Homeಮುಖಪುಟಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ಪಾಲಾರ್, ಗಾಂಧಿ ಮತ್ತು ನೋಟು ಸಿನಿಮಾ ಆಯ್ಕೆ ಮಾಡದಿರುವುದಕ್ಕೆ ಆಕ್ರೋಶ

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ಪಾಲಾರ್, ಗಾಂಧಿ ಮತ್ತು ನೋಟು ಸಿನಿಮಾ ಆಯ್ಕೆ ಮಾಡದಿರುವುದಕ್ಕೆ ಆಕ್ರೋಶ

"ಜ್ಯೂರಿಗಳ ತೀರ್ಮಾನವೆ ಅಂತಿಮ ತೀರ್ಮಾನವಾದ್ದರಿಂದ ಅದನ್ನು ನಾವೆಲ್ಲರೂ ತೆಲೆಬಾಗಿ ಸ್ವೀಕರಿಸಬೇಕು ಎನ್ನುತ್ತಾರೆ" ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಅಶೋಕ್ ಕಶ್ಯಪ್‌ರವರು.

- Advertisement -
- Advertisement -

14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 23 ರಿಂದ 30 ರವರೆಗೆ ನಡೆಯಲಿದ್ದು, ಕನ್ನಡ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ಇತ್ತೀಚೆಗೆ ಬಿಡುಗಡೆಯಾದ ಪಾಲಾರ್ ಹಾಗೂ ಗಾಂಧಿ ಮತ್ತು ನೋಟು ಸಿನಿಮಾಗಳನ್ನು ಆಯ್ಕೆ ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಕನ್ನಡ ವಿಭಾಗದಲ್ಲಿ 19.20.21, ಗಂಧದಗುಡಿ, ಗುರುಶಿಷ್ಯರು, ಹದಿನೇಳೆಂಟು, ಕನಕ ಮಾರ್ಗ, ಕೊರಮ್ಮ (ತುಳು), ಕುಬುಸ, ಮೇಡ್ ಇನ್ ಬೆಂಗಳೂರು, ನಲ್ಕೆ, ನಾನು ಕುಸುಮ, ಆರ್ಕೆಸ್ಟ್ರಾ ಮೈಸೂರು, ಫೋಟೋ, ಸ್ವಚ್ಚ ಕರ್ನಾಟಕ ಮತ್ತು ವಿಜಯಾನಂದ ಸಿನಿಮಾಗಳು ಈ ಬಾರಿಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿವೆ.

