Homeಮುಖಪುಟಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ಪಾಲಾರ್, ಗಾಂಧಿ ಮತ್ತು ನೋಟು ಸಿನಿಮಾ ಆಯ್ಕೆ ಮಾಡದಿರುವುದಕ್ಕೆ ಆಕ್ರೋಶ

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ಪಾಲಾರ್, ಗಾಂಧಿ ಮತ್ತು ನೋಟು ಸಿನಿಮಾ ಆಯ್ಕೆ ಮಾಡದಿರುವುದಕ್ಕೆ ಆಕ್ರೋಶ

"ಜ್ಯೂರಿಗಳ ತೀರ್ಮಾನವೆ ಅಂತಿಮ ತೀರ್ಮಾನವಾದ್ದರಿಂದ ಅದನ್ನು ನಾವೆಲ್ಲರೂ ತೆಲೆಬಾಗಿ ಸ್ವೀಕರಿಸಬೇಕು ಎನ್ನುತ್ತಾರೆ" ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಅಶೋಕ್ ಕಶ್ಯಪ್‌ರವರು.

- Advertisement -
- Advertisement -

14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 23 ರಿಂದ 30 ರವರೆಗೆ ನಡೆಯಲಿದ್ದು, ಕನ್ನಡ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ಇತ್ತೀಚೆಗೆ ಬಿಡುಗಡೆಯಾದ ಪಾಲಾರ್ ಹಾಗೂ ಗಾಂಧಿ ಮತ್ತು ನೋಟು ಸಿನಿಮಾಗಳನ್ನು ಆಯ್ಕೆ ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಕನ್ನಡ ವಿಭಾಗದಲ್ಲಿ 19.20.21, ಗಂಧದಗುಡಿ, ಗುರುಶಿಷ್ಯರು, ಹದಿನೇಳೆಂಟು, ಕನಕ ಮಾರ್ಗ, ಕೊರಮ್ಮ (ತುಳು), ಕುಬುಸ, ಮೇಡ್ ಇನ್ ಬೆಂಗಳೂರು, ನಲ್ಕೆ, ನಾನು ಕುಸುಮ, ಆರ್ಕೆಸ್ಟ್ರಾ ಮೈಸೂರು, ಫೋಟೋ, ಸ್ವಚ್ಚ ಕರ್ನಾಟಕ ಮತ್ತು ವಿಜಯಾನಂದ ಸಿನಿಮಾಗಳು ಈ ಬಾರಿಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿವೆ.

