Homeಕರ್ನಾಟಕಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

ಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

- Advertisement -
- Advertisement -

ಬೆಂಗಳೂರು ‘ನಮ್ಮ ಮೆಟ್ರೋ’ ರೈಲು ಪ್ರಯಾಣಿಕರ ದರ ಗರಿಷ್ಠ 50%ದಷ್ಟು ಏರಿಕೆಯಾಗಿದ್ದು, ಭಾನುವಾರದಿಂದ ಪ್ರಯಾಣಿಕರು ಪರಿಷ್ಕೃತ ದರ ಪಾವತಿಸಬೇಕಾಗುತ್ತದೆ ಎಂದು ವರದಿಯಗಿದೆ. ಕನಿಷ್ಠ ದರ 10 ರೂ. ಹಾಗೆ ಉಳಿದಿದ್ದು, ಗರಿಷ್ಠ ದರವು ಶೇ. 50 ರಷ್ಟು ಏರಿಕೆಯಾಗಿದೆ.

ಸುಮಾರು ಎಂಟು ವರ್ಷಗಳ ನಂತರ ದರ ನಿಗದಿ ಸಮಿತಿಯ (ಎಫ್‌ಎಫ್‌ಸಿ) ಶಿಫಾರಸುಗಳ ಆಧಾರದ ಮೇಲೆ ನಮ್ಮ ಮೆಟ್ರೋವನ್ನು ನಿರ್ವಹಿಸುವ ಬಿಎಂಆರ್‌ಸಿಎಲ್ ದರಗಳನ್ನು ಪರಿಷ್ಕರಿಸಿದೆ. ದರ ಪರಿಷ್ಕರಣೆಯ ನಂತರ 60 ರೂ.ಗಳ ಹಿಂದಿನ ದರವೂ ಈಗ 90 ರೂ.ಗೆ ತಲುಪಿದೆ. ಬೆಂಗಳೂರು

0-2 ಕಿ.ಮೀ ವರೆಗಿನ ದೂರಕ್ಕೆ, ಪ್ರಯಾಣಿಕರು ಕನಿಷ್ಠ 10 ರೂ. ಪಾವತಿಸುವುದು ಮುಂದುವರಿಯಲಿದೆ. 2-4 ಕಿ.ಮೀ.ಗೆ, ದರವನ್ನು 20 ರೂ.ಗೆ ಮತ್ತು 4-6 ಕಿ.ಮೀ.ಗೆ 30 ರೂ.ಗೆ ಹೆಚ್ಚಿಸಲಾಗಿದೆ. 6-8 ಕಿ.ಮೀ.ಗೆ, ಪ್ರಯಾಣಿಕರು 40 ರೂ. ಪಾವತಿಸಬೇಕಾಗುತ್ತದೆ. 8-10 ಕಿ.ಮೀ. ಪ್ರಯಾಣಿಸುವವರು 50 ರೂ. ಪಾವತಿಸಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10-15 ಕಿ.ಮೀ.ಗೆ ದರ 60 ರೂ., ಮತ್ತು 15-20 ಕಿ.ಮೀ.ಗೆ 70 ರೂ. 20-25 ಕಿ.ಮೀ.ಗೆ 80 ರೂ., ಮತ್ತು 25-30 ಕಿ.ಮೀ.ಗೆ 90 ರೂ. 30 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ 90 ರೂ. ದರ ನಿಗದಿಪಡಿಸಲಾಗಿದೆ.

ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ 5% ರಿಯಾಯಿತಿ ಮುಂದುವರಿಯುತ್ತದೆ. ಆಫ್-ಪೀಕ್ ಸಮಯದಲ್ಲಿ ಹೆಚ್ಚುವರಿ 5% ರಿಯಾಯಿತಿ ನೀಡಲಾಗುತ್ತದೆ. ಮಧ್ಯಾಹ್ನದಿಂದ ಸಂಜೆ 4 ಗಂಟೆಯವರೆಗೆ ಮತ್ತು ವಾರದ ದಿನಗಳಲ್ಲಿ ರಾತ್ರಿ 9 ಗಂಟೆಯ ನಂತರ ಪ್ರಯಾಣಿಸುವವರಿಗೆ ಒಟ್ಟು ರಿಯಾಯಿತಿ 10% ಕ್ಕೆ ಇಳಿಯುತ್ತದೆ.