“ಕನ್ನಡದಲ್ಲೇ ಮೊದಲ ಬಾರಿ ನೇರ ದಲಿತರ ಕಥೆಯ ಪಾಲಾರ್ ಸಿನಿಮಾ ಬಂದಿದೆ. ಸಿನಿಮಾ ನೋಡಿದ ಪ್ರತಿ ಒಬ್ಬರಿಗೂ ಇಷ್ಟ ಆಗಿತ್ತು ಮತ್ತು ಎಲ್ಲಾ ಕಡೆ ಪಾಸಿಟಿವ್ ರಿವ್ಯೂ ಬಂದಿತ್ತು. ಮೀಡಿಯಾ ಮತ್ತು ಕ್ರಿಟಿಕ್ಸ್ ಸಹ ಪಾಲಾರ್ ಸಿನಿಮಾ ಚೆನ್ನಾಗಿದೆ ಅವಾರ್ಡ್ ಬರುತ್ತೆ ಅಂತಿದ್ರು..ಆದರೆ ಇಲ್ಲಿರುವ ಕರ್ನಾಟಕ ಸರ್ಕಾರದ ಕನ್ನಡ ಚಲನಚಿತ್ರ ಅಕಾಡೆಮಿ ಮತ್ತು ಅದರ ಸದಸ್ಯರು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದಲಿತರ ಬಗ್ಗೆ ಕಥೆ ಇರುವ, ದಲಿತರೇ ಸ್ವಂತವಾಗಿ ಸಿನಿಮಾ ನಿರ್ದೇಶನ ಮಾಡಿರುವ, ದಲಿತರೇ ನಿರ್ಮಾಣ ಮಾಡಿರುವ, ದಲಿತರೇ ಹೆಚ್ಚಾಗಿ ನಟಿಸಿರುವ ಪಾಲಾರ್ ಸಿನಿಮಾ ತಿರಸ್ಕರಿಸುವ ಮೂಲಕ ನಮ್ಮ ಪಾಲಾರ್ ಸಿನಿಮಾಗೆ ಇಲ್ಲಿಯೂ ಅಸ್ಪೃಶ್ಯತೆ ಆಚರಣೆಗೆ ಮುಂದಾಗಿದ್ದಾರೆ” ಎಂದು ಪಾಲಾರ್ ಚಿತ್ರದ ನಿರ್ದೇಶಕ ಜೀವಾ ನವೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸೆಲೆಕ್ಟ್ ಆದ ಸಿನಿಮಾಗಳಲ್ಲಿ ಎಷ್ಟು ಸಿನಿಮಾಗಳ ಹೆಸರು ನಿಮಗೆ ಗೊತ್ತು? Ok ಬಿಡಿ ನಾವು ಇನ್ನೂ ಮುಂದೆ ಕಮಲ, ಕರು, ಹಸು, ದೇವರ ಸಿನಿಮಾ ಮಾಡಿ ಅಂತ ಹೇಳ್ತೀವಿ. ಬಾಬಾ ಸಾಹೇಬರ ಫೋಟೋ ಸಿನಿಮಾಗಳಲ್ಲಿ ತೋರಿಸಿದರೆ ನಿಮಗೆ ಉರಿ ಅಂತ ಗೊತ್ತು. ಇನ್ನು ಮುಂದೆ ದಲಿತರು ಬೇರೆ ಅವರ ಸಿನಿಮಾಗಳು ನೋಡುವುದನ್ನು ನಿಲ್ಲಿಸುತ್ತೇವೆ. ದಲಿತರ ಬಗ್ಗೆ ಅದೆಷ್ಟೋ ವರ್ಷಗಳ ನಂತರ ಬಂದ ಪಾಲಾರ್ ಸಿನಿಮಾ ಸೆಲೆಕ್ಟ್ ಮಾಡುವಷ್ಟು ಯೋಗ್ಯತೆ ನಿಮಗಿಲ್ಲ. ಈ ಸರ್ಕಾರಕ್ಕೆ ಕಾಶ್ಮೀರಿ ಫೈಲ್ಸ್ ಬೇಕು, ನಾಯಿ ಬಗ್ಗೆ ಕಾಲ್ಪನಿಕ ಕಥೆ ಚಾರ್ಲಿ ಬೇಕು. ಅದಕ್ಕೆಲ್ಲಾ ಟಾಕ್ಸ್ ಫ್ರೀ ಬೇರೆ ಮಾಡ್ತಾರೆ. ಜಾತಿ ಭೇದ ಭಾವ ಮಾಡೋದು ಈಗ ನೀವೇ ಅಂತ ಗೊತ್ತಾಯ್ತು ಬಿಡಿ” ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

‘ಗಾಂಧಿ ಮತ್ತು ನೋಟು’ ಇದು ಗಾಂಧಿಯ ಆದರ್ಶಗಳ ಬಗ್ಗೆ ಇರುವ ಚಿತ್ರ. ಮೊನ್ನೆ ಮಕ್ಕಳ ಚಲನಚಿತ್ರೋತ್ಸವದಲ್ಲಿ ನಾಲ್ಕು ಅವಾರ್ಡ್‌ಗಳನ್ನು ತೆಗೆದುಕೊಂಡ ಚಿತ್ರ.. ಆದರೆ ಈ #BIffs ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುವ ಭಾಗ್ಯವಿಲ್ಲ.. ಕಾರಣವೆಂದರೆ ಅಕಾಡಮಿಯ ಅಧ್ಯಕ್ಷರು, ತಂಡ ಮತ್ತು ಮಹಾನ್ ಜ್ಯೂರಿಗಳು ಹಣದ ಬೇಡಿಕೆಯ ಸದ್ದು ನನ್ನ ಕಿವಿಗೂ ಬಿದ್ದಿದೆ.. ಯಾಕ್ ಕೋಡಬೇಕು? ಎಂದು ಸಿನಿಮಾದ ನಿರ್ದೇಶಕರಾದ ಯೋಗಿ ದಾವಣಗೆರೆಯವರು ಕಿಡಿಕಾರಿದ್ದಾರೆ.

