Homeಅಂತರಾಷ್ಟ್ರೀಯಬೆಂಗಳೂರು ಮಾದರಿ ಗಲಭೆ: ಸ್ವೀಡನ್‌ನ ಮಾಲ್ಮೊ ನಗರ ಹೊತ್ತಿ ಉರಿಯಲು ಕಾರಣವೇನು?

ಬೆಂಗಳೂರು ಮಾದರಿ ಗಲಭೆ: ಸ್ವೀಡನ್‌ನ ಮಾಲ್ಮೊ ನಗರ ಹೊತ್ತಿ ಉರಿಯಲು ಕಾರಣವೇನು?

ಅಲ್ಲಿನ ಈ ಗಲಭೆಯನ್ನು ಮಾಧ್ಯಮಗಳು ವರದಿ ಮಾಡಿದ ರೀತಿ ಮೆಚ್ಚುಗೆಗೆ ಪಾತ್ರವಾಗಿದೆ. ಅವರು ಅದನ್ನು ವಿಜೃಂಭಿಸಲಿಲ್ಲ, ದಿನದ 24 ಗಂಟೆ ಅದನ್ನೇ ತೋರಿಸಿ ಪ್ರಚೋದಿಸಲಿಲ್ಲ. ಬದಲಿಗೆ ಕೊನೆ ಪುಟದ ಒಂದು ಸುದ್ದಿಯಾಗಿ ಅಷ್ಟೇ ಪ್ರಸಾರ ಮಾಡಿತು.

- Advertisement -
- Advertisement -

ಸ್ವೀಡನ್‌ನ ಮೂರನೇ ಅತಿ ದೊಡ್ಡ ನಗರ ಮಾಲ್ಮೊದಲ್ಲಿ ಬೆಂಗಳೂರು ಮಾದರಿ ಗಲಭೆ ನಡೆದಿದ್ದು, ನಗರ ಹೊತ್ತಿ ಉರಿದಿದೆ. ಅಲ್ಲಿನ ರೋಸನ್ ಗಾರ್ಡ್‌ ಪ್ರದೇಶದಲ್ಲಿ ನೆರೆದಿದ್ದ 300ಕ್ಕೂ ಹೆಚ್ಚು ಜನರಿದ್ದ ಗುಂಪು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ಟೈರ್‌ಗಳಿಗೆ ಬೆಂಕಿ ಹಚ್ಚಿದೆ. ಅವರೆಲ್ಲರೂ ಇಸ್ಲಾಂ ವಿರುದ್ಧದ ಚಟುವಟಿಕೆಗಳನ್ನು ವಿರೋಧಿಸಿ, ಇಸ್ಲಾಮೋಫೋಬಿಯಾದ ವಿರುದ್ಧ ಪ್ರತಿಭಟಿಸಲು ಸೇರಿದ್ದರು ಎನ್ನಲಾಗಿದೆ.

ಸ್ವೀಡನ್‌ನ ಮಾಲ್ಮೊದಲ್ಲಿ ಬಲಪಂಥೀಯ ಸ್ಟ್ರಾಮ್ ಕುರ್ಸ್ ಪಕ್ಷದ ಸದಸ್ಯರು ಕುರಾನ್ ಪ್ರತಿಯನ್ನು ಸುಟ್ಟು ಹಾಕಿದ ನಂತರ ಗಲಭೆ ಆರಂಭವಾಗಿದೆ. ಅದಕ್ಕೂ ಹಿಂದಿನ ದಿನ ಪಕ್ಷದ ನಾಯಕ ರಾಸ್ಮಸ್ ಪಲುಡಾನ್ ಅವರಿಗೆ “ನಾರ್ಡಿಕ್ ದೇಶಗಳಲ್ಲಿ ಇಸ್ಲಾಮೀಕರಣ” ವಿಷಯದ ಕುರಿತು ಮಾಲ್ಮೋದಲ್ಲಿ ಸಭೆ ನಡೆಸಲು ಅನುಮತಿ ನಿರಾಕರಿಸಲಾದ್ದರಿಂದ ರೊಚ್ಚಿಗೆದ್ದ ಬಲಪಂಥೀಯ ಕಾರ್ಯಕರ್ತರು ಕುರಾನ್ ಸುಟ್ಟಿದ್ದಾರೆ ಎಂದು ಸ್ವೀಡಿಸ್ ಪ್ರತಿಕೆ ಅಫ್ಟನ್ಬ್ಲಾಡೆಟ್ ವರದಿ ಮಾಡಿದೆ. ಈ ಹಿಂದೆ ಜನಾಂಗೀಯ ಗುಂಪುಗಳ ವಿರುದ್ಧ ಪ್ರಚೋದನೆ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದ ಸ್ವೀಡಿಷ್ ಕಲಾವಿದ ಡಾನ್ ಪಾರ್ಕ್ ರಾಸ್ಮಸ್ ಪಲುಡಾನ್ ಅವರನ್ನು ಆಹ್ವಾನಿಸಿದ್ದರು.

