Homeಕರ್ನಾಟಕಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ 'ಪಕ್ಷಪಾತದ ನಿಲುವು' : ಸಿಜೆಐಗೆ ಪತ್ರ ಬರೆದ ವಕೀಲ

ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ ‘ಪಕ್ಷಪಾತದ ನಿಲುವು’ : ಸಿಜೆಐಗೆ ಪತ್ರ ಬರೆದ ವಕೀಲ

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ‘ಪಕ್ಷಪಾತ ನಿಲುವು’ ಅನುಸರಿಸುತ್ತಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ಬೆಂಗಳೂರಿನ ವಕೀಲ ಸಚಿನ್ ದೇಶಪಾಂಡೆ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಾಂಗ ಯಡಿಯೂರಪ್ಪ ಪರ ನಿಲುವು ತಾಳುತ್ತಿದೆ ಎಂದು ವಕೀಲ ಸಚಿನ್ ಆರೋಪಿಸಿದ್ದು, 2017ರಿಂದ ಬಾಕಿ ಉಳಿದಿರುವ ಯಡಿಯೂರಪ್ಪ ವಿರುದ್ದದ ಹಲವು ಪ್ರಕರಣಗಳ ತನಿಖೆಗೆ ಯಾವುದೇ ವಿವರಣೆ ನೀಡದೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದಿದ್ದಾರೆ.

“ಯಡಿಯೂರಪ್ಪ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ಕೋರಿದರೆ, ಸುಪ್ರೀಂ ಕೋರ್ಟ್ ತಕ್ಷಣವೇ ಅದನ್ನು ಮಂಜೂರು ಮಾಡುತ್ತದೆ. ಯಾವುದೇ ವಿವರಣೆ ಇಲ್ಲದೆ ನೀಡುವ ತಡೆಯಾಜ್ಞೆ ಆದೇಶಗಳನ್ನು ಪ್ರಾಸಿಕ್ಯೂಷನ್ (ಕರ್ನಾಟಕ ಸರ್ಕಾರ ಮತ್ತು ಭ್ರಷ್ಟಾಚಾರ ನಿಗ್ರಹ ದಳ) ಪ್ರಶ್ನಿಸುವವರೆಗೆ ಯಾವುದೇ ವ್ಯತ್ಯಾಸವಿಲ್ಲದೆ ವರ್ಷಗಳ ಕಾಲ ವಿಸ್ತರಣೆ ಮಾಡಲಾಗುತ್ತಿದೆ” ಎಂದು ಸಚಿನ್ ದೂರಿದ್ದಾರೆ.

ಯಡಿಯೂರಪ್ಪ ವಿರುದ್ಧ ಪಿಸಿ ಕಾಯ್ದೆಯಡಿ ದಾಖಲಾದ ಭ್ರಷ್ಟಾಚಾರ ಪ್ರಕರಣಗಳನ್ನು ಹೈಕೋರ್ಟ್‌ ವಜಾ ಮಾಡಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಮತ್ತು ಲೋಕಾಯುಕ್ತ/ಭ್ರಷ್ಟಾಚಾರ ನಿಗ್ರಹ ದಳ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಆದರೆ, ಇದುವರೆಗೂ ತಡೆ ನೀಡುವುದನ್ನು ಸುಪ್ರೀಂ ಕೋರ್ಟ್‌ ಪರಿಗಣಿಸಿಲ್ಲ ಎಂದು ಸಚಿನ್ ಹೇಳಿದ್ದಾರೆ.

“ನಿರ್ದಿಷ್ಟವಾಗಿ ಯಡಿಯೂರಪ್ಪ ಅವರಿಗೆ ಅನುಕೂಲಕರವಾದ ಹೈಕೋರ್ಟ್ ಆದೇಶಗಳನ್ನು ತಡೆಯಲು ಪ್ರಾಸಿಕ್ಯೂಷನ್ ಪ್ರಯತ್ನಿಸಿದ ಪ್ರಕರಣಗಳಲ್ಲಿ, ತಡೆ ನೀಡುವ ಮತ್ತು ವಿಚಾರಣೆಯನ್ನು ವಿಳಂಬಗೊಳಿಸುವ ಮಾದರಿಯು ನ್ಯಾಯಾಂಗ ಪಕ್ಷಪಾತ ಮಾಡುತ್ತಿದೆಯೇ? ಎಂಬ ಪ್ರಶ್ನೆ ಮೂಡಿಸುತ್ತದೆ” ಎಂದು ಸಚಿನ್ ಕಳವಳ ವ್ಯಕ್ತಪಡಿಸಿದ್ದಾರೆ.

