Homeಕರ್ನಾಟಕಬೆಂಗಳೂರಿನಲ್ಲಿ ಉತ್ತರ ಪ್ರದೇಶದ ಜಾಹೀರಾತು: ಪೋಟೋ ಹಂಚಿಕೊಂಡ ವಕೀಲರಿಗೆ ಯುಪಿ ಪೊಲೀಸರ ಬೆದರಿಕೆ!

ಬೆಂಗಳೂರಿನಲ್ಲಿ ಉತ್ತರ ಪ್ರದೇಶದ ಜಾಹೀರಾತು: ಪೋಟೋ ಹಂಚಿಕೊಂಡ ವಕೀಲರಿಗೆ ಯುಪಿ ಪೊಲೀಸರ ಬೆದರಿಕೆ!

- Advertisement -
- Advertisement -

ಬೆಂಗಳೂರಿನ ವಿಮಾನ ನಿಲ್ದಾಣದ ಬಳಿ ಉತ್ತರ ಪ್ರದೇಶ ಸರ್ಕಾರದ ಕುರಿತ ಜಾಹೀರಾತು ಪೋಸ್ಟರ್‌ನ ಪೋಟೋವನ್ನು ಟ್ವೀಟ್ ಮಾಡಿದ್ದ ಬೆಂಗಳೂರು ಮೂಲಕ ವಕೀಲರೊಬ್ಬರಿಗೆ ಯುಪಿ ಸೈಬರ್ ಪೊಲೀಸರು ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಸೋಮವಾರ ಬೆಳಿಗ್ಗೆ ಶಿಶಿರಾ ರುದ್ರಪ್ಪ ಅವರು ಹಂಚಿಕೊಂಡಿದ್ದ ಹೋರ್ಡಿಂಗ್‌ನಲ್ಲಿ ಹಿಂದಿ ಭಾಷೆಯಲ್ಲಿ “ಉತ್ತರಪ್ರದೇಶ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದೆ. ಮತ್ತು 4 ಲಕ್ಷ ಯುವಕರಿಗೆ ಸರ್ಕಾರಿ ಉದ್ಯೋಗಗಳು ನೀಡಲಾಗಿದೆ” ಎಂದು ಬರೆಯಲಾಗಿದೆ. ಜೊತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರಗಳು ಇವೆ.

ಈ ಹೋರ್ಡಿಂಗ್‌ ಹಂಚಿಕೊಂಡಿರುವ ಶಿಶಿರಾ ರುದ್ರಪ್ಪ, “ಕರ್ನಾಟಕದಲ್ಲಿ ಯುಪಿ ಚುನಾವಣಾ ಪ್ರಚಾರ ಪ್ರಾರಂಭವಾಗಿದೆ” ಎಂದು ಶೀರ್ಷಿಕೆ ನೀಡಿದ್ದಾರೆ. ದೆಹಲಿ ವಿಮಾನ ನಿಲ್ದಾಣದ ಬಳಿ ಅಂತಹದ್ದೆ ಹೋರ್ಡಿಂಗ್‌ ಇರುವ ಮತ್ತೊಂದು ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣ ಆವರಣದ ಹೊರಗಡೆ ಹೋರ್ಡಿಂಗ್  ಹಾಕಲಾಗಿತ್ತು ಎಂದು ವಕೀಲರು ಹೇಳಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಒಬ್ಬನ ಬಂಧನ

ಸೋಮವಾರ ಸಂಜೆ, ಉತ್ತರ ಪ್ರದೇಶ ಸರ್ಕಾರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶಕ ಶಿಶಿರ್ ಸಿಂಗ್, ಈ ಚಿತ್ರವನ್ನು “ನಕಲಿ ಸುದ್ದಿ” ಎಂದು ಟ್ವೀಟ್ ಮಾಡಿದ್ದಾರೆ. ಕರ್ನಾಟಕದಲ್ಲಿ ಎಲ್ಲಿಯೂ ಅಂತಹ ಜಾಹೀರಾತು ಇಲ್ಲ ಎಂದು ಹೇಳಿ, ಯುಪಿ ಪೊಲೀಸ್ ಮಹಾನಿರ್ದೇಶಕರು ಮತ್ತು ಸೈಬರ್ ಸೆಲ್‌ನ ಟ್ವಿಟರ್ ಹ್ಯಾಂಡಲ್‌ಗಳನ್ನು ಟ್ಯಾಗ್ ಮಾಡಿದ್ದಾರೆ.