“ಕನ್ನಡದಲ್ಲೇ ಮೊದಲ ಬಾರಿ ನೇರ ದಲಿತರ ಕಥೆಯ ಪಾಲಾರ್ ಸಿನಿಮಾ ಬಂದಿದೆ. ಸಿನಿಮಾ ನೋಡಿದ ಪ್ರತಿ ಒಬ್ಬರಿಗೂ ಇಷ್ಟ ಆಗಿತ್ತು ಮತ್ತು ಎಲ್ಲಾ ಕಡೆ ಪಾಸಿಟಿವ್ ರಿವ್ಯೂ ಬಂದಿತ್ತು. ಮೀಡಿಯಾ ಮತ್ತು ಕ್ರಿಟಿಕ್ಸ್ ಸಹ ಪಾಲಾರ್ ಸಿನಿಮಾ ಚೆನ್ನಾಗಿದೆ ಅವಾರ್ಡ್ ಬರುತ್ತೆ ಅಂತಿದ್ರು..ಆದರೆ ಇಲ್ಲಿರುವ ಕರ್ನಾಟಕ ಸರ್ಕಾರದ ಕನ್ನಡ ಚಲನಚಿತ್ರ ಅಕಾಡೆಮಿ ಮತ್ತು ಅದರ ಸದಸ್ಯರು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದಲಿತರ ಬಗ್ಗೆ ಕಥೆ ಇರುವ, ದಲಿತರೇ ಸ್ವಂತವಾಗಿ ಸಿನಿಮಾ ನಿರ್ದೇಶನ ಮಾಡಿರುವ, ದಲಿತರೇ ನಿರ್ಮಾಣ ಮಾಡಿರುವ, ದಲಿತರೇ ಹೆಚ್ಚಾಗಿ ನಟಿಸಿರುವ ಪಾಲಾರ್ ಸಿನಿಮಾ ತಿರಸ್ಕರಿಸುವ ಮೂಲಕ ನಮ್ಮ ಪಾಲಾರ್ ಸಿನಿಮಾಗೆ ಇಲ್ಲಿಯೂ ಅಸ್ಪೃಶ್ಯತೆ ಆಚರಣೆಗೆ ಮುಂದಾಗಿದ್ದಾರೆ” ಎಂದು ಪಾಲಾರ್ ಚಿತ್ರದ ನಿರ್ದೇಶಕ ಜೀವಾ ನವೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸೆಲೆಕ್ಟ್ ಆದ ಸಿನಿಮಾಗಳಲ್ಲಿ ಎಷ್ಟು ಸಿನಿಮಾಗಳ ಹೆಸರು ನಿಮಗೆ ಗೊತ್ತು? Ok ಬಿಡಿ ನಾವು ಇನ್ನೂ ಮುಂದೆ ಕಮಲ, ಕರು, ಹಸು, ದೇವರ ಸಿನಿಮಾ ಮಾಡಿ ಅಂತ ಹೇಳ್ತೀವಿ. ಬಾಬಾ ಸಾಹೇಬರ ಫೋಟೋ ಸಿನಿಮಾಗಳಲ್ಲಿ ತೋರಿಸಿದರೆ ನಿಮಗೆ ಉರಿ ಅಂತ ಗೊತ್ತು. ಇನ್ನು ಮುಂದೆ ದಲಿತರು ಬೇರೆ ಅವರ ಸಿನಿಮಾಗಳು ನೋಡುವುದನ್ನು ನಿಲ್ಲಿಸುತ್ತೇವೆ. ದಲಿತರ ಬಗ್ಗೆ ಅದೆಷ್ಟೋ ವರ್ಷಗಳ ನಂತರ ಬಂದ ಪಾಲಾರ್ ಸಿನಿಮಾ ಸೆಲೆಕ್ಟ್ ಮಾಡುವಷ್ಟು ಯೋಗ್ಯತೆ ನಿಮಗಿಲ್ಲ. ಈ ಸರ್ಕಾರಕ್ಕೆ ಕಾಶ್ಮೀರಿ ಫೈಲ್ಸ್ ಬೇಕು, ನಾಯಿ ಬಗ್ಗೆ ಕಾಲ್ಪನಿಕ ಕಥೆ ಚಾರ್ಲಿ ಬೇಕು. ಅದಕ್ಕೆಲ್ಲಾ ಟಾಕ್ಸ್ ಫ್ರೀ ಬೇರೆ ಮಾಡ್ತಾರೆ. ಜಾತಿ ಭೇದ ಭಾವ ಮಾಡೋದು ಈಗ ನೀವೇ ಅಂತ ಗೊತ್ತಾಯ್ತು ಬಿಡಿ” ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

‘ಗಾಂಧಿ ಮತ್ತು ನೋಟು’ ಇದು ಗಾಂಧಿಯ ಆದರ್ಶಗಳ ಬಗ್ಗೆ ಇರುವ ಚಿತ್ರ. ಮೊನ್ನೆ ಮಕ್ಕಳ ಚಲನಚಿತ್ರೋತ್ಸವದಲ್ಲಿ ನಾಲ್ಕು ಅವಾರ್ಡ್‌ಗಳನ್ನು ತೆಗೆದುಕೊಂಡ ಚಿತ್ರ.. ಆದರೆ ಈ #BIffs ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುವ ಭಾಗ್ಯವಿಲ್ಲ.. ಕಾರಣವೆಂದರೆ ಅಕಾಡಮಿಯ ಅಧ್ಯಕ್ಷರು, ತಂಡ ಮತ್ತು ಮಹಾನ್ ಜ್ಯೂರಿಗಳು ಹಣದ ಬೇಡಿಕೆಯ ಸದ್ದು ನನ್ನ ಕಿವಿಗೂ ಬಿದ್ದಿದೆ.. ಯಾಕ್ ಕೋಡಬೇಕು? ಎಂದು ಸಿನಿಮಾದ ನಿರ್ದೇಶಕರಾದ ಯೋಗಿ ದಾವಣಗೆರೆಯವರು ಕಿಡಿಕಾರಿದ್ದಾರೆ.