ಸಿಜೆಐಗೆ ಬರೆದಿರುವ ಪತ್ರದಲ್ಲಿ ವಕೀಲ ಸಚಿನ್ ಅವರು ತನ್ನ ಆರೋಪವನ್ನು ಪುಷ್ಠೀಕರಿಸುವ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಕೆಲ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಅವುಗಳು ಹೀಗಿವೆ..

ಶಿವರಾಮ ಕಾರಂತ ಬಡಾವಣೆಯಲ್ಲಿ 257 ಎಕರೆ ಡಿನೋಟಿಫಿಕೇಶನ್‌

ಆಲಂ ಪಾಷಾ ಅವರು ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ 2021ರ ಜನವರಿ 05ರಂದು ಹೈಕೋರ್ಟ್‌, ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿದಿರುವುದರಿಂದ ಪ್ರಾಸಿಕ್ಯೂಷನ್‌ಗೆ ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ ಅಡಿ ಅನುಮತಿ ಬೇಕಿಲ್ಲ ಎಂದು ಹೇಳಿತ್ತು.

ಈ ಬೆನ್ನಲ್ಲೇ ಯಡಿಯೂರಪ್ಪ ಅವರು ಬಂಧನ ಭೀತಿಯಿಂದ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. 2021ರ ಜನವರಿ 27ರಂದು ಸುಪ್ರೀಂ ಕೋರ್ಟ್‌ ಯಡಿಯೂರಪ್ಪ ಅವರ ಬಂಧನಕ್ಕೆ ತಡೆ ನೀಡಿ, ನೋಟಿಸ್‌ ಜಾರಿ ಮಾಡಿತ್ತು. ಆದೇಶದಲ್ಲಿ ಎಲ್ಲಿಯೂ ಏಕೆ ತಡೆ ನೀಡಲಾಗುತ್ತದೆ ಎಂಬುವುದಕ್ಕೆ ಸುಪ್ರೀಂ ಕೋರ್ಟ್ ಕಾರಣ ನೀಡಿರಲಿಲ್ಲ. ಯಡಿಯೂರಪ್ಪ ಜೊತೆಗೂಡಿ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳು ಸಲ್ಲಿಸಿರುವ ಅರ್ಜಿಯಲ್ಲಿಯೂ ಅದೇ ಆದೇಶ ಪಾಲನೆ ಮಾಡಲಾಗಿದೆ. ನಾಲ್ಕು ವರ್ಷಗಳಿಂದ ಈ ಆದೇಶ ಚಾಲ್ತಿಯಲ್ಲಿದೆ.

2008-2011ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಡಾ. ಕೆ ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿಗೆ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ 257 ಎಕರೆಯನ್ನು ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

2017ರ ಜೂನ್‌ 06ರಂದು ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಎಸಿಬಿ, ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿದ್ದ ಕರ್ನಾಟಕ ಹೈಕೋರ್ಟ್‌ 2017ರ ಸೆಪ್ಟೆಂಬರ್‌ 22ರಂದು ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಹೈಕೋರ್ಟ್‌ ತಡೆಯಾಜ್ಞೆ ಪ್ರಶ್ನಿಸಿ ಎಸಿಬಿಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 2017ರ ಡಿಸೆಂಬರ್‌ 11ರಂದು ಈ ಕುರಿತು ನೋಟಿಸ್‌ ಜಾರಿಯಾಗಿದ್ದು, ಇದುವರೆಗೆ ಯಾವುದೇ ಬೆಳವಣಿಗೆಯಾಗಿಲ್ಲ. 2018ರ ನವೆಂಬರ್‌ 14ರಂದು ಕೊನೆಯ ಬಾರಿಗೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಆರು ವರ್ಷಗಳಿಂದ ಇದುವರೆಗೂ ಪ್ರಕರಣವು ವಿಚಾರಣೆಗೆ ಬಂದಿಲ್ಲ. 2017ರ ಸೆಪ್ಟೆಂಬರ್‌ನಿಂದ ಪ್ರಕರಣದ ತನಿಖೆಗೆ ತಡೆ ನೀಡಲಾಗಿದೆ.

