Homeಕರ್ನಾಟಕಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

- Advertisement -
- Advertisement -

ಜೈನ ದೇವಾಲಯವೊಂದರ ಬ್ಯಾನರ್ ನಲ್ಲಿ ಹಿಂದಿಯಿದ್ದ ಕಾರಣಕ್ಕಾಗಿ ಅದನ್ನು ತೆರವುಗೊಳಿಸಿ ಎಂದು ಕನ್ನಡ ಕಾರ್ಯಕರ್ತರು ಆಗ್ರಹಿಸಿದ್ದಕ್ಕೆ ಅವರನ್ನು ಬಂಧಿಸಲಾಗಿದೆ. ಇದೇ ವೇಳೆ ಈ ಘಟನೆಯನ್ನು ಜೈನರ ಮೇಲೆ ರೌಡಿಗಳಿಂದ ಹಲ್ಲೆ ಎಂದು ಕರೆಯುವ ಮೂಲಕ ಸಂಸದ ತೇಜಸ್ವಿ ಸೂರ್ಯ ಕನ್ನಡ ಭಾಷೆಯ ಪ್ರಕರಣವನ್ನು ಕೋಮುವಾದಿಕರಿಸುತ್ತಿದ್ದಾರೆ ಎಂದು ಹಲವರು ಖಂಡನೆ ವ್ಯಕ್ತಪಡಿಸಿದ್ದಾರೆ.

“ಕೆಲವು ರೌಡಿಗಳಿಂದ ಜೈನ ದೇವಾಲಯದ ಬ್ಯಾನರ್ ಮೇಲೆ ಹಿಂದಿ ಇದ್ದ ಕಾರಣಕ್ಕಾಗಿ ಬೆಂಗಳೂರಿನಲ್ಲಿನ ನಮ್ಮ ಜೈನ ಸಹೋದರರ ಮೇಲೆ ನಡೆಸಿದ ದಾಳಿಯಿಂದ ತೀವ್ರವಾಗಿ ನೋವುಂಟಾಗಿದೆ.

ಅವರು ಬೆಂಗಳೂರಿನಲ್ಲಿ ಉರ್ದು ಬಳಕೆಯನ್ನು ಎಂದಿಗೂ ಪ್ರಶ್ನಿಸುವುದಿಲ್ಲ.

ಕರ್ನಾಟಕಕ್ಕೆ ಕೊಡುಗೆ ನೀಡುವ ಶಾಂತಿಯುತ ಜೈನರನ್ನು ಆಕ್ರಮಣ ಮಾಡುವುದು ನಿಜವಾದ ಕನ್ನಡ ಪ್ರಿಯರಿಗೆ ಮತ್ತು ಕಾರ್ಯಕರ್ತರಿಗೆ ಅಪಚಾರವನ್ನು ತರುತ್ತದೆ”. ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಚಿಂತಕರಾದ ದಿನೇಶ್ ಅಮೀನ್ ಮಟ್ಟುರವರು ಫೇಸ್ ಬುಕ್ ನಲ್ಲಿ ಈ ಕೆಳಗಿನಂತೆ ಪ್ರತಿಕ್ರಿಯಿಸಿದ್ದಾರೆ.

ಹಿಂದಿ ಭಾಷೆಯಲ್ಲಿದ್ದ ಬ್ಯಾನರ್ ಹರಿದುಹಾಕಿದ್ದಕ್ಕಾಗಿ ಈ ಕನ್ನಡ ಹೋರಾಟಗಾರರನ್ನು ಬಂಧಿಸಲಾಗಿದೆ. ಹಿಂದಿ ಹೇರಿಕೆ ವಿರುದ್ಧದ ಪ್ರತಿರೋಧವನ್ನು ಸಂಸದ ತೇಜಸ್ವಿ ಸೂರ್ಯ, ಇದು ಜೈನ ಧರ್ಮದ ಮೇಲಿನ ದಾಳಿ ಎಂಬಂತೆ ಬಿಂಬಿಸಿ ಟ್ವೀಟ್ ಮಾಡಿ ಅನಗತ್ಯವಾಗಿ ಧಾರ್ಮಿಕ ಸಂಘರ್ಷಕ್ಕೆ ಪ್ರಚೋದನೆ ನೀಡುವ ಪ್ರಯತ್ನ ಮಾಡಿದ್ದಾರೆ.

