Homeಕರ್ನಾಟಕಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

ಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

- Advertisement -
- Advertisement -

ಬೆಂಗಳೂರು ‘ನಮ್ಮ ಮೆಟ್ರೋ’ ರೈಲು ಪ್ರಯಾಣಿಕರ ದರ ಗರಿಷ್ಠ 50%ದಷ್ಟು ಏರಿಕೆಯಾಗಿದ್ದು, ಭಾನುವಾರದಿಂದ ಪ್ರಯಾಣಿಕರು ಪರಿಷ್ಕೃತ ದರ ಪಾವತಿಸಬೇಕಾಗುತ್ತದೆ ಎಂದು ವರದಿಯಗಿದೆ. ಕನಿಷ್ಠ ದರ 10 ರೂ. ಹಾಗೆ ಉಳಿದಿದ್ದು, ಗರಿಷ್ಠ ದರವು ಶೇ. 50 ರಷ್ಟು ಏರಿಕೆಯಾಗಿದೆ.

ಸುಮಾರು ಎಂಟು ವರ್ಷಗಳ ನಂತರ ದರ ನಿಗದಿ ಸಮಿತಿಯ (ಎಫ್‌ಎಫ್‌ಸಿ) ಶಿಫಾರಸುಗಳ ಆಧಾರದ ಮೇಲೆ ನಮ್ಮ ಮೆಟ್ರೋವನ್ನು ನಿರ್ವಹಿಸುವ ಬಿಎಂಆರ್‌ಸಿಎಲ್ ದರಗಳನ್ನು ಪರಿಷ್ಕರಿಸಿದೆ. ದರ ಪರಿಷ್ಕರಣೆಯ ನಂತರ 60 ರೂ.ಗಳ ಹಿಂದಿನ ದರವೂ ಈಗ 90 ರೂ.ಗೆ ತಲುಪಿದೆ. ಬೆಂಗಳೂರು

0-2 ಕಿ.ಮೀ ವರೆಗಿನ ದೂರಕ್ಕೆ, ಪ್ರಯಾಣಿಕರು ಕನಿಷ್ಠ 10 ರೂ. ಪಾವತಿಸುವುದು ಮುಂದುವರಿಯಲಿದೆ. 2-4 ಕಿ.ಮೀ.ಗೆ, ದರವನ್ನು 20 ರೂ.ಗೆ ಮತ್ತು 4-6 ಕಿ.ಮೀ.ಗೆ 30 ರೂ.ಗೆ ಹೆಚ್ಚಿಸಲಾಗಿದೆ. 6-8 ಕಿ.ಮೀ.ಗೆ, ಪ್ರಯಾಣಿಕರು 40 ರೂ. ಪಾವತಿಸಬೇಕಾಗುತ್ತದೆ. 8-10 ಕಿ.ಮೀ. ಪ್ರಯಾಣಿಸುವವರು 50 ರೂ. ಪಾವತಿಸಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10-15 ಕಿ.ಮೀ.ಗೆ ದರ 60 ರೂ., ಮತ್ತು 15-20 ಕಿ.ಮೀ.ಗೆ 70 ರೂ. 20-25 ಕಿ.ಮೀ.ಗೆ 80 ರೂ., ಮತ್ತು 25-30 ಕಿ.ಮೀ.ಗೆ 90 ರೂ. 30 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ 90 ರೂ. ದರ ನಿಗದಿಪಡಿಸಲಾಗಿದೆ.

ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ 5% ರಿಯಾಯಿತಿ ಮುಂದುವರಿಯುತ್ತದೆ. ಆಫ್-ಪೀಕ್ ಸಮಯದಲ್ಲಿ ಹೆಚ್ಚುವರಿ 5% ರಿಯಾಯಿತಿ ನೀಡಲಾಗುತ್ತದೆ. ಮಧ್ಯಾಹ್ನದಿಂದ ಸಂಜೆ 4 ಗಂಟೆಯವರೆಗೆ ಮತ್ತು ವಾರದ ದಿನಗಳಲ್ಲಿ ರಾತ್ರಿ 9 ಗಂಟೆಯ ನಂತರ ಪ್ರಯಾಣಿಸುವವರಿಗೆ ಒಟ್ಟು ರಿಯಾಯಿತಿ 10% ಕ್ಕೆ ಇಳಿಯುತ್ತದೆ.

