Homeಕರ್ನಾಟಕರಸ್ತೆಗುಂಡಿ ಸಮಸ್ಯೆ: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ರಸ್ತೆಗುಂಡಿ ಸಮಸ್ಯೆ: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

- Advertisement -
- Advertisement -

ಬೆಂಗಳೂರಿನಲ್ಲಿ ಎಂದು ಮುಗಿಯದ ಸಮಸ್ಯೆ ರಸ್ತೆಗುಂಡಿಗಳದ್ದು. ಪ್ರತಿ ವರ್ಷವೂ ದುರಸ್ಥಿ ಕಾರ್ಯ ನಡೆಯುತ್ತಲೇ ಇದೆ ಎಙಂದು ಬಿಬಿಎಫಿ ಹೇಳಿಕೊಂಡರೂ, ಜನರಿಗೆ ಮಾತ್ರ ಕಷ್ಟ ತಪ್ಪಿದ್ದಲ್ಲ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಕಿಡಿ ಕಾರಿದೆ.

”ಬಿಬಿಎಂಪಿ ಸಲ್ಲಿಸಿರುವ ಸ್ಥಿತಿಗತಿ ವರದಿ ನಮಗೆ ತೃಪ್ತಿ ತಂದಿಲ್ಲ. ರಸ್ತೆಗಳ ದುರಸ್ತಿಗೆ ಅವರು ಯಾವ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದಾರೆ..? ಅವರು ರಸ್ತೆಗಳ ನಿರ್ಮಾಣ ಮತ್ತು ದುರಸ್ತಿಯಲ್ಲಿ ಯಾವುದೇ ತಜ್ಞರು ಅಥವಾ ಹೊರಗಿನ ಏಜೆನ್ಸಿಗಳನ್ನು ತೊಡಗಿಸಿಕೊಂಡಿದ್ದಾರೆಯೇ ಎಂಬುದನ್ನು ಪಾಲಿಕೆಯು ತಿಳಿಸಬೇಕು’ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠ, ಕೋರಮಂಗಲದ ವಿಜಯನ್ ಮೆನನ್ ಮತ್ತು ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿದೆ.

ರಸ್ತೆ ಗುಂಡಿಗಳನ್ನು ಮುಚ್ಚಲು ವಿಫಲವಾಗಿರುವ ಪಾಲಿಕೆ ಎಂಜಿನಿಯರ್‌ಗಳನ್ನು ಜೈಲಿಗೆ ಕಳುಹಿಸಬೇಕು ಎಂದು ಕಿಡಿಕಾರಿರುವ ಹೈಕೋರ್ಟ್, ಮುಂದಿನ ವಿಚಾರಣೆಯ ದಿನಾಂಕವಾದ ಫೆಬ್ರವರಿ 7 ರಂದು ಮುಖ್ಯ ಇಂಜಿನಿಯರ್‌,  ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ನಿರ್ದೇಶಿಸಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ಬಿಬಿಎಂಪಿ ವಕೀಲರು ನಗರದ ರಸ್ತೆಗಳ ಸ್ಥಿತಿಗತಿ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ರಸ್ತೆಗಳು ಗುಂಡಿಗಳಿಂದ ತುಂಬಿದ್ದು, 30 ಕಿಮೀಗಿಂತ ಹೆಚ್ಚಿನ ಪ್ರಮುಖ ರಸ್ತೆಗಳು ಮತ್ತು 482 ಕಿಮೀ ಉಪ ರಸ್ತೆಗಳಲ್ಲಿ ಗುಂಡಿ ದುರಸ್ತಿ ಕಾರ್ಯ ನಡೆದಿಲ್ಲ. BWSSB, BESCOM ಮತ್ತು GAIL ನಂತಹ ಏಜೆನ್ಸಿಗಳು ರಸ್ತೆ ಅಗೆಯುವುದು, ಪೈಪ್‌ಲೈನ್‌ಗಳನ್ನು ಹಾಕುವುದರ ಪರಿಣಾಮವಾಗಿ ಹೊಂಡಗಳು ಮತ್ತು ರಸ್ತೆಯು ಹದಗೆಟ್ಟಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಏಜೆನ್ಸಿಗಳಿಂದಲೇ ದುರಸ್ತಿ ಕಾರ್ಯ ನಡೆಯಬೇಕಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿಲ್ಲ ಎಂದು ಬಿಬಿಎಂಪಿ ವಕೀಲರು ತಿಳಿಸಿದರು. ಈ ಏಜೆನ್ಸಿಗಳು ಅನುಮತಿ ಪಡೆದು ರಸ್ತೆ ಅಗೆಯುವುದನ್ನು ಆರಂಭಿಸಿದರೂ ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸುತ್ತಿಲ್ಲ ಎಂದು ದೂರಿದ್ದಾರೆ.

