Homeಕರ್ನಾಟಕಬೆಂಗಳೂರು | ಹಣದ ವಿಚಾರವಾಗಿ ತಾಯಿಯನ್ನೆ ಕತ್ತು ಹಿಸುಕಿ ಕೊಂದ ಮಗ!

ಬೆಂಗಳೂರು | ಹಣದ ವಿಚಾರವಾಗಿ ತಾಯಿಯನ್ನೆ ಕತ್ತು ಹಿಸುಕಿ ಕೊಂದ ಮಗ!

- Advertisement -
- Advertisement -

ಹಣ ಕಾಸಿನ ವಿಚಾರವಾಗಿ ದುಷ್ಕರ್ಮಿಯೊಬ್ಬ ತನ್ನ ತಾಯಿಯನ್ನೆ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನವೆಂಬರ್ 8ರಂದು ನಡೆದಿದ್ದ ಕೊಲೆಯ ಬಗ್ಗೆ ತನಿಖೆ ನಡೆಸುತ್ತಿದ್ದ ಪೊಲೀಸರು ಮೃತ ಮಹಿಳೆಯ ಹಿರಿಯ ಮಗ ಉಮೇಶ್ (33) ಮತ್ತು ಆತನ ಸಂಬಂಧಿ ಸುರೇಶ್‌(43) ಎಂಬವನ್ನು ಬಂಧಿಸಿದ್ದಾರೆ. ಮಹಿಳೆಯ ಕಿರಿಯ ಮಗನ ಸ್ನೇಹಿತ ಅವರಿಗೆ ದಿನಸಿ ಸಾಮಾನು ಕೊಡಲು ಮನೆಗೆ ತೆರಳಿದ್ದಾಗ ಮಹಿಳೆ ಶವವಾಗಿ ಪತ್ತೆಯಾಗಿದ್ದರು. ಬೆಂಗಳೂರು

ಮಹಿಳೆಯ ಹಿರಿಯ ಮಗ ಉಮೇಶ್ ಹಣಕಾಸಿನ ವಿಚಾರದಲ್ಲಿ ತನ್ನ ತಾಯಿಯನ್ನು ಕೊಲೆ ಮಾಡಿದ್ದು, ಮೃತ ಜಯಮ್ಮ (49) ಅವರ ತಲೆಯನ್ನು ಗೋಡೆಗೆ ಒಡೆದು, ಆಕೆಯನ್ನು ತುಳಿದು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗೃಹಿಣಿಯಾಗಿದ್ದ ಜಯಮ್ಮ ಇತ್ತೀಚೆಗೆ ಬೊಮ್ಮನಹಳ್ಳಿ ಬಳಿಯ ಹೊಂಗಸಂದ್ರದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ನವೆಂಬರ್ 9 ರಂದು ಅವರ ಕಿರಿಯ ಮಗನ ಸ್ನೇಹಿತ ಜಯಮ್ಮ ಅವರ ಮನೆಗೆ ದಿನಸಿ ನೀಡಲು ತೆರಳಿದ್ದರು. ಈ ವೇಳೆ ಬಾಗಿಲು ತಟ್ಟಿದರೂ ಯಾರೂ ಬಾಗಿಲು ತೆಗೆದಿರಲಿಲ್ಲ. ಬಳಿಕ ಮನೆಯ ಮಾಲೀಕರಿಗೆ ಮಾಹಿತಿ ನೀಡಿ ಬದಲಿ ಕೀ ಬಳಸಿ ಬಾಗಿಲು ತೆರೆದಾಗ ಜಯಮ್ಮ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆರಂಭದಲ್ಲಿ, ಪೊಲೀಸರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕರಾಗಿರುವ ಅವರ ಕಿರಿಯ ಮಗನನ್ನು ವಿಚಾರಣೆಗೆ ಒಳಪಡಿಸಿದ್ದರು. ಆದರೆ ಅಪರಾಧ ನಡೆದಾಗ ಅವರು ಕರ್ತವ್ಯದಲ್ಲಿದ್ದ ಕಾರಣ ಕೊಲೆಯಲ್ಲಿ ಅವರ ಕೈವಾಡ ಇರುವುದನ್ನು ತಳ್ಳಿಹಾಕಿದ್ದರು.

“ಹಣಕಾಸಿನ ವಿಚಾರದಲ್ಲಿ ಜಗಳವಾಗಿ ಜಯಮ್ಮ ಅವರು ತಮ್ಮ ಹಿರಿಯ ಮಗ ಉಮೇಶ್‌ನಿಂದ ದೂರ ಉಳಿದಿದ್ದರು ಎಂದು ನಮ್ಮ ತನಿಖೆಯಿಂದ ತಿಳಿದುಬಂದಿತ್ತು. ಹಾಗಾಗಿ ಕೆ.ಆರ್.ಮಾರುಕಟ್ಟೆಯಿಂದ ಉಮೇಶ್‌ನನ್ನು ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದಾಗ ಆತನೇ ಕೊಲೆ ಮಾಡಿರುವುದು ಪತ್ತೆಯಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಯಮ್ಮ ಇತ್ತೀಚೆಗೆ ತನ್ನ ಪತಿಯ ಆಸ್ತಿಯನ್ನು ಮಾರಿ ಹಣವನ್ನು ಕೆಲವು ಜನರಿಗೆ ಸಾಲವಾಗಿ ನೀಡಿದ್ದರು. ಆದರೆ, ಅವರ ಹಿರಿಯ ಮಗ ಉಮೇಶ್ ವಾಹನ ಖರೀದಿಸಲು ಹಣ ಕೇಳುತ್ತಲೇ ಇದ್ದ. ಆದರೆ ಮದ್ಯದ ದಾಸನಾಗಿದ್ದ ಆತನಿಗೆ ಹಣ ನೀಡಲು ಅವರು ಒಪ್ಪಿರಲಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

“ಉಮೇಶ್ ಹಣ ಕೇಳಿ ತನ್ನ ತಾಯಿಗೆ ತೊಂದರೆ ನೀಡುವುದನ್ನು ನಿಲ್ಲಿಸದಿದ್ದಾಗ, ಜಯಮ್ಮ ಆ ಮನೆಯಿಂದ ಹೊರಬಂದು ಹೊಂಗಸಂದ್ರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಈ ವೇಳೆ ಉಮೇಶ್ ತನ್ನ ಸಂಬಂಧಿ ಸುರೇಶನ ಸಹಾಯದಿಂದ ಅವರ ಮನೆಯನ್ನು ಪತ್ತೆಹಚ್ಚಿ ಅಲ್ಲಿಗೆ ತೆರಳಿ ಜಗಳವಾಡಿದ್ದನು. ಈ ವೇಳೆ ಜಯಮ್ಮ ಅವರ ಕೊಲೆ ಮಾಡಲಾಗಿತ್ತು. ಈ ಕೊಲೆಗೆ ಸುರೇಶ ಸಹಕರಿಸಿದ್ದ’’ ಎಂದು ಅಧಿಕಾರಿ ತಿಳಿಸಿದ್ದಾರೆ. ಉಮೇಶ್ ಮತ್ತು ಸುರೇಶ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...