ರಾಸ್ಮಸ್ ಪಲುಡಾನ್ ಯಾರು?

ಡೆನ್ಮಾರ್ಕ್‌ನ ವಕೀಲ ರಾಸ್ಮಸ್ ಪಲುಡಾನ್ 2017ರಲ್ಲಿ ತೀವ್ರ ಬಲಪಂಥೀಯ ಸ್ಟ್ರಾಮ್ ಕುರ್ಸ್ ಪಕ್ಷದ ಸ್ಥಾಪಕ. ಈತನ ಪಕ್ಷ ಮುಸ್ಲಿಂ ವಿರೋಧಿ ಮನೋಭಾವವನ್ನು ಹೊಂದಿದೆ. ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಸದಾ ಮುಸ್ಲಿಂ ವಿರೋದಿ ಅಂಶಗಳನ್ನು ಪ್ರಸಾರ ಮಾಡುವ, ಕುರಾನ್ ಸುಟ್ಟು ಹಾಕುವ ವಿಡಿಯೋಗಳನ್ನು ಈತ ಅಪ್‌ಲೋಡ್‌ ಮಾಡಿದ್ದಾನೆ. ಆ ರೀತಿಯ ಮುಸ್ಲಿಂ ಜನಾಂಗೀಯ ಅವಹೇಳನದ ವಿಡಿಯೋ ಪೋಸ್ಟ್ ಮಾಡಿದ್ದಕ್ಕಾಗಿ ಜೂನ್‌ನಲ್ಲಿ ಆತನಿಗೆ ಮೂರು ತಿಂಗಳು ಜೈಲುವಾಸ ಮತ್ತು ವಕೀಲ ವೃತ್ತಿ ಮಾಡದಂತೆ ನಿಷೇಧ ಹೇರಿತ್ತು. 2019ರಲ್ಲಿಯೂ ಸಹ ಜನಾಂಗೀಯ ಅವಹೇಳನದ ಭಾಷಣ ಮಾಡಿದ್ದಕ್ಕಾಗಿ ಆತನಿಗೆ 14 ದಿನಗಳ ಬಂಧನ ಶಿಕ್ಷೆ ವಿಧಿಸಲಾಗಿತ್ತು. ಜನಾಂಗೀಯ ನಿಂದನೆ, ದ್ವೇ‍ಷ ಭಾಷಣ, ಮಾನಹಾನಿ, ಯದ್ವಾತದ್ವಾ ವಾಹನ ಚಾಲನೆ ಸೇರಿದಂತೆ ಇದುವರೆಗೂ ಸುಮಾರು 14 ಪ್ರಕರಣಗಳಲ್ಲಿ ಈತ ತಪ್ಪಿತಸ್ಥನೆಂದು ನ್ಯಾಯಾಲಯ ತೀರ್ಪು ನೀಡಿದೆ.

