Homeಮುಖಪುಟಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ಪಾಲಾರ್, ಗಾಂಧಿ ಮತ್ತು ನೋಟು ಸಿನಿಮಾ ಆಯ್ಕೆ ಮಾಡದಿರುವುದಕ್ಕೆ ಆಕ್ರೋಶ

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ಪಾಲಾರ್, ಗಾಂಧಿ ಮತ್ತು ನೋಟು ಸಿನಿಮಾ ಆಯ್ಕೆ ಮಾಡದಿರುವುದಕ್ಕೆ ಆಕ್ರೋಶ

"ಜ್ಯೂರಿಗಳ ತೀರ್ಮಾನವೆ ಅಂತಿಮ ತೀರ್ಮಾನವಾದ್ದರಿಂದ ಅದನ್ನು ನಾವೆಲ್ಲರೂ ತೆಲೆಬಾಗಿ ಸ್ವೀಕರಿಸಬೇಕು ಎನ್ನುತ್ತಾರೆ" ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಅಶೋಕ್ ಕಶ್ಯಪ್‌ರವರು.

- Advertisement -
- Advertisement -

14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 23 ರಿಂದ 30 ರವರೆಗೆ ನಡೆಯಲಿದ್ದು, ಕನ್ನಡ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ಇತ್ತೀಚೆಗೆ ಬಿಡುಗಡೆಯಾದ ಪಾಲಾರ್ ಹಾಗೂ ಗಾಂಧಿ ಮತ್ತು ನೋಟು ಸಿನಿಮಾಗಳನ್ನು ಆಯ್ಕೆ ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಕನ್ನಡ ವಿಭಾಗದಲ್ಲಿ 19.20.21, ಗಂಧದಗುಡಿ, ಗುರುಶಿಷ್ಯರು, ಹದಿನೇಳೆಂಟು, ಕನಕ ಮಾರ್ಗ, ಕೊರಮ್ಮ (ತುಳು), ಕುಬುಸ, ಮೇಡ್ ಇನ್ ಬೆಂಗಳೂರು, ನಲ್ಕೆ, ನಾನು ಕುಸುಮ, ಆರ್ಕೆಸ್ಟ್ರಾ ಮೈಸೂರು, ಫೋಟೋ, ಸ್ವಚ್ಚ ಕರ್ನಾಟಕ ಮತ್ತು ವಿಜಯಾನಂದ ಸಿನಿಮಾಗಳು ಈ ಬಾರಿಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿವೆ.

