Homeಕರ್ನಾಟಕಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

- Advertisement -
- Advertisement -

ಸರ್ಕಾರಿ ಬ್ಯಾಂಕ್ ಪಿಂಚಣಿದಾರಿಗೆ ಮತ್ತು ನಿವೃತ್ತಿ ವೇತನದಾರರಿಗೆ ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯ ಶನಿವಾರ ಉಪವಾಸ ಸತ್ಯಾಗ್ರಹ ನಡೆಸಿತು.

ಈ ವೇಳೆ ಮಾತನಾಡಿದ ಸಮನ್ವಯ ಅಧ್ಯಕ್ಷ ಕೆ.ವಿ ಆಚಾರ್ಯ, ಬ್ಯಾಂಕೇತರ ಸರ್ಕಾರಿ ನಿವೃತ್ತರಿಗೆ ಪಿಂಚಣಿ ಪರಿಷ್ಕರಣೆಯನ್ನು ಕಾಲಕಾಲಕ್ಕೆ ಮಾಡಲಾಗುತ್ತಿದೆ. ಆದರೆ, ಬ್ಯಾಂಕ್ ನಿವೃತ್ತರಿಗೆ ಸತತ 30 ವರ್ಷಗಳಿಂದ ಪರಿಷ್ಕರಣೆ ಮಾಡಿಲ್ಲ. ಕೇಂದ್ರ ಸರ್ಕಾರ ನಮ್ಮ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ 80 ವರ್ಷ ದಾಟಿರುವ ಪಿಂಚಣಿದಾರರಿಗೆ ಬರುವ ಅಲ್ಪಮೊತ್ತದ ಪಿಂಚಣಿಯಿಂದ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ. ಇಲ್ಲಿ ಉಪಾವಾಸ ಮಾಡುತ್ತಿರುವ ಅನೇಕರು ಡೈಯಾಬಿಟೀಸ್ ಮುಂತಾದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಇಳಿ ವಯಸ್ಸಲ್ಲಿ ನಿಸ್ಸಹಾಯಕರಾಗಿ ನಾವು ಮಾಡುತ್ತಿರುವ ಪ್ರತಿಭಟನೆ ದೇಶದ ಜನಕ್ಕೆ ಮತ್ತು ಅಧಿಕಾರಸ್ಥರಿಗೆ ಕೇಳಬೇಕು ಎಂದು ಅವರು ಭಾವುಕರಾದರು.

ವೇತನದಲ್ಲಿನ ವಿಶೇಷ ಭತ್ಯೆಯ ಜೊತೆಗೆ ಪಿಂಚಣಿಯನ್ನು ಲೆಕ್ಕ ಹಾಕಲು ಪರಿಗಣಿಸುತ್ತಿಲ್ಲ. ಈ ಕಾರಣದಿಂದ, ಪಿಂಚಣಿಯನ್ನು ಸಂಬಳದ ಶೇ.50 ರಿಂದ 30ಕ್ಕೆ ಕಡಿತಗೊಳಿಸಲಾಗಿದೆ. 2012ರಲ್ಲಿ ಹಣಕಾಸು ಸಚಿವಾಲಯದ ಸಲಹೆಯಂತೆ ನೀಡಲಾಗಿರುವ ವೈದ್ಯಕೀಯ ವಿಮಾ ಯೋಜನೆ ಮಾರ್ಗದರ್ಶನವನ್ನು ಕಾರ್ಯಗತಗೊಳಿಸಿಲ್ಲ. ಕೇಂದ್ರದ ಹಲವು ಸಚಿವರನ್ನು ಭೇಟಿ ಮಾಡಿದ್ದರು, ಖಾಲಿ ಭರವಸೆ ದೊರೆತಿವೆಯೇ ವಿನಃ ಬೇಡಿಕೆ ಈಡೇರಲಿಲ್ಲ ಎಂದು ಸಮನ್ವಯದ ಕೃಷ್ಣಮೂರ್ತಿ ಬೇಸರ ವ್ಯಕ್ತಪಡಿಸಿದರು.

2024-25ನೆ ಸಾಲಿನ ಎಕ್ಸ್ ಗ್ರೇಶಿಯಾ ಪುನರ್ ಪರಿಶೀಲನೆಯನ್ನು ಇದುವರೆಗೂ ಮಾಡಿಲ್ಲ. ವೇತನ ಒಪ್ಪಂದದ ಪ್ರಕಾರ ಖಾಸಗಿ ಬ್ಯಾಂಕ್ ಪಿಂಚಣಿದಾರರಿಗೆ ಕೊಡಬೇಕಾದ ಎಕ್ಸ್ ಗ್ರೇಶಿಯಾವನ್ನು ಖಾಸಗಿ ಬ್ಯಾಂಕ್ ಆಡಳಿತಗಳು ಕೊಡುತ್ತಿಲ್ಲ. ಈ ತಾರತಮ್ಯವನ್ನು ಕೇಂದ್ರ ಸರ್ಕಾರ ನಿವಾರಿಸಬೇಕು ಎಂದು ಕೃಷ್ಣಮೂರ್ತಿ ಆಗ್ರಹಿಸಿದರು.

ಒಂದು ಸಾವಿರಕ್ಕಿಂತ ಕಡಿಮೆ ಬ್ಯಾಂಕ್ ನಿವೃತ್ತರು ಈ ಹಿಂದೆ ಪಿಂಚಣಿ ಆಯ್ಕೆ ಮಾಡದ ಕಾರಣ ಪಿಂಚಣಿಯಿಂದ ವಂಚಿತರಾಗಿದ್ದಾರೆ. ಅಂತಹ ಪ್ರಕರಣಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಪರಿಗಣಿಸಲಾಗಿದೆ. ಆದರೆ ಬ್ಯಾಂಕ್ ನಿವೃತ್ತರಿಗೆ ಇದನ್ನು ವಿನಾಕಾರಣ ನಿರಾಕರಿಸಲಾಗುತ್ತಿದೆ. ಎಸ್‌ಬಿಐ ಬ್ಯಾಂಕ್ ಪಿಂಚಣಿದಾರರಿಗೆ ಕೊಡಬೇಕಾದ ಮೂಲ ವೇತನದ ಶೇ.50 ರಷ್ಟು ಪಿಂಚಣಿಯನ್ನು ಪೂರ್ವಾನ್ವಯಗೊಳಿಸಿ ನಿಗದಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಹೊಸ ಪಿಂಚಣಿ ಯೋಜನೆಯ ಏರಿಳಿತಗಳು ಮತ್ತು ಅನಿಶ್ಚಿತತೆಗಳಿಂದ ರಕ್ಷಿಸುವ ಸಲುವಾಗಿ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಹೊಸ ಪಿಂಚಣಿ ಯೋಜನೆಯಿಂದ ಹಳೆಯ ಪಿಂಚಣಿ ಯೋಜನೆಗೆ ಬದಲಾಯಿಸಬೇಕು. ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿಲ್ಲ ಎಂದರೆ ದೇಶದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೃಷ್ಣಮೂರ್ತಿ ಹೇಳಿದರು.

ಧರಣಿಯಲ್ಲಿ ಸಮನ್ವಯದ ಶಿವಪ್ರಕಾಶ್, ಎ.ಎನ್ ಕೃಷ್ಣಮೂರ್ತಿ, ಎಂ.ಆರ್.ಗೋಪಿನಾಥ್ ಮತ್ತಿತರರು ಉಪಸ್ಥಿತರಿದ್ದರು.

ಕೋಮು ದ್ವೇಷದಿಂದ ಶಾಲಾ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...