Homeಕರ್ನಾಟಕಬೆಂಗಳೂರಿನಲ್ಲಿ ಅ.26ಕ್ಕೆ ಕಂಬಳ ನಡೆಸುತ್ತಿಲ್ಲ : ಹೈಕೋರ್ಟ್‌ಗೆ ಮಾಹಿತಿ ನೀಡಿದ ಕಂಬಳ ಸಮಿತಿ

ಬೆಂಗಳೂರಿನಲ್ಲಿ ಅ.26ಕ್ಕೆ ಕಂಬಳ ನಡೆಸುತ್ತಿಲ್ಲ : ಹೈಕೋರ್ಟ್‌ಗೆ ಮಾಹಿತಿ ನೀಡಿದ ಕಂಬಳ ಸಮಿತಿ

- Advertisement -
- Advertisement -

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 26ರಂದು ಕಂಬಳ ನಡೆಸುತ್ತಿಲ್ಲ. ಬೇರೆಲ್ಲೂ ಕಂಬಳ ನಡೆಸಲು ಸರ್ಕಾರದ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿಲ್ಲ ಎಂದು ಬೆಂಗಳೂರು ಕಂಬಳ ಸಮಿತಿ ಹೈಕೋರ್ಟ್‌ಗೆ ತಿಳಿಸಿದೆ. ಇದನ್ನು ಪರಿಗಣಿಸಿರುವ ನ್ಯಾಯಾಲಯ ಅರ್ಜಿ ವಿಚಾರಣೆ ಮುಂದೂಡಿದೆ.

ಬೆಂಗಳೂರು ಕಂಬಳ ಸಮಿತಿಗೆ ಸ್ಪರ್ಧೆ ಆಯೋಜಿಸಲು ಅನುಮತಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಪ್ರಾಣಿ ದಯಾ ಸಂಘ ಪೆಟಾ ಸಲ್ಲಿಸಿರುವ ಪಿಐಎಲ್‌ ಅನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಬೆಂಗಳೂರು ಕಂಬಳ ಸಮಿತಿಯನ್ನು ಪ್ರತಿನಿಧಿಸಿದ್ದ ವಕೀಲ ವಿನೋದ್‌ ಕುಮಾರ್‌ ಅವರು, ಅಕ್ಟೋಬರ್‌ 26ರಂದು ಕಂಬಳ ಸ್ಪರ್ಧೆ ಆಯೋಜಿಸುತ್ತಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಅರ್ಜಿದಾರ ಪೆಟಾ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ, ಕಂಬಳ ಸ್ಪರ್ಧೆ ನಡೆಸುವಾಗ ಅನುಮತಿ ನೀಡಲಾಗುತ್ತಿದೆ ಎಂಬ ವಿಚಾರವನ್ನು ನಮಗೆ ತಿಳಿಸಬೇಕು. ಆಗ ನಾವು ನ್ಯಾಯಾಲಯದ ಮುಂದೆ ಬರುತ್ತೇವೆ. ನ.9ರಂದು ದಕ್ಷಿಣ ಕನ್ನಡದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ಸಂಬಂಧ ಪ್ರಾಣಿ ಸಂಗ್ರಹಾಲಯದ ನಿರ್ದೇಶಕರು ಜಿಲ್ಲಾಧಿಕಾರಿಗೆ ಪತ್ರ ಬರೆದು ಸ್ಪರ್ಧೆಯ ಸಂದರ್ಭದಲ್ಲಿನ ಕೂಗಾಟದಿಂದ ಪ್ರಾಣಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಹಾಜರಾಗಿ, ಕಳೆದ ವರ್ಷ ಬೆಂಗಳೂರು ಕಂಬಳಕ್ಕೆ ಕಾನೂನು ಪ್ರಕಾರ ಅನುಮತಿಸಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲಾಗುವುದು. ಪೆಟಾ ಆಕ್ಷೇಪ ಇರುವುದು ಪ್ರಾಣಿಗಳಿಗೆ ಹಿಂಸೆ ನೀಡಲಾಗುತ್ತಿದೆ ಎಂದಾಗಿದೆ. ಈಗ ಕಂಬಳವನ್ನು ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಾತ್ರ ನಡೆಸಬೇಕೆ? ಎಂಬ ಪ್ರಶ್ನೆ ನ್ಯಾಯಾಲಯದ ಮುಂದಿದೆ. ಕಂಬಳ ಸ್ಪರ್ಧೆಯು ಕರ್ನಾಟಕದ ಸಂಸ್ಕೃತಿಗೆ ಸಂಬಂಧಿಸಿದ್ದು. ಇದನ್ನು ಕರ್ನಾಟಕ ಮಾತ್ರವಲ್ಲದೇ ದೇಶದಾದ್ಯಂತ ಕೊಂಡೊಯ್ಯುವ ಸಂದರ್ಭ ಬಂದಿದೆ. ಇಲ್ಲಿ ಪ್ರಾಣಿಗಳಿಗೆ ಹಿಂಸೆಯಾಗುತ್ತಿದೆಯೇ? ಎಂಬ ಪ್ರಶ್ನೆ ಇದೆ. ಕುದುರೆ ರೇಸ್ ನಡೆದಾಗ ಕುದುರೆಗಳನ್ನು ಬೇರೆ ದೇಶಗಳಿಂದ ಆಮದು/ರಫ್ತು ಮಾಡಲಾಗುತ್ತದೆ. ಬೇರೆ ರಾಜ್ಯಗಳಿಗೂ ಅವುಗಳನ್ನು ಸಾಗಿಸಲಾಗುತ್ತದೆ. ಯಾವುದೇ ನಿರ್ಧಾರ ಕೈಗೊಂಡರೂ ಪೀಠಕ್ಕೆ ತಿಳಿಸಲಾಗುವುದು ಎಂದಿದ್ದಾರೆ.

ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದ ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿದೆ.

ಇದನ್ನೂ ಓದಿ : ಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...