Homeಕರ್ನಾಟಕಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

ಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

- Advertisement -
- Advertisement -

ಬೆಂಗಳೂರು ‘ನಮ್ಮ ಮೆಟ್ರೋ’ ರೈಲು ಪ್ರಯಾಣಿಕರ ದರ ಗರಿಷ್ಠ 50%ದಷ್ಟು ಏರಿಕೆಯಾಗಿದ್ದು, ಭಾನುವಾರದಿಂದ ಪ್ರಯಾಣಿಕರು ಪರಿಷ್ಕೃತ ದರ ಪಾವತಿಸಬೇಕಾಗುತ್ತದೆ ಎಂದು ವರದಿಯಗಿದೆ. ಕನಿಷ್ಠ ದರ 10 ರೂ. ಹಾಗೆ ಉಳಿದಿದ್ದು, ಗರಿಷ್ಠ ದರವು ಶೇ. 50 ರಷ್ಟು ಏರಿಕೆಯಾಗಿದೆ.

ಸುಮಾರು ಎಂಟು ವರ್ಷಗಳ ನಂತರ ದರ ನಿಗದಿ ಸಮಿತಿಯ (ಎಫ್‌ಎಫ್‌ಸಿ) ಶಿಫಾರಸುಗಳ ಆಧಾರದ ಮೇಲೆ ನಮ್ಮ ಮೆಟ್ರೋವನ್ನು ನಿರ್ವಹಿಸುವ ಬಿಎಂಆರ್‌ಸಿಎಲ್ ದರಗಳನ್ನು ಪರಿಷ್ಕರಿಸಿದೆ. ದರ ಪರಿಷ್ಕರಣೆಯ ನಂತರ 60 ರೂ.ಗಳ ಹಿಂದಿನ ದರವೂ ಈಗ 90 ರೂ.ಗೆ ತಲುಪಿದೆ. ಬೆಂಗಳೂರು

0-2 ಕಿ.ಮೀ ವರೆಗಿನ ದೂರಕ್ಕೆ, ಪ್ರಯಾಣಿಕರು ಕನಿಷ್ಠ 10 ರೂ. ಪಾವತಿಸುವುದು ಮುಂದುವರಿಯಲಿದೆ. 2-4 ಕಿ.ಮೀ.ಗೆ, ದರವನ್ನು 20 ರೂ.ಗೆ ಮತ್ತು 4-6 ಕಿ.ಮೀ.ಗೆ 30 ರೂ.ಗೆ ಹೆಚ್ಚಿಸಲಾಗಿದೆ. 6-8 ಕಿ.ಮೀ.ಗೆ, ಪ್ರಯಾಣಿಕರು 40 ರೂ. ಪಾವತಿಸಬೇಕಾಗುತ್ತದೆ. 8-10 ಕಿ.ಮೀ. ಪ್ರಯಾಣಿಸುವವರು 50 ರೂ. ಪಾವತಿಸಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10-15 ಕಿ.ಮೀ.ಗೆ ದರ 60 ರೂ., ಮತ್ತು 15-20 ಕಿ.ಮೀ.ಗೆ 70 ರೂ. 20-25 ಕಿ.ಮೀ.ಗೆ 80 ರೂ., ಮತ್ತು 25-30 ಕಿ.ಮೀ.ಗೆ 90 ರೂ. 30 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ 90 ರೂ. ದರ ನಿಗದಿಪಡಿಸಲಾಗಿದೆ.

ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ 5% ರಿಯಾಯಿತಿ ಮುಂದುವರಿಯುತ್ತದೆ. ಆಫ್-ಪೀಕ್ ಸಮಯದಲ್ಲಿ ಹೆಚ್ಚುವರಿ 5% ರಿಯಾಯಿತಿ ನೀಡಲಾಗುತ್ತದೆ. ಮಧ್ಯಾಹ್ನದಿಂದ ಸಂಜೆ 4 ಗಂಟೆಯವರೆಗೆ ಮತ್ತು ವಾರದ ದಿನಗಳಲ್ಲಿ ರಾತ್ರಿ 9 ಗಂಟೆಯ ನಂತರ ಪ್ರಯಾಣಿಸುವವರಿಗೆ ಒಟ್ಟು ರಿಯಾಯಿತಿ 10% ಕ್ಕೆ ಇಳಿಯುತ್ತದೆ.