ಇದಲ್ಲದೆ, ಸ್ಮಾರ್ಟ್ ಕಾರ್ಡ್ ಬಳಕೆದಾರರು ಭಾನುವಾರ ಮತ್ತು ರಾಷ್ಟ್ರೀಯ ರಜಾದಿನಗಳಾದ ಜನವರಿ 26, ಆಗಸ್ಟ್ 15 ಮತ್ತು ಅಕ್ಟೋಬರ್ 2 ರಂದು ದಿನವಿಡೀ 10% ರಿಯಾಯಿತಿಯನ್ನು ಪಡೆಯುತ್ತಾರೆ. ಆದಾಗ್ಯೂ, ಸ್ಮಾರ್ಟ್ ಕಾರ್ಡ್ ಬಳಕೆದಾರರು ಕನಿಷ್ಠ 90 ರೂ. (ಈ ಹಿಂದೆ ರೂ. 50 ಇರಬೇಕಾಗಿತ್ತು) ಬ್ಯಾಲೆನ್ಸ್ ಕಾಯ್ದುಕೊಳ್ಳಬೇಕಾಗಿದೆ. QR ಕೋಡ್‌ಗಳನ್ನು ಬಳಸುವವರಿಗೆ ರಿಯಾಯಿತಿ ಅನ್ವಯಿಸುವುದಿಲ್ಲ.

ಪ್ರವಾಸಿ ಮತ್ತು ಗುಂಪು ಟಿಕೆಟ್ ದರಗಳನ್ನು ಸಹ ಪರಿಷ್ಕರಿಸಲಾಗಿದ್ದು, ಒಂದು ದಿನದ ಪ್ರವಾಸಿ ಕಾರ್ಡ್ ಈಗ ರೂ. 300 ಆಗಿದ್ದರೆ, ಮೂರು ದಿನಗಳ ಕಾರ್ಡ್ ರೂ. 600 ಆಗಲಿದೆ. ಐದು ದಿನಗಳ ಪ್ರವಾಸಿ ಕಾರ್ಡ್ ರೂ. 800 ಆಗಲಿದೆ. ಗುಂಪು ಬುಕಿಂಗ್‌ಗಾಗಿ, ಪ್ರಯಾಣಿಕರು ಗುಂಪಿನ ಗಾತ್ರವನ್ನು ಆಧರಿಸಿ ರಿಯಾಯಿತಿಗಳನ್ನು ಪಡೆಯಲಿದ್ದಾರೆ. 25-99 ಗುಂಪುಗಳಿಗೆ 15% ರಿಯಾಯಿತಿ ಮತ್ತು 100-1,000 ಕ್ಕಿಂತ ಹೆಚ್ಚಿನ ಗುಂಪುಗಳಿಗೆ 20% ರಿಯಾಯಿತಿ ದೊರೆಯುತ್ತದೆ. 1,000 ಕ್ಕಿಂತ ಹೆಚ್ಚಿನ ಗುಂಪುಗಳಿಗೆ 25% ರಿಯಾಯಿತಿ ದೊರೆಯಲಿದೆ.

ಪ್ರಯಾಣ ದರ ಏರಿಕೆಗೆ ಪ್ರಯಾಣಿಕರ ಅಕ್ರೋಶ

“ಗುಂಪುಗಳಲ್ಲಿ ಪ್ರಯಾಣಿಸುವ ಜನರು (ಎರಡಕ್ಕಿಂತ ಹೆಚ್ಚು) ಈಗ ತಮ್ಮ ಕಾರು ಅಥವಾ ಕ್ಯಾಬ್‌ಗಳಲ್ಲಿ ಪ್ರಯಾಣ ಮಾಡುವುದು ಒಳ್ಳೆಯದು. ಯಾಕೆಂದರೆ ಮೆಟ್ರೋದಲ್ಲಿ ಅವರ ಒಟ್ಟು ಪ್ರಯಾಣ ದರವು ಒಂದೇ ಆಗಿರುತ್ತದೆ ಅಥವಾ ಅದಕ್ಕಿಂತ ಕಡಿಮೆ ಇರುತ್ತದೆ” ಎಂದು ಮೊಬಿಲಿಟಿ ತಜ್ಞ ಸಂಜೀವ್ ದ್ಯಾಮನ್ನವರ್ ಹೇಳಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯವನ್ನು ಒದಗಿಸುತ್ತಿರುವುದರ ಜೊತೆಗೆ ಮೆಟ್ರೋ ಪ್ರಯಾಣ ದರಗಳನ್ನು ಹೆಚ್ಚಿಸುತ್ತಿರುವುದರ ಬಗ್ಗೆ ಅವರು ಸರ್ಕಾರವನ್ನು ಟೀಕಿಸಿದ್ದಾರೆ.

ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿರುವ ಹಲವಾರು ಪ್ರಯಾಣಿಕರು ”ನಮ್ಮ ಮೆಟ್ರೋ”ವನ್ನು ಭಾರತದ ಅತ್ಯಂತ ದುಬಾರಿ ಮೆಟ್ರೋ ಸೇವೆ ಎಂದು ಕರೆದಿದ್ದಾರೆ.

ಯಶವಂತಪುರದಿಂದ ಬೈಯಪ್ಪನಹಳ್ಳಿಗೆ ಪ್ರತಿದಿನ ಪ್ರಯಾಣಿಸುವ ಐಟಿ ಉದ್ಯೋಗಿ ಮೇಘಾ ಪ್ರತಿಕ್ರಿಯಿಸಿ, “ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಬದಲು, ‘ನಮ್ಮ ಮೆಟ್ರೋ’ವನ್ನು ಭವಿಷ್ಯದಲ್ಲಿ ಕಡಿಮೆ ಬಳಕೆ ಮಾಡುವಂತೆ ಮಾಡುತ್ತಿದೆ. ಅದಕ್ಕಾಗಿ ಶುಲ್ಕ ಪರಿಷ್ಕರಣಾ ಸಮಿತಿ ಶ್ರಮಿಸಿದೆ ಎಂದು ತೋರುತ್ತದೆ. ದರ ಏರಿಕೆಯನ್ನು ನಿರೀಕ್ಷಿಸಲಾಗಿತ್ತು, ಆದರೆ ಈ ಮಟ್ಟಿನ ಹೆಚ್ಚಳವನ್ನಲ್ಲ. ಈ ಹೆಚ್ಚಳವು ಅತಿಯಾಗಿದ್ದು, ಸಾಮಾನ್ಯ ಜನರಿಗೆ ಅದನ್ನು ಭರಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

“ಈ ಮಟ್ಟಿನ ದರ ಏರಿಕೆಯಾದರೆ ಜನಸಾಮಾನ್ಯರು ಏನು ಮಾಡಬೇಕು? ನಾವು ಮೆಟ್ರೋ ಬಳಸುವುದನ್ನು ನಿಲ್ಲಿಸುತ್ತೇವೆ. ಹೆಚ್ಚಿನ ಸಾಲ ಮರುಪಾವತಿಯ ಹೊರೆಯನ್ನು ರಾಜ್ಯ ಸರ್ಕಾರ ಹೊರಲಿ” ಎಂದು ಕಾರ್ಪೊರೇಟ್ ಸಂಸ್ಥೆಯ ಆಶಿಶ್ ಹೇಳಿದ್ದಾರೆ. ಈಗ ನಮಗೆ ಇರುವ ಏಕೈಕ ಮಾರ್ಗವೆಂದರೆ ಬಿಎಂಟಿಸಿ ಬಸ್‌ಗಳನ್ನು ಬಳಸುವುದು ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್, ಪ್ರಯಾಣ ದರ ಏರಿಕೆಗೆ ಬಿಎಂಆರ್‌ಸಿಎಲ್ ಅನ್ನು ಟೀಕಿಸಿದ್ದು, ಇದು ಪ್ರಯಾಣಿಕರ ಮೇಲೆ ಹೊರೆಯಾಗಲಿದೆ ಎಂದು ಹೇಳಿದ್ದಾರೆ. ಈ ಮಟ್ಟಿನ ದರ ಏರಿಕೆಯು ಜನರು ಖಾಸಗಿ ವಾಹನಗಳತ್ತ ಹೊರಳುವಂತೆ ಮಾಡುತ್ತದೆ ಹಾಗೂ ಇದರಿಂದಾಗಿ ದಟ್ಟಣೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. “ಸಾರ್ವಜನಿಕ ಸಾರಿಗೆ ಕೈಗೆಟುಕುವ ದರದಲ್ಲಿರಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂಓದಿ:  ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...