Homeಕರ್ನಾಟಕಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

- Advertisement -
- Advertisement -

ಜೈನ ದೇವಾಲಯವೊಂದರ ಬ್ಯಾನರ್ ನಲ್ಲಿ ಹಿಂದಿಯಿದ್ದ ಕಾರಣಕ್ಕಾಗಿ ಅದನ್ನು ತೆರವುಗೊಳಿಸಿ ಎಂದು ಕನ್ನಡ ಕಾರ್ಯಕರ್ತರು ಆಗ್ರಹಿಸಿದ್ದಕ್ಕೆ ಅವರನ್ನು ಬಂಧಿಸಲಾಗಿದೆ. ಇದೇ ವೇಳೆ ಈ ಘಟನೆಯನ್ನು ಜೈನರ ಮೇಲೆ ರೌಡಿಗಳಿಂದ ಹಲ್ಲೆ ಎಂದು ಕರೆಯುವ ಮೂಲಕ ಸಂಸದ ತೇಜಸ್ವಿ ಸೂರ್ಯ ಕನ್ನಡ ಭಾಷೆಯ ಪ್ರಕರಣವನ್ನು ಕೋಮುವಾದಿಕರಿಸುತ್ತಿದ್ದಾರೆ ಎಂದು ಹಲವರು ಖಂಡನೆ ವ್ಯಕ್ತಪಡಿಸಿದ್ದಾರೆ.

“ಕೆಲವು ರೌಡಿಗಳಿಂದ ಜೈನ ದೇವಾಲಯದ ಬ್ಯಾನರ್ ಮೇಲೆ ಹಿಂದಿ ಇದ್ದ ಕಾರಣಕ್ಕಾಗಿ ಬೆಂಗಳೂರಿನಲ್ಲಿನ ನಮ್ಮ ಜೈನ ಸಹೋದರರ ಮೇಲೆ ನಡೆಸಿದ ದಾಳಿಯಿಂದ ತೀವ್ರವಾಗಿ ನೋವುಂಟಾಗಿದೆ.

ಅವರು ಬೆಂಗಳೂರಿನಲ್ಲಿ ಉರ್ದು ಬಳಕೆಯನ್ನು ಎಂದಿಗೂ ಪ್ರಶ್ನಿಸುವುದಿಲ್ಲ.

ಕರ್ನಾಟಕಕ್ಕೆ ಕೊಡುಗೆ ನೀಡುವ ಶಾಂತಿಯುತ ಜೈನರನ್ನು ಆಕ್ರಮಣ ಮಾಡುವುದು ನಿಜವಾದ ಕನ್ನಡ ಪ್ರಿಯರಿಗೆ ಮತ್ತು ಕಾರ್ಯಕರ್ತರಿಗೆ ಅಪಚಾರವನ್ನು ತರುತ್ತದೆ”. ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಚಿಂತಕರಾದ ದಿನೇಶ್ ಅಮೀನ್ ಮಟ್ಟುರವರು ಫೇಸ್ ಬುಕ್ ನಲ್ಲಿ ಈ ಕೆಳಗಿನಂತೆ ಪ್ರತಿಕ್ರಿಯಿಸಿದ್ದಾರೆ.

ಹಿಂದಿ ಭಾಷೆಯಲ್ಲಿದ್ದ ಬ್ಯಾನರ್ ಹರಿದುಹಾಕಿದ್ದಕ್ಕಾಗಿ ಈ ಕನ್ನಡ ಹೋರಾಟಗಾರರನ್ನು ಬಂಧಿಸಲಾಗಿದೆ. ಹಿಂದಿ ಹೇರಿಕೆ ವಿರುದ್ಧದ ಪ್ರತಿರೋಧವನ್ನು ಸಂಸದ ತೇಜಸ್ವಿ ಸೂರ್ಯ, ಇದು ಜೈನ ಧರ್ಮದ ಮೇಲಿನ ದಾಳಿ ಎಂಬಂತೆ ಬಿಂಬಿಸಿ ಟ್ವೀಟ್ ಮಾಡಿ ಅನಗತ್ಯವಾಗಿ ಧಾರ್ಮಿಕ ಸಂಘರ್ಷಕ್ಕೆ ಪ್ರಚೋದನೆ ನೀಡುವ ಪ್ರಯತ್ನ ಮಾಡಿದ್ದಾರೆ.