ಇದು ಕನ್ನಡ ಮತ್ತು ಹಿಂದಿಯ ನಡುವೆ ನಡೆಯುತ್ತಿರುವ ಸಂಘರ್ಷ. ಇದರಲ್ಲಿ ಜೈನ, ಹಿಂದು ಎಲ್ಲಿಂದ ಬಂತು? ಈ ರೀತಿ ಧರ್ಮವನ್ನು ಇದಕ್ಕೆ ಎಳೆದು ತರುತ್ತಿರುವವರ ಉದ್ದೇಶವಾದರೂ ಏನು? ಹಿಂದಿಯಲ್ಲಿದ್ದ ಬ್ಯಾನರ್ ಹರಿದುಹಾಕಿರುವುದು ಇದು ಮೊದಲನೇ ಸಲವೇನಲ್ಲ, ಬಹುಷ: ಕೊನೆಯದ್ದೂ ಅಲ್ಲ. ಅದನ್ನು ಅಪರಾಧವೆಂದು ಪರಿಗಣಿಸುವುದಾದರೆ ಆ ಪ್ರತಿರೋಧಕ್ಕೆ ಧರ್ಮವನ್ನು ತಳುಕುಹಾಕಿರುವುದು ಅದಕ್ಕಿಂತಲೂ ದೊಡ್ಡ ಅಪರಾಧ ಅಲ್ಲವೇ?

ಕನ್ನಡಿಗರು ಎಂದರೆ ಕನ್ನಡಿಗರು ಅಷ್ಟೇ, ಅದರಲ್ಲಿ ಹಿಂದು,ಮುಸ್ಲಿಮ್, ಕ್ರಿಶ್ಚಿಯನ್, ಜೈನ ಎಂಬ ಭೇದಗಳಿಲ್ಲ. ಇದು ಎರಡು ಸಾವಿರ ವರ್ಷಗಳ ಕನ್ನಡದ ಇತಿಹಾಸ ಕಲಿಸಿರುವ ಪಾಠ.

ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಸೂಕ್ಷ್ಮಗಳನ್ನೆಲ್ಲ ಗಮನಿಸುವಷ್ಟು ಸಮಯ ಮತ್ತು ಆಸಕ್ತಿ ಇದೆಯೋ ಗೊತ್ತಿಲ್ಲ. ಅವರ ಗಮನಕ್ಕಾದರೂ ಇದು ಬಂದಿದೆಯೋ ತಿಳಿದಿಲ್ಲ. ಕನ್ನಡಿಗರು ಉದ್ಯೋಗಕ್ಕಾಗಿ ನಡೆಸುತ್ತಿರುವ ಹೋರಾಟವನ್ನು ಗುರುತಿಸಿರುವ ಮುಖ್ಯಮಂತ್ರಿಗಳು ಮೊನ್ನೆ ಸ್ವಾತಂತ್ರ್ಯೋತ್ಸವ ಸಮಾರಂಭದ ಭಾಷಣದಲ್ಲಿ ಸಕರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಆದರೆ ಇದ್ದಕ್ಕಿದ್ದ ಹಾಗೆ ಹೋರಾಟಗಾರರನ್ನು ಬೆದರಿಸುವ, ಹತ್ತಿಕ್ಕುವ ಪ್ರಯತ್ನ ಪೊಲೀಸರಿಂದ ನಡೆದಿದೆ.

ಇದು ಸಂವಿಧಾನೇತರ ಶಕ್ತಿಗಳು ಜಾಗೃತಗೊಳ್ಳುತ್ತಿರುವ ಮತ್ತು ಚುನಾಯಿತ ಸರ್ಕಾರದ ಅಧಿಕಾರವನ್ನು ಹೈಜಾಕ್ ಮಾಡುವ ಪ್ರಯತ್ನದ ಆರಂಭ.. ಮುಖ್ಯಮಂತ್ರಿಗಳು ಜಾಗೃತರಾಗಿ ತಕ್ಷಣ ಮಧ್ಯಪ್ರವೇಶಿಸಿ ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸಲು ಆದೇಶ ನೀಡಬೇಕು. ಇದರ ಮೂಲಕ ರಾಜ್ಯಕ್ಕೆ ತಾವೇ ಮುಖ್ಯಮಂತ್ರಿ ಎನ್ನುವುದನ್ನು ಸಾರಿ ಹೇಳಬೇಕು. ಎಂದು ದಿನೇಶ್ ಅಮೀನ್ ಮಟ್ಟು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಯುವ ಕಾಂಗ್ರೆಸ್ ನ ಶ್ರೀವತ್ಸ ರವರು ಟ್ವೀಟ್ ಮಾಡಿದ್ದು,

  1. ಜೈನರ ಮೇಲೆ ಯಾವುದೇ ದಾಳಿ ನಡೆದಿಲ್ಲ. ಕನ್ನಡ ಪರ ಹೋರಾಟಗಾರರು ಹಿಂದಿ ಫ್ಲೆಕ್ಸ್ ಅನ್ನು ಮಾತ್ರ ತೆಗೆದಿದ್ದಾರೆ. ಅವರು ರೌಡಿಗಳಲ್ಲ.

2. ಜೈನ ಧರ್ಮವು ಪ್ರಾಸಂಗಿಕವಾಗಿದೆ. ಫ್ಲೆಕ್ಸ್‌ಗಳಲ್ಲಿ ಕನ್ನಡ ಇರಬೇಕು ಎಂಬುದು ನಿಯಮ.