“ಕನ್ನಡದಲ್ಲೇ ಮೊದಲ ಬಾರಿ ನೇರ ದಲಿತರ ಕಥೆಯ ಪಾಲಾರ್ ಸಿನಿಮಾ ಬಂದಿದೆ. ಸಿನಿಮಾ ನೋಡಿದ ಪ್ರತಿ ಒಬ್ಬರಿಗೂ ಇಷ್ಟ ಆಗಿತ್ತು ಮತ್ತು ಎಲ್ಲಾ ಕಡೆ ಪಾಸಿಟಿವ್ ರಿವ್ಯೂ ಬಂದಿತ್ತು. ಮೀಡಿಯಾ ಮತ್ತು ಕ್ರಿಟಿಕ್ಸ್ ಸಹ ಪಾಲಾರ್ ಸಿನಿಮಾ ಚೆನ್ನಾಗಿದೆ ಅವಾರ್ಡ್ ಬರುತ್ತೆ ಅಂತಿದ್ರು..ಆದರೆ ಇಲ್ಲಿರುವ ಕರ್ನಾಟಕ ಸರ್ಕಾರದ ಕನ್ನಡ ಚಲನಚಿತ್ರ ಅಕಾಡೆಮಿ ಮತ್ತು ಅದರ ಸದಸ್ಯರು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದಲಿತರ ಬಗ್ಗೆ ಕಥೆ ಇರುವ, ದಲಿತರೇ ಸ್ವಂತವಾಗಿ ಸಿನಿಮಾ ನಿರ್ದೇಶನ ಮಾಡಿರುವ, ದಲಿತರೇ ನಿರ್ಮಾಣ ಮಾಡಿರುವ, ದಲಿತರೇ ಹೆಚ್ಚಾಗಿ ನಟಿಸಿರುವ ಪಾಲಾರ್ ಸಿನಿಮಾ ತಿರಸ್ಕರಿಸುವ ಮೂಲಕ ನಮ್ಮ ಪಾಲಾರ್ ಸಿನಿಮಾಗೆ ಇಲ್ಲಿಯೂ ಅಸ್ಪೃಶ್ಯತೆ ಆಚರಣೆಗೆ ಮುಂದಾಗಿದ್ದಾರೆ” ಎಂದು ಪಾಲಾರ್ ಚಿತ್ರದ ನಿರ್ದೇಶಕ ಜೀವಾ ನವೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸೆಲೆಕ್ಟ್ ಆದ ಸಿನಿಮಾಗಳಲ್ಲಿ ಎಷ್ಟು ಸಿನಿಮಾಗಳ ಹೆಸರು ನಿಮಗೆ ಗೊತ್ತು? Ok ಬಿಡಿ ನಾವು ಇನ್ನೂ ಮುಂದೆ ಕಮಲ, ಕರು, ಹಸು, ದೇವರ ಸಿನಿಮಾ ಮಾಡಿ ಅಂತ ಹೇಳ್ತೀವಿ. ಬಾಬಾ ಸಾಹೇಬರ ಫೋಟೋ ಸಿನಿಮಾಗಳಲ್ಲಿ ತೋರಿಸಿದರೆ ನಿಮಗೆ ಉರಿ ಅಂತ ಗೊತ್ತು. ಇನ್ನು ಮುಂದೆ ದಲಿತರು ಬೇರೆ ಅವರ ಸಿನಿಮಾಗಳು ನೋಡುವುದನ್ನು ನಿಲ್ಲಿಸುತ್ತೇವೆ. ದಲಿತರ ಬಗ್ಗೆ ಅದೆಷ್ಟೋ ವರ್ಷಗಳ ನಂತರ ಬಂದ ಪಾಲಾರ್ ಸಿನಿಮಾ ಸೆಲೆಕ್ಟ್ ಮಾಡುವಷ್ಟು ಯೋಗ್ಯತೆ ನಿಮಗಿಲ್ಲ. ಈ ಸರ್ಕಾರಕ್ಕೆ ಕಾಶ್ಮೀರಿ ಫೈಲ್ಸ್ ಬೇಕು, ನಾಯಿ ಬಗ್ಗೆ ಕಾಲ್ಪನಿಕ ಕಥೆ ಚಾರ್ಲಿ ಬೇಕು. ಅದಕ್ಕೆಲ್ಲಾ ಟಾಕ್ಸ್ ಫ್ರೀ ಬೇರೆ ಮಾಡ್ತಾರೆ. ಜಾತಿ ಭೇದ ಭಾವ ಮಾಡೋದು ಈಗ ನೀವೇ ಅಂತ ಗೊತ್ತಾಯ್ತು ಬಿಡಿ” ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

‘ಗಾಂಧಿ ಮತ್ತು ನೋಟು’ ಇದು ಗಾಂಧಿಯ ಆದರ್ಶಗಳ ಬಗ್ಗೆ ಇರುವ ಚಿತ್ರ. ಮೊನ್ನೆ ಮಕ್ಕಳ ಚಲನಚಿತ್ರೋತ್ಸವದಲ್ಲಿ ನಾಲ್ಕು ಅವಾರ್ಡ್‌ಗಳನ್ನು ತೆಗೆದುಕೊಂಡ ಚಿತ್ರ.. ಆದರೆ ಈ #BIffs ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುವ ಭಾಗ್ಯವಿಲ್ಲ.. ಕಾರಣವೆಂದರೆ ಅಕಾಡಮಿಯ ಅಧ್ಯಕ್ಷರು, ತಂಡ ಮತ್ತು ಮಹಾನ್ ಜ್ಯೂರಿಗಳು ಹಣದ ಬೇಡಿಕೆಯ ಸದ್ದು ನನ್ನ ಕಿವಿಗೂ ಬಿದ್ದಿದೆ.. ಯಾಕ್ ಕೋಡಬೇಕು? ಎಂದು ಸಿನಿಮಾದ ನಿರ್ದೇಶಕರಾದ ಯೋಗಿ ದಾವಣಗೆರೆಯವರು ಕಿಡಿಕಾರಿದ್ದಾರೆ.

