Homeಕರ್ನಾಟಕಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ 'ಪಕ್ಷಪಾತದ ನಿಲುವು' : ಸಿಜೆಐಗೆ ಪತ್ರ ಬರೆದ ವಕೀಲ

ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ ‘ಪಕ್ಷಪಾತದ ನಿಲುವು’ : ಸಿಜೆಐಗೆ ಪತ್ರ ಬರೆದ ವಕೀಲ

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ‘ಪಕ್ಷಪಾತ ನಿಲುವು’ ಅನುಸರಿಸುತ್ತಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ಬೆಂಗಳೂರಿನ ವಕೀಲ ಸಚಿನ್ ದೇಶಪಾಂಡೆ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಾಂಗ ಯಡಿಯೂರಪ್ಪ ಪರ ನಿಲುವು ತಾಳುತ್ತಿದೆ ಎಂದು ವಕೀಲ ಸಚಿನ್ ಆರೋಪಿಸಿದ್ದು, 2017ರಿಂದ ಬಾಕಿ ಉಳಿದಿರುವ ಯಡಿಯೂರಪ್ಪ ವಿರುದ್ದದ ಹಲವು ಪ್ರಕರಣಗಳ ತನಿಖೆಗೆ ಯಾವುದೇ ವಿವರಣೆ ನೀಡದೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದಿದ್ದಾರೆ.

“ಯಡಿಯೂರಪ್ಪ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ಕೋರಿದರೆ, ಸುಪ್ರೀಂ ಕೋರ್ಟ್ ತಕ್ಷಣವೇ ಅದನ್ನು ಮಂಜೂರು ಮಾಡುತ್ತದೆ. ಯಾವುದೇ ವಿವರಣೆ ಇಲ್ಲದೆ ನೀಡುವ ತಡೆಯಾಜ್ಞೆ ಆದೇಶಗಳನ್ನು ಪ್ರಾಸಿಕ್ಯೂಷನ್ (ಕರ್ನಾಟಕ ಸರ್ಕಾರ ಮತ್ತು ಭ್ರಷ್ಟಾಚಾರ ನಿಗ್ರಹ ದಳ) ಪ್ರಶ್ನಿಸುವವರೆಗೆ ಯಾವುದೇ ವ್ಯತ್ಯಾಸವಿಲ್ಲದೆ ವರ್ಷಗಳ ಕಾಲ ವಿಸ್ತರಣೆ ಮಾಡಲಾಗುತ್ತಿದೆ” ಎಂದು ಸಚಿನ್ ದೂರಿದ್ದಾರೆ.

ಯಡಿಯೂರಪ್ಪ ವಿರುದ್ಧ ಪಿಸಿ ಕಾಯ್ದೆಯಡಿ ದಾಖಲಾದ ಭ್ರಷ್ಟಾಚಾರ ಪ್ರಕರಣಗಳನ್ನು ಹೈಕೋರ್ಟ್‌ ವಜಾ ಮಾಡಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಮತ್ತು ಲೋಕಾಯುಕ್ತ/ಭ್ರಷ್ಟಾಚಾರ ನಿಗ್ರಹ ದಳ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಆದರೆ, ಇದುವರೆಗೂ ತಡೆ ನೀಡುವುದನ್ನು ಸುಪ್ರೀಂ ಕೋರ್ಟ್‌ ಪರಿಗಣಿಸಿಲ್ಲ ಎಂದು ಸಚಿನ್ ಹೇಳಿದ್ದಾರೆ.

“ನಿರ್ದಿಷ್ಟವಾಗಿ ಯಡಿಯೂರಪ್ಪ ಅವರಿಗೆ ಅನುಕೂಲಕರವಾದ ಹೈಕೋರ್ಟ್ ಆದೇಶಗಳನ್ನು ತಡೆಯಲು ಪ್ರಾಸಿಕ್ಯೂಷನ್ ಪ್ರಯತ್ನಿಸಿದ ಪ್ರಕರಣಗಳಲ್ಲಿ, ತಡೆ ನೀಡುವ ಮತ್ತು ವಿಚಾರಣೆಯನ್ನು ವಿಳಂಬಗೊಳಿಸುವ ಮಾದರಿಯು ನ್ಯಾಯಾಂಗ ಪಕ್ಷಪಾತ ಮಾಡುತ್ತಿದೆಯೇ? ಎಂಬ ಪ್ರಶ್ನೆ ಮೂಡಿಸುತ್ತದೆ” ಎಂದು ಸಚಿನ್ ಕಳವಳ ವ್ಯಕ್ತಪಡಿಸಿದ್ದಾರೆ.

