Homeಕರ್ನಾಟಕಬೆಂಗಳೂರು: ಮಕ್ಕಳ ಕಿಡ್ನಾಪರ್‌‌ ಎಂದು ಶಂಕಿಸಿ ವಲಸೆ ಕಾರ್ಮಿಕನ ಕೊಲೆ; ಪೊಲೀಸರ ಹೇಳಿಕೆ

ಬೆಂಗಳೂರು: ಮಕ್ಕಳ ಕಿಡ್ನಾಪರ್‌‌ ಎಂದು ಶಂಕಿಸಿ ವಲಸೆ ಕಾರ್ಮಿಕನ ಕೊಲೆ; ಪೊಲೀಸರ ಹೇಳಿಕೆ

ಕಸ್ಟಡಿಯಲ್ಲಿ ಸಾವಾಗಿದೆ ಎಂಬುದನ್ನು ಬೆಂಗಳೂರು ಪೊಲೀಸರು ನಿರಾಕರಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಯನ್ನು ಉಲ್ಲೇಖಿಸಿದ್ದಾರೆ.

- Advertisement -
- Advertisement -

ಸೆಪ್ಟೆಂಬರ್ 24ರಂದು ಶವವಾಗಿ ಪತ್ತೆಯಾದ ವಲಸೆ ಕಾರ್ಮಿಕ, ಹಿಂದಿನ ರಾತ್ರಿ ನಡೆದಿದ್ದ ಗುಂಪು ದಾಳಿಯಿಂದಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಬೆಂಗಳೂರು ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

ಸೆಪ್ಟೆಂಬರ್ 23ರ ರಾತ್ರಿ ಕೆ.ಆರ್.ಪುರಂನ ರಸ್ತೆಬದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು. ಮಕ್ಕಳನ್ನು ಅಪರಿಸುವ ವ್ಯಕ್ತಿ ಈತನೆಂದು ಶಂಕಿಸಿದ ಜನರ ಗುಂಪು ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ.

ಡಿಸಿಪಿ (ವೈಟ್‌ಫೀಲ್ಡ್) ಎಸ್ ಗಿರೀಶ್ ಈ ಕುರಿತು ಮಾಹಿತಿ ನೀಡಿದ್ದು, “ಅಪರಿಚಿತ ವ್ಯಕ್ತಿಯ ದೇಹದ ಮೇಲೆ ಯಾವುದೇ ದೊಡ್ಡ ಗಾಯಗಳಿಲ್ಲದ ಕಾರಣ ಆರಂಭದಲ್ಲಿ ಸಿಆರ್‌ಪಿಸಿ 174 (ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪತ್ತೆಹಚ್ಚಿದ್ದರು. ಆರು ಜನರ ಗುಂಪು ವಲಸೆ ಕಾರ್ಮಿಕ ಮೇಲೆ ಹಲ್ಲೆ ನಡೆಸಿರುವುದು ಕಂಡು ಬಂದಿತು. ಹಲ್ಲೆಯಿಂದ ಉಂಟಾದ ಗಾಯಗಳಿಂದಾಗಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಮರಣೋತ್ತರ ವರದಿ ಬಂದಿದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶ್ರೀನಿ ಮತ್ತು ಯಾಸೀನ್ ಸೇರಿದಂತೆ ಆರು ಜನರ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಜಾರ್ಖಂಡ್‌ನ ವಲಸೆ ಕಾರ್ಮಿಕ ಸಂಜಯ್ ತುಡು ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದರು” ಎಂದು ವಿವರಿಸಿದ್ದಾರೆ.

ಸಂಜಯ್ ಮದ್ಯದ ಅಮಲಿನಲ್ಲಿ ಆ ಪ್ರದೇಶದಲ್ಲಿ ತಿರುಗಾಡುತ್ತಿದ್ದರು. ಮನೆಯೊಂದಕ್ಕೆ ನುಗ್ಗಿ ಮಗುವನ್ನು ಮನೆಯಿಂದ ಎಳೆದೊಯ್ಯಲು ಯತ್ನಿಸಿದ್ದರು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಮಗುವಿನ ತಂದೆ ಸಂಜಯ್‌ನನ್ನು ಹಿಡಿದು ಹೊಡೆಯಲಾರಂಭಿಸಿದರು. ತಕ್ಷಣ ಆರರಿಂದ ಏಳು ಜನರ ಗುಂಪು ಅವರನ್ನು ಸುತ್ತುವರಿಯಿತು. ಮಕ್ಕಳ ಕಿಡ್ನಾಪರ್‌ ಎಂದು ಶಂಕಿಸಿ ತೀವ್ರವಾಗಿ ಹಲ್ಲೆ ನಡೆಸಿದರು. ಇದನ್ನು ಇತರರು ನೋಡುತ್ತಿದ್ದರು. ನಂತರ ರಾಮಮೂರ್ತಿನಗರ ಪೊಲೀಸರು ಸ್ಥಳಕ್ಕೆ ಬಂದು ಸಂಜಯ್‌ ಅವರನ್ನು ಠಾಣೆಗೆ ಕರೆದೊಯ್ದರೂ ಅವರು ದೂರು ನೀಡಲು ನಿರಾಕರಿಸಿ ನಂತರ ಠಾಣೆಯಿಂದ ಹೊರಹೋಗಿದ್ದಾರೆ ಎಂದು ಪೊಲೀಸರು ಹೇಳುತ್ತಿದ್ದಾರೆ.