ಇದಲ್ಲದೆ, ಸ್ಮಾರ್ಟ್ ಕಾರ್ಡ್ ಬಳಕೆದಾರರು ಭಾನುವಾರ ಮತ್ತು ರಾಷ್ಟ್ರೀಯ ರಜಾದಿನಗಳಾದ ಜನವರಿ 26, ಆಗಸ್ಟ್ 15 ಮತ್ತು ಅಕ್ಟೋಬರ್ 2 ರಂದು ದಿನವಿಡೀ 10% ರಿಯಾಯಿತಿಯನ್ನು ಪಡೆಯುತ್ತಾರೆ. ಆದಾಗ್ಯೂ, ಸ್ಮಾರ್ಟ್ ಕಾರ್ಡ್ ಬಳಕೆದಾರರು ಕನಿಷ್ಠ 90 ರೂ. (ಈ ಹಿಂದೆ ರೂ. 50 ಇರಬೇಕಾಗಿತ್ತು) ಬ್ಯಾಲೆನ್ಸ್ ಕಾಯ್ದುಕೊಳ್ಳಬೇಕಾಗಿದೆ. QR ಕೋಡ್‌ಗಳನ್ನು ಬಳಸುವವರಿಗೆ ರಿಯಾಯಿತಿ ಅನ್ವಯಿಸುವುದಿಲ್ಲ.

ಪ್ರವಾಸಿ ಮತ್ತು ಗುಂಪು ಟಿಕೆಟ್ ದರಗಳನ್ನು ಸಹ ಪರಿಷ್ಕರಿಸಲಾಗಿದ್ದು, ಒಂದು ದಿನದ ಪ್ರವಾಸಿ ಕಾರ್ಡ್ ಈಗ ರೂ. 300 ಆಗಿದ್ದರೆ, ಮೂರು ದಿನಗಳ ಕಾರ್ಡ್ ರೂ. 600 ಆಗಲಿದೆ. ಐದು ದಿನಗಳ ಪ್ರವಾಸಿ ಕಾರ್ಡ್ ರೂ. 800 ಆಗಲಿದೆ. ಗುಂಪು ಬುಕಿಂಗ್‌ಗಾಗಿ, ಪ್ರಯಾಣಿಕರು ಗುಂಪಿನ ಗಾತ್ರವನ್ನು ಆಧರಿಸಿ ರಿಯಾಯಿತಿಗಳನ್ನು ಪಡೆಯಲಿದ್ದಾರೆ. 25-99 ಗುಂಪುಗಳಿಗೆ 15% ರಿಯಾಯಿತಿ ಮತ್ತು 100-1,000 ಕ್ಕಿಂತ ಹೆಚ್ಚಿನ ಗುಂಪುಗಳಿಗೆ 20% ರಿಯಾಯಿತಿ ದೊರೆಯುತ್ತದೆ. 1,000 ಕ್ಕಿಂತ ಹೆಚ್ಚಿನ ಗುಂಪುಗಳಿಗೆ 25% ರಿಯಾಯಿತಿ ದೊರೆಯಲಿದೆ.

ಪ್ರಯಾಣ ದರ ಏರಿಕೆಗೆ ಪ್ರಯಾಣಿಕರ ಅಕ್ರೋಶ

“ಗುಂಪುಗಳಲ್ಲಿ ಪ್ರಯಾಣಿಸುವ ಜನರು (ಎರಡಕ್ಕಿಂತ ಹೆಚ್ಚು) ಈಗ ತಮ್ಮ ಕಾರು ಅಥವಾ ಕ್ಯಾಬ್‌ಗಳಲ್ಲಿ ಪ್ರಯಾಣ ಮಾಡುವುದು ಒಳ್ಳೆಯದು. ಯಾಕೆಂದರೆ ಮೆಟ್ರೋದಲ್ಲಿ ಅವರ ಒಟ್ಟು ಪ್ರಯಾಣ ದರವು ಒಂದೇ ಆಗಿರುತ್ತದೆ ಅಥವಾ ಅದಕ್ಕಿಂತ ಕಡಿಮೆ ಇರುತ್ತದೆ” ಎಂದು ಮೊಬಿಲಿಟಿ ತಜ್ಞ ಸಂಜೀವ್ ದ್ಯಾಮನ್ನವರ್ ಹೇಳಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯವನ್ನು ಒದಗಿಸುತ್ತಿರುವುದರ ಜೊತೆಗೆ ಮೆಟ್ರೋ ಪ್ರಯಾಣ ದರಗಳನ್ನು ಹೆಚ್ಚಿಸುತ್ತಿರುವುದರ ಬಗ್ಗೆ ಅವರು ಸರ್ಕಾರವನ್ನು ಟೀಕಿಸಿದ್ದಾರೆ.

ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿರುವ ಹಲವಾರು ಪ್ರಯಾಣಿಕರು ”ನಮ್ಮ ಮೆಟ್ರೋ”ವನ್ನು ಭಾರತದ ಅತ್ಯಂತ ದುಬಾರಿ ಮೆಟ್ರೋ ಸೇವೆ ಎಂದು ಕರೆದಿದ್ದಾರೆ.

ಯಶವಂತಪುರದಿಂದ ಬೈಯಪ್ಪನಹಳ್ಳಿಗೆ ಪ್ರತಿದಿನ ಪ್ರಯಾಣಿಸುವ ಐಟಿ ಉದ್ಯೋಗಿ ಮೇಘಾ ಪ್ರತಿಕ್ರಿಯಿಸಿ, “ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಬದಲು, ‘ನಮ್ಮ ಮೆಟ್ರೋ’ವನ್ನು ಭವಿಷ್ಯದಲ್ಲಿ ಕಡಿಮೆ ಬಳಕೆ ಮಾಡುವಂತೆ ಮಾಡುತ್ತಿದೆ. ಅದಕ್ಕಾಗಿ ಶುಲ್ಕ ಪರಿಷ್ಕರಣಾ ಸಮಿತಿ ಶ್ರಮಿಸಿದೆ ಎಂದು ತೋರುತ್ತದೆ. ದರ ಏರಿಕೆಯನ್ನು ನಿರೀಕ್ಷಿಸಲಾಗಿತ್ತು, ಆದರೆ ಈ ಮಟ್ಟಿನ ಹೆಚ್ಚಳವನ್ನಲ್ಲ. ಈ ಹೆಚ್ಚಳವು ಅತಿಯಾಗಿದ್ದು, ಸಾಮಾನ್ಯ ಜನರಿಗೆ ಅದನ್ನು ಭರಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

“ಈ ಮಟ್ಟಿನ ದರ ಏರಿಕೆಯಾದರೆ ಜನಸಾಮಾನ್ಯರು ಏನು ಮಾಡಬೇಕು? ನಾವು ಮೆಟ್ರೋ ಬಳಸುವುದನ್ನು ನಿಲ್ಲಿಸುತ್ತೇವೆ. ಹೆಚ್ಚಿನ ಸಾಲ ಮರುಪಾವತಿಯ ಹೊರೆಯನ್ನು ರಾಜ್ಯ ಸರ್ಕಾರ ಹೊರಲಿ” ಎಂದು ಕಾರ್ಪೊರೇಟ್ ಸಂಸ್ಥೆಯ ಆಶಿಶ್ ಹೇಳಿದ್ದಾರೆ. ಈಗ ನಮಗೆ ಇರುವ ಏಕೈಕ ಮಾರ್ಗವೆಂದರೆ ಬಿಎಂಟಿಸಿ ಬಸ್‌ಗಳನ್ನು ಬಳಸುವುದು ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್, ಪ್ರಯಾಣ ದರ ಏರಿಕೆಗೆ ಬಿಎಂಆರ್‌ಸಿಎಲ್ ಅನ್ನು ಟೀಕಿಸಿದ್ದು, ಇದು ಪ್ರಯಾಣಿಕರ ಮೇಲೆ ಹೊರೆಯಾಗಲಿದೆ ಎಂದು ಹೇಳಿದ್ದಾರೆ. ಈ ಮಟ್ಟಿನ ದರ ಏರಿಕೆಯು ಜನರು ಖಾಸಗಿ ವಾಹನಗಳತ್ತ ಹೊರಳುವಂತೆ ಮಾಡುತ್ತದೆ ಹಾಗೂ ಇದರಿಂದಾಗಿ ದಟ್ಟಣೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. “ಸಾರ್ವಜನಿಕ ಸಾರಿಗೆ ಕೈಗೆಟುಕುವ ದರದಲ್ಲಿರಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂಓದಿ:  ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....