ರಾಸ್ಮಸ್ ಪಲುಡಾನ್. Photo Courtesy: DR

3 ಲಕ್ಷ ಮುಸ್ಲಿಮರನ್ನು ಡೆನ್ಮಾರ್ಕ್‌ನಿಂದ ಹೊರಹಾಕುವ ಮತ್ತು ಇಸ್ಲಾಂ ಧರ್ಮವನ್ನು ನಿಷೇಧಿಸುವುದಾಗಿ ಘೋಷಿಸಿ ಈತ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದಾನೆ. ಈ ಶುಕ್ರವಾರ ಸ್ವೀಡನೆ ಆತನನ್ನು 2 ವರ್ಷಗಳ ಕಾಲ ಸ್ವೀಡನ್‌ಗೆ ಕಾಲಿಡದಂತೆ ನಿಷೇಧ ಹೇರಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸ್ವೀಡನ್‌ನಲ್ಲಿನ ವಲಸಿಗರ ಸ್ಥಿತಿಗತಿ

ಸ್ವೀಡನ್ ಐತಿಹಾಸಿಕವಾಗಿ ನಿರಾಶ್ರಿತರ ಸ್ವರ್ಗ ಎಂದು ಹೆಸರು ಗಳಿಸಿದೆ. ಕೆನಡಾ ಮತ್ತು ಆಸ್ಟ್ರೇಲಿಯಾ ನಂತರ ಅತಿ ಹೆಚ್ಚು ನಿರಾಶ್ರಿತರಿಗೆ ಆಶ್ರಯ ನೀಡಿದ ದೇಶ ಇದಾಗಿದೆ. 2013-2014ರ ಸಮಯದಲ್ಲಿ ಸಿರಿಯಾದಿಂದ ವಲಸೆ ಬಂದ ಹಲವಾರು ಜನರಿಗೆ ಇದು ಖಾಯಂ ವಾಸಿಸಲು ಅನುಮತಿ ನೀಡಿದೆ. ಸಿರಿಯಾ ಯುದ್ದ ಆರಂಭವಾದಾಗಿನಿಂದ ಸುಮಾರು 70,000 ಸಿರಿಯನ್ನರು ಇಲ್ಲಿಗೆ ವಲಸೆ ಬಂದಿದ್ದಾರೆ.

2015 ರ ವರ್ಷವೊಂದರಲ್ಲೇ ಸ್ವೀಡನ್‌ ಆಶ್ರಯಕ್ಕಾಗಿ ದಾಖಲೆಯ 1,62,000 ಅರ್ಜಿಗಳನ್ನು ಸ್ವೀಕರಿಸಿದೆ. ಅದರಲ್ಲಿ ಮುಖ್ಯವಾಗಿ ಸಿರಿಯಾ, ಇರಾಕ್ ಮತ್ತು ಅಫ್ಘಾನಿಸ್ತಾನದ ಮುಸ್ಲಿಮರು ಮತ್ತು ಯುದ್ಧ ಪೀಡಿತ ದೇಶಗಳಿಂದ ಆಶ್ರಯ ಪಡೆಯುವವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಬಲಪಂಥೀಯರ ವಾದ

ಸ್ವೀಡಿಷ್ ಸಂಸತ್ತಿನ ಮೂರನೇ ಅತಿದೊಡ್ಡ ಪಕ್ಷವಾಗಿರುವ ಬಲಪಂಥೀಯ ಸ್ವೀಡನ್ ಡೆಮೋಕ್ರಾಟ್ ಇದನ್ನು ತೀವ್ರವಾಗಿ ವಿರೋಧಿಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಮುಖವಾಗಿ ಮುಸ್ಲಿಂ ವಲಸಿಗರ ಒಳಹರಿವು ಅಪರಾಧದ ಉಲ್ಬಣಕ್ಕೆ ಕಾರಣವಾಗಿದೆ ಎಂದು ಅದು ಆರೋಪಿಸಿದೆ. ಇದು ವಿಶ್ವದ ಅತ್ಯಂತ ಉದಾರವಾದ ಕಲ್ಯಾಣ ಕಾರ್ಯಕ್ರಮಗಳನ್ನು ಹೊಂದಿರುವ ದೇಶದಲ್ಲಿ ಸಾರ್ವಜನಿಕ ಹಣಕಾಸಿನ ಮೇಲೆ ಒತ್ತಡ ಹೇರುತ್ತಿದೆ ಎಂದು ಪಕ್ಷ ಆರೋಪಿಸಿದೆ.