3. ಅರೇಬಿಕ್ ಭಾಷೆಯಲ್ಲಿ ಎಳೆಯುವ ಮೂಲಕ ಕೋಮುವಾದದ ಪ್ರಯತ್ನ ಮಾಡಲಾಗುತ್ತಿದೆ.

ಆಧುನಿಕ ಮಹಾನಗರದ ಸಂಸದ, ಪರಿಹಾರಗಳನ್ನು ಕಂಡುಕೊಳ್ಳಬೇಕೆ ಹೊರತು ಪ್ರಚೋದಿಸಬಾರದು ಎಂದಿದ್ದಾರೆ.

“ತೇಜಸ್ವಿ ಸೂರ್ಯ ಮಾಡಿರುವ ಟ್ವೀಟ್ ಆಕ್ರಮಣಕಾರಿ ನಿರಂಕುಶ ಆಡಳಿತದ ಭಾಗವಾಗಿ ಹೊರಬಂದಿದೆ, ಇದು ಯಾವುದೇ ಕಾರಣಕ್ಕೂ ಸರಿ ಇಲ್ಲ” ಎಂದು ಸಂವಿಧಾನ ಉಳಿವಿಗಾಗಿ ಕರ್ನಾಟಕದ ಮುಖಂಡರಾದ ಕೆ.ಎಲ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.

ಫೇಸ್ ಬುಕ್ ನಲ್ಲಿ Karnataka Jains ಎಂಬ ಪೇಜ್ ನಿಂದ “ಕರ್ನಾಟಕದಲ್ಲಿ ಹಿಂದಿ ಹೇರಿಕೆ ಮಾಡುವವರನ್ನು ನಾವು ಬೆಂಬಲಿಸುವುದಿಲ್ಲ.” ಎಂದು ಪೋಸ್ಟ್ ಹಾಕಲಾಗಿದ್ದು ಅದಕ್ಕೆ ಬಹಳಷ್ಟು ಮೆಚ್ಚುಗೆಗಳು ವ್ಯಕ್ತವಾಗಿವೆ.

ಕಿಡಿಗೇಡಿಗಳೆಲ್ಲಾ ಸಂಸದರಾದರೆ ಏನಾಗುತ್ತೆ ಎಂಬುದಕ್ಕೆ ತೇಜಸ್ವಿ ಸೂರ್ಯನೇ ಸಾಕ್ಷಿ. ಯಾರೋ ಹಿಂದಿಯಲ್ಲಿ ಬೋರ್ಡು ಹಾಕಿಕೊಂಡಿದ್ದನ್ನು ಇನ್ಯಾರೋ ಹರಿದರಂತೆ. ಈ ಮಹಾಶಯ ಇಂತಹ ಸಂದರ್ಭವನ್ನು ಬಳಸಿಕೊಳ್ಳುತ್ತಿರುವ ರೀತಿ ನೋಡಿ….
ಇವನ ಟ್ವೀಟ್ ಎರಡು ಅರ್ಥ ಹೊರಡಿಸುತ್ತೆ
1) ಜೈನರೆಲ್ಲಾ ಹಿಂದಿ ಭಾಷಿಕರು ಅಂತ
2) ಕನ್ನಡಪರ ಹೋರಾಟಗಾರರು ಜೈನರ ವಿರೋಧಿಗಳು ಅಂತ.
ದಯವಿಟ್ಟು ಇಂತಹ ಕಿಡಿಗೇಡಿಗಳನ್ನು ನಂಬಬೇಡಿ. ಎಲ್ಲದ್ದಕ್ಕೂ ಧರ್ಮವನ್ನು ಎಳೆತಂದು ಬೆಂಕಿ ಹಚ್ಚುವುದು, ಗಲಭೆ ಹತ್ತಿಸುವುದು ಇವರುಗಳು ಲಾಗಾಯ್ತಿನಿಂದಲೂ ಮಾಡಿಕೊಂಡು ಬಂದಿರುವ ಚೇಷ್ಟೆಯೇ ಆಗಿದೆ.

ಜೈನರೇ ಆಗಿರಲಿ ಇನ್ಯಾವುದೇ ಧರ್ಮದವರೇ ಆಗಿರಲಿ ಕರ್ನಾಟಕದಲ್ಲಿ ಇದ್ದುಕೊಂಡು ವ್ಯಾಪಾರ/ವ್ಯವಹಾರ ಮಾಡುತ್ತಿದ್ದರೆ ಕನ್ನಡ ಕಲಿಯಲಿ, ಕನ್ನಡಿಗರಿಗೆ ಗೌರವ ಕೊಡಲಿ ಎಂದು ದರ್ಶನ್ ಜೈನ್ ಎಂಬುವವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಕನ್ನಡ ಹೋರಾಟಗಾರರ ಬಂಧನ ಮತ್ತು ಸಂಸದ ತೇಜಸ್ವಿ ಸೂರ್ಯ ಹೇಳಿಕೆಯ ವಿರುದ್ಧ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...