ಇದಕ್ಕೆ ಉತ್ತರಿಸಿರುವ ನ್ಯಾಯಾಲಯ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಏಜೆನ್ಸಿಗಳ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಗುಂಡಿ ದುರಸ್ತಿಗೆ ಅಳವಡಿಸಿದ ವಿಧಾನ ಮತ್ತು ತಂತ್ರಜ್ಞಾನಗಳಾವುವು. ರಸ್ತೆಗಳಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡು ಜನರಿಗೆ ತೊಂದರೆ ಉಂಟುಮಾಡುವ ಬಿಬಿಎಂಪಿ ಮತ್ತು ಇತರ ಏಜೆನ್ಸಿಗಳ ನಡುವೆ ಯಾವುದೇ ನೀತಿ ಮತ್ತು ಸಮನ್ವಯವಿದೆಯೇ ಎಂಬುದನ್ನು ಬಿಬಿಎಂಪಿ ವಕೀಲರು ಸೂಚಿಸಿಲ್ಲ ಎಂದಿದೆ.

ಈ ಸಂಸ್ಥೆಗಳು ಮತ್ತು ಬಿಬಿಎಂಪಿ ನಡುವೆ ಒಂದಷ್ಟು ಸಮನ್ವಯತೆ ಇರಬೇಕು. ಇದಲ್ಲದೆ, ರಸ್ತೆಗಳು ಮತ್ತು ಹೊಂಡಗಳ ದುರಸ್ತಿಗೆ ಬಿಬಿಎಂಪಿ ಬಳಸುತ್ತಿರುವ ತಂತ್ರಜ್ಞಾನವು ಸರಿಯಾಗಿ ಕಾಣುತ್ತಿಲ್ಲ ಎಂದು ನ್ಯಾಯಾಲಯ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದೆ.


ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ನಿರ್ವಹಣೆಯ 204 ಕೆರೆಗಳಲ್ಲಿ 20 ಮಾತ್ರ ಒತ್ತುವರಿಯಿಂದ ಮುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದ್ದುದರಲ್ಲಿ ಬೆಂಗಳೂರು ದಾರಿಗಳು ಚೆನ್ನಾಗಿವೆ.
    ಹಳ್ಳಿಗಳು, ಹೊರ ಊರಿನ ದಾರಿಗಳು ತುಂಬಾ ಹದಗೆಟ್ಟಿವೆ. Bwssb,bescom,kptcl, ofc ಯವರೂ ದಾರಿ ಅಗೆಯುತ್ತಾರೆ essential service ಹೆಸರಲ್ಲಿ. ಯಾರನ್ನು ಬೊಟ್ಟು ಮಾಡುವುದು.
    ಎಶ್ಟೋ ಮಂದಿ ಅಲೆಮಾರಿಗಳಿಗೆ ಮನೆಇಲ್ಲ.

  2. ಇದಕ್ಕೆ ಸರ್ಕಾರವನ್ನು ಹೊಣೆ ಮಾಡಬೇಕೆ ಹೊರತು ಇಂಜಿನಿಯರುಗಳನಲ್ಲ.
    ಗುತ್ತಿಗೆದಾರರು ಡಾಂಬರು, ಜೆಲ್ಲಿ,ರೋಲರ್,ಕೆಲಸಗಾರರು ಅವರಿಗೆ ತಕ್ಕ ಹಣದ ಪೂರಯ್ಕೆಯನ್ನು ಸರ್ಕಾರ ಮಾಡಬೇಕಿರುತ್ತದೆ. ಇವುಗಳ ಪೂರಯ್ಕೆ ಇಲ್ಲದೆ ತಮ್ಮ ಜೊತೆಗಾರರಿಗಿಂತ ಓದಿನಲ್ಲಿ ಮುಂದೆ ಇದ್ದು ಇಂಜಿನಿಯರಿಂಗ್ ಓದಿದವರನ್ನು ಕೋರ್ಟ್ ಈಕೆಳ ಮಟ್ಟದಲ್ಲಿ ನೋಡುವುದು ತರವಲ್ಲ.
    ಇಂಜಿನಿಯರ್ ಎಂದರೆ, ಎಇ/,ಜೆಇ, aee,ee,se,ce,EIC ಮುಂತಾದ ಹಲವಾರು ಕೇಡರುಗಳಿವೆ.
    ಯಾರನ್ನು ಸೆರೆಮನೆಗೆ ದೂಡುವುದು?
    ತಾಳುಬುಡ ತಿಳಿಯದವರ ಪೇಚಾಟ ಇದಶ್ಟೆ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...