ಹೆಚ್ಚಿನ ಸಂಖ್ಯೆಯ ವಲಸಿಗರಲ್ಲಿ ಕೌಶಲ್ಯ ಮತ್ತು ವಿದ್ಯಾರ್ಹತೆಯ ಸಮಸ್ಯೆಯಿದೆ. ಹಾಗಾಗಿ ಅವರೆಲ್ಲರೂ ಕೆಲಸ ಮಾಡುತ್ತಾರೆ ಎಂದು ಹೇಳಲಾಗುವುದಿಲ್ಲ. ಇದು ಇತರ ಹೆಚ್ಚು ತೆರಿಗೆ ಕಟ್ಟುವವರ ಮೇಲೆ ಪರಿಣಾಮ ಬೀರುತ್ತದೆ ಎಂಬ ಮಾತು ಅಲ್ಲಲ್ಲಿ ಕೇಳಿಬರುತ್ತಿದೆ. ಇದಕ್ಕೆ ಉದಾಹರಣೆಯೆಂಬಂತೆ 2018 ರಲ್ಲಿ ಸ್ವೀಡನ್‌ನಲ್ಲಿ ನಿರುದ್ಯೋಗ ದರವು ಶೇಕಡಾ 3.8 ರಷ್ಟಿದ್ದರೆ, ವಲಸಿಗ ಸ್ವೀಡಿಶ್ ಜನಸಂಖ್ಯೆಯಲ್ಲಿ ಇದು ಶೇ. 15ಕ್ಕೇರಿತ್ತು. ಇದನ್ನಿಟ್ಟುಕೊಂಡು ಅಲ್ಲಿನ ಬಲಪಂಥೀಯ ಪಕ್ಷಗಳು ವಲಸಿಗ ವಿರೋಧಿ ಭಾವನೆ, ಮುಸ್ಲಿಂ ವಿರೋಧಿ ಭಾವನೆ ಮೂಡಿಸಲು ನಿರತವಾಗಿವೆ ಎನ್ನಲಾಗುತ್ತಿದೆ.

ವಾಸ್ತವ ಮತ್ತು ಮಾಧ್ಯಮಗಳ ಜವಾಬ್ದಾರಿ

ಆದರೆ ಅಲ್ಲಿನ ಬಹುಸಂಖ್ಯಾತ ಜನರು ವಲಸೆಯನ್ನು ಬೆಂಬಲಿಸಿ ಆಶ್ರಯ ನೀಡುವ ಮನೋಭಾವ ಹೊಂದಿದ್ದಾರೆ ಎಂದು ಅಲ್ಲಿನ ಸ್ಥಳೀಯ ಪತ್ರಿಕೆಗಳು ವರದಿ ಮಾಡಿವೆ. ವಲಸೆಗೆ ಕಾರಣವೇನು? ನಿರಾಶ್ರಿತರ ಸಮಸ್ಯೆಗಳನ್ನು ಹೇಗೆ ಅರ್ಥೈಸಬೇಕು, ಮಾನವೀಯ ಆಧಾರದಲ್ಲಿ ಹೇಗೆ ಗ್ರಹಿಸಬೇಕು ಮತ್ತು ಎಲ್ಲರಿಗೂ ಉದ್ಯೋಗ ಸೃಷ್ಠಿ ಸಾಧ್ಯವೇ ಎಂಬಿತ್ಯಾದಿ ಪ್ರಶ್ನೆಗಳನ್ನು ಬಲಪಂಥೀಯರು ನಿರಾಕರಿಸುತ್ತಿದ್ದಾರೆ ಎಂಬುದು ಪ್ರಜಾಪ್ರಭುತ್ವವಾದಿಗಳ ವಾದವಾಗಿದೆ.

