Homeಕರ್ನಾಟಕಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

ಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

- Advertisement -
- Advertisement -

ಬೆಂಗಳೂರು ‘ನಮ್ಮ ಮೆಟ್ರೋ’ ರೈಲು ಪ್ರಯಾಣಿಕರ ದರ ಗರಿಷ್ಠ 50%ದಷ್ಟು ಏರಿಕೆಯಾಗಿದ್ದು, ಭಾನುವಾರದಿಂದ ಪ್ರಯಾಣಿಕರು ಪರಿಷ್ಕೃತ ದರ ಪಾವತಿಸಬೇಕಾಗುತ್ತದೆ ಎಂದು ವರದಿಯಗಿದೆ. ಕನಿಷ್ಠ ದರ 10 ರೂ. ಹಾಗೆ ಉಳಿದಿದ್ದು, ಗರಿಷ್ಠ ದರವು ಶೇ. 50 ರಷ್ಟು ಏರಿಕೆಯಾಗಿದೆ.

ಸುಮಾರು ಎಂಟು ವರ್ಷಗಳ ನಂತರ ದರ ನಿಗದಿ ಸಮಿತಿಯ (ಎಫ್‌ಎಫ್‌ಸಿ) ಶಿಫಾರಸುಗಳ ಆಧಾರದ ಮೇಲೆ ನಮ್ಮ ಮೆಟ್ರೋವನ್ನು ನಿರ್ವಹಿಸುವ ಬಿಎಂಆರ್‌ಸಿಎಲ್ ದರಗಳನ್ನು ಪರಿಷ್ಕರಿಸಿದೆ. ದರ ಪರಿಷ್ಕರಣೆಯ ನಂತರ 60 ರೂ.ಗಳ ಹಿಂದಿನ ದರವೂ ಈಗ 90 ರೂ.ಗೆ ತಲುಪಿದೆ. ಬೆಂಗಳೂರು

0-2 ಕಿ.ಮೀ ವರೆಗಿನ ದೂರಕ್ಕೆ, ಪ್ರಯಾಣಿಕರು ಕನಿಷ್ಠ 10 ರೂ. ಪಾವತಿಸುವುದು ಮುಂದುವರಿಯಲಿದೆ. 2-4 ಕಿ.ಮೀ.ಗೆ, ದರವನ್ನು 20 ರೂ.ಗೆ ಮತ್ತು 4-6 ಕಿ.ಮೀ.ಗೆ 30 ರೂ.ಗೆ ಹೆಚ್ಚಿಸಲಾಗಿದೆ. 6-8 ಕಿ.ಮೀ.ಗೆ, ಪ್ರಯಾಣಿಕರು 40 ರೂ. ಪಾವತಿಸಬೇಕಾಗುತ್ತದೆ. 8-10 ಕಿ.ಮೀ. ಪ್ರಯಾಣಿಸುವವರು 50 ರೂ. ಪಾವತಿಸಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10-15 ಕಿ.ಮೀ.ಗೆ ದರ 60 ರೂ., ಮತ್ತು 15-20 ಕಿ.ಮೀ.ಗೆ 70 ರೂ. 20-25 ಕಿ.ಮೀ.ಗೆ 80 ರೂ., ಮತ್ತು 25-30 ಕಿ.ಮೀ.ಗೆ 90 ರೂ. 30 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ 90 ರೂ. ದರ ನಿಗದಿಪಡಿಸಲಾಗಿದೆ.

ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ 5% ರಿಯಾಯಿತಿ ಮುಂದುವರಿಯುತ್ತದೆ. ಆಫ್-ಪೀಕ್ ಸಮಯದಲ್ಲಿ ಹೆಚ್ಚುವರಿ 5% ರಿಯಾಯಿತಿ ನೀಡಲಾಗುತ್ತದೆ. ಮಧ್ಯಾಹ್ನದಿಂದ ಸಂಜೆ 4 ಗಂಟೆಯವರೆಗೆ ಮತ್ತು ವಾರದ ದಿನಗಳಲ್ಲಿ ರಾತ್ರಿ 9 ಗಂಟೆಯ ನಂತರ ಪ್ರಯಾಣಿಸುವವರಿಗೆ ಒಟ್ಟು ರಿಯಾಯಿತಿ 10% ಕ್ಕೆ ಇಳಿಯುತ್ತದೆ.