ಈ ಕುರಿತು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಅಶೋಕ್ ಕಶ್ಯಪ್‌ರವರನ್ನು ಪ್ರಶ್ನಿಸಿದಾಗ “ಒಂದು ಸಿನಿಮಾ ಆಯ್ಕೆಯಾಗಬೇಕಾದರೆ ಉಳಿದ ಸಿನಿಮಾಗಳ ಜೊತೆ ಸ್ಪರ್ಧಿಸಿ ಗೆಲ್ಲಬೇಕು. ಸ್ಪರ್ಧೆಯಲ್ಲಿ ಗೆಲ್ಲದೆ ನಮ್ಮ ಸಿನಿಮಾವನ್ನು ಆಯ್ಕೆ ಮಾಡಿಲ್ಲ ಎಂದು ಕೇಳುವುದು ಯಾವ ನ್ಯಾಯ? ಕಲೆಗೆ ಮೀಸಲಾತಿ ಕೊಡಿ ಎಂದು ಕೇಳುವುದು ಸರಿಯಲ್ಲ. ಜ್ಯೂರಿಗಳಿಗೆ ನಾವು ಮರ್ಯಾದೆ ಕೊಡಬೇಕು. ಅವರ ತೀರ್ಮಾನವೆ ಅಂತಿಮ ತೀರ್ಮಾನವಾದ್ದರಿಂದ, ಜ್ಯೂರಿ ಅಧ್ಯಕ್ಷರು ಸೆಲೆಕ್ಟ್ ಮಾಡಿರುವುದಕ್ಕೆ ನಾವೆಲ್ಲರೂ ತೆಲೆಬಾಗಿ ಸ್ವೀಕರಿಸಬೇಕು” ಎಂದರು.

ಕೆಲ ಕಳಪೆ ಸಿನಿಮಾಗಳನ್ನು ಸಹ ಸೆಲೆಕ್ಟ್ ಮಾಡಲಾಗಿದೆ. ಅದಕ್ಕಿಂತಲೂ ಉತ್ತಮ ಕನ್ನಡ ಚಿತ್ರಗಳು ಇದ್ದವಲ್ಲ ಎಂಬ ಪ್ರಶ್ನೆಗೆ “ನೀವಾಗಲಿ, ಪ್ರೇಕ್ಷಕರಾಗಲಿ ಇಂತಹ ಸಿನಿಮಾ ಇರಲಿ, ಬಿಡಲಿ ಎಂದು ಹೇಳಲು ಬರುವುದಿಲ್ಲ. ಜೇಮ್ಸ್ ಸಿನಿಮಾ ಬರಬೇಕೆಂದು ನಾನು ಬಯಸಿದ್ದೆ. ಆದರೆ ಬಂದಿಲ್ಲ ಏನು ಮಾಡುವುದು? ಹೊರಗಿನವರ ಮಾತಿಗೆ ನಾವು ಕಿವಿಗೊಡುವುದಿಲ್ಲ, ಜ್ಯೂರಿ ಅಧ್ಯಕ್ಷರಾದ ಎಂ.ಎಸ್ ರಮೇಶ್ ರವರೇ ತಮ್ಮ ವಿಟೋ ಪವರ್ ಬಳಸಿ ಸಿನಿಮಾಗಳನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ನನ್ನ ಪಾತ್ರವಿಲ್ಲ ಮತ್ತು ನನಗೂ ಅದಕ್ಕೂ ಸಂಬಂಧವಿಲ್ಲ” ಎಂದರು.