ಸಿಜೆಐಗೆ ಬರೆದಿರುವ ಪತ್ರದಲ್ಲಿ ವಕೀಲ ಸಚಿನ್ ಅವರು ತನ್ನ ಆರೋಪವನ್ನು ಪುಷ್ಠೀಕರಿಸುವ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಕೆಲ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಅವುಗಳು ಹೀಗಿವೆ..

ಶಿವರಾಮ ಕಾರಂತ ಬಡಾವಣೆಯಲ್ಲಿ 257 ಎಕರೆ ಡಿನೋಟಿಫಿಕೇಶನ್‌

ಆಲಂ ಪಾಷಾ ಅವರು ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ 2021ರ ಜನವರಿ 05ರಂದು ಹೈಕೋರ್ಟ್‌, ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿದಿರುವುದರಿಂದ ಪ್ರಾಸಿಕ್ಯೂಷನ್‌ಗೆ ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ ಅಡಿ ಅನುಮತಿ ಬೇಕಿಲ್ಲ ಎಂದು ಹೇಳಿತ್ತು.

ಈ ಬೆನ್ನಲ್ಲೇ ಯಡಿಯೂರಪ್ಪ ಅವರು ಬಂಧನ ಭೀತಿಯಿಂದ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. 2021ರ ಜನವರಿ 27ರಂದು ಸುಪ್ರೀಂ ಕೋರ್ಟ್‌ ಯಡಿಯೂರಪ್ಪ ಅವರ ಬಂಧನಕ್ಕೆ ತಡೆ ನೀಡಿ, ನೋಟಿಸ್‌ ಜಾರಿ ಮಾಡಿತ್ತು. ಆದೇಶದಲ್ಲಿ ಎಲ್ಲಿಯೂ ಏಕೆ ತಡೆ ನೀಡಲಾಗುತ್ತದೆ ಎಂಬುವುದಕ್ಕೆ ಸುಪ್ರೀಂ ಕೋರ್ಟ್ ಕಾರಣ ನೀಡಿರಲಿಲ್ಲ. ಯಡಿಯೂರಪ್ಪ ಜೊತೆಗೂಡಿ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳು ಸಲ್ಲಿಸಿರುವ ಅರ್ಜಿಯಲ್ಲಿಯೂ ಅದೇ ಆದೇಶ ಪಾಲನೆ ಮಾಡಲಾಗಿದೆ. ನಾಲ್ಕು ವರ್ಷಗಳಿಂದ ಈ ಆದೇಶ ಚಾಲ್ತಿಯಲ್ಲಿದೆ.

2008-2011ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಡಾ. ಕೆ ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿಗೆ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ 257 ಎಕರೆಯನ್ನು ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

2017ರ ಜೂನ್‌ 06ರಂದು ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಎಸಿಬಿ, ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿದ್ದ ಕರ್ನಾಟಕ ಹೈಕೋರ್ಟ್‌ 2017ರ ಸೆಪ್ಟೆಂಬರ್‌ 22ರಂದು ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಹೈಕೋರ್ಟ್‌ ತಡೆಯಾಜ್ಞೆ ಪ್ರಶ್ನಿಸಿ ಎಸಿಬಿಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 2017ರ ಡಿಸೆಂಬರ್‌ 11ರಂದು ಈ ಕುರಿತು ನೋಟಿಸ್‌ ಜಾರಿಯಾಗಿದ್ದು, ಇದುವರೆಗೆ ಯಾವುದೇ ಬೆಳವಣಿಗೆಯಾಗಿಲ್ಲ. 2018ರ ನವೆಂಬರ್‌ 14ರಂದು ಕೊನೆಯ ಬಾರಿಗೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಆರು ವರ್ಷಗಳಿಂದ ಇದುವರೆಗೂ ಪ್ರಕರಣವು ವಿಚಾರಣೆಗೆ ಬಂದಿಲ್ಲ. 2017ರ ಸೆಪ್ಟೆಂಬರ್‌ನಿಂದ ಪ್ರಕರಣದ ತನಿಖೆಗೆ ತಡೆ ನೀಡಲಾಗಿದೆ.