ಈ ಕುರಿತು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಅಶೋಕ್ ಕಶ್ಯಪ್‌ರವರನ್ನು ಪ್ರಶ್ನಿಸಿದಾಗ “ಒಂದು ಸಿನಿಮಾ ಆಯ್ಕೆಯಾಗಬೇಕಾದರೆ ಉಳಿದ ಸಿನಿಮಾಗಳ ಜೊತೆ ಸ್ಪರ್ಧಿಸಿ ಗೆಲ್ಲಬೇಕು. ಸ್ಪರ್ಧೆಯಲ್ಲಿ ಗೆಲ್ಲದೆ ನಮ್ಮ ಸಿನಿಮಾವನ್ನು ಆಯ್ಕೆ ಮಾಡಿಲ್ಲ ಎಂದು ಕೇಳುವುದು ಯಾವ ನ್ಯಾಯ? ಕಲೆಗೆ ಮೀಸಲಾತಿ ಕೊಡಿ ಎಂದು ಕೇಳುವುದು ಸರಿಯಲ್ಲ. ಜ್ಯೂರಿಗಳಿಗೆ ನಾವು ಮರ್ಯಾದೆ ಕೊಡಬೇಕು. ಅವರ ತೀರ್ಮಾನವೆ ಅಂತಿಮ ತೀರ್ಮಾನವಾದ್ದರಿಂದ, ಜ್ಯೂರಿ ಅಧ್ಯಕ್ಷರು ಸೆಲೆಕ್ಟ್ ಮಾಡಿರುವುದಕ್ಕೆ ನಾವೆಲ್ಲರೂ ತೆಲೆಬಾಗಿ ಸ್ವೀಕರಿಸಬೇಕು” ಎಂದರು.

ಕೆಲ ಕಳಪೆ ಸಿನಿಮಾಗಳನ್ನು ಸಹ ಸೆಲೆಕ್ಟ್ ಮಾಡಲಾಗಿದೆ. ಅದಕ್ಕಿಂತಲೂ ಉತ್ತಮ ಕನ್ನಡ ಚಿತ್ರಗಳು ಇದ್ದವಲ್ಲ ಎಂಬ ಪ್ರಶ್ನೆಗೆ “ನೀವಾಗಲಿ, ಪ್ರೇಕ್ಷಕರಾಗಲಿ ಇಂತಹ ಸಿನಿಮಾ ಇರಲಿ, ಬಿಡಲಿ ಎಂದು ಹೇಳಲು ಬರುವುದಿಲ್ಲ. ಜೇಮ್ಸ್ ಸಿನಿಮಾ ಬರಬೇಕೆಂದು ನಾನು ಬಯಸಿದ್ದೆ. ಆದರೆ ಬಂದಿಲ್ಲ ಏನು ಮಾಡುವುದು? ಹೊರಗಿನವರ ಮಾತಿಗೆ ನಾವು ಕಿವಿಗೊಡುವುದಿಲ್ಲ, ಜ್ಯೂರಿ ಅಧ್ಯಕ್ಷರಾದ ಎಂ.ಎಸ್ ರಮೇಶ್ ರವರೇ ತಮ್ಮ ವಿಟೋ ಪವರ್ ಬಳಸಿ ಸಿನಿಮಾಗಳನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ನನ್ನ ಪಾತ್ರವಿಲ್ಲ ಮತ್ತು ನನಗೂ ಅದಕ್ಕೂ ಸಂಬಂಧವಿಲ್ಲ” ಎಂದರು.

