ಟೆಕ್ ಉದ್ಯೋಗ ಆಕಾಂಕ್ಷಿಗಳಿಗೆ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಮಹಾರಾಷ್ಟ್ರದ ವ್ಯಕ್ತಿಯೊಬ್ಬರನ್ನು ಬೆಂಗಳೂರು ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ.
ಆರೋಪಿಯನ್ನು ಮಹಾರಾಷ್ಟ್ರದ ಪುಣೆಯ ಚಿಂಚ್ವಾಡ್ನ 34 ವರ್ಷದ ಸಂಜೀವ್ ಗಂಗಾರಾಮ್ ಘೂರ್ಖಾ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಕೆಲಸ ಕೊಡಿಸುವುದಾಗಿ ಹಲವರಿಗೆ ವಂಚನೆ ಮಾಡಿದ್ದಾರೆ. ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆಯಲು ಎಂಟು ಬ್ಯಾಂಕ್ ಖಾತೆಗಳನ್ನು ಆರೋಪಿ ತೆರೆದಿದ್ದಾರೆ.
“ಆರೋಪಿಯು ಕಂಪನಿಗೆ ನೇಮಕಾತಿ ಮಾಡುವುದಾಗಿ ಹೇಳಿಕೊಂಡು ಸಾಮಾಜಿಕ ಮಾಧ್ಯಮ ಮತ್ತು ಇತರ ವೇದಿಕೆಗಳಲ್ಲಿ ಜಾಹೀರಾತುಗಳನ್ನು ನೀಡಿದ್ದಾರೆ. ಅವರು ಅರ್ಜಿದಾರರಿಗೆ ಇಂಟರ್ವ್ಯೂ ಲೇಟರ್ಗಳನ್ನು ಕಳುಹಿಸಿ, ಆನ್ಲೈನ್ ಸಂದರ್ಶನಗಳನ್ನು ನಡೆಸಿದ್ದಾರೆ. ಕೆಲಸ ನೀಡುವುದಾಗಿ ಆರೋಪಿಯು ಸಂತ್ರಸ್ತರಿಗೆ ತಿಳಿಸಿ, ಮನೆಯಿಂದಲೇ ಕೆಲಸ ಮಾಡಬೇಕು ಹೀಗಾಗಿ ಲ್ಯಾಪ್ಟಾಪ್ ಮತ್ತು ಇತರ ಉಪಕರಣಗಳಿಗೆ ಹಣವನ್ನು ಠೇವಣಿ ಮಾಡಿ ಎಂದು ಹಣ ಪಡೆದಿದ್ದಾರೆ” ಎಂದು ಡಿಸಿಪಿ (ಈಶಾನ್ಯ) ಅನೂಪ್ ಶೆಟ್ಟಿ ಹೇಳಿದ್ದಾರೆ.
ಇದನ್ನೂ ಓದಿ: ಸಂಪುಟ ಪುನರ್ ರಚನೆಗೆ ಹೆಚ್ಚುತ್ತಿರುವ ಒತ್ತಡ: ಹೈಕಮಾಂಡ್ ಒಪ್ಪಿಗೆಗೆ ಕಾಯುತ್ತಿದ್ದೇನೆ ಎಂದ ಬೊಮ್ಮಾಯಿ!
🔴Job Fraud🔴
Sampigehalli police have arrested one person from Pune, Maharashtra for cheating job seekers. He published fake ads on websites offering jobs in renowned IT company, conducted interviews and finally demanded security deposits.#cybercrime
— Anoop A Shetty (@DCPNEBCP) January 24, 2022
“ಇದುವರೆಗಿನ ತನಿಖೆಯಿಂದ ಆರೋಪಿಯು ನಾಲ್ವರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಈತ ಸುಮಾರು 40 ಉದ್ಯೋಗ ಆಕಾಂಕ್ಷಿಗಳಿಗೆ ನೇಮಕಾತಿ ಪತ್ರಗಳನ್ನು ಕಳುಹಿಸಿದ್ದಾರೆ ಎಂದು ನಮಗೆ ತಳಿದು ಬಂದಿದೆ. ಹೆಚ್ಚಿನ ಮಾಹಿತಿ ಸಂಗ್ರಹಿಸಲು ನಾವು ಈ ಅಭ್ಯರ್ಥಿಗಳೊಂದಿಗೆ ಮಾತನಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.
ಅಭ್ಯರ್ಥಿಗಳಿಗೆ ಕಂಪನಿಯ ಲೋಗೋಗಳೊಂದಿಗೆ ನಕಲಿ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಈ ಅಭ್ಯರ್ಥಿಗಳು ಕಂಪನಿಯ ಎಚ್ಆರ್ ಡಿಪಾರ್ಟ್ಮೆಂಟ್ ಅವರನ್ನು ಭೇಟಿಯಾದಾಗ ವಂಚನೆಗೆ ಒಳಗಾಗಿರುವುದು ತಿಳಿದು ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ ಮೂವರು ಉದ್ಯೋಗಾಕಾಂಕ್ಷಿಗಳು ಆರೋಪಿಗೆ ಸುಮಾರು 1.5 ಲಕ್ಷ ರೂಪಾಯಿ ನೀಡಿದ್ದಾರೆ.
ಇದನ್ನೂ ಓದಿ: ಪಂಜಾಬ್ ಸಿಎಂ ಚರಣ್ಜಿತ್ ಸಿಂಗ್ ಚನ್ನಿಗೆ ಕಾಂಗ್ರೆಸ್ ಮತ್ತೊಂದು ಅವಕಾಶ ನೀಡಬೇಕು: ನಟ ಸೋನು ಸೂದ್