Homeಕರ್ನಾಟಕರಸ್ತೆಗುಂಡಿ ಸಮಸ್ಯೆ: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ರಸ್ತೆಗುಂಡಿ ಸಮಸ್ಯೆ: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

- Advertisement -
- Advertisement -

ಬೆಂಗಳೂರಿನಲ್ಲಿ ಎಂದು ಮುಗಿಯದ ಸಮಸ್ಯೆ ರಸ್ತೆಗುಂಡಿಗಳದ್ದು. ಪ್ರತಿ ವರ್ಷವೂ ದುರಸ್ಥಿ ಕಾರ್ಯ ನಡೆಯುತ್ತಲೇ ಇದೆ ಎಙಂದು ಬಿಬಿಎಫಿ ಹೇಳಿಕೊಂಡರೂ, ಜನರಿಗೆ ಮಾತ್ರ ಕಷ್ಟ ತಪ್ಪಿದ್ದಲ್ಲ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಕಿಡಿ ಕಾರಿದೆ.

”ಬಿಬಿಎಂಪಿ ಸಲ್ಲಿಸಿರುವ ಸ್ಥಿತಿಗತಿ ವರದಿ ನಮಗೆ ತೃಪ್ತಿ ತಂದಿಲ್ಲ. ರಸ್ತೆಗಳ ದುರಸ್ತಿಗೆ ಅವರು ಯಾವ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದಾರೆ..? ಅವರು ರಸ್ತೆಗಳ ನಿರ್ಮಾಣ ಮತ್ತು ದುರಸ್ತಿಯಲ್ಲಿ ಯಾವುದೇ ತಜ್ಞರು ಅಥವಾ ಹೊರಗಿನ ಏಜೆನ್ಸಿಗಳನ್ನು ತೊಡಗಿಸಿಕೊಂಡಿದ್ದಾರೆಯೇ ಎಂಬುದನ್ನು ಪಾಲಿಕೆಯು ತಿಳಿಸಬೇಕು’ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠ, ಕೋರಮಂಗಲದ ವಿಜಯನ್ ಮೆನನ್ ಮತ್ತು ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿದೆ.

ರಸ್ತೆ ಗುಂಡಿಗಳನ್ನು ಮುಚ್ಚಲು ವಿಫಲವಾಗಿರುವ ಪಾಲಿಕೆ ಎಂಜಿನಿಯರ್‌ಗಳನ್ನು ಜೈಲಿಗೆ ಕಳುಹಿಸಬೇಕು ಎಂದು ಕಿಡಿಕಾರಿರುವ ಹೈಕೋರ್ಟ್, ಮುಂದಿನ ವಿಚಾರಣೆಯ ದಿನಾಂಕವಾದ ಫೆಬ್ರವರಿ 7 ರಂದು ಮುಖ್ಯ ಇಂಜಿನಿಯರ್‌,  ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ನಿರ್ದೇಶಿಸಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ಬಿಬಿಎಂಪಿ ವಕೀಲರು ನಗರದ ರಸ್ತೆಗಳ ಸ್ಥಿತಿಗತಿ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ರಸ್ತೆಗಳು ಗುಂಡಿಗಳಿಂದ ತುಂಬಿದ್ದು, 30 ಕಿಮೀಗಿಂತ ಹೆಚ್ಚಿನ ಪ್ರಮುಖ ರಸ್ತೆಗಳು ಮತ್ತು 482 ಕಿಮೀ ಉಪ ರಸ್ತೆಗಳಲ್ಲಿ ಗುಂಡಿ ದುರಸ್ತಿ ಕಾರ್ಯ ನಡೆದಿಲ್ಲ. BWSSB, BESCOM ಮತ್ತು GAIL ನಂತಹ ಏಜೆನ್ಸಿಗಳು ರಸ್ತೆ ಅಗೆಯುವುದು, ಪೈಪ್‌ಲೈನ್‌ಗಳನ್ನು ಹಾಕುವುದರ ಪರಿಣಾಮವಾಗಿ ಹೊಂಡಗಳು ಮತ್ತು ರಸ್ತೆಯು ಹದಗೆಟ್ಟಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಏಜೆನ್ಸಿಗಳಿಂದಲೇ ದುರಸ್ತಿ ಕಾರ್ಯ ನಡೆಯಬೇಕಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿಲ್ಲ ಎಂದು ಬಿಬಿಎಂಪಿ ವಕೀಲರು ತಿಳಿಸಿದರು. ಈ ಏಜೆನ್ಸಿಗಳು ಅನುಮತಿ ಪಡೆದು ರಸ್ತೆ ಅಗೆಯುವುದನ್ನು ಆರಂಭಿಸಿದರೂ ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸುತ್ತಿಲ್ಲ ಎಂದು ದೂರಿದ್ದಾರೆ.