ಇದಲ್ಲದೆ, ಸ್ಮಾರ್ಟ್ ಕಾರ್ಡ್ ಬಳಕೆದಾರರು ಭಾನುವಾರ ಮತ್ತು ರಾಷ್ಟ್ರೀಯ ರಜಾದಿನಗಳಾದ ಜನವರಿ 26, ಆಗಸ್ಟ್ 15 ಮತ್ತು ಅಕ್ಟೋಬರ್ 2 ರಂದು ದಿನವಿಡೀ 10% ರಿಯಾಯಿತಿಯನ್ನು ಪಡೆಯುತ್ತಾರೆ. ಆದಾಗ್ಯೂ, ಸ್ಮಾರ್ಟ್ ಕಾರ್ಡ್ ಬಳಕೆದಾರರು ಕನಿಷ್ಠ 90 ರೂ. (ಈ ಹಿಂದೆ ರೂ. 50 ಇರಬೇಕಾಗಿತ್ತು) ಬ್ಯಾಲೆನ್ಸ್ ಕಾಯ್ದುಕೊಳ್ಳಬೇಕಾಗಿದೆ. QR ಕೋಡ್‌ಗಳನ್ನು ಬಳಸುವವರಿಗೆ ರಿಯಾಯಿತಿ ಅನ್ವಯಿಸುವುದಿಲ್ಲ.

ಪ್ರವಾಸಿ ಮತ್ತು ಗುಂಪು ಟಿಕೆಟ್ ದರಗಳನ್ನು ಸಹ ಪರಿಷ್ಕರಿಸಲಾಗಿದ್ದು, ಒಂದು ದಿನದ ಪ್ರವಾಸಿ ಕಾರ್ಡ್ ಈಗ ರೂ. 300 ಆಗಿದ್ದರೆ, ಮೂರು ದಿನಗಳ ಕಾರ್ಡ್ ರೂ. 600 ಆಗಲಿದೆ. ಐದು ದಿನಗಳ ಪ್ರವಾಸಿ ಕಾರ್ಡ್ ರೂ. 800 ಆಗಲಿದೆ. ಗುಂಪು ಬುಕಿಂಗ್‌ಗಾಗಿ, ಪ್ರಯಾಣಿಕರು ಗುಂಪಿನ ಗಾತ್ರವನ್ನು ಆಧರಿಸಿ ರಿಯಾಯಿತಿಗಳನ್ನು ಪಡೆಯಲಿದ್ದಾರೆ. 25-99 ಗುಂಪುಗಳಿಗೆ 15% ರಿಯಾಯಿತಿ ಮತ್ತು 100-1,000 ಕ್ಕಿಂತ ಹೆಚ್ಚಿನ ಗುಂಪುಗಳಿಗೆ 20% ರಿಯಾಯಿತಿ ದೊರೆಯುತ್ತದೆ. 1,000 ಕ್ಕಿಂತ ಹೆಚ್ಚಿನ ಗುಂಪುಗಳಿಗೆ 25% ರಿಯಾಯಿತಿ ದೊರೆಯಲಿದೆ.

ಪ್ರಯಾಣ ದರ ಏರಿಕೆಗೆ ಪ್ರಯಾಣಿಕರ ಅಕ್ರೋಶ

“ಗುಂಪುಗಳಲ್ಲಿ ಪ್ರಯಾಣಿಸುವ ಜನರು (ಎರಡಕ್ಕಿಂತ ಹೆಚ್ಚು) ಈಗ ತಮ್ಮ ಕಾರು ಅಥವಾ ಕ್ಯಾಬ್‌ಗಳಲ್ಲಿ ಪ್ರಯಾಣ ಮಾಡುವುದು ಒಳ್ಳೆಯದು. ಯಾಕೆಂದರೆ ಮೆಟ್ರೋದಲ್ಲಿ ಅವರ ಒಟ್ಟು ಪ್ರಯಾಣ ದರವು ಒಂದೇ ಆಗಿರುತ್ತದೆ ಅಥವಾ ಅದಕ್ಕಿಂತ ಕಡಿಮೆ ಇರುತ್ತದೆ” ಎಂದು ಮೊಬಿಲಿಟಿ ತಜ್ಞ ಸಂಜೀವ್ ದ್ಯಾಮನ್ನವರ್ ಹೇಳಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯವನ್ನು ಒದಗಿಸುತ್ತಿರುವುದರ ಜೊತೆಗೆ ಮೆಟ್ರೋ ಪ್ರಯಾಣ ದರಗಳನ್ನು ಹೆಚ್ಚಿಸುತ್ತಿರುವುದರ ಬಗ್ಗೆ ಅವರು ಸರ್ಕಾರವನ್ನು ಟೀಕಿಸಿದ್ದಾರೆ.

ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿರುವ ಹಲವಾರು ಪ್ರಯಾಣಿಕರು ”ನಮ್ಮ ಮೆಟ್ರೋ”ವನ್ನು ಭಾರತದ ಅತ್ಯಂತ ದುಬಾರಿ ಮೆಟ್ರೋ ಸೇವೆ ಎಂದು ಕರೆದಿದ್ದಾರೆ.

ಯಶವಂತಪುರದಿಂದ ಬೈಯಪ್ಪನಹಳ್ಳಿಗೆ ಪ್ರತಿದಿನ ಪ್ರಯಾಣಿಸುವ ಐಟಿ ಉದ್ಯೋಗಿ ಮೇಘಾ ಪ್ರತಿಕ್ರಿಯಿಸಿ, “ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಬದಲು, ‘ನಮ್ಮ ಮೆಟ್ರೋ’ವನ್ನು ಭವಿಷ್ಯದಲ್ಲಿ ಕಡಿಮೆ ಬಳಕೆ ಮಾಡುವಂತೆ ಮಾಡುತ್ತಿದೆ. ಅದಕ್ಕಾಗಿ ಶುಲ್ಕ ಪರಿಷ್ಕರಣಾ ಸಮಿತಿ ಶ್ರಮಿಸಿದೆ ಎಂದು ತೋರುತ್ತದೆ. ದರ ಏರಿಕೆಯನ್ನು ನಿರೀಕ್ಷಿಸಲಾಗಿತ್ತು, ಆದರೆ ಈ ಮಟ್ಟಿನ ಹೆಚ್ಚಳವನ್ನಲ್ಲ. ಈ ಹೆಚ್ಚಳವು ಅತಿಯಾಗಿದ್ದು, ಸಾಮಾನ್ಯ ಜನರಿಗೆ ಅದನ್ನು ಭರಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

“ಈ ಮಟ್ಟಿನ ದರ ಏರಿಕೆಯಾದರೆ ಜನಸಾಮಾನ್ಯರು ಏನು ಮಾಡಬೇಕು? ನಾವು ಮೆಟ್ರೋ ಬಳಸುವುದನ್ನು ನಿಲ್ಲಿಸುತ್ತೇವೆ. ಹೆಚ್ಚಿನ ಸಾಲ ಮರುಪಾವತಿಯ ಹೊರೆಯನ್ನು ರಾಜ್ಯ ಸರ್ಕಾರ ಹೊರಲಿ” ಎಂದು ಕಾರ್ಪೊರೇಟ್ ಸಂಸ್ಥೆಯ ಆಶಿಶ್ ಹೇಳಿದ್ದಾರೆ. ಈಗ ನಮಗೆ ಇರುವ ಏಕೈಕ ಮಾರ್ಗವೆಂದರೆ ಬಿಎಂಟಿಸಿ ಬಸ್‌ಗಳನ್ನು ಬಳಸುವುದು ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್, ಪ್ರಯಾಣ ದರ ಏರಿಕೆಗೆ ಬಿಎಂಆರ್‌ಸಿಎಲ್ ಅನ್ನು ಟೀಕಿಸಿದ್ದು, ಇದು ಪ್ರಯಾಣಿಕರ ಮೇಲೆ ಹೊರೆಯಾಗಲಿದೆ ಎಂದು ಹೇಳಿದ್ದಾರೆ. ಈ ಮಟ್ಟಿನ ದರ ಏರಿಕೆಯು ಜನರು ಖಾಸಗಿ ವಾಹನಗಳತ್ತ ಹೊರಳುವಂತೆ ಮಾಡುತ್ತದೆ ಹಾಗೂ ಇದರಿಂದಾಗಿ ದಟ್ಟಣೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. “ಸಾರ್ವಜನಿಕ ಸಾರಿಗೆ ಕೈಗೆಟುಕುವ ದರದಲ್ಲಿರಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂಓದಿ:  ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...