Homeಮುಖಪುಟಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ಪಾಲಾರ್, ಗಾಂಧಿ ಮತ್ತು ನೋಟು ಸಿನಿಮಾ ಆಯ್ಕೆ ಮಾಡದಿರುವುದಕ್ಕೆ ಆಕ್ರೋಶ

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ಪಾಲಾರ್, ಗಾಂಧಿ ಮತ್ತು ನೋಟು ಸಿನಿಮಾ ಆಯ್ಕೆ ಮಾಡದಿರುವುದಕ್ಕೆ ಆಕ್ರೋಶ

"ಜ್ಯೂರಿಗಳ ತೀರ್ಮಾನವೆ ಅಂತಿಮ ತೀರ್ಮಾನವಾದ್ದರಿಂದ ಅದನ್ನು ನಾವೆಲ್ಲರೂ ತೆಲೆಬಾಗಿ ಸ್ವೀಕರಿಸಬೇಕು ಎನ್ನುತ್ತಾರೆ" ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಅಶೋಕ್ ಕಶ್ಯಪ್‌ರವರು.

- Advertisement -
- Advertisement -

14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 23 ರಿಂದ 30 ರವರೆಗೆ ನಡೆಯಲಿದ್ದು, ಕನ್ನಡ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ಇತ್ತೀಚೆಗೆ ಬಿಡುಗಡೆಯಾದ ಪಾಲಾರ್ ಹಾಗೂ ಗಾಂಧಿ ಮತ್ತು ನೋಟು ಸಿನಿಮಾಗಳನ್ನು ಆಯ್ಕೆ ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಕನ್ನಡ ವಿಭಾಗದಲ್ಲಿ 19.20.21, ಗಂಧದಗುಡಿ, ಗುರುಶಿಷ್ಯರು, ಹದಿನೇಳೆಂಟು, ಕನಕ ಮಾರ್ಗ, ಕೊರಮ್ಮ (ತುಳು), ಕುಬುಸ, ಮೇಡ್ ಇನ್ ಬೆಂಗಳೂರು, ನಲ್ಕೆ, ನಾನು ಕುಸುಮ, ಆರ್ಕೆಸ್ಟ್ರಾ ಮೈಸೂರು, ಫೋಟೋ, ಸ್ವಚ್ಚ ಕರ್ನಾಟಕ ಮತ್ತು ವಿಜಯಾನಂದ ಸಿನಿಮಾಗಳು ಈ ಬಾರಿಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿವೆ.

