Homeಕರ್ನಾಟಕಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

- Advertisement -
- Advertisement -

ಸರ್ಕಾರಿ ಬ್ಯಾಂಕ್ ಪಿಂಚಣಿದಾರಿಗೆ ಮತ್ತು ನಿವೃತ್ತಿ ವೇತನದಾರರಿಗೆ ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯ ಶನಿವಾರ ಉಪವಾಸ ಸತ್ಯಾಗ್ರಹ ನಡೆಸಿತು.

ಈ ವೇಳೆ ಮಾತನಾಡಿದ ಸಮನ್ವಯ ಅಧ್ಯಕ್ಷ ಕೆ.ವಿ ಆಚಾರ್ಯ, ಬ್ಯಾಂಕೇತರ ಸರ್ಕಾರಿ ನಿವೃತ್ತರಿಗೆ ಪಿಂಚಣಿ ಪರಿಷ್ಕರಣೆಯನ್ನು ಕಾಲಕಾಲಕ್ಕೆ ಮಾಡಲಾಗುತ್ತಿದೆ. ಆದರೆ, ಬ್ಯಾಂಕ್ ನಿವೃತ್ತರಿಗೆ ಸತತ 30 ವರ್ಷಗಳಿಂದ ಪರಿಷ್ಕರಣೆ ಮಾಡಿಲ್ಲ. ಕೇಂದ್ರ ಸರ್ಕಾರ ನಮ್ಮ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ 80 ವರ್ಷ ದಾಟಿರುವ ಪಿಂಚಣಿದಾರರಿಗೆ ಬರುವ ಅಲ್ಪಮೊತ್ತದ ಪಿಂಚಣಿಯಿಂದ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ. ಇಲ್ಲಿ ಉಪಾವಾಸ ಮಾಡುತ್ತಿರುವ ಅನೇಕರು ಡೈಯಾಬಿಟೀಸ್ ಮುಂತಾದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಇಳಿ ವಯಸ್ಸಲ್ಲಿ ನಿಸ್ಸಹಾಯಕರಾಗಿ ನಾವು ಮಾಡುತ್ತಿರುವ ಪ್ರತಿಭಟನೆ ದೇಶದ ಜನಕ್ಕೆ ಮತ್ತು ಅಧಿಕಾರಸ್ಥರಿಗೆ ಕೇಳಬೇಕು ಎಂದು ಅವರು ಭಾವುಕರಾದರು.

ವೇತನದಲ್ಲಿನ ವಿಶೇಷ ಭತ್ಯೆಯ ಜೊತೆಗೆ ಪಿಂಚಣಿಯನ್ನು ಲೆಕ್ಕ ಹಾಕಲು ಪರಿಗಣಿಸುತ್ತಿಲ್ಲ. ಈ ಕಾರಣದಿಂದ, ಪಿಂಚಣಿಯನ್ನು ಸಂಬಳದ ಶೇ.50 ರಿಂದ 30ಕ್ಕೆ ಕಡಿತಗೊಳಿಸಲಾಗಿದೆ. 2012ರಲ್ಲಿ ಹಣಕಾಸು ಸಚಿವಾಲಯದ ಸಲಹೆಯಂತೆ ನೀಡಲಾಗಿರುವ ವೈದ್ಯಕೀಯ ವಿಮಾ ಯೋಜನೆ ಮಾರ್ಗದರ್ಶನವನ್ನು ಕಾರ್ಯಗತಗೊಳಿಸಿಲ್ಲ. ಕೇಂದ್ರದ ಹಲವು ಸಚಿವರನ್ನು ಭೇಟಿ ಮಾಡಿದ್ದರು, ಖಾಲಿ ಭರವಸೆ ದೊರೆತಿವೆಯೇ ವಿನಃ ಬೇಡಿಕೆ ಈಡೇರಲಿಲ್ಲ ಎಂದು ಸಮನ್ವಯದ ಕೃಷ್ಣಮೂರ್ತಿ ಬೇಸರ ವ್ಯಕ್ತಪಡಿಸಿದರು.

2024-25ನೆ ಸಾಲಿನ ಎಕ್ಸ್ ಗ್ರೇಶಿಯಾ ಪುನರ್ ಪರಿಶೀಲನೆಯನ್ನು ಇದುವರೆಗೂ ಮಾಡಿಲ್ಲ. ವೇತನ ಒಪ್ಪಂದದ ಪ್ರಕಾರ ಖಾಸಗಿ ಬ್ಯಾಂಕ್ ಪಿಂಚಣಿದಾರರಿಗೆ ಕೊಡಬೇಕಾದ ಎಕ್ಸ್ ಗ್ರೇಶಿಯಾವನ್ನು ಖಾಸಗಿ ಬ್ಯಾಂಕ್ ಆಡಳಿತಗಳು ಕೊಡುತ್ತಿಲ್ಲ. ಈ ತಾರತಮ್ಯವನ್ನು ಕೇಂದ್ರ ಸರ್ಕಾರ ನಿವಾರಿಸಬೇಕು ಎಂದು ಕೃಷ್ಣಮೂರ್ತಿ ಆಗ್ರಹಿಸಿದರು.

ಒಂದು ಸಾವಿರಕ್ಕಿಂತ ಕಡಿಮೆ ಬ್ಯಾಂಕ್ ನಿವೃತ್ತರು ಈ ಹಿಂದೆ ಪಿಂಚಣಿ ಆಯ್ಕೆ ಮಾಡದ ಕಾರಣ ಪಿಂಚಣಿಯಿಂದ ವಂಚಿತರಾಗಿದ್ದಾರೆ. ಅಂತಹ ಪ್ರಕರಣಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಪರಿಗಣಿಸಲಾಗಿದೆ. ಆದರೆ ಬ್ಯಾಂಕ್ ನಿವೃತ್ತರಿಗೆ ಇದನ್ನು ವಿನಾಕಾರಣ ನಿರಾಕರಿಸಲಾಗುತ್ತಿದೆ. ಎಸ್‌ಬಿಐ ಬ್ಯಾಂಕ್ ಪಿಂಚಣಿದಾರರಿಗೆ ಕೊಡಬೇಕಾದ ಮೂಲ ವೇತನದ ಶೇ.50 ರಷ್ಟು ಪಿಂಚಣಿಯನ್ನು ಪೂರ್ವಾನ್ವಯಗೊಳಿಸಿ ನಿಗದಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಹೊಸ ಪಿಂಚಣಿ ಯೋಜನೆಯ ಏರಿಳಿತಗಳು ಮತ್ತು ಅನಿಶ್ಚಿತತೆಗಳಿಂದ ರಕ್ಷಿಸುವ ಸಲುವಾಗಿ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಹೊಸ ಪಿಂಚಣಿ ಯೋಜನೆಯಿಂದ ಹಳೆಯ ಪಿಂಚಣಿ ಯೋಜನೆಗೆ ಬದಲಾಯಿಸಬೇಕು. ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿಲ್ಲ ಎಂದರೆ ದೇಶದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೃಷ್ಣಮೂರ್ತಿ ಹೇಳಿದರು.

ಧರಣಿಯಲ್ಲಿ ಸಮನ್ವಯದ ಶಿವಪ್ರಕಾಶ್, ಎ.ಎನ್ ಕೃಷ್ಣಮೂರ್ತಿ, ಎಂ.ಆರ್.ಗೋಪಿನಾಥ್ ಮತ್ತಿತರರು ಉಪಸ್ಥಿತರಿದ್ದರು.

ಕೋಮು ದ್ವೇಷದಿಂದ ಶಾಲಾ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...