Homeಕರ್ನಾಟಕರಸ್ತೆಗುಂಡಿ ಸಮಸ್ಯೆ: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ರಸ್ತೆಗುಂಡಿ ಸಮಸ್ಯೆ: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

- Advertisement -
- Advertisement -

ಬೆಂಗಳೂರಿನಲ್ಲಿ ಎಂದು ಮುಗಿಯದ ಸಮಸ್ಯೆ ರಸ್ತೆಗುಂಡಿಗಳದ್ದು. ಪ್ರತಿ ವರ್ಷವೂ ದುರಸ್ಥಿ ಕಾರ್ಯ ನಡೆಯುತ್ತಲೇ ಇದೆ ಎಙಂದು ಬಿಬಿಎಫಿ ಹೇಳಿಕೊಂಡರೂ, ಜನರಿಗೆ ಮಾತ್ರ ಕಷ್ಟ ತಪ್ಪಿದ್ದಲ್ಲ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಕಿಡಿ ಕಾರಿದೆ.

”ಬಿಬಿಎಂಪಿ ಸಲ್ಲಿಸಿರುವ ಸ್ಥಿತಿಗತಿ ವರದಿ ನಮಗೆ ತೃಪ್ತಿ ತಂದಿಲ್ಲ. ರಸ್ತೆಗಳ ದುರಸ್ತಿಗೆ ಅವರು ಯಾವ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದಾರೆ..? ಅವರು ರಸ್ತೆಗಳ ನಿರ್ಮಾಣ ಮತ್ತು ದುರಸ್ತಿಯಲ್ಲಿ ಯಾವುದೇ ತಜ್ಞರು ಅಥವಾ ಹೊರಗಿನ ಏಜೆನ್ಸಿಗಳನ್ನು ತೊಡಗಿಸಿಕೊಂಡಿದ್ದಾರೆಯೇ ಎಂಬುದನ್ನು ಪಾಲಿಕೆಯು ತಿಳಿಸಬೇಕು’ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠ, ಕೋರಮಂಗಲದ ವಿಜಯನ್ ಮೆನನ್ ಮತ್ತು ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿದೆ.

ರಸ್ತೆ ಗುಂಡಿಗಳನ್ನು ಮುಚ್ಚಲು ವಿಫಲವಾಗಿರುವ ಪಾಲಿಕೆ ಎಂಜಿನಿಯರ್‌ಗಳನ್ನು ಜೈಲಿಗೆ ಕಳುಹಿಸಬೇಕು ಎಂದು ಕಿಡಿಕಾರಿರುವ ಹೈಕೋರ್ಟ್, ಮುಂದಿನ ವಿಚಾರಣೆಯ ದಿನಾಂಕವಾದ ಫೆಬ್ರವರಿ 7 ರಂದು ಮುಖ್ಯ ಇಂಜಿನಿಯರ್‌,  ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ನಿರ್ದೇಶಿಸಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ಬಿಬಿಎಂಪಿ ವಕೀಲರು ನಗರದ ರಸ್ತೆಗಳ ಸ್ಥಿತಿಗತಿ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ರಸ್ತೆಗಳು ಗುಂಡಿಗಳಿಂದ ತುಂಬಿದ್ದು, 30 ಕಿಮೀಗಿಂತ ಹೆಚ್ಚಿನ ಪ್ರಮುಖ ರಸ್ತೆಗಳು ಮತ್ತು 482 ಕಿಮೀ ಉಪ ರಸ್ತೆಗಳಲ್ಲಿ ಗುಂಡಿ ದುರಸ್ತಿ ಕಾರ್ಯ ನಡೆದಿಲ್ಲ. BWSSB, BESCOM ಮತ್ತು GAIL ನಂತಹ ಏಜೆನ್ಸಿಗಳು ರಸ್ತೆ ಅಗೆಯುವುದು, ಪೈಪ್‌ಲೈನ್‌ಗಳನ್ನು ಹಾಕುವುದರ ಪರಿಣಾಮವಾಗಿ ಹೊಂಡಗಳು ಮತ್ತು ರಸ್ತೆಯು ಹದಗೆಟ್ಟಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಏಜೆನ್ಸಿಗಳಿಂದಲೇ ದುರಸ್ತಿ ಕಾರ್ಯ ನಡೆಯಬೇಕಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿಲ್ಲ ಎಂದು ಬಿಬಿಎಂಪಿ ವಕೀಲರು ತಿಳಿಸಿದರು. ಈ ಏಜೆನ್ಸಿಗಳು ಅನುಮತಿ ಪಡೆದು ರಸ್ತೆ ಅಗೆಯುವುದನ್ನು ಆರಂಭಿಸಿದರೂ ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸುತ್ತಿಲ್ಲ ಎಂದು ದೂರಿದ್ದಾರೆ.