ಈ ಕುರಿತು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಅಶೋಕ್ ಕಶ್ಯಪ್‌ರವರನ್ನು ಪ್ರಶ್ನಿಸಿದಾಗ “ಒಂದು ಸಿನಿಮಾ ಆಯ್ಕೆಯಾಗಬೇಕಾದರೆ ಉಳಿದ ಸಿನಿಮಾಗಳ ಜೊತೆ ಸ್ಪರ್ಧಿಸಿ ಗೆಲ್ಲಬೇಕು. ಸ್ಪರ್ಧೆಯಲ್ಲಿ ಗೆಲ್ಲದೆ ನಮ್ಮ ಸಿನಿಮಾವನ್ನು ಆಯ್ಕೆ ಮಾಡಿಲ್ಲ ಎಂದು ಕೇಳುವುದು ಯಾವ ನ್ಯಾಯ? ಕಲೆಗೆ ಮೀಸಲಾತಿ ಕೊಡಿ ಎಂದು ಕೇಳುವುದು ಸರಿಯಲ್ಲ. ಜ್ಯೂರಿಗಳಿಗೆ ನಾವು ಮರ್ಯಾದೆ ಕೊಡಬೇಕು. ಅವರ ತೀರ್ಮಾನವೆ ಅಂತಿಮ ತೀರ್ಮಾನವಾದ್ದರಿಂದ, ಜ್ಯೂರಿ ಅಧ್ಯಕ್ಷರು ಸೆಲೆಕ್ಟ್ ಮಾಡಿರುವುದಕ್ಕೆ ನಾವೆಲ್ಲರೂ ತೆಲೆಬಾಗಿ ಸ್ವೀಕರಿಸಬೇಕು” ಎಂದರು.

ಕೆಲ ಕಳಪೆ ಸಿನಿಮಾಗಳನ್ನು ಸಹ ಸೆಲೆಕ್ಟ್ ಮಾಡಲಾಗಿದೆ. ಅದಕ್ಕಿಂತಲೂ ಉತ್ತಮ ಕನ್ನಡ ಚಿತ್ರಗಳು ಇದ್ದವಲ್ಲ ಎಂಬ ಪ್ರಶ್ನೆಗೆ “ನೀವಾಗಲಿ, ಪ್ರೇಕ್ಷಕರಾಗಲಿ ಇಂತಹ ಸಿನಿಮಾ ಇರಲಿ, ಬಿಡಲಿ ಎಂದು ಹೇಳಲು ಬರುವುದಿಲ್ಲ. ಜೇಮ್ಸ್ ಸಿನಿಮಾ ಬರಬೇಕೆಂದು ನಾನು ಬಯಸಿದ್ದೆ. ಆದರೆ ಬಂದಿಲ್ಲ ಏನು ಮಾಡುವುದು? ಹೊರಗಿನವರ ಮಾತಿಗೆ ನಾವು ಕಿವಿಗೊಡುವುದಿಲ್ಲ, ಜ್ಯೂರಿ ಅಧ್ಯಕ್ಷರಾದ ಎಂ.ಎಸ್ ರಮೇಶ್ ರವರೇ ತಮ್ಮ ವಿಟೋ ಪವರ್ ಬಳಸಿ ಸಿನಿಮಾಗಳನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ನನ್ನ ಪಾತ್ರವಿಲ್ಲ ಮತ್ತು ನನಗೂ ಅದಕ್ಕೂ ಸಂಬಂಧವಿಲ್ಲ” ಎಂದರು.

