Homeಕರ್ನಾಟಕಬೆಂಗಳೂರು: ಹಣ ಪಡೆದು, ನಕಲಿ ನೇಮಕಾತಿ ಪತ್ರ ಕೊಟ್ಟು ವಂಚಿಸುತ್ತಿದ್ದ ವ್ಯಕ್ತಿ ಬಂಧನ

ಬೆಂಗಳೂರು: ಹಣ ಪಡೆದು, ನಕಲಿ ನೇಮಕಾತಿ ಪತ್ರ ಕೊಟ್ಟು ವಂಚಿಸುತ್ತಿದ್ದ ವ್ಯಕ್ತಿ ಬಂಧನ

- Advertisement -
- Advertisement -

ಟೆಕ್ ಉದ್ಯೋಗ ಆಕಾಂಕ್ಷಿಗಳಿಗೆ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಮಹಾರಾಷ್ಟ್ರದ ವ್ಯಕ್ತಿಯೊಬ್ಬರನ್ನು ಬೆಂಗಳೂರು ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ.

ಆರೋಪಿಯನ್ನು ಮಹಾರಾಷ್ಟ್ರದ ಪುಣೆಯ ಚಿಂಚ್‌ವಾಡ್‌ನ 34 ವರ್ಷದ ಸಂಜೀವ್ ಗಂಗಾರಾಮ್ ಘೂರ್ಖಾ ಎಂದು ಗುರುತಿಸಲಾಗಿದೆ.  ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಕೆಲಸ ಕೊಡಿಸುವುದಾಗಿ ಹಲವರಿಗೆ ವಂಚನೆ ಮಾಡಿದ್ದಾರೆ. ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆಯಲು ಎಂಟು ಬ್ಯಾಂಕ್ ಖಾತೆಗಳನ್ನು ಆರೋಪಿ ತೆರೆದಿದ್ದಾರೆ.

“ಆರೋಪಿಯು ಕಂಪನಿಗೆ ನೇಮಕಾತಿ ಮಾಡುವುದಾಗಿ ಹೇಳಿಕೊಂಡು ಸಾಮಾಜಿಕ ಮಾಧ್ಯಮ ಮತ್ತು ಇತರ ವೇದಿಕೆಗಳಲ್ಲಿ ಜಾಹೀರಾತುಗಳನ್ನು ನೀಡಿದ್ದಾರೆ. ಅವರು ಅರ್ಜಿದಾರರಿಗೆ ಇಂಟರ್‌ವ್ಯೂ ಲೇಟರ್‌ಗಳನ್ನು ಕಳುಹಿಸಿ, ಆನ್‌ಲೈನ್ ಸಂದರ್ಶನಗಳನ್ನು ನಡೆಸಿದ್ದಾರೆ. ಕೆಲಸ ನೀಡುವುದಾಗಿ ಆರೋಪಿಯು ಸಂತ್ರಸ್ತರಿಗೆ ತಿಳಿಸಿ, ಮನೆಯಿಂದಲೇ ಕೆಲಸ ಮಾಡಬೇಕು ಹೀಗಾಗಿ ಲ್ಯಾಪ್‌ಟಾಪ್ ಮತ್ತು ಇತರ ಉಪಕರಣಗಳಿಗೆ ಹಣವನ್ನು ಠೇವಣಿ ಮಾಡಿ ಎಂದು ಹಣ ಪಡೆದಿದ್ದಾರೆ” ಎಂದು ಡಿಸಿಪಿ (ಈಶಾನ್ಯ) ಅನೂಪ್ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: ಸಂಪುಟ ಪುನರ್‌‌‌‌ ರಚನೆಗೆ ಹೆಚ್ಚುತ್ತಿರುವ ಒತ್ತಡ: ಹೈಕಮಾಂಡ್‌‌‌‌‌ ಒಪ್ಪಿಗೆಗೆ ಕಾಯುತ್ತಿದ್ದೇನೆ ಎಂದ ಬೊಮ್ಮಾಯಿ!

 

“ಇದುವರೆಗಿನ ತನಿಖೆಯಿಂದ ಆರೋಪಿಯು ನಾಲ್ವರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಈತ ಸುಮಾರು 40 ಉದ್ಯೋಗ ಆಕಾಂಕ್ಷಿಗಳಿಗೆ ನೇಮಕಾತಿ ಪತ್ರಗಳನ್ನು ಕಳುಹಿಸಿದ್ದಾರೆ ಎಂದು ನಮಗೆ ತಳಿದು ಬಂದಿದೆ. ಹೆಚ್ಚಿನ ಮಾಹಿತಿ ಸಂಗ್ರಹಿಸಲು ನಾವು ಈ ಅಭ್ಯರ್ಥಿಗಳೊಂದಿಗೆ ಮಾತನಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಅಭ್ಯರ್ಥಿಗಳಿಗೆ ಕಂಪನಿಯ ಲೋಗೋಗಳೊಂದಿಗೆ ನಕಲಿ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಈ ಅಭ್ಯರ್ಥಿಗಳು ಕಂಪನಿಯ ಎಚ್‌ಆರ್‌ ಡಿಪಾರ್ಟ್‌ಮೆಂಟ್‌ ಅವರನ್ನು ಭೇಟಿಯಾದಾಗ ವಂಚನೆಗೆ ಒಳಗಾಗಿರುವುದು ತಿಳಿದು ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ ಮೂವರು ಉದ್ಯೋಗಾಕಾಂಕ್ಷಿಗಳು ಆರೋಪಿಗೆ ಸುಮಾರು 1.5 ಲಕ್ಷ ರೂಪಾಯಿ ನೀಡಿದ್ದಾರೆ.


ಇದನ್ನೂ ಓದಿ: ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿಗೆ ಕಾಂಗ್ರೆಸ್ ಮತ್ತೊಂದು ಅವಕಾಶ ನೀಡಬೇಕು: ನಟ ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...