ವಲಸೆ ಕಾರ್ಮಿಕ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾನೆ ಎಂಬ ಆರೋಪ ಬಂದಿದ್ದು, ಆನಂತದಲ್ಲಿ ಪೊಲೀಸರ ಹೇಳಿಕೆ ಹೊರಬಿದ್ದಿದೆ. ಬೆಂಗಳೂರು ಮೂಲದ ಹೋರಾಟಗಾರ ಪರಮೇಶ್ ವಿ ಅವರು ಕರ್ನಾಟಕ ಹೈಕೋರ್ಟ್‌ಗೆ ಪತ್ರ ಬರೆದಿದ್ದು, “ಇದು ಕಸ್ಟಡಿ ಸಾವಿನ ಪ್ರಕರಣ. ಸಂಜಯ್ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡು ಬಂದಿದೆ” ಎಂದು ದೂರಿದ್ದಾರೆ.

ತಮ್ಮ ಮೇಲೆ ಬಂದಿರುವ ಆರೋಪವನ್ನು ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ. ವಲಸೆ ಕಾರ್ಮಿಕನು ಕೇವಲ ನಾಲ್ಕು ನಿಮಿಷಗಳ ಕಾಲ ಪೊಲೀಸ್ ಠಾಣೆಯಲ್ಲಿದ್ದರು. ತನ್ನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ದೂರು ನೀಡಲು ಅವರು ನಿರಾಕರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸಿಪಿ (ಪೂರ್ವ) ಭೀಮಾಶಂಕರ್ ಎಸ್ ಗುಳೇದ್ ಮಾತನಾಡಿ, “ಸಾವಿಗೀಡಾದ ವ್ಯಕ್ತಿಯು ಕುಡಿದಿದ್ದರು. ಪೊಲೀಸ್ ಠಾಣೆಗೆ ಕರೆತಂದಾಗ ಪ್ರಜ್ಞಾ ಸ್ಥಿತಿಯಲ್ಲಿದ್ದು, ಎಚ್ಚರದಿಂದಿದ್ದರು. ತಮ್ಮ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ದೂರು ನೀಡಲು ನಿರಾಕರಿಸಿದರು. ಆನಂತರ ಹೊರಟುಹೋದರು” ಎಂದಿದ್ದಾರೆ.

“ನಾವು ಈಗಾಗಲೇ ಪೊಲೀಸ್ ಠಾಣೆಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇವೆ. ಪೊಲೀಸ್ ಠಾಣೆಯಲ್ಲಿ ಅವರು ನಾಲ್ಕು ನಿಮಿಷಗಳು ಇದ್ದದ್ದು ದಾಖಲಾಗಿದೆ. ಪೊಲೀಸರು ಹಲ್ಲೆ ನಡೆಸಿರುವ ಪ್ರಶ್ನೆಯೇ ಇಲ್ಲ. ದರ್ಗಾ ಮೊಹಲ್ಲಾದಲ್ಲಿ ಗುಂಪೊಂದು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದೆ ಎಂದು ಕರೆ ಬಂದಿರುವುದು ಕಾಲ್‌ ರೆಕಾರ್ಡ್‌ನಲ್ಲಿ ದಾಖಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಗುಜರಾತ್‌: ಕಾಂಗ್ರೆಸ್ ಶಾಸಕ ಅನಂತ್‌ ಪಟೇಲ್‌ ಮೇಲೆ ಹಲ್ಲೆ; ಕೃತ್ಯದ ಹಿಂದೆ ಬಿಜೆಪಿ ಕೈವಾಡ?

ಮೃತದೇಹದ ವಿಳಾಸ ಪತ್ತೆ ಹಚ್ಚಲು ಸುಮಾರು ಎಂಟು ದಿನಗಳನ್ನು ತೆಗೆದುಕೊಳ್ಳಲಾಯಿತು. ನಂತರ ಜಾರ್ಖಂಡ್‌ನಲ್ಲಿರುವ ಅವರ ಕುಟುಂಬವನ್ನು ಸಂಪರ್ಕಿಸಲಾಯಿತು. ಅಕ್ಟೋಬರ್ 3ರಂದು ಮರಣೋತ್ತರ ಪರೀಕ್ಷೆ ನಡೆಸಿ, ಅವರ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಗುರುವಾರ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಅವರ ಮೇಲೆ ಹಲ್ಲೆ ನಡೆಸಿರುವುದು ಕಂಡು ಬಂದಿದೆ. ಅವರ ದೇಹದ ಮೇಲೆ ಹಲವಾರು ಗಾಯಗಳಾಗಿರುವುದು ದಾಖಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

“ಮಕ್ಕಳ ಅಪಹರಣಕಾರರು ಇದ್ದಾರೆ” ಎಂಬ ವದಂತಿಯನ್ನು ವಾಟ್ಸಾಪ್‌ನಲ್ಲಿ ಹರಡಿದ ಕಾರಣ 2018ರ ಮೇ ತಿಂಗಳಲ್ಲಿ ನಗರದ ಚಾಮರಾಜಪೇಟೆಯಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿತ್ತು. ಅದೇ ರೀತಿ, ಜುಲೈ 2018 ರಲ್ಲಿ ಕರ್ನಾಟಕದ ಬೀದರ್‌ನಲ್ಲಿ ಹೈದರಾಬಾದ್‌ನ ಟೆಕ್ಕಿಯೊಬ್ಬರನ್ನು ಕೊಲ್ಲಲಾಗಿತ್ತು. ಮಕ್ಕಳ ಕಿಡ್ನಾಪರ್‌ ಬಂದಿದ್ದಾರೆಂದು ಈಗಲೂ ವಾಟ್ಸ್‌ಅಪ್‌ನಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರು ಇದ್ದಾರೆ. ಈ ಸುಳ್ಳು ಸುದ್ದಿಗಳ ಕುರಿತು ಕನ್ನಡದ ‘ಎನ್‌ಸುದ್ದಿ.ಕಾಂ’ ನಿರಂತರ ವರದಿ ಮಾಡುತ್ತಲೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...