ಬೆಂಗಳೂರು ಅಂತರಾಷ್ಟ್ರೀಯ ಚಲನಚತ್ರೋತ್ಸವಗಳಿಗೆ ಪ್ರತಿ ಬಾರಿಯೂ ಹಾಜರಾಗುವ ಸಿನಿಮಾಸಕ್ತ ವಿ.ಎಲ್ ಬಾಲುರವರು ನಾನುಗೌರಿಯೊಂದಿಗೆ ಮಾತನಾಡಿ, “ಪಾಲಾರ್ ಸಿನಿಮಾ ಇರಲಿ, ಮತ್ತೊಂದು ಸಿನಿಮಾ ಇರಲಿ- ಸಿನಿಮಾದ ಆಶಯದ ಮೇಲೆ ಜ್ಯೂರಿಗಳು ಸಿನಿಮಾಗಳನ್ನು ಆಯ್ಕೆ ಮಾಡಬೇಕು. ಅದು ಬಿಟ್ಟು ಮೆರಿಟ್ ಬಗ್ಗೆ ಮಾತನಾಡುವುದು ಎಲ್ಲಾ ಬೋಗಸ್ ಅಂತ ಸಿನಿಮಾ ಮಾತ್ರವಲ್ಲದೆ ಎಲ್ಲಾ ರಂಗದಲ್ಲಿಯೂ ಏನಾಗುತ್ತಿದೆ ಅಂತ ಎಲ್ಲರಿಗೂ ತಿಳಿದಿದೆ” ಎಂದರು.

Biffes ವಿಚಾರದಲ್ಲಿ ಕನ್ನಡ ಮತ್ತು ಇತರ ಸಿನಿಮಾಗಳ ಆಯ್ಕೆಯ ಮಾನದಂಡಗಳು ಏನು, ಜ್ಯೂರಿಗಳನ್ನು ಯಾರು ಆಯ್ಕೆ ಮಾಡುತ್ತಾರೆ? ಅದರ ಪ್ರಕ್ರಿಯೆಯೇನು ಎಂಬುದರ ಕುರಿತು ಎಲ್ಲಿಯೂ ಸರಿಯಾದ ಮಾಹಿತಿ ಇಲ್ಲ. ಈ ಕುರಿತು Biffes ವೆಬ್‌ಸೈಟ್‌ನಲ್ಲಿ ಪಾರದರ್ಶಕವಾಗಿ ಪ್ರಕಟಿಸಿದರೆ ಸಾಕಷ್ಟು ವಿವಾದಗಳನ್ನು ತಪ್ಪಿಸಬಹುದು. ಇಂತಹ ಕೆಲಸವನ್ನು ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು ಮಾಡಬೇಕು ಎಂದು ಒತ್ತಾಯಿಸಿದರು.

ನಾವು Biffesಗೆ ಬರುವುದು ಪ್ರಪಂಚದ ಅಪರೂಪದ ಬೇರೆ ಬೇರೆ ದೇಶದ ಜನರ – ಸರ್ಕಾರದ ಬಗ್ಗೆ ಹೆಚ್ಚು ಹೇಳುವ ಸಿನಿಮಾಗಳನ್ನು ನೋಡುವುದಕ್ಕಾಗಿ. ಅಂತಹ ಸಿನಿಮಾಗಳು ಆಯ್ಕೆ ಆಗಬೇಕು. ಆದರೆ ಈ ಬಾರಿಯ ಸಿನಿಮಾದ ಪಟ್ಟಿ ನೋಡಿದರೆ ಕೆಲವೊಂದು ಸಿನಿಮಾಗಳನ್ನು ಹೊರತುಪಡಿಸಿ ನಿರಾಶೆ ಅನಿಸುತ್ತದೆ. ಆದರೂ Biffes ನೋಡಿದಮೆಲೆ ಸಿಗುವ ಅನುಭವಕ್ಕಾಗಿ ಕಾಯುತ್ತಿರುವ ಸಿನಿ ಅಭಿಮಾನಿಗಳಲ್ಲಿ ನಾನು ಒಬ್ಬ. ನನ್ನಂಥಹ ಬಹಳಷ್ಟು ಸಿನಿಪ್ರೇಮಿಗಳ ಆಶಯವನ್ನು ಅಧ್ಯಕ್ಷರು ಅರ್ಥಮಾಡಿಕೊಳ್ಳಬೇಕು ಎಂದರು.

ಇದನ್ನೂ ಓದಿ: ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...