“ಜವಾಬ್ದಾರರಾಗಿರಿ. ದಯವಿಟ್ಟು ನಕಲಿ ಸುದ್ದಿಗಳನ್ನು ಹರಡಬೇಡಿ. ಕರ್ನಾಟಕ ರಾಜ್ಯದಲ್ಲಿ ಎಲ್ಲಿಯೂ ಅಂತಹ ಜಾಹೀರಾತು ನೀಡಿಲ್ಲ”ಎಂದು ಶಿಶಿರ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಉತ್ತರ ಪ್ರದೇಶ ಸೈಬರ್ ಪೊಲೀಸರು, “ದಯವಿಟ್ಟು ಗಮನಿಸಿ, ಈ ಟ್ವಿಟರ್ ಹ್ಯಾಂಡಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ಒಂದು ಹೆಜ್ಜೆ ಮುಂದೆ ಹೋದ ಉತ್ತರ ಪ್ರದೇಶ ಸರ್ಕಾರ, ತನ್ನ ಅಧಿಕೃತ  ಫ್ಯಾಕ್ಟ್‌ಚೆಕ್ ಟ್ವಿಟರ್‌ ಖಾತೆಯಲ್ಲಿಯೂ ಈ ಸುದ್ದಿ ಸುಳ್ಳು ಎಂದು ಹೇಳಿತ್ತು.

ಟ್ವೀಟ್ ‘ನಕಲಿ ಸುದ್ದಿ’ ಎಂಬ ಸಿಂಗ್ ಅವರ ಹೇಳಿಕೆಯನ್ನು ವಕೀಲರಾದ ಶಿಶಿರಾ ರುದ್ರಪ್ಪ ಪ್ರಶ್ನಿಸಿ, ಬೆಂಗಳೂರು ವಿಮಾನ ನಿಲ್ದಾಣದ ಬಳಿ ಜಾಹೀರಾತು ಹೋರ್ಡಿಂಗ್‌ನ ವಿಡಿಯೊ ಹಂಚಿಕೊಂಡಿದ್ದಾರೆ. ಹೋರ್ಡಿಂಗ್ ನಿಜಕ್ಕೂ ಕರ್ನಾಟಕದಲ್ಲಿದೆ ಎಂದಿರುವ ಅವರು ಶಿಶಿರ್ ಸಿಂಗ್ ಅವರಿಗೆ ತಮ್ಮ ಟ್ವೀಟ್ ಅಳಿಸಲು ಹೇಳಿದ್ದಾರೆ.

ಮಂಗಳವಾರ ಬೆಳಿಗ್ಗೆ ಮತ್ತೊಂದು ವಿಡಿಯೋ ಮತ್ತೊಂದು ವೀಡಿಯೊ ಹಂಚಿಕೊಂಡಿರುವ ಶಿಶಿರಾ ರುದ್ರಪ್ಪ, ಹೋರ್ಡಿಂಗ್ ಅನ್ನು ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ.

 

ಇನ್ನು ಬೆಂಗಳೂರಿನಲ್ಲಿ ಹಾಕಲಾಗಿದ್ದ ಯುಪಿ ಸರ್ಕಾರದ ಜಾಹೀರಾತು ಹೋರ್ಡಿಂಗ್‌ನ ಚಿತ್ರವನ್ನು ಹಂಚಿಕೊಂಡಿದ್ದಕ್ಕಾಗಿ ವಕೀಲರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿದ ಸರ್ಕಾರದ ವಿರುದ್ಧ ಹಲವರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಸತ್ಯ ಹೇಳುವವರ ಮೇಲೆ ಪೊಲೀಸರ ಮೂಲಕ ಮುಗಿಬೀಳುತ್ತಿದ್ದಾರೆ. ಏಕೆಂದರೆ ಇಂದು ಅವರಿಗೆ ಬೇರೆಲ್ಲಾ ದಾರಿಗಳೂ ಮುಚ್ಚಿಹೋಗಿ, ಅವರು ಹತಾಶರಾಗಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...