ಬೆಂಗಳೂರು ಅಂತರಾಷ್ಟ್ರೀಯ ಚಲನಚತ್ರೋತ್ಸವಗಳಿಗೆ ಪ್ರತಿ ಬಾರಿಯೂ ಹಾಜರಾಗುವ ಸಿನಿಮಾಸಕ್ತ ವಿ.ಎಲ್ ಬಾಲುರವರು ನಾನುಗೌರಿಯೊಂದಿಗೆ ಮಾತನಾಡಿ, “ಪಾಲಾರ್ ಸಿನಿಮಾ ಇರಲಿ, ಮತ್ತೊಂದು ಸಿನಿಮಾ ಇರಲಿ- ಸಿನಿಮಾದ ಆಶಯದ ಮೇಲೆ ಜ್ಯೂರಿಗಳು ಸಿನಿಮಾಗಳನ್ನು ಆಯ್ಕೆ ಮಾಡಬೇಕು. ಅದು ಬಿಟ್ಟು ಮೆರಿಟ್ ಬಗ್ಗೆ ಮಾತನಾಡುವುದು ಎಲ್ಲಾ ಬೋಗಸ್ ಅಂತ ಸಿನಿಮಾ ಮಾತ್ರವಲ್ಲದೆ ಎಲ್ಲಾ ರಂಗದಲ್ಲಿಯೂ ಏನಾಗುತ್ತಿದೆ ಅಂತ ಎಲ್ಲರಿಗೂ ತಿಳಿದಿದೆ” ಎಂದರು.

Biffes ವಿಚಾರದಲ್ಲಿ ಕನ್ನಡ ಮತ್ತು ಇತರ ಸಿನಿಮಾಗಳ ಆಯ್ಕೆಯ ಮಾನದಂಡಗಳು ಏನು, ಜ್ಯೂರಿಗಳನ್ನು ಯಾರು ಆಯ್ಕೆ ಮಾಡುತ್ತಾರೆ? ಅದರ ಪ್ರಕ್ರಿಯೆಯೇನು ಎಂಬುದರ ಕುರಿತು ಎಲ್ಲಿಯೂ ಸರಿಯಾದ ಮಾಹಿತಿ ಇಲ್ಲ. ಈ ಕುರಿತು Biffes ವೆಬ್‌ಸೈಟ್‌ನಲ್ಲಿ ಪಾರದರ್ಶಕವಾಗಿ ಪ್ರಕಟಿಸಿದರೆ ಸಾಕಷ್ಟು ವಿವಾದಗಳನ್ನು ತಪ್ಪಿಸಬಹುದು. ಇಂತಹ ಕೆಲಸವನ್ನು ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು ಮಾಡಬೇಕು ಎಂದು ಒತ್ತಾಯಿಸಿದರು.

ನಾವು Biffesಗೆ ಬರುವುದು ಪ್ರಪಂಚದ ಅಪರೂಪದ ಬೇರೆ ಬೇರೆ ದೇಶದ ಜನರ – ಸರ್ಕಾರದ ಬಗ್ಗೆ ಹೆಚ್ಚು ಹೇಳುವ ಸಿನಿಮಾಗಳನ್ನು ನೋಡುವುದಕ್ಕಾಗಿ. ಅಂತಹ ಸಿನಿಮಾಗಳು ಆಯ್ಕೆ ಆಗಬೇಕು. ಆದರೆ ಈ ಬಾರಿಯ ಸಿನಿಮಾದ ಪಟ್ಟಿ ನೋಡಿದರೆ ಕೆಲವೊಂದು ಸಿನಿಮಾಗಳನ್ನು ಹೊರತುಪಡಿಸಿ ನಿರಾಶೆ ಅನಿಸುತ್ತದೆ. ಆದರೂ Biffes ನೋಡಿದಮೆಲೆ ಸಿಗುವ ಅನುಭವಕ್ಕಾಗಿ ಕಾಯುತ್ತಿರುವ ಸಿನಿ ಅಭಿಮಾನಿಗಳಲ್ಲಿ ನಾನು ಒಬ್ಬ. ನನ್ನಂಥಹ ಬಹಳಷ್ಟು ಸಿನಿಪ್ರೇಮಿಗಳ ಆಶಯವನ್ನು ಅಧ್ಯಕ್ಷರು ಅರ್ಥಮಾಡಿಕೊಳ್ಳಬೇಕು ಎಂದರು.

ಇದನ್ನೂ ಓದಿ: ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...