Homeಕರ್ನಾಟಕಬೆಂಗಳೂರು: ಮಕ್ಕಳ ಕಿಡ್ನಾಪರ್‌‌ ಎಂದು ಶಂಕಿಸಿ ವಲಸೆ ಕಾರ್ಮಿಕನ ಕೊಲೆ; ಪೊಲೀಸರ ಹೇಳಿಕೆ

ಬೆಂಗಳೂರು: ಮಕ್ಕಳ ಕಿಡ್ನಾಪರ್‌‌ ಎಂದು ಶಂಕಿಸಿ ವಲಸೆ ಕಾರ್ಮಿಕನ ಕೊಲೆ; ಪೊಲೀಸರ ಹೇಳಿಕೆ

ಕಸ್ಟಡಿಯಲ್ಲಿ ಸಾವಾಗಿದೆ ಎಂಬುದನ್ನು ಬೆಂಗಳೂರು ಪೊಲೀಸರು ನಿರಾಕರಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಯನ್ನು ಉಲ್ಲೇಖಿಸಿದ್ದಾರೆ.

- Advertisement -
- Advertisement -

ಸೆಪ್ಟೆಂಬರ್ 24ರಂದು ಶವವಾಗಿ ಪತ್ತೆಯಾದ ವಲಸೆ ಕಾರ್ಮಿಕ, ಹಿಂದಿನ ರಾತ್ರಿ ನಡೆದಿದ್ದ ಗುಂಪು ದಾಳಿಯಿಂದಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಬೆಂಗಳೂರು ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

ಸೆಪ್ಟೆಂಬರ್ 23ರ ರಾತ್ರಿ ಕೆ.ಆರ್.ಪುರಂನ ರಸ್ತೆಬದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು. ಮಕ್ಕಳನ್ನು ಅಪರಿಸುವ ವ್ಯಕ್ತಿ ಈತನೆಂದು ಶಂಕಿಸಿದ ಜನರ ಗುಂಪು ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ.

ಡಿಸಿಪಿ (ವೈಟ್‌ಫೀಲ್ಡ್) ಎಸ್ ಗಿರೀಶ್ ಈ ಕುರಿತು ಮಾಹಿತಿ ನೀಡಿದ್ದು, “ಅಪರಿಚಿತ ವ್ಯಕ್ತಿಯ ದೇಹದ ಮೇಲೆ ಯಾವುದೇ ದೊಡ್ಡ ಗಾಯಗಳಿಲ್ಲದ ಕಾರಣ ಆರಂಭದಲ್ಲಿ ಸಿಆರ್‌ಪಿಸಿ 174 (ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪತ್ತೆಹಚ್ಚಿದ್ದರು. ಆರು ಜನರ ಗುಂಪು ವಲಸೆ ಕಾರ್ಮಿಕ ಮೇಲೆ ಹಲ್ಲೆ ನಡೆಸಿರುವುದು ಕಂಡು ಬಂದಿತು. ಹಲ್ಲೆಯಿಂದ ಉಂಟಾದ ಗಾಯಗಳಿಂದಾಗಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಮರಣೋತ್ತರ ವರದಿ ಬಂದಿದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶ್ರೀನಿ ಮತ್ತು ಯಾಸೀನ್ ಸೇರಿದಂತೆ ಆರು ಜನರ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಜಾರ್ಖಂಡ್‌ನ ವಲಸೆ ಕಾರ್ಮಿಕ ಸಂಜಯ್ ತುಡು ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದರು” ಎಂದು ವಿವರಿಸಿದ್ದಾರೆ.

ಸಂಜಯ್ ಮದ್ಯದ ಅಮಲಿನಲ್ಲಿ ಆ ಪ್ರದೇಶದಲ್ಲಿ ತಿರುಗಾಡುತ್ತಿದ್ದರು. ಮನೆಯೊಂದಕ್ಕೆ ನುಗ್ಗಿ ಮಗುವನ್ನು ಮನೆಯಿಂದ ಎಳೆದೊಯ್ಯಲು ಯತ್ನಿಸಿದ್ದರು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಮಗುವಿನ ತಂದೆ ಸಂಜಯ್‌ನನ್ನು ಹಿಡಿದು ಹೊಡೆಯಲಾರಂಭಿಸಿದರು. ತಕ್ಷಣ ಆರರಿಂದ ಏಳು ಜನರ ಗುಂಪು ಅವರನ್ನು ಸುತ್ತುವರಿಯಿತು. ಮಕ್ಕಳ ಕಿಡ್ನಾಪರ್‌ ಎಂದು ಶಂಕಿಸಿ ತೀವ್ರವಾಗಿ ಹಲ್ಲೆ ನಡೆಸಿದರು. ಇದನ್ನು ಇತರರು ನೋಡುತ್ತಿದ್ದರು. ನಂತರ ರಾಮಮೂರ್ತಿನಗರ ಪೊಲೀಸರು ಸ್ಥಳಕ್ಕೆ ಬಂದು ಸಂಜಯ್‌ ಅವರನ್ನು ಠಾಣೆಗೆ ಕರೆದೊಯ್ದರೂ ಅವರು ದೂರು ನೀಡಲು ನಿರಾಕರಿಸಿ ನಂತರ ಠಾಣೆಯಿಂದ ಹೊರಹೋಗಿದ್ದಾರೆ ಎಂದು ಪೊಲೀಸರು ಹೇಳುತ್ತಿದ್ದಾರೆ.