ವಾಸುದೇವ ರೆಡ್ಡಿ ಡಿನೋಟಿಫಿಕೇಶನ್‌ ಪ್ರಕರಣ

ಬಿ.ಎಸ್‌ ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿಯಾಗಿದ್ದಾಗ ನಡೆಸಿರುವ ಅಕ್ರಮ ಡಿನೋಟಿಫಿಕೇಶ್‌ ಆರೋಪ ಸಂಬಂಧ ಖಾಸಗಿ ದೂರಿನಲ್ಲಿ ವಿಶೇಷ ನ್ಯಾಯಾಲಯ ನೀಡಿರುವ ನಿರ್ದೇಶನ ಆಧರಿಸಿ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಸೆಕ್ಷನ್‌ 13(1)(ಡಿ) ಜೊತೆಗೆ 13(2)ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು 2020ರ ಡಿಸೆಂಬರ್‌ 22ರಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. 2015ರ ಫೆಬ್ರವರಿ 18ರಿಂದ 2019ರ ಏಪ್ರಿಲ್‌ 02ರವರೆಗೆ ಯಾವುದೇ ತಡೆ ಇಲ್ಲದಿದ್ದರೂ ತನಿಖೆ ವಿಳಂಬ ಮಾಡಿದ್ದಕ್ಕೆ ಲೋಕಾಯುಕ್ತ ಪೊಲೀಸರನ್ನು ಹೈಕೋರ್ಟ್‌ ಟೀಕಿಸಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. 2022ರ ಫೆಬ್ರವರಿ 18ರಂದು ಪ್ರಕರಣವು ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. 2022ರ ಜುಲೈ 22ರಂದು ಮೊದಲ ವಿಚಾರಣೆ ನಡೆದಿತ್ತು. ನೋಟಿಸ್‌ ಜಾರಿ ಮಾಡಿದ್ದ ಸುಪ್ರೀಂ ಕೋರ್ಟ್, ತನಿಖೆಗೆ ತಡೆ ನೀಡಿತ್ತು. ಅಂದಿನಿಂದ 2023ರ ಫೆಬ್ರವರಿ 14ರ ರವರೆಗೆ ಕೊನೆಯ ಬಾರಿಗೆ ವಿಚಾರಣೆ ಮುಂದೂಡಲಾಗಿದೆ. ಇದುವರೆಗೂ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿಲ್ಲ.

ಸಿಎಜಿ ವರದಿಯಲ್ಲಿನ ಡಿನೋಟಿಫಿಕೇಶನ್‌

ಸಾಮಾಜಿಕ ಕಾರ್ಯಕರ್ತ ಜಯಕುಮಾರ್‌ ಹಿರೇಮಠ ಅವರು ಸಿಎಜಿ ವರದಿ ಆಧರಿಸಿ ಬಿ.ಎಸ್‌ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಅಕ್ರಮ ಡಿನೋಟಿಫಿಕೇಶನ್‌ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದನ್ನು ಆಧರಿಸಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಈ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಬಿ ಎಸ್‌ ಯಡಿಯೂರಪ್ಪ ಸಲ್ಲಿಸಿದ್ದ 15 ಅರ್ಜಿಗಳನ್ನು ಹೈಕೋರ್ಟ್‌ ವಜಾ ಮಾಡಿತ್ತು.

ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ

ಬಿ.ಎಸ್‌ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಲಂಚ, ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಇದನ್ನು ಪ್ರಶ್ನಿಸಿ ಅಬ್ರಹಾಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಭಾಗಶಃ ಪುರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಬಿ ಎಸ್‌ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್‌ 2022ರ ಸೆಪ್ಟೆಂಬರ್‌ 23ರಂದು ವಿಶೇಷ ನ್ಯಾಯಾಲಯದಲ್ಲಿನ ಖಾಸಗಿ ದೂರಿನ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಿತ್ತು. ಅಂದಿನಿಂದ ಇದುವರೆಗೂ ಪ್ರಕರಣ ಇತ್ಯರ್ಥವಾಗಿಲ್ಲ.

ಸೌಜನ್ಯ : thenewsminute.com, kannada.barandbench.com

ಇದನ್ನೂ ಓದಿ : ತುಮಕೂರು | 2010ರಲ್ಲಿ ನಡೆದ ದಲಿತ ಮಹಿಳೆಯ ಹತ್ಯೆ ಪ್ರಕರಣ; 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ’: ‘ದಿ ಕೇರಳ ಸ್ಟೋರಿ 2’ ಸಿನಿಮಾ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...