ಬೆಂಗಳೂರು ಅಂತರಾಷ್ಟ್ರೀಯ ಚಲನಚತ್ರೋತ್ಸವಗಳಿಗೆ ಪ್ರತಿ ಬಾರಿಯೂ ಹಾಜರಾಗುವ ಸಿನಿಮಾಸಕ್ತ ವಿ.ಎಲ್ ಬಾಲುರವರು ನಾನುಗೌರಿಯೊಂದಿಗೆ ಮಾತನಾಡಿ, “ಪಾಲಾರ್ ಸಿನಿಮಾ ಇರಲಿ, ಮತ್ತೊಂದು ಸಿನಿಮಾ ಇರಲಿ- ಸಿನಿಮಾದ ಆಶಯದ ಮೇಲೆ ಜ್ಯೂರಿಗಳು ಸಿನಿಮಾಗಳನ್ನು ಆಯ್ಕೆ ಮಾಡಬೇಕು. ಅದು ಬಿಟ್ಟು ಮೆರಿಟ್ ಬಗ್ಗೆ ಮಾತನಾಡುವುದು ಎಲ್ಲಾ ಬೋಗಸ್ ಅಂತ ಸಿನಿಮಾ ಮಾತ್ರವಲ್ಲದೆ ಎಲ್ಲಾ ರಂಗದಲ್ಲಿಯೂ ಏನಾಗುತ್ತಿದೆ ಅಂತ ಎಲ್ಲರಿಗೂ ತಿಳಿದಿದೆ” ಎಂದರು.

Biffes ವಿಚಾರದಲ್ಲಿ ಕನ್ನಡ ಮತ್ತು ಇತರ ಸಿನಿಮಾಗಳ ಆಯ್ಕೆಯ ಮಾನದಂಡಗಳು ಏನು, ಜ್ಯೂರಿಗಳನ್ನು ಯಾರು ಆಯ್ಕೆ ಮಾಡುತ್ತಾರೆ? ಅದರ ಪ್ರಕ್ರಿಯೆಯೇನು ಎಂಬುದರ ಕುರಿತು ಎಲ್ಲಿಯೂ ಸರಿಯಾದ ಮಾಹಿತಿ ಇಲ್ಲ. ಈ ಕುರಿತು Biffes ವೆಬ್‌ಸೈಟ್‌ನಲ್ಲಿ ಪಾರದರ್ಶಕವಾಗಿ ಪ್ರಕಟಿಸಿದರೆ ಸಾಕಷ್ಟು ವಿವಾದಗಳನ್ನು ತಪ್ಪಿಸಬಹುದು. ಇಂತಹ ಕೆಲಸವನ್ನು ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು ಮಾಡಬೇಕು ಎಂದು ಒತ್ತಾಯಿಸಿದರು.

ನಾವು Biffesಗೆ ಬರುವುದು ಪ್ರಪಂಚದ ಅಪರೂಪದ ಬೇರೆ ಬೇರೆ ದೇಶದ ಜನರ – ಸರ್ಕಾರದ ಬಗ್ಗೆ ಹೆಚ್ಚು ಹೇಳುವ ಸಿನಿಮಾಗಳನ್ನು ನೋಡುವುದಕ್ಕಾಗಿ. ಅಂತಹ ಸಿನಿಮಾಗಳು ಆಯ್ಕೆ ಆಗಬೇಕು. ಆದರೆ ಈ ಬಾರಿಯ ಸಿನಿಮಾದ ಪಟ್ಟಿ ನೋಡಿದರೆ ಕೆಲವೊಂದು ಸಿನಿಮಾಗಳನ್ನು ಹೊರತುಪಡಿಸಿ ನಿರಾಶೆ ಅನಿಸುತ್ತದೆ. ಆದರೂ Biffes ನೋಡಿದಮೆಲೆ ಸಿಗುವ ಅನುಭವಕ್ಕಾಗಿ ಕಾಯುತ್ತಿರುವ ಸಿನಿ ಅಭಿಮಾನಿಗಳಲ್ಲಿ ನಾನು ಒಬ್ಬ. ನನ್ನಂಥಹ ಬಹಳಷ್ಟು ಸಿನಿಪ್ರೇಮಿಗಳ ಆಶಯವನ್ನು ಅಧ್ಯಕ್ಷರು ಅರ್ಥಮಾಡಿಕೊಳ್ಳಬೇಕು ಎಂದರು.

ಇದನ್ನೂ ಓದಿ: ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...