ವಾಸುದೇವ ರೆಡ್ಡಿ ಡಿನೋಟಿಫಿಕೇಶನ್‌ ಪ್ರಕರಣ

ಬಿ.ಎಸ್‌ ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿಯಾಗಿದ್ದಾಗ ನಡೆಸಿರುವ ಅಕ್ರಮ ಡಿನೋಟಿಫಿಕೇಶ್‌ ಆರೋಪ ಸಂಬಂಧ ಖಾಸಗಿ ದೂರಿನಲ್ಲಿ ವಿಶೇಷ ನ್ಯಾಯಾಲಯ ನೀಡಿರುವ ನಿರ್ದೇಶನ ಆಧರಿಸಿ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಸೆಕ್ಷನ್‌ 13(1)(ಡಿ) ಜೊತೆಗೆ 13(2)ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು 2020ರ ಡಿಸೆಂಬರ್‌ 22ರಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. 2015ರ ಫೆಬ್ರವರಿ 18ರಿಂದ 2019ರ ಏಪ್ರಿಲ್‌ 02ರವರೆಗೆ ಯಾವುದೇ ತಡೆ ಇಲ್ಲದಿದ್ದರೂ ತನಿಖೆ ವಿಳಂಬ ಮಾಡಿದ್ದಕ್ಕೆ ಲೋಕಾಯುಕ್ತ ಪೊಲೀಸರನ್ನು ಹೈಕೋರ್ಟ್‌ ಟೀಕಿಸಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. 2022ರ ಫೆಬ್ರವರಿ 18ರಂದು ಪ್ರಕರಣವು ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. 2022ರ ಜುಲೈ 22ರಂದು ಮೊದಲ ವಿಚಾರಣೆ ನಡೆದಿತ್ತು. ನೋಟಿಸ್‌ ಜಾರಿ ಮಾಡಿದ್ದ ಸುಪ್ರೀಂ ಕೋರ್ಟ್, ತನಿಖೆಗೆ ತಡೆ ನೀಡಿತ್ತು. ಅಂದಿನಿಂದ 2023ರ ಫೆಬ್ರವರಿ 14ರ ರವರೆಗೆ ಕೊನೆಯ ಬಾರಿಗೆ ವಿಚಾರಣೆ ಮುಂದೂಡಲಾಗಿದೆ. ಇದುವರೆಗೂ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿಲ್ಲ.

ಸಿಎಜಿ ವರದಿಯಲ್ಲಿನ ಡಿನೋಟಿಫಿಕೇಶನ್‌

ಸಾಮಾಜಿಕ ಕಾರ್ಯಕರ್ತ ಜಯಕುಮಾರ್‌ ಹಿರೇಮಠ ಅವರು ಸಿಎಜಿ ವರದಿ ಆಧರಿಸಿ ಬಿ.ಎಸ್‌ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಅಕ್ರಮ ಡಿನೋಟಿಫಿಕೇಶನ್‌ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದನ್ನು ಆಧರಿಸಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಈ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಬಿ ಎಸ್‌ ಯಡಿಯೂರಪ್ಪ ಸಲ್ಲಿಸಿದ್ದ 15 ಅರ್ಜಿಗಳನ್ನು ಹೈಕೋರ್ಟ್‌ ವಜಾ ಮಾಡಿತ್ತು.

ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ

ಬಿ.ಎಸ್‌ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಲಂಚ, ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಇದನ್ನು ಪ್ರಶ್ನಿಸಿ ಅಬ್ರಹಾಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಭಾಗಶಃ ಪುರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಬಿ ಎಸ್‌ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್‌ 2022ರ ಸೆಪ್ಟೆಂಬರ್‌ 23ರಂದು ವಿಶೇಷ ನ್ಯಾಯಾಲಯದಲ್ಲಿನ ಖಾಸಗಿ ದೂರಿನ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಿತ್ತು. ಅಂದಿನಿಂದ ಇದುವರೆಗೂ ಪ್ರಕರಣ ಇತ್ಯರ್ಥವಾಗಿಲ್ಲ.

ಸೌಜನ್ಯ : thenewsminute.com, kannada.barandbench.com

ಇದನ್ನೂ ಓದಿ : ತುಮಕೂರು | 2010ರಲ್ಲಿ ನಡೆದ ದಲಿತ ಮಹಿಳೆಯ ಹತ್ಯೆ ಪ್ರಕರಣ; 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...