂದ ಪ್ರಸ್ತಾವಿತ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿತ್ತು.

ಬಿಎಸ್‌ಡಬ್ಲ್ಯುಎಂಎಲ್‌ಗೆ ಮೀಸಲಿರಿಸಿದ್ದ ಜಾಗದಲ್ಲಿ ಜನರು 200ರಷ್ಟು ಶೆಡ್/ ಮನೆಗಳನ್ನು ನಿರ್ಮಾಣ ಮಾಡಿಕೊಂಡಿದ್ದರು. ಹಾಗಾಗಿ, ನಿಯಮನುಸಾರ ತೆರವುಗೊಳಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮುಂಜಾನೆ 4 ಗಂಟೆಗೆ ಅಧಿಕಾರಿಗಳು ಬುಲ್ಡೋಝರ್‌ಗಳನ್ನು ತಂದು ಮನೆಗಳನ್ನು ಕೆಡವಲು ಶುರು ಮಾಡಿದರು. ತಕ್ಷಣ ಮನೆಗಳನ್ನು ಕಾಲಿ ಮಾಡುವಂತೆ ಸೂಚಿಸಿದರು. ನಮಗೆ ನಮ್ಮ ದಾಖಲೆ ಪತ್ರಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಸಮಯ ನೀಡಿಲ್ಲ ಎಂದು ನಿರಾಶ್ರಿತರಾದ ಜನರು ಆರೋಪಿಸಿದ್ದಾರೆ.

ಆದರೆ, ಅಧಿಕಾರಿಗಳು ನಾವು ಒಂದು ತಿಂಗಳಲ್ಲಿ ಎರಡು ಬಾರಿ ನೋಟಿಸ್ ಕೊಟ್ಟು ಮನೆಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದೆವು. ಅದರ ನಂತರ ಕಾನೂನಿನಂತೆ ತೆರವು ಕಾರ್ಯಚರಣೆ ನಡೆಸಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.

ಕೋಗಿಲು ಗ್ರಾಮದ ಸರ್ಕಾರಿ ಉರ್ದು ಶಾಲೆಯ ಬಳಿಯ ಸಣ್ಣ ಕೊಳದ ಪಕ್ಕದಲ್ಲಿರುವ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಜನರು ಮನೆಗಳನ್ನು ಕಟ್ಟಿಕೊಂಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮನೆಗಳಲ್ಲಿದ್ದ ಎಲ್‌ಪಿಜಿ ಸಿಲಿಂಡರ್, ಗ್ಯಾಸ್ ಸ್ಟವ್ ಸೇರಿದಂತೆ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ತೆರವುಗೊಳಿಸಿದ ಬಳಿಕ ಅಧಿಕಾರಿಗಳು ಮನೆಗಳನ್ನು ಕೆಡವಲು ಪ್ರಾರಂಭಿಸಿದರು. ಸ್ಥಳದಲ್ಲಿ 150ಕ್ಕೂ ಹೆಚ್ಚು ಪೊಲೀಸರು, ಜೊತೆಗೆ ಜಿಬಿಎ ಮಾರ್ಷಲ್‌ಗಳನ್ನು ನಿಯೋಜಿಸಲಾಗಿತ್ತು. ಹಿರಿಯ ಅಧಿಕಾರಿಗಳೂ ಸ್ಥಳದಲ್ಲಿ ಇದ್ದರು. ತೆರವು ಕಾರ್ಯಾಚರಣೆಗೆ ತೀವ್ರ ಅಡ್ಡಿಪಡಿಸಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದರು ಎಂದು ವರದಿಗಳು ಹೇಳಿವೆ.

ಜನರು ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದರು. ಅವರಲ್ಲಿ ಹೆಚ್ಚಿನವರು ಹೈದರಾಬಾದ್ ಮತ್ತು ಆಂಧ್ರಪ್ರದೇಶದ ವಿವಿಧ ಭಾಗಗಳಿಂದ ವಲಸೆ ಬಂದ ಅಲ್ಪಸಂಖ್ಯಾತ ದರ್ವೇಶ್ ಸಮುದಾಯಕ್ಕೆ ಸೇರಿದವರು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ನಿರಾಶ್ರಿತರಾದ ಜನರು ನಾವು 25 ವರ್ಷಗಳಿಂದ ಇಲ್ಲೇ ಇದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ದುಡಿಯುವ ಜನರ ವೇದಿಕೆಯ ಸದಸ್ಯೆ ಪೂಜಾ ಹೆಚ್.ಎಂ, “ನಿರಾಶ್ರಿತರಾದ ಕುಟುಂಬಗಳು ಆಧಾರ್‌ ಕಾರ್ಡ್‌, ವೋಟರ್ ಐಡಿ ಸೇರಿದಂತೆ ಮಾನ್ಯ ದಾಖಲೆಗಳನ್ನು ಹೊಂದಿದ್ದು, ಭಿಕ್ಷಾಟನೆ ಮತ್ತು ಸಣ್ಣಪುಟ್ಟ ಕೆಲಸಗಳ ಮೂಲಕ ತಮ್ಮ ಜೀವನೋಪಾಯವನ್ನು ಗಳಿಸುತ್ತಿದ್ದರು” ಎಂದು ಹೇಳಿದ್ದಾರೆ.

“ಹಲವು ಕುಟುಂಬಗಳು ಬ್ಯಾಂಕ್‌ಗಳಿಂದ ಸಾಲ ಪಡೆದಿವೆ. ಮನೆಗಳನ್ನು ಕೆಡವುವ ಮೊದಲು ಯಾವುದೇ ಪೂರ್ವ ಸೂಚನೆ ನೀಡಿರಲಿಲ್ಲ. ಹಲವು ಮಹಿಳೆಯರು ಗರ್ಭಿಣಿಯರಾಗಿದ್ದಾರೆ. ಅಧಿಕಾರಿಗಳು ಅವರ ಸ್ಥಿತಿಯ ಬಗ್ಗೆ ಯಾವುದೇ ಕಾಳಜಿ ತೋರಿಸಿಲ್ಲ” ಎಂದು ತಿಳಿಸಿದ್ದಾರೆ.

ಕಾರ್ಯಾಚರಣೆಯ ಸಮಯದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದರೆ, ಅವರು ನಮಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ. ನಮ್ಮ ಕಳವಳಗಳನ್ನು ಪರಿಹರಿಸಿಲ್ಲ ಎಂದು ಜನರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...