Homeಕರ್ನಾಟಕಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

ಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

- Advertisement -
- Advertisement -

ಬೆಂಗಳೂರು ‘ನಮ್ಮ ಮೆಟ್ರೋ’ ರೈಲು ಪ್ರಯಾಣಿಕರ ದರ ಗರಿಷ್ಠ 50%ದಷ್ಟು ಏರಿಕೆಯಾಗಿದ್ದು, ಭಾನುವಾರದಿಂದ ಪ್ರಯಾಣಿಕರು ಪರಿಷ್ಕೃತ ದರ ಪಾವತಿಸಬೇಕಾಗುತ್ತದೆ ಎಂದು ವರದಿಯಗಿದೆ. ಕನಿಷ್ಠ ದರ 10 ರೂ. ಹಾಗೆ ಉಳಿದಿದ್ದು, ಗರಿಷ್ಠ ದರವು ಶೇ. 50 ರಷ್ಟು ಏರಿಕೆಯಾಗಿದೆ.

ಸುಮಾರು ಎಂಟು ವರ್ಷಗಳ ನಂತರ ದರ ನಿಗದಿ ಸಮಿತಿಯ (ಎಫ್‌ಎಫ್‌ಸಿ) ಶಿಫಾರಸುಗಳ ಆಧಾರದ ಮೇಲೆ ನಮ್ಮ ಮೆಟ್ರೋವನ್ನು ನಿರ್ವಹಿಸುವ ಬಿಎಂಆರ್‌ಸಿಎಲ್ ದರಗಳನ್ನು ಪರಿಷ್ಕರಿಸಿದೆ. ದರ ಪರಿಷ್ಕರಣೆಯ ನಂತರ 60 ರೂ.ಗಳ ಹಿಂದಿನ ದರವೂ ಈಗ 90 ರೂ.ಗೆ ತಲುಪಿದೆ. ಬೆಂಗಳೂರು

0-2 ಕಿ.ಮೀ ವರೆಗಿನ ದೂರಕ್ಕೆ, ಪ್ರಯಾಣಿಕರು ಕನಿಷ್ಠ 10 ರೂ. ಪಾವತಿಸುವುದು ಮುಂದುವರಿಯಲಿದೆ. 2-4 ಕಿ.ಮೀ.ಗೆ, ದರವನ್ನು 20 ರೂ.ಗೆ ಮತ್ತು 4-6 ಕಿ.ಮೀ.ಗೆ 30 ರೂ.ಗೆ ಹೆಚ್ಚಿಸಲಾಗಿದೆ. 6-8 ಕಿ.ಮೀ.ಗೆ, ಪ್ರಯಾಣಿಕರು 40 ರೂ. ಪಾವತಿಸಬೇಕಾಗುತ್ತದೆ. 8-10 ಕಿ.ಮೀ. ಪ್ರಯಾಣಿಸುವವರು 50 ರೂ. ಪಾವತಿಸಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10-15 ಕಿ.ಮೀ.ಗೆ ದರ 60 ರೂ., ಮತ್ತು 15-20 ಕಿ.ಮೀ.ಗೆ 70 ರೂ. 20-25 ಕಿ.ಮೀ.ಗೆ 80 ರೂ., ಮತ್ತು 25-30 ಕಿ.ಮೀ.ಗೆ 90 ರೂ. 30 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ 90 ರೂ. ದರ ನಿಗದಿಪಡಿಸಲಾಗಿದೆ.

ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ 5% ರಿಯಾಯಿತಿ ಮುಂದುವರಿಯುತ್ತದೆ. ಆಫ್-ಪೀಕ್ ಸಮಯದಲ್ಲಿ ಹೆಚ್ಚುವರಿ 5% ರಿಯಾಯಿತಿ ನೀಡಲಾಗುತ್ತದೆ. ಮಧ್ಯಾಹ್ನದಿಂದ ಸಂಜೆ 4 ಗಂಟೆಯವರೆಗೆ ಮತ್ತು ವಾರದ ದಿನಗಳಲ್ಲಿ ರಾತ್ರಿ 9 ಗಂಟೆಯ ನಂತರ ಪ್ರಯಾಣಿಸುವವರಿಗೆ ಒಟ್ಟು ರಿಯಾಯಿತಿ 10% ಕ್ಕೆ ಇಳಿಯುತ್ತದೆ.

