Homeಕರ್ನಾಟಕಬೆಂಗಳೂರಿನಲ್ಲಿ ಉತ್ತರ ಪ್ರದೇಶದ ಜಾಹೀರಾತು: ಪೋಟೋ ಹಂಚಿಕೊಂಡ ವಕೀಲರಿಗೆ ಯುಪಿ ಪೊಲೀಸರ ಬೆದರಿಕೆ!

ಬೆಂಗಳೂರಿನಲ್ಲಿ ಉತ್ತರ ಪ್ರದೇಶದ ಜಾಹೀರಾತು: ಪೋಟೋ ಹಂಚಿಕೊಂಡ ವಕೀಲರಿಗೆ ಯುಪಿ ಪೊಲೀಸರ ಬೆದರಿಕೆ!

- Advertisement -
- Advertisement -

ಬೆಂಗಳೂರಿನ ವಿಮಾನ ನಿಲ್ದಾಣದ ಬಳಿ ಉತ್ತರ ಪ್ರದೇಶ ಸರ್ಕಾರದ ಕುರಿತ ಜಾಹೀರಾತು ಪೋಸ್ಟರ್‌ನ ಪೋಟೋವನ್ನು ಟ್ವೀಟ್ ಮಾಡಿದ್ದ ಬೆಂಗಳೂರು ಮೂಲಕ ವಕೀಲರೊಬ್ಬರಿಗೆ ಯುಪಿ ಸೈಬರ್ ಪೊಲೀಸರು ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಸೋಮವಾರ ಬೆಳಿಗ್ಗೆ ಶಿಶಿರಾ ರುದ್ರಪ್ಪ ಅವರು ಹಂಚಿಕೊಂಡಿದ್ದ ಹೋರ್ಡಿಂಗ್‌ನಲ್ಲಿ ಹಿಂದಿ ಭಾಷೆಯಲ್ಲಿ “ಉತ್ತರಪ್ರದೇಶ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದೆ. ಮತ್ತು 4 ಲಕ್ಷ ಯುವಕರಿಗೆ ಸರ್ಕಾರಿ ಉದ್ಯೋಗಗಳು ನೀಡಲಾಗಿದೆ” ಎಂದು ಬರೆಯಲಾಗಿದೆ. ಜೊತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರಗಳು ಇವೆ.

ಈ ಹೋರ್ಡಿಂಗ್‌ ಹಂಚಿಕೊಂಡಿರುವ ಶಿಶಿರಾ ರುದ್ರಪ್ಪ, “ಕರ್ನಾಟಕದಲ್ಲಿ ಯುಪಿ ಚುನಾವಣಾ ಪ್ರಚಾರ ಪ್ರಾರಂಭವಾಗಿದೆ” ಎಂದು ಶೀರ್ಷಿಕೆ ನೀಡಿದ್ದಾರೆ. ದೆಹಲಿ ವಿಮಾನ ನಿಲ್ದಾಣದ ಬಳಿ ಅಂತಹದ್ದೆ ಹೋರ್ಡಿಂಗ್‌ ಇರುವ ಮತ್ತೊಂದು ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣ ಆವರಣದ ಹೊರಗಡೆ ಹೋರ್ಡಿಂಗ್  ಹಾಕಲಾಗಿತ್ತು ಎಂದು ವಕೀಲರು ಹೇಳಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಒಬ್ಬನ ಬಂಧನ

ಸೋಮವಾರ ಸಂಜೆ, ಉತ್ತರ ಪ್ರದೇಶ ಸರ್ಕಾರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶಕ ಶಿಶಿರ್ ಸಿಂಗ್, ಈ ಚಿತ್ರವನ್ನು “ನಕಲಿ ಸುದ್ದಿ” ಎಂದು ಟ್ವೀಟ್ ಮಾಡಿದ್ದಾರೆ. ಕರ್ನಾಟಕದಲ್ಲಿ ಎಲ್ಲಿಯೂ ಅಂತಹ ಜಾಹೀರಾತು ಇಲ್ಲ ಎಂದು ಹೇಳಿ, ಯುಪಿ ಪೊಲೀಸ್ ಮಹಾನಿರ್ದೇಶಕರು ಮತ್ತು ಸೈಬರ್ ಸೆಲ್‌ನ ಟ್ವಿಟರ್ ಹ್ಯಾಂಡಲ್‌ಗಳನ್ನು ಟ್ಯಾಗ್ ಮಾಡಿದ್ದಾರೆ.