ಇದಲ್ಲದೆ, ಸ್ಮಾರ್ಟ್ ಕಾರ್ಡ್ ಬಳಕೆದಾರರು ಭಾನುವಾರ ಮತ್ತು ರಾಷ್ಟ್ರೀಯ ರಜಾದಿನಗಳಾದ ಜನವರಿ 26, ಆಗಸ್ಟ್ 15 ಮತ್ತು ಅಕ್ಟೋಬರ್ 2 ರಂದು ದಿನವಿಡೀ 10% ರಿಯಾಯಿತಿಯನ್ನು ಪಡೆಯುತ್ತಾರೆ. ಆದಾಗ್ಯೂ, ಸ್ಮಾರ್ಟ್ ಕಾರ್ಡ್ ಬಳಕೆದಾರರು ಕನಿಷ್ಠ 90 ರೂ. (ಈ ಹಿಂದೆ ರೂ. 50 ಇರಬೇಕಾಗಿತ್ತು) ಬ್ಯಾಲೆನ್ಸ್ ಕಾಯ್ದುಕೊಳ್ಳಬೇಕಾಗಿದೆ. QR ಕೋಡ್‌ಗಳನ್ನು ಬಳಸುವವರಿಗೆ ರಿಯಾಯಿತಿ ಅನ್ವಯಿಸುವುದಿಲ್ಲ.

ಪ್ರವಾಸಿ ಮತ್ತು ಗುಂಪು ಟಿಕೆಟ್ ದರಗಳನ್ನು ಸಹ ಪರಿಷ್ಕರಿಸಲಾಗಿದ್ದು, ಒಂದು ದಿನದ ಪ್ರವಾಸಿ ಕಾರ್ಡ್ ಈಗ ರೂ. 300 ಆಗಿದ್ದರೆ, ಮೂರು ದಿನಗಳ ಕಾರ್ಡ್ ರೂ. 600 ಆಗಲಿದೆ. ಐದು ದಿನಗಳ ಪ್ರವಾಸಿ ಕಾರ್ಡ್ ರೂ. 800 ಆಗಲಿದೆ. ಗುಂಪು ಬುಕಿಂಗ್‌ಗಾಗಿ, ಪ್ರಯಾಣಿಕರು ಗುಂಪಿನ ಗಾತ್ರವನ್ನು ಆಧರಿಸಿ ರಿಯಾಯಿತಿಗಳನ್ನು ಪಡೆಯಲಿದ್ದಾರೆ. 25-99 ಗುಂಪುಗಳಿಗೆ 15% ರಿಯಾಯಿತಿ ಮತ್ತು 100-1,000 ಕ್ಕಿಂತ ಹೆಚ್ಚಿನ ಗುಂಪುಗಳಿಗೆ 20% ರಿಯಾಯಿತಿ ದೊರೆಯುತ್ತದೆ. 1,000 ಕ್ಕಿಂತ ಹೆಚ್ಚಿನ ಗುಂಪುಗಳಿಗೆ 25% ರಿಯಾಯಿತಿ ದೊರೆಯಲಿದೆ.

ಪ್ರಯಾಣ ದರ ಏರಿಕೆಗೆ ಪ್ರಯಾಣಿಕರ ಅಕ್ರೋಶ

“ಗುಂಪುಗಳಲ್ಲಿ ಪ್ರಯಾಣಿಸುವ ಜನರು (ಎರಡಕ್ಕಿಂತ ಹೆಚ್ಚು) ಈಗ ತಮ್ಮ ಕಾರು ಅಥವಾ ಕ್ಯಾಬ್‌ಗಳಲ್ಲಿ ಪ್ರಯಾಣ ಮಾಡುವುದು ಒಳ್ಳೆಯದು. ಯಾಕೆಂದರೆ ಮೆಟ್ರೋದಲ್ಲಿ ಅವರ ಒಟ್ಟು ಪ್ರಯಾಣ ದರವು ಒಂದೇ ಆಗಿರುತ್ತದೆ ಅಥವಾ ಅದಕ್ಕಿಂತ ಕಡಿಮೆ ಇರುತ್ತದೆ” ಎಂದು ಮೊಬಿಲಿಟಿ ತಜ್ಞ ಸಂಜೀವ್ ದ್ಯಾಮನ್ನವರ್ ಹೇಳಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯವನ್ನು ಒದಗಿಸುತ್ತಿರುವುದರ ಜೊತೆಗೆ ಮೆಟ್ರೋ ಪ್ರಯಾಣ ದರಗಳನ್ನು ಹೆಚ್ಚಿಸುತ್ತಿರುವುದರ ಬಗ್ಗೆ ಅವರು ಸರ್ಕಾರವನ್ನು ಟೀಕಿಸಿದ್ದಾರೆ.

ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿರುವ ಹಲವಾರು ಪ್ರಯಾಣಿಕರು ”ನಮ್ಮ ಮೆಟ್ರೋ”ವನ್ನು ಭಾರತದ ಅತ್ಯಂತ ದುಬಾರಿ ಮೆಟ್ರೋ ಸೇವೆ ಎಂದು ಕರೆದಿದ್ದಾರೆ.

ಯಶವಂತಪುರದಿಂದ ಬೈಯಪ್ಪನಹಳ್ಳಿಗೆ ಪ್ರತಿದಿನ ಪ್ರಯಾಣಿಸುವ ಐಟಿ ಉದ್ಯೋಗಿ ಮೇಘಾ ಪ್ರತಿಕ್ರಿಯಿಸಿ, “ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಬದಲು, ‘ನಮ್ಮ ಮೆಟ್ರೋ’ವನ್ನು ಭವಿಷ್ಯದಲ್ಲಿ ಕಡಿಮೆ ಬಳಕೆ ಮಾಡುವಂತೆ ಮಾಡುತ್ತಿದೆ. ಅದಕ್ಕಾಗಿ ಶುಲ್ಕ ಪರಿಷ್ಕರಣಾ ಸಮಿತಿ ಶ್ರಮಿಸಿದೆ ಎಂದು ತೋರುತ್ತದೆ. ದರ ಏರಿಕೆಯನ್ನು ನಿರೀಕ್ಷಿಸಲಾಗಿತ್ತು, ಆದರೆ ಈ ಮಟ್ಟಿನ ಹೆಚ್ಚಳವನ್ನಲ್ಲ. ಈ ಹೆಚ್ಚಳವು ಅತಿಯಾಗಿದ್ದು, ಸಾಮಾನ್ಯ ಜನರಿಗೆ ಅದನ್ನು ಭರಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

“ಈ ಮಟ್ಟಿನ ದರ ಏರಿಕೆಯಾದರೆ ಜನಸಾಮಾನ್ಯರು ಏನು ಮಾಡಬೇಕು? ನಾವು ಮೆಟ್ರೋ ಬಳಸುವುದನ್ನು ನಿಲ್ಲಿಸುತ್ತೇವೆ. ಹೆಚ್ಚಿನ ಸಾಲ ಮರುಪಾವತಿಯ ಹೊರೆಯನ್ನು ರಾಜ್ಯ ಸರ್ಕಾರ ಹೊರಲಿ” ಎಂದು ಕಾರ್ಪೊರೇಟ್ ಸಂಸ್ಥೆಯ ಆಶಿಶ್ ಹೇಳಿದ್ದಾರೆ. ಈಗ ನಮಗೆ ಇರುವ ಏಕೈಕ ಮಾರ್ಗವೆಂದರೆ ಬಿಎಂಟಿಸಿ ಬಸ್‌ಗಳನ್ನು ಬಳಸುವುದು ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್, ಪ್ರಯಾಣ ದರ ಏರಿಕೆಗೆ ಬಿಎಂಆರ್‌ಸಿಎಲ್ ಅನ್ನು ಟೀಕಿಸಿದ್ದು, ಇದು ಪ್ರಯಾಣಿಕರ ಮೇಲೆ ಹೊರೆಯಾಗಲಿದೆ ಎಂದು ಹೇಳಿದ್ದಾರೆ. ಈ ಮಟ್ಟಿನ ದರ ಏರಿಕೆಯು ಜನರು ಖಾಸಗಿ ವಾಹನಗಳತ್ತ ಹೊರಳುವಂತೆ ಮಾಡುತ್ತದೆ ಹಾಗೂ ಇದರಿಂದಾಗಿ ದಟ್ಟಣೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. “ಸಾರ್ವಜನಿಕ ಸಾರಿಗೆ ಕೈಗೆಟುಕುವ ದರದಲ್ಲಿರಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂಓದಿ:  ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...