ಇನ್ನು ಅಲ್ಲಿನ ಈ ಗಲಭೆಯನ್ನು ಮಾಧ್ಯಮಗಳು ವರದಿ ಮಾಡಿದ ರೀತಿ ಮೆಚ್ಚುಗೆಗೆ ಪಾತ್ರವಾಗಿದೆ. ಅವರು ಅದನ್ನು ವಿಜೃಂಭಿಸಲಿಲ್ಲ, ದಿನದ 24 ಗಂಟೆ ಅದನ್ನೇ ತೋರಿಸಿ ಪ್ರಚೋದಿಸಲಿಲ್ಲ. ಬದಲಿಗೆ ಕೊನೆ ಪುಟದ ಒಂದು ಸುದ್ದಿಯಾಗಿ ಅಷ್ಟೇ ಪ್ರಸಾರ ಮಾಡಿತು. ಇದೀಗ ಅಲ್ಲಿನ ಪತ್ರಿಕೆಗಳನ್ನು ಹುಡುಕಿದರೆ ಗಲಭೆಯ ಸುದ್ದಿಯೇ ತಿಳಿಯುವುದಿಲ್ಲ. ಭಾರತದ ಮಾಧ್ಯಮಗಳು ಇದನ್ನು ಅನುಸರಿಸುವ ಅಗತ್ಯವಿದೆ ಎನಿಸುತ್ತದೆ.

ಸ್ವೀಡನ್ ನಗರ: Photo Courtesy: Forbes

ಸ್ವೀಡನ್ ಹಲವು ಬಹುವೈವಿಧ್ಯತೆಗಳನ್ನು ಒಳಗೊಂಡಿರುವ ದೇಶ. ಆದರೆ ಅಲ್ಲಿ ಈಗ ಇಸ್ಲೋಮೊಫೋಬಿಯ ಹರಡಲು ಬಲಪಂಥೀಯರು ಸ್ವೀಡನ್‌ನ ವಲಸಿಗರನ್ನು ಆಯುಧವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ರಸ್ತೆ ಮತ್ತು ರೈಲು ಸಾರಿಗೆ ಮೂಲಕ ಸ್ವೀಡನ್‌ ಪ್ರವೇಶಿಸಬೇಕಾದರೆ ಮಾಲ್ಮೊ ನಗರದ ಮೂಲಕವೇ ಹಾದುಹೋಗಬೇಕು. ಹಾಗಾಗಿ ಹೆಚ್ಚಿನ ನಿರಾಶ್ರಿತರು ಅಲ್ಲಿ ನೆಲೆಸಿರುವುದು ಹೌದಾದರೂ ಅವರನ್ನು ಎರಡನೇ ದರ್ಜೆಯ ಪ್ರಜೆಯಾಗಿ ಕಾಣುವುದು, ಅವಹೇಳನ ಮಾಡುವುದು ಗಲಭೆಗೆ ಕಾರಣವಾಗುತ್ತವೆ. ಅದರ ಹೊರತು ಬಹಳಷ್ಟು ಜನರು ಅಲ್ಲಿ ಅನ್ಯೋನ್ಯವಾಗಿ ಬಾಳುತ್ತಿದ್ದಾರೆ. ಗಲಭೆಯ ಕುರಿತು ಮಾತನಾಡಲು ಸ್ನೇಹಿತರಿಗೆ ಫೋನ್ ಮಾಡಿದರೆ ಅದು ಇಲ್ಲಿ ದೊಡ್ಡ ವಿಷಯವಲ್ಲ ಎನ್ನುತ್ತಾರೆ ಎಂದು ಹಲವು ವರ್ಷಗಳ ಕಾಲ ಅಲ್ಲಿ ನೆಲೆಸಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಭರತ್ ಹೆಬ್ಬಾಳ್ ಹೇಳುತ್ತಾರೆ.

ಸ್ಟಾಕ್‌ಹೋಮ್‌ ಪ್ರಧಾನವಾಗಿ ವಲಸೆ ಬಂದ ಪ್ರದೇಶಗಳಲ್ಲಿ ಒಂದಾಗಿದ್ದು ಅಲ್ಲಿ ಗಲಭೆಗಳು ಹೆಚ್ಚಾಗಿವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಲಸೆ ಸಮಸ್ಯೆಗಳ ಕುರಿತು ಮಾತನಾಡುವಾಗ ಉದಾಹರಣೆಯಾಗಿ ಸ್ವೀಡನ್‌ ಅನ್ನು ಉಲ್ಲೇಖಿಸಿದ್ದರು. ಆಗ ಸಹ ಗಲಭೆ ಭುಗಿಲೆದ್ದಿದ್ದು, ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ, ಮತ್ತು ಲೂಟಿ ನಡೆದಿತ್ತು.


ಇದನ್ನೂ ಓದಿ: ಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...