“ಜವಾಬ್ದಾರರಾಗಿರಿ. ದಯವಿಟ್ಟು ನಕಲಿ ಸುದ್ದಿಗಳನ್ನು ಹರಡಬೇಡಿ. ಕರ್ನಾಟಕ ರಾಜ್ಯದಲ್ಲಿ ಎಲ್ಲಿಯೂ ಅಂತಹ ಜಾಹೀರಾತು ನೀಡಿಲ್ಲ”ಎಂದು ಶಿಶಿರ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಉತ್ತರ ಪ್ರದೇಶ ಸೈಬರ್ ಪೊಲೀಸರು, “ದಯವಿಟ್ಟು ಗಮನಿಸಿ, ಈ ಟ್ವಿಟರ್ ಹ್ಯಾಂಡಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ಒಂದು ಹೆಜ್ಜೆ ಮುಂದೆ ಹೋದ ಉತ್ತರ ಪ್ರದೇಶ ಸರ್ಕಾರ, ತನ್ನ ಅಧಿಕೃತ  ಫ್ಯಾಕ್ಟ್‌ಚೆಕ್ ಟ್ವಿಟರ್‌ ಖಾತೆಯಲ್ಲಿಯೂ ಈ ಸುದ್ದಿ ಸುಳ್ಳು ಎಂದು ಹೇಳಿತ್ತು.

ಟ್ವೀಟ್ ‘ನಕಲಿ ಸುದ್ದಿ’ ಎಂಬ ಸಿಂಗ್ ಅವರ ಹೇಳಿಕೆಯನ್ನು ವಕೀಲರಾದ ಶಿಶಿರಾ ರುದ್ರಪ್ಪ ಪ್ರಶ್ನಿಸಿ, ಬೆಂಗಳೂರು ವಿಮಾನ ನಿಲ್ದಾಣದ ಬಳಿ ಜಾಹೀರಾತು ಹೋರ್ಡಿಂಗ್‌ನ ವಿಡಿಯೊ ಹಂಚಿಕೊಂಡಿದ್ದಾರೆ. ಹೋರ್ಡಿಂಗ್ ನಿಜಕ್ಕೂ ಕರ್ನಾಟಕದಲ್ಲಿದೆ ಎಂದಿರುವ ಅವರು ಶಿಶಿರ್ ಸಿಂಗ್ ಅವರಿಗೆ ತಮ್ಮ ಟ್ವೀಟ್ ಅಳಿಸಲು ಹೇಳಿದ್ದಾರೆ.

ಮಂಗಳವಾರ ಬೆಳಿಗ್ಗೆ ಮತ್ತೊಂದು ವಿಡಿಯೋ ಮತ್ತೊಂದು ವೀಡಿಯೊ ಹಂಚಿಕೊಂಡಿರುವ ಶಿಶಿರಾ ರುದ್ರಪ್ಪ, ಹೋರ್ಡಿಂಗ್ ಅನ್ನು ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ.

 

ಇನ್ನು ಬೆಂಗಳೂರಿನಲ್ಲಿ ಹಾಕಲಾಗಿದ್ದ ಯುಪಿ ಸರ್ಕಾರದ ಜಾಹೀರಾತು ಹೋರ್ಡಿಂಗ್‌ನ ಚಿತ್ರವನ್ನು ಹಂಚಿಕೊಂಡಿದ್ದಕ್ಕಾಗಿ ವಕೀಲರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿದ ಸರ್ಕಾರದ ವಿರುದ್ಧ ಹಲವರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಸತ್ಯ ಹೇಳುವವರ ಮೇಲೆ ಪೊಲೀಸರ ಮೂಲಕ ಮುಗಿಬೀಳುತ್ತಿದ್ದಾರೆ. ಏಕೆಂದರೆ ಇಂದು ಅವರಿಗೆ ಬೇರೆಲ್ಲಾ ದಾರಿಗಳೂ ಮುಚ್ಚಿಹೋಗಿ, ಅವರು ಹತಾಶರಾಗಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...