Homeಕರ್ನಾಟಕಬೆಂಗಳೂರಿನಲ್ಲಿ ಅ.26ಕ್ಕೆ ಕಂಬಳ ನಡೆಸುತ್ತಿಲ್ಲ : ಹೈಕೋರ್ಟ್‌ಗೆ ಮಾಹಿತಿ ನೀಡಿದ ಕಂಬಳ ಸಮಿತಿ

ಬೆಂಗಳೂರಿನಲ್ಲಿ ಅ.26ಕ್ಕೆ ಕಂಬಳ ನಡೆಸುತ್ತಿಲ್ಲ : ಹೈಕೋರ್ಟ್‌ಗೆ ಮಾಹಿತಿ ನೀಡಿದ ಕಂಬಳ ಸಮಿತಿ

- Advertisement -
- Advertisement -

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 26ರಂದು ಕಂಬಳ ನಡೆಸುತ್ತಿಲ್ಲ. ಬೇರೆಲ್ಲೂ ಕಂಬಳ ನಡೆಸಲು ಸರ್ಕಾರದ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿಲ್ಲ ಎಂದು ಬೆಂಗಳೂರು ಕಂಬಳ ಸಮಿತಿ ಹೈಕೋರ್ಟ್‌ಗೆ ತಿಳಿಸಿದೆ. ಇದನ್ನು ಪರಿಗಣಿಸಿರುವ ನ್ಯಾಯಾಲಯ ಅರ್ಜಿ ವಿಚಾರಣೆ ಮುಂದೂಡಿದೆ.

ಬೆಂಗಳೂರು ಕಂಬಳ ಸಮಿತಿಗೆ ಸ್ಪರ್ಧೆ ಆಯೋಜಿಸಲು ಅನುಮತಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಪ್ರಾಣಿ ದಯಾ ಸಂಘ ಪೆಟಾ ಸಲ್ಲಿಸಿರುವ ಪಿಐಎಲ್‌ ಅನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಬೆಂಗಳೂರು ಕಂಬಳ ಸಮಿತಿಯನ್ನು ಪ್ರತಿನಿಧಿಸಿದ್ದ ವಕೀಲ ವಿನೋದ್‌ ಕುಮಾರ್‌ ಅವರು, ಅಕ್ಟೋಬರ್‌ 26ರಂದು ಕಂಬಳ ಸ್ಪರ್ಧೆ ಆಯೋಜಿಸುತ್ತಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಅರ್ಜಿದಾರ ಪೆಟಾ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ, ಕಂಬಳ ಸ್ಪರ್ಧೆ ನಡೆಸುವಾಗ ಅನುಮತಿ ನೀಡಲಾಗುತ್ತಿದೆ ಎಂಬ ವಿಚಾರವನ್ನು ನಮಗೆ ತಿಳಿಸಬೇಕು. ಆಗ ನಾವು ನ್ಯಾಯಾಲಯದ ಮುಂದೆ ಬರುತ್ತೇವೆ. ನ.9ರಂದು ದಕ್ಷಿಣ ಕನ್ನಡದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ಸಂಬಂಧ ಪ್ರಾಣಿ ಸಂಗ್ರಹಾಲಯದ ನಿರ್ದೇಶಕರು ಜಿಲ್ಲಾಧಿಕಾರಿಗೆ ಪತ್ರ ಬರೆದು ಸ್ಪರ್ಧೆಯ ಸಂದರ್ಭದಲ್ಲಿನ ಕೂಗಾಟದಿಂದ ಪ್ರಾಣಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಹಾಜರಾಗಿ, ಕಳೆದ ವರ್ಷ ಬೆಂಗಳೂರು ಕಂಬಳಕ್ಕೆ ಕಾನೂನು ಪ್ರಕಾರ ಅನುಮತಿಸಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲಾಗುವುದು. ಪೆಟಾ ಆಕ್ಷೇಪ ಇರುವುದು ಪ್ರಾಣಿಗಳಿಗೆ ಹಿಂಸೆ ನೀಡಲಾಗುತ್ತಿದೆ ಎಂದಾಗಿದೆ. ಈಗ ಕಂಬಳವನ್ನು ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಾತ್ರ ನಡೆಸಬೇಕೆ? ಎಂಬ ಪ್ರಶ್ನೆ ನ್ಯಾಯಾಲಯದ ಮುಂದಿದೆ. ಕಂಬಳ ಸ್ಪರ್ಧೆಯು ಕರ್ನಾಟಕದ ಸಂಸ್ಕೃತಿಗೆ ಸಂಬಂಧಿಸಿದ್ದು. ಇದನ್ನು ಕರ್ನಾಟಕ ಮಾತ್ರವಲ್ಲದೇ ದೇಶದಾದ್ಯಂತ ಕೊಂಡೊಯ್ಯುವ ಸಂದರ್ಭ ಬಂದಿದೆ. ಇಲ್ಲಿ ಪ್ರಾಣಿಗಳಿಗೆ ಹಿಂಸೆಯಾಗುತ್ತಿದೆಯೇ? ಎಂಬ ಪ್ರಶ್ನೆ ಇದೆ. ಕುದುರೆ ರೇಸ್ ನಡೆದಾಗ ಕುದುರೆಗಳನ್ನು ಬೇರೆ ದೇಶಗಳಿಂದ ಆಮದು/ರಫ್ತು ಮಾಡಲಾಗುತ್ತದೆ. ಬೇರೆ ರಾಜ್ಯಗಳಿಗೂ ಅವುಗಳನ್ನು ಸಾಗಿಸಲಾಗುತ್ತದೆ. ಯಾವುದೇ ನಿರ್ಧಾರ ಕೈಗೊಂಡರೂ ಪೀಠಕ್ಕೆ ತಿಳಿಸಲಾಗುವುದು ಎಂದಿದ್ದಾರೆ.

ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದ ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿದೆ.

ಇದನ್ನೂ ಓದಿ : ಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...