“ಕನ್ನಡದಲ್ಲೇ ಮೊದಲ ಬಾರಿ ನೇರ ದಲಿತರ ಕಥೆಯ ಪಾಲಾರ್ ಸಿನಿಮಾ ಬಂದಿದೆ. ಸಿನಿಮಾ ನೋಡಿದ ಪ್ರತಿ ಒಬ್ಬರಿಗೂ ಇಷ್ಟ ಆಗಿತ್ತು ಮತ್ತು ಎಲ್ಲಾ ಕಡೆ ಪಾಸಿಟಿವ್ ರಿವ್ಯೂ ಬಂದಿತ್ತು. ಮೀಡಿಯಾ ಮತ್ತು ಕ್ರಿಟಿಕ್ಸ್ ಸಹ ಪಾಲಾರ್ ಸಿನಿಮಾ ಚೆನ್ನಾಗಿದೆ ಅವಾರ್ಡ್ ಬರುತ್ತೆ ಅಂತಿದ್ರು..ಆದರೆ ಇಲ್ಲಿರುವ ಕರ್ನಾಟಕ ಸರ್ಕಾರದ ಕನ್ನಡ ಚಲನಚಿತ್ರ ಅಕಾಡೆಮಿ ಮತ್ತು ಅದರ ಸದಸ್ಯರು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದಲಿತರ ಬಗ್ಗೆ ಕಥೆ ಇರುವ, ದಲಿತರೇ ಸ್ವಂತವಾಗಿ ಸಿನಿಮಾ ನಿರ್ದೇಶನ ಮಾಡಿರುವ, ದಲಿತರೇ ನಿರ್ಮಾಣ ಮಾಡಿರುವ, ದಲಿತರೇ ಹೆಚ್ಚಾಗಿ ನಟಿಸಿರುವ ಪಾಲಾರ್ ಸಿನಿಮಾ ತಿರಸ್ಕರಿಸುವ ಮೂಲಕ ನಮ್ಮ ಪಾಲಾರ್ ಸಿನಿಮಾಗೆ ಇಲ್ಲಿಯೂ ಅಸ್ಪೃಶ್ಯತೆ ಆಚರಣೆಗೆ ಮುಂದಾಗಿದ್ದಾರೆ” ಎಂದು ಪಾಲಾರ್ ಚಿತ್ರದ ನಿರ್ದೇಶಕ ಜೀವಾ ನವೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸೆಲೆಕ್ಟ್ ಆದ ಸಿನಿಮಾಗಳಲ್ಲಿ ಎಷ್ಟು ಸಿನಿಮಾಗಳ ಹೆಸರು ನಿಮಗೆ ಗೊತ್ತು? Ok ಬಿಡಿ ನಾವು ಇನ್ನೂ ಮುಂದೆ ಕಮಲ, ಕರು, ಹಸು, ದೇವರ ಸಿನಿಮಾ ಮಾಡಿ ಅಂತ ಹೇಳ್ತೀವಿ. ಬಾಬಾ ಸಾಹೇಬರ ಫೋಟೋ ಸಿನಿಮಾಗಳಲ್ಲಿ ತೋರಿಸಿದರೆ ನಿಮಗೆ ಉರಿ ಅಂತ ಗೊತ್ತು. ಇನ್ನು ಮುಂದೆ ದಲಿತರು ಬೇರೆ ಅವರ ಸಿನಿಮಾಗಳು ನೋಡುವುದನ್ನು ನಿಲ್ಲಿಸುತ್ತೇವೆ. ದಲಿತರ ಬಗ್ಗೆ ಅದೆಷ್ಟೋ ವರ್ಷಗಳ ನಂತರ ಬಂದ ಪಾಲಾರ್ ಸಿನಿಮಾ ಸೆಲೆಕ್ಟ್ ಮಾಡುವಷ್ಟು ಯೋಗ್ಯತೆ ನಿಮಗಿಲ್ಲ. ಈ ಸರ್ಕಾರಕ್ಕೆ ಕಾಶ್ಮೀರಿ ಫೈಲ್ಸ್ ಬೇಕು, ನಾಯಿ ಬಗ್ಗೆ ಕಾಲ್ಪನಿಕ ಕಥೆ ಚಾರ್ಲಿ ಬೇಕು. ಅದಕ್ಕೆಲ್ಲಾ ಟಾಕ್ಸ್ ಫ್ರೀ ಬೇರೆ ಮಾಡ್ತಾರೆ. ಜಾತಿ ಭೇದ ಭಾವ ಮಾಡೋದು ಈಗ ನೀವೇ ಅಂತ ಗೊತ್ತಾಯ್ತು ಬಿಡಿ” ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

‘ಗಾಂಧಿ ಮತ್ತು ನೋಟು’ ಇದು ಗಾಂಧಿಯ ಆದರ್ಶಗಳ ಬಗ್ಗೆ ಇರುವ ಚಿತ್ರ. ಮೊನ್ನೆ ಮಕ್ಕಳ ಚಲನಚಿತ್ರೋತ್ಸವದಲ್ಲಿ ನಾಲ್ಕು ಅವಾರ್ಡ್‌ಗಳನ್ನು ತೆಗೆದುಕೊಂಡ ಚಿತ್ರ.. ಆದರೆ ಈ #BIffs ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುವ ಭಾಗ್ಯವಿಲ್ಲ.. ಕಾರಣವೆಂದರೆ ಅಕಾಡಮಿಯ ಅಧ್ಯಕ್ಷರು, ತಂಡ ಮತ್ತು ಮಹಾನ್ ಜ್ಯೂರಿಗಳು ಹಣದ ಬೇಡಿಕೆಯ ಸದ್ದು ನನ್ನ ಕಿವಿಗೂ ಬಿದ್ದಿದೆ.. ಯಾಕ್ ಕೋಡಬೇಕು? ಎಂದು ಸಿನಿಮಾದ ನಿರ್ದೇಶಕರಾದ ಯೋಗಿ ದಾವಣಗೆರೆಯವರು ಕಿಡಿಕಾರಿದ್ದಾರೆ.