ವಲಸೆ ಕಾರ್ಮಿಕ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾನೆ ಎಂಬ ಆರೋಪ ಬಂದಿದ್ದು, ಆನಂತದಲ್ಲಿ ಪೊಲೀಸರ ಹೇಳಿಕೆ ಹೊರಬಿದ್ದಿದೆ. ಬೆಂಗಳೂರು ಮೂಲದ ಹೋರಾಟಗಾರ ಪರಮೇಶ್ ವಿ ಅವರು ಕರ್ನಾಟಕ ಹೈಕೋರ್ಟ್‌ಗೆ ಪತ್ರ ಬರೆದಿದ್ದು, “ಇದು ಕಸ್ಟಡಿ ಸಾವಿನ ಪ್ರಕರಣ. ಸಂಜಯ್ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡು ಬಂದಿದೆ” ಎಂದು ದೂರಿದ್ದಾರೆ.

ತಮ್ಮ ಮೇಲೆ ಬಂದಿರುವ ಆರೋಪವನ್ನು ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ. ವಲಸೆ ಕಾರ್ಮಿಕನು ಕೇವಲ ನಾಲ್ಕು ನಿಮಿಷಗಳ ಕಾಲ ಪೊಲೀಸ್ ಠಾಣೆಯಲ್ಲಿದ್ದರು. ತನ್ನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ದೂರು ನೀಡಲು ಅವರು ನಿರಾಕರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸಿಪಿ (ಪೂರ್ವ) ಭೀಮಾಶಂಕರ್ ಎಸ್ ಗುಳೇದ್ ಮಾತನಾಡಿ, “ಸಾವಿಗೀಡಾದ ವ್ಯಕ್ತಿಯು ಕುಡಿದಿದ್ದರು. ಪೊಲೀಸ್ ಠಾಣೆಗೆ ಕರೆತಂದಾಗ ಪ್ರಜ್ಞಾ ಸ್ಥಿತಿಯಲ್ಲಿದ್ದು, ಎಚ್ಚರದಿಂದಿದ್ದರು. ತಮ್ಮ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ದೂರು ನೀಡಲು ನಿರಾಕರಿಸಿದರು. ಆನಂತರ ಹೊರಟುಹೋದರು” ಎಂದಿದ್ದಾರೆ.

“ನಾವು ಈಗಾಗಲೇ ಪೊಲೀಸ್ ಠಾಣೆಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇವೆ. ಪೊಲೀಸ್ ಠಾಣೆಯಲ್ಲಿ ಅವರು ನಾಲ್ಕು ನಿಮಿಷಗಳು ಇದ್ದದ್ದು ದಾಖಲಾಗಿದೆ. ಪೊಲೀಸರು ಹಲ್ಲೆ ನಡೆಸಿರುವ ಪ್ರಶ್ನೆಯೇ ಇಲ್ಲ. ದರ್ಗಾ ಮೊಹಲ್ಲಾದಲ್ಲಿ ಗುಂಪೊಂದು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದೆ ಎಂದು ಕರೆ ಬಂದಿರುವುದು ಕಾಲ್‌ ರೆಕಾರ್ಡ್‌ನಲ್ಲಿ ದಾಖಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಗುಜರಾತ್‌: ಕಾಂಗ್ರೆಸ್ ಶಾಸಕ ಅನಂತ್‌ ಪಟೇಲ್‌ ಮೇಲೆ ಹಲ್ಲೆ; ಕೃತ್ಯದ ಹಿಂದೆ ಬಿಜೆಪಿ ಕೈವಾಡ?

ಮೃತದೇಹದ ವಿಳಾಸ ಪತ್ತೆ ಹಚ್ಚಲು ಸುಮಾರು ಎಂಟು ದಿನಗಳನ್ನು ತೆಗೆದುಕೊಳ್ಳಲಾಯಿತು. ನಂತರ ಜಾರ್ಖಂಡ್‌ನಲ್ಲಿರುವ ಅವರ ಕುಟುಂಬವನ್ನು ಸಂಪರ್ಕಿಸಲಾಯಿತು. ಅಕ್ಟೋಬರ್ 3ರಂದು ಮರಣೋತ್ತರ ಪರೀಕ್ಷೆ ನಡೆಸಿ, ಅವರ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಗುರುವಾರ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಅವರ ಮೇಲೆ ಹಲ್ಲೆ ನಡೆಸಿರುವುದು ಕಂಡು ಬಂದಿದೆ. ಅವರ ದೇಹದ ಮೇಲೆ ಹಲವಾರು ಗಾಯಗಳಾಗಿರುವುದು ದಾಖಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

“ಮಕ್ಕಳ ಅಪಹರಣಕಾರರು ಇದ್ದಾರೆ” ಎಂಬ ವದಂತಿಯನ್ನು ವಾಟ್ಸಾಪ್‌ನಲ್ಲಿ ಹರಡಿದ ಕಾರಣ 2018ರ ಮೇ ತಿಂಗಳಲ್ಲಿ ನಗರದ ಚಾಮರಾಜಪೇಟೆಯಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿತ್ತು. ಅದೇ ರೀತಿ, ಜುಲೈ 2018 ರಲ್ಲಿ ಕರ್ನಾಟಕದ ಬೀದರ್‌ನಲ್ಲಿ ಹೈದರಾಬಾದ್‌ನ ಟೆಕ್ಕಿಯೊಬ್ಬರನ್ನು ಕೊಲ್ಲಲಾಗಿತ್ತು. ಮಕ್ಕಳ ಕಿಡ್ನಾಪರ್‌ ಬಂದಿದ್ದಾರೆಂದು ಈಗಲೂ ವಾಟ್ಸ್‌ಅಪ್‌ನಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರು ಇದ್ದಾರೆ. ಈ ಸುಳ್ಳು ಸುದ್ದಿಗಳ ಕುರಿತು ಕನ್ನಡದ ‘ಎನ್‌ಸುದ್ದಿ.ಕಾಂ’ ನಿರಂತರ ವರದಿ ಮಾಡುತ್ತಲೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...