Homeಕರ್ನಾಟಕಬೆಂಗಳೂರಿನಲ್ಲಿ ಅ.26ಕ್ಕೆ ಕಂಬಳ ನಡೆಸುತ್ತಿಲ್ಲ : ಹೈಕೋರ್ಟ್‌ಗೆ ಮಾಹಿತಿ ನೀಡಿದ ಕಂಬಳ ಸಮಿತಿ

ಬೆಂಗಳೂರಿನಲ್ಲಿ ಅ.26ಕ್ಕೆ ಕಂಬಳ ನಡೆಸುತ್ತಿಲ್ಲ : ಹೈಕೋರ್ಟ್‌ಗೆ ಮಾಹಿತಿ ನೀಡಿದ ಕಂಬಳ ಸಮಿತಿ

- Advertisement -
- Advertisement -

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 26ರಂದು ಕಂಬಳ ನಡೆಸುತ್ತಿಲ್ಲ. ಬೇರೆಲ್ಲೂ ಕಂಬಳ ನಡೆಸಲು ಸರ್ಕಾರದ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿಲ್ಲ ಎಂದು ಬೆಂಗಳೂರು ಕಂಬಳ ಸಮಿತಿ ಹೈಕೋರ್ಟ್‌ಗೆ ತಿಳಿಸಿದೆ. ಇದನ್ನು ಪರಿಗಣಿಸಿರುವ ನ್ಯಾಯಾಲಯ ಅರ್ಜಿ ವಿಚಾರಣೆ ಮುಂದೂಡಿದೆ.

ಬೆಂಗಳೂರು ಕಂಬಳ ಸಮಿತಿಗೆ ಸ್ಪರ್ಧೆ ಆಯೋಜಿಸಲು ಅನುಮತಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಪ್ರಾಣಿ ದಯಾ ಸಂಘ ಪೆಟಾ ಸಲ್ಲಿಸಿರುವ ಪಿಐಎಲ್‌ ಅನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಬೆಂಗಳೂರು ಕಂಬಳ ಸಮಿತಿಯನ್ನು ಪ್ರತಿನಿಧಿಸಿದ್ದ ವಕೀಲ ವಿನೋದ್‌ ಕುಮಾರ್‌ ಅವರು, ಅಕ್ಟೋಬರ್‌ 26ರಂದು ಕಂಬಳ ಸ್ಪರ್ಧೆ ಆಯೋಜಿಸುತ್ತಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಅರ್ಜಿದಾರ ಪೆಟಾ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ, ಕಂಬಳ ಸ್ಪರ್ಧೆ ನಡೆಸುವಾಗ ಅನುಮತಿ ನೀಡಲಾಗುತ್ತಿದೆ ಎಂಬ ವಿಚಾರವನ್ನು ನಮಗೆ ತಿಳಿಸಬೇಕು. ಆಗ ನಾವು ನ್ಯಾಯಾಲಯದ ಮುಂದೆ ಬರುತ್ತೇವೆ. ನ.9ರಂದು ದಕ್ಷಿಣ ಕನ್ನಡದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ಸಂಬಂಧ ಪ್ರಾಣಿ ಸಂಗ್ರಹಾಲಯದ ನಿರ್ದೇಶಕರು ಜಿಲ್ಲಾಧಿಕಾರಿಗೆ ಪತ್ರ ಬರೆದು ಸ್ಪರ್ಧೆಯ ಸಂದರ್ಭದಲ್ಲಿನ ಕೂಗಾಟದಿಂದ ಪ್ರಾಣಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಹಾಜರಾಗಿ, ಕಳೆದ ವರ್ಷ ಬೆಂಗಳೂರು ಕಂಬಳಕ್ಕೆ ಕಾನೂನು ಪ್ರಕಾರ ಅನುಮತಿಸಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲಾಗುವುದು. ಪೆಟಾ ಆಕ್ಷೇಪ ಇರುವುದು ಪ್ರಾಣಿಗಳಿಗೆ ಹಿಂಸೆ ನೀಡಲಾಗುತ್ತಿದೆ ಎಂದಾಗಿದೆ. ಈಗ ಕಂಬಳವನ್ನು ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಾತ್ರ ನಡೆಸಬೇಕೆ? ಎಂಬ ಪ್ರಶ್ನೆ ನ್ಯಾಯಾಲಯದ ಮುಂದಿದೆ. ಕಂಬಳ ಸ್ಪರ್ಧೆಯು ಕರ್ನಾಟಕದ ಸಂಸ್ಕೃತಿಗೆ ಸಂಬಂಧಿಸಿದ್ದು. ಇದನ್ನು ಕರ್ನಾಟಕ ಮಾತ್ರವಲ್ಲದೇ ದೇಶದಾದ್ಯಂತ ಕೊಂಡೊಯ್ಯುವ ಸಂದರ್ಭ ಬಂದಿದೆ. ಇಲ್ಲಿ ಪ್ರಾಣಿಗಳಿಗೆ ಹಿಂಸೆಯಾಗುತ್ತಿದೆಯೇ? ಎಂಬ ಪ್ರಶ್ನೆ ಇದೆ. ಕುದುರೆ ರೇಸ್ ನಡೆದಾಗ ಕುದುರೆಗಳನ್ನು ಬೇರೆ ದೇಶಗಳಿಂದ ಆಮದು/ರಫ್ತು ಮಾಡಲಾಗುತ್ತದೆ. ಬೇರೆ ರಾಜ್ಯಗಳಿಗೂ ಅವುಗಳನ್ನು ಸಾಗಿಸಲಾಗುತ್ತದೆ. ಯಾವುದೇ ನಿರ್ಧಾರ ಕೈಗೊಂಡರೂ ಪೀಠಕ್ಕೆ ತಿಳಿಸಲಾಗುವುದು ಎಂದಿದ್ದಾರೆ.

ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದ ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿದೆ.

ಇದನ್ನೂ ಓದಿ : ಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...