ಈ ಕುರಿತು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಅಶೋಕ್ ಕಶ್ಯಪ್‌ರವರನ್ನು ಪ್ರಶ್ನಿಸಿದಾಗ “ಒಂದು ಸಿನಿಮಾ ಆಯ್ಕೆಯಾಗಬೇಕಾದರೆ ಉಳಿದ ಸಿನಿಮಾಗಳ ಜೊತೆ ಸ್ಪರ್ಧಿಸಿ ಗೆಲ್ಲಬೇಕು. ಸ್ಪರ್ಧೆಯಲ್ಲಿ ಗೆಲ್ಲದೆ ನಮ್ಮ ಸಿನಿಮಾವನ್ನು ಆಯ್ಕೆ ಮಾಡಿಲ್ಲ ಎಂದು ಕೇಳುವುದು ಯಾವ ನ್ಯಾಯ? ಕಲೆಗೆ ಮೀಸಲಾತಿ ಕೊಡಿ ಎಂದು ಕೇಳುವುದು ಸರಿಯಲ್ಲ. ಜ್ಯೂರಿಗಳಿಗೆ ನಾವು ಮರ್ಯಾದೆ ಕೊಡಬೇಕು. ಅವರ ತೀರ್ಮಾನವೆ ಅಂತಿಮ ತೀರ್ಮಾನವಾದ್ದರಿಂದ, ಜ್ಯೂರಿ ಅಧ್ಯಕ್ಷರು ಸೆಲೆಕ್ಟ್ ಮಾಡಿರುವುದಕ್ಕೆ ನಾವೆಲ್ಲರೂ ತೆಲೆಬಾಗಿ ಸ್ವೀಕರಿಸಬೇಕು” ಎಂದರು.

ಕೆಲ ಕಳಪೆ ಸಿನಿಮಾಗಳನ್ನು ಸಹ ಸೆಲೆಕ್ಟ್ ಮಾಡಲಾಗಿದೆ. ಅದಕ್ಕಿಂತಲೂ ಉತ್ತಮ ಕನ್ನಡ ಚಿತ್ರಗಳು ಇದ್ದವಲ್ಲ ಎಂಬ ಪ್ರಶ್ನೆಗೆ “ನೀವಾಗಲಿ, ಪ್ರೇಕ್ಷಕರಾಗಲಿ ಇಂತಹ ಸಿನಿಮಾ ಇರಲಿ, ಬಿಡಲಿ ಎಂದು ಹೇಳಲು ಬರುವುದಿಲ್ಲ. ಜೇಮ್ಸ್ ಸಿನಿಮಾ ಬರಬೇಕೆಂದು ನಾನು ಬಯಸಿದ್ದೆ. ಆದರೆ ಬಂದಿಲ್ಲ ಏನು ಮಾಡುವುದು? ಹೊರಗಿನವರ ಮಾತಿಗೆ ನಾವು ಕಿವಿಗೊಡುವುದಿಲ್ಲ, ಜ್ಯೂರಿ ಅಧ್ಯಕ್ಷರಾದ ಎಂ.ಎಸ್ ರಮೇಶ್ ರವರೇ ತಮ್ಮ ವಿಟೋ ಪವರ್ ಬಳಸಿ ಸಿನಿಮಾಗಳನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ನನ್ನ ಪಾತ್ರವಿಲ್ಲ ಮತ್ತು ನನಗೂ ಅದಕ್ಕೂ ಸಂಬಂಧವಿಲ್ಲ” ಎಂದರು.