ಇದಲ್ಲದೆ, ಸ್ಮಾರ್ಟ್ ಕಾರ್ಡ್ ಬಳಕೆದಾರರು ಭಾನುವಾರ ಮತ್ತು ರಾಷ್ಟ್ರೀಯ ರಜಾದಿನಗಳಾದ ಜನವರಿ 26, ಆಗಸ್ಟ್ 15 ಮತ್ತು ಅಕ್ಟೋಬರ್ 2 ರಂದು ದಿನವಿಡೀ 10% ರಿಯಾಯಿತಿಯನ್ನು ಪಡೆಯುತ್ತಾರೆ. ಆದಾಗ್ಯೂ, ಸ್ಮಾರ್ಟ್ ಕಾರ್ಡ್ ಬಳಕೆದಾರರು ಕನಿಷ್ಠ 90 ರೂ. (ಈ ಹಿಂದೆ ರೂ. 50 ಇರಬೇಕಾಗಿತ್ತು) ಬ್ಯಾಲೆನ್ಸ್ ಕಾಯ್ದುಕೊಳ್ಳಬೇಕಾಗಿದೆ. QR ಕೋಡ್‌ಗಳನ್ನು ಬಳಸುವವರಿಗೆ ರಿಯಾಯಿತಿ ಅನ್ವಯಿಸುವುದಿಲ್ಲ.

ಪ್ರವಾಸಿ ಮತ್ತು ಗುಂಪು ಟಿಕೆಟ್ ದರಗಳನ್ನು ಸಹ ಪರಿಷ್ಕರಿಸಲಾಗಿದ್ದು, ಒಂದು ದಿನದ ಪ್ರವಾಸಿ ಕಾರ್ಡ್ ಈಗ ರೂ. 300 ಆಗಿದ್ದರೆ, ಮೂರು ದಿನಗಳ ಕಾರ್ಡ್ ರೂ. 600 ಆಗಲಿದೆ. ಐದು ದಿನಗಳ ಪ್ರವಾಸಿ ಕಾರ್ಡ್ ರೂ. 800 ಆಗಲಿದೆ. ಗುಂಪು ಬುಕಿಂಗ್‌ಗಾಗಿ, ಪ್ರಯಾಣಿಕರು ಗುಂಪಿನ ಗಾತ್ರವನ್ನು ಆಧರಿಸಿ ರಿಯಾಯಿತಿಗಳನ್ನು ಪಡೆಯಲಿದ್ದಾರೆ. 25-99 ಗುಂಪುಗಳಿಗೆ 15% ರಿಯಾಯಿತಿ ಮತ್ತು 100-1,000 ಕ್ಕಿಂತ ಹೆಚ್ಚಿನ ಗುಂಪುಗಳಿಗೆ 20% ರಿಯಾಯಿತಿ ದೊರೆಯುತ್ತದೆ. 1,000 ಕ್ಕಿಂತ ಹೆಚ್ಚಿನ ಗುಂಪುಗಳಿಗೆ 25% ರಿಯಾಯಿತಿ ದೊರೆಯಲಿದೆ.

ಪ್ರಯಾಣ ದರ ಏರಿಕೆಗೆ ಪ್ರಯಾಣಿಕರ ಅಕ್ರೋಶ

“ಗುಂಪುಗಳಲ್ಲಿ ಪ್ರಯಾಣಿಸುವ ಜನರು (ಎರಡಕ್ಕಿಂತ ಹೆಚ್ಚು) ಈಗ ತಮ್ಮ ಕಾರು ಅಥವಾ ಕ್ಯಾಬ್‌ಗಳಲ್ಲಿ ಪ್ರಯಾಣ ಮಾಡುವುದು ಒಳ್ಳೆಯದು. ಯಾಕೆಂದರೆ ಮೆಟ್ರೋದಲ್ಲಿ ಅವರ ಒಟ್ಟು ಪ್ರಯಾಣ ದರವು ಒಂದೇ ಆಗಿರುತ್ತದೆ ಅಥವಾ ಅದಕ್ಕಿಂತ ಕಡಿಮೆ ಇರುತ್ತದೆ” ಎಂದು ಮೊಬಿಲಿಟಿ ತಜ್ಞ ಸಂಜೀವ್ ದ್ಯಾಮನ್ನವರ್ ಹೇಳಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯವನ್ನು ಒದಗಿಸುತ್ತಿರುವುದರ ಜೊತೆಗೆ ಮೆಟ್ರೋ ಪ್ರಯಾಣ ದರಗಳನ್ನು ಹೆಚ್ಚಿಸುತ್ತಿರುವುದರ ಬಗ್ಗೆ ಅವರು ಸರ್ಕಾರವನ್ನು ಟೀಕಿಸಿದ್ದಾರೆ.

ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿರುವ ಹಲವಾರು ಪ್ರಯಾಣಿಕರು ”ನಮ್ಮ ಮೆಟ್ರೋ”ವನ್ನು ಭಾರತದ ಅತ್ಯಂತ ದುಬಾರಿ ಮೆಟ್ರೋ ಸೇವೆ ಎಂದು ಕರೆದಿದ್ದಾರೆ.

ಯಶವಂತಪುರದಿಂದ ಬೈಯಪ್ಪನಹಳ್ಳಿಗೆ ಪ್ರತಿದಿನ ಪ್ರಯಾಣಿಸುವ ಐಟಿ ಉದ್ಯೋಗಿ ಮೇಘಾ ಪ್ರತಿಕ್ರಿಯಿಸಿ, “ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಬದಲು, ‘ನಮ್ಮ ಮೆಟ್ರೋ’ವನ್ನು ಭವಿಷ್ಯದಲ್ಲಿ ಕಡಿಮೆ ಬಳಕೆ ಮಾಡುವಂತೆ ಮಾಡುತ್ತಿದೆ. ಅದಕ್ಕಾಗಿ ಶುಲ್ಕ ಪರಿಷ್ಕರಣಾ ಸಮಿತಿ ಶ್ರಮಿಸಿದೆ ಎಂದು ತೋರುತ್ತದೆ. ದರ ಏರಿಕೆಯನ್ನು ನಿರೀಕ್ಷಿಸಲಾಗಿತ್ತು, ಆದರೆ ಈ ಮಟ್ಟಿನ ಹೆಚ್ಚಳವನ್ನಲ್ಲ. ಈ ಹೆಚ್ಚಳವು ಅತಿಯಾಗಿದ್ದು, ಸಾಮಾನ್ಯ ಜನರಿಗೆ ಅದನ್ನು ಭರಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

“ಈ ಮಟ್ಟಿನ ದರ ಏರಿಕೆಯಾದರೆ ಜನಸಾಮಾನ್ಯರು ಏನು ಮಾಡಬೇಕು? ನಾವು ಮೆಟ್ರೋ ಬಳಸುವುದನ್ನು ನಿಲ್ಲಿಸುತ್ತೇವೆ. ಹೆಚ್ಚಿನ ಸಾಲ ಮರುಪಾವತಿಯ ಹೊರೆಯನ್ನು ರಾಜ್ಯ ಸರ್ಕಾರ ಹೊರಲಿ” ಎಂದು ಕಾರ್ಪೊರೇಟ್ ಸಂಸ್ಥೆಯ ಆಶಿಶ್ ಹೇಳಿದ್ದಾರೆ. ಈಗ ನಮಗೆ ಇರುವ ಏಕೈಕ ಮಾರ್ಗವೆಂದರೆ ಬಿಎಂಟಿಸಿ ಬಸ್‌ಗಳನ್ನು ಬಳಸುವುದು ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್, ಪ್ರಯಾಣ ದರ ಏರಿಕೆಗೆ ಬಿಎಂಆರ್‌ಸಿಎಲ್ ಅನ್ನು ಟೀಕಿಸಿದ್ದು, ಇದು ಪ್ರಯಾಣಿಕರ ಮೇಲೆ ಹೊರೆಯಾಗಲಿದೆ ಎಂದು ಹೇಳಿದ್ದಾರೆ. ಈ ಮಟ್ಟಿನ ದರ ಏರಿಕೆಯು ಜನರು ಖಾಸಗಿ ವಾಹನಗಳತ್ತ ಹೊರಳುವಂತೆ ಮಾಡುತ್ತದೆ ಹಾಗೂ ಇದರಿಂದಾಗಿ ದಟ್ಟಣೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. “ಸಾರ್ವಜನಿಕ ಸಾರಿಗೆ ಕೈಗೆಟುಕುವ ದರದಲ್ಲಿರಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂಓದಿ:  ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...