ಇದಕ್ಕೆ ಉತ್ತರಿಸಿರುವ ನ್ಯಾಯಾಲಯ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಏಜೆನ್ಸಿಗಳ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಗುಂಡಿ ದುರಸ್ತಿಗೆ ಅಳವಡಿಸಿದ ವಿಧಾನ ಮತ್ತು ತಂತ್ರಜ್ಞಾನಗಳಾವುವು. ರಸ್ತೆಗಳಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡು ಜನರಿಗೆ ತೊಂದರೆ ಉಂಟುಮಾಡುವ ಬಿಬಿಎಂಪಿ ಮತ್ತು ಇತರ ಏಜೆನ್ಸಿಗಳ ನಡುವೆ ಯಾವುದೇ ನೀತಿ ಮತ್ತು ಸಮನ್ವಯವಿದೆಯೇ ಎಂಬುದನ್ನು ಬಿಬಿಎಂಪಿ ವಕೀಲರು ಸೂಚಿಸಿಲ್ಲ ಎಂದಿದೆ.

ಈ ಸಂಸ್ಥೆಗಳು ಮತ್ತು ಬಿಬಿಎಂಪಿ ನಡುವೆ ಒಂದಷ್ಟು ಸಮನ್ವಯತೆ ಇರಬೇಕು. ಇದಲ್ಲದೆ, ರಸ್ತೆಗಳು ಮತ್ತು ಹೊಂಡಗಳ ದುರಸ್ತಿಗೆ ಬಿಬಿಎಂಪಿ ಬಳಸುತ್ತಿರುವ ತಂತ್ರಜ್ಞಾನವು ಸರಿಯಾಗಿ ಕಾಣುತ್ತಿಲ್ಲ ಎಂದು ನ್ಯಾಯಾಲಯ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದೆ.


ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ನಿರ್ವಹಣೆಯ 204 ಕೆರೆಗಳಲ್ಲಿ 20 ಮಾತ್ರ ಒತ್ತುವರಿಯಿಂದ ಮುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದ್ದುದರಲ್ಲಿ ಬೆಂಗಳೂರು ದಾರಿಗಳು ಚೆನ್ನಾಗಿವೆ.
    ಹಳ್ಳಿಗಳು, ಹೊರ ಊರಿನ ದಾರಿಗಳು ತುಂಬಾ ಹದಗೆಟ್ಟಿವೆ. Bwssb,bescom,kptcl, ofc ಯವರೂ ದಾರಿ ಅಗೆಯುತ್ತಾರೆ essential service ಹೆಸರಲ್ಲಿ. ಯಾರನ್ನು ಬೊಟ್ಟು ಮಾಡುವುದು.
    ಎಶ್ಟೋ ಮಂದಿ ಅಲೆಮಾರಿಗಳಿಗೆ ಮನೆಇಲ್ಲ.

  2. ಇದಕ್ಕೆ ಸರ್ಕಾರವನ್ನು ಹೊಣೆ ಮಾಡಬೇಕೆ ಹೊರತು ಇಂಜಿನಿಯರುಗಳನಲ್ಲ.
    ಗುತ್ತಿಗೆದಾರರು ಡಾಂಬರು, ಜೆಲ್ಲಿ,ರೋಲರ್,ಕೆಲಸಗಾರರು ಅವರಿಗೆ ತಕ್ಕ ಹಣದ ಪೂರಯ್ಕೆಯನ್ನು ಸರ್ಕಾರ ಮಾಡಬೇಕಿರುತ್ತದೆ. ಇವುಗಳ ಪೂರಯ್ಕೆ ಇಲ್ಲದೆ ತಮ್ಮ ಜೊತೆಗಾರರಿಗಿಂತ ಓದಿನಲ್ಲಿ ಮುಂದೆ ಇದ್ದು ಇಂಜಿನಿಯರಿಂಗ್ ಓದಿದವರನ್ನು ಕೋರ್ಟ್ ಈಕೆಳ ಮಟ್ಟದಲ್ಲಿ ನೋಡುವುದು ತರವಲ್ಲ.
    ಇಂಜಿನಿಯರ್ ಎಂದರೆ, ಎಇ/,ಜೆಇ, aee,ee,se,ce,EIC ಮುಂತಾದ ಹಲವಾರು ಕೇಡರುಗಳಿವೆ.
    ಯಾರನ್ನು ಸೆರೆಮನೆಗೆ ದೂಡುವುದು?
    ತಾಳುಬುಡ ತಿಳಿಯದವರ ಪೇಚಾಟ ಇದಶ್ಟೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...