ಬೆಂಗಳೂರು ಅಂತರಾಷ್ಟ್ರೀಯ ಚಲನಚತ್ರೋತ್ಸವಗಳಿಗೆ ಪ್ರತಿ ಬಾರಿಯೂ ಹಾಜರಾಗುವ ಸಿನಿಮಾಸಕ್ತ ವಿ.ಎಲ್ ಬಾಲುರವರು ನಾನುಗೌರಿಯೊಂದಿಗೆ ಮಾತನಾಡಿ, “ಪಾಲಾರ್ ಸಿನಿಮಾ ಇರಲಿ, ಮತ್ತೊಂದು ಸಿನಿಮಾ ಇರಲಿ- ಸಿನಿಮಾದ ಆಶಯದ ಮೇಲೆ ಜ್ಯೂರಿಗಳು ಸಿನಿಮಾಗಳನ್ನು ಆಯ್ಕೆ ಮಾಡಬೇಕು. ಅದು ಬಿಟ್ಟು ಮೆರಿಟ್ ಬಗ್ಗೆ ಮಾತನಾಡುವುದು ಎಲ್ಲಾ ಬೋಗಸ್ ಅಂತ ಸಿನಿಮಾ ಮಾತ್ರವಲ್ಲದೆ ಎಲ್ಲಾ ರಂಗದಲ್ಲಿಯೂ ಏನಾಗುತ್ತಿದೆ ಅಂತ ಎಲ್ಲರಿಗೂ ತಿಳಿದಿದೆ” ಎಂದರು.

Biffes ವಿಚಾರದಲ್ಲಿ ಕನ್ನಡ ಮತ್ತು ಇತರ ಸಿನಿಮಾಗಳ ಆಯ್ಕೆಯ ಮಾನದಂಡಗಳು ಏನು, ಜ್ಯೂರಿಗಳನ್ನು ಯಾರು ಆಯ್ಕೆ ಮಾಡುತ್ತಾರೆ? ಅದರ ಪ್ರಕ್ರಿಯೆಯೇನು ಎಂಬುದರ ಕುರಿತು ಎಲ್ಲಿಯೂ ಸರಿಯಾದ ಮಾಹಿತಿ ಇಲ್ಲ. ಈ ಕುರಿತು Biffes ವೆಬ್‌ಸೈಟ್‌ನಲ್ಲಿ ಪಾರದರ್ಶಕವಾಗಿ ಪ್ರಕಟಿಸಿದರೆ ಸಾಕಷ್ಟು ವಿವಾದಗಳನ್ನು ತಪ್ಪಿಸಬಹುದು. ಇಂತಹ ಕೆಲಸವನ್ನು ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು ಮಾಡಬೇಕು ಎಂದು ಒತ್ತಾಯಿಸಿದರು.

ನಾವು Biffesಗೆ ಬರುವುದು ಪ್ರಪಂಚದ ಅಪರೂಪದ ಬೇರೆ ಬೇರೆ ದೇಶದ ಜನರ – ಸರ್ಕಾರದ ಬಗ್ಗೆ ಹೆಚ್ಚು ಹೇಳುವ ಸಿನಿಮಾಗಳನ್ನು ನೋಡುವುದಕ್ಕಾಗಿ. ಅಂತಹ ಸಿನಿಮಾಗಳು ಆಯ್ಕೆ ಆಗಬೇಕು. ಆದರೆ ಈ ಬಾರಿಯ ಸಿನಿಮಾದ ಪಟ್ಟಿ ನೋಡಿದರೆ ಕೆಲವೊಂದು ಸಿನಿಮಾಗಳನ್ನು ಹೊರತುಪಡಿಸಿ ನಿರಾಶೆ ಅನಿಸುತ್ತದೆ. ಆದರೂ Biffes ನೋಡಿದಮೆಲೆ ಸಿಗುವ ಅನುಭವಕ್ಕಾಗಿ ಕಾಯುತ್ತಿರುವ ಸಿನಿ ಅಭಿಮಾನಿಗಳಲ್ಲಿ ನಾನು ಒಬ್ಬ. ನನ್ನಂಥಹ ಬಹಳಷ್ಟು ಸಿನಿಪ್ರೇಮಿಗಳ ಆಶಯವನ್ನು ಅಧ್ಯಕ್ಷರು ಅರ್ಥಮಾಡಿಕೊಳ್ಳಬೇಕು ಎಂದರು.

ಇದನ್ನೂ ಓದಿ: ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...