ಇದಕ್ಕೆ ಉತ್ತರಿಸಿರುವ ನ್ಯಾಯಾಲಯ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಏಜೆನ್ಸಿಗಳ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಗುಂಡಿ ದುರಸ್ತಿಗೆ ಅಳವಡಿಸಿದ ವಿಧಾನ ಮತ್ತು ತಂತ್ರಜ್ಞಾನಗಳಾವುವು. ರಸ್ತೆಗಳಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡು ಜನರಿಗೆ ತೊಂದರೆ ಉಂಟುಮಾಡುವ ಬಿಬಿಎಂಪಿ ಮತ್ತು ಇತರ ಏಜೆನ್ಸಿಗಳ ನಡುವೆ ಯಾವುದೇ ನೀತಿ ಮತ್ತು ಸಮನ್ವಯವಿದೆಯೇ ಎಂಬುದನ್ನು ಬಿಬಿಎಂಪಿ ವಕೀಲರು ಸೂಚಿಸಿಲ್ಲ ಎಂದಿದೆ.

ಈ ಸಂಸ್ಥೆಗಳು ಮತ್ತು ಬಿಬಿಎಂಪಿ ನಡುವೆ ಒಂದಷ್ಟು ಸಮನ್ವಯತೆ ಇರಬೇಕು. ಇದಲ್ಲದೆ, ರಸ್ತೆಗಳು ಮತ್ತು ಹೊಂಡಗಳ ದುರಸ್ತಿಗೆ ಬಿಬಿಎಂಪಿ ಬಳಸುತ್ತಿರುವ ತಂತ್ರಜ್ಞಾನವು ಸರಿಯಾಗಿ ಕಾಣುತ್ತಿಲ್ಲ ಎಂದು ನ್ಯಾಯಾಲಯ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದೆ.


ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ನಿರ್ವಹಣೆಯ 204 ಕೆರೆಗಳಲ್ಲಿ 20 ಮಾತ್ರ ಒತ್ತುವರಿಯಿಂದ ಮುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದ್ದುದರಲ್ಲಿ ಬೆಂಗಳೂರು ದಾರಿಗಳು ಚೆನ್ನಾಗಿವೆ.
    ಹಳ್ಳಿಗಳು, ಹೊರ ಊರಿನ ದಾರಿಗಳು ತುಂಬಾ ಹದಗೆಟ್ಟಿವೆ. Bwssb,bescom,kptcl, ofc ಯವರೂ ದಾರಿ ಅಗೆಯುತ್ತಾರೆ essential service ಹೆಸರಲ್ಲಿ. ಯಾರನ್ನು ಬೊಟ್ಟು ಮಾಡುವುದು.
    ಎಶ್ಟೋ ಮಂದಿ ಅಲೆಮಾರಿಗಳಿಗೆ ಮನೆಇಲ್ಲ.

  2. ಇದಕ್ಕೆ ಸರ್ಕಾರವನ್ನು ಹೊಣೆ ಮಾಡಬೇಕೆ ಹೊರತು ಇಂಜಿನಿಯರುಗಳನಲ್ಲ.
    ಗುತ್ತಿಗೆದಾರರು ಡಾಂಬರು, ಜೆಲ್ಲಿ,ರೋಲರ್,ಕೆಲಸಗಾರರು ಅವರಿಗೆ ತಕ್ಕ ಹಣದ ಪೂರಯ್ಕೆಯನ್ನು ಸರ್ಕಾರ ಮಾಡಬೇಕಿರುತ್ತದೆ. ಇವುಗಳ ಪೂರಯ್ಕೆ ಇಲ್ಲದೆ ತಮ್ಮ ಜೊತೆಗಾರರಿಗಿಂತ ಓದಿನಲ್ಲಿ ಮುಂದೆ ಇದ್ದು ಇಂಜಿನಿಯರಿಂಗ್ ಓದಿದವರನ್ನು ಕೋರ್ಟ್ ಈಕೆಳ ಮಟ್ಟದಲ್ಲಿ ನೋಡುವುದು ತರವಲ್ಲ.
    ಇಂಜಿನಿಯರ್ ಎಂದರೆ, ಎಇ/,ಜೆಇ, aee,ee,se,ce,EIC ಮುಂತಾದ ಹಲವಾರು ಕೇಡರುಗಳಿವೆ.
    ಯಾರನ್ನು ಸೆರೆಮನೆಗೆ ದೂಡುವುದು?
    ತಾಳುಬುಡ ತಿಳಿಯದವರ ಪೇಚಾಟ ಇದಶ್ಟೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...