ಇದು ಕನ್ನಡ ಮತ್ತು ಹಿಂದಿಯ ನಡುವೆ ನಡೆಯುತ್ತಿರುವ ಸಂಘರ್ಷ. ಇದರಲ್ಲಿ ಜೈನ, ಹಿಂದು ಎಲ್ಲಿಂದ ಬಂತು? ಈ ರೀತಿ ಧರ್ಮವನ್ನು ಇದಕ್ಕೆ ಎಳೆದು ತರುತ್ತಿರುವವರ ಉದ್ದೇಶವಾದರೂ ಏನು? ಹಿಂದಿಯಲ್ಲಿದ್ದ ಬ್ಯಾನರ್ ಹರಿದುಹಾಕಿರುವುದು ಇದು ಮೊದಲನೇ ಸಲವೇನಲ್ಲ, ಬಹುಷ: ಕೊನೆಯದ್ದೂ ಅಲ್ಲ. ಅದನ್ನು ಅಪರಾಧವೆಂದು ಪರಿಗಣಿಸುವುದಾದರೆ ಆ ಪ್ರತಿರೋಧಕ್ಕೆ ಧರ್ಮವನ್ನು ತಳುಕುಹಾಕಿರುವುದು ಅದಕ್ಕಿಂತಲೂ ದೊಡ್ಡ ಅಪರಾಧ ಅಲ್ಲವೇ?

ಕನ್ನಡಿಗರು ಎಂದರೆ ಕನ್ನಡಿಗರು ಅಷ್ಟೇ, ಅದರಲ್ಲಿ ಹಿಂದು,ಮುಸ್ಲಿಮ್, ಕ್ರಿಶ್ಚಿಯನ್, ಜೈನ ಎಂಬ ಭೇದಗಳಿಲ್ಲ. ಇದು ಎರಡು ಸಾವಿರ ವರ್ಷಗಳ ಕನ್ನಡದ ಇತಿಹಾಸ ಕಲಿಸಿರುವ ಪಾಠ.

ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಸೂಕ್ಷ್ಮಗಳನ್ನೆಲ್ಲ ಗಮನಿಸುವಷ್ಟು ಸಮಯ ಮತ್ತು ಆಸಕ್ತಿ ಇದೆಯೋ ಗೊತ್ತಿಲ್ಲ. ಅವರ ಗಮನಕ್ಕಾದರೂ ಇದು ಬಂದಿದೆಯೋ ತಿಳಿದಿಲ್ಲ. ಕನ್ನಡಿಗರು ಉದ್ಯೋಗಕ್ಕಾಗಿ ನಡೆಸುತ್ತಿರುವ ಹೋರಾಟವನ್ನು ಗುರುತಿಸಿರುವ ಮುಖ್ಯಮಂತ್ರಿಗಳು ಮೊನ್ನೆ ಸ್ವಾತಂತ್ರ್ಯೋತ್ಸವ ಸಮಾರಂಭದ ಭಾಷಣದಲ್ಲಿ ಸಕರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಆದರೆ ಇದ್ದಕ್ಕಿದ್ದ ಹಾಗೆ ಹೋರಾಟಗಾರರನ್ನು ಬೆದರಿಸುವ, ಹತ್ತಿಕ್ಕುವ ಪ್ರಯತ್ನ ಪೊಲೀಸರಿಂದ ನಡೆದಿದೆ.

ಇದು ಸಂವಿಧಾನೇತರ ಶಕ್ತಿಗಳು ಜಾಗೃತಗೊಳ್ಳುತ್ತಿರುವ ಮತ್ತು ಚುನಾಯಿತ ಸರ್ಕಾರದ ಅಧಿಕಾರವನ್ನು ಹೈಜಾಕ್ ಮಾಡುವ ಪ್ರಯತ್ನದ ಆರಂಭ.. ಮುಖ್ಯಮಂತ್ರಿಗಳು ಜಾಗೃತರಾಗಿ ತಕ್ಷಣ ಮಧ್ಯಪ್ರವೇಶಿಸಿ ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸಲು ಆದೇಶ ನೀಡಬೇಕು. ಇದರ ಮೂಲಕ ರಾಜ್ಯಕ್ಕೆ ತಾವೇ ಮುಖ್ಯಮಂತ್ರಿ ಎನ್ನುವುದನ್ನು ಸಾರಿ ಹೇಳಬೇಕು. ಎಂದು ದಿನೇಶ್ ಅಮೀನ್ ಮಟ್ಟು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಯುವ ಕಾಂಗ್ರೆಸ್ ನ ಶ್ರೀವತ್ಸ ರವರು ಟ್ವೀಟ್ ಮಾಡಿದ್ದು,

  1. ಜೈನರ ಮೇಲೆ ಯಾವುದೇ ದಾಳಿ ನಡೆದಿಲ್ಲ. ಕನ್ನಡ ಪರ ಹೋರಾಟಗಾರರು ಹಿಂದಿ ಫ್ಲೆಕ್ಸ್ ಅನ್ನು ಮಾತ್ರ ತೆಗೆದಿದ್ದಾರೆ. ಅವರು ರೌಡಿಗಳಲ್ಲ.

2. ಜೈನ ಧರ್ಮವು ಪ್ರಾಸಂಗಿಕವಾಗಿದೆ. ಫ್ಲೆಕ್ಸ್‌ಗಳಲ್ಲಿ ಕನ್ನಡ ಇರಬೇಕು ಎಂಬುದು ನಿಯಮ.

3. ಅರೇಬಿಕ್ ಭಾಷೆಯಲ್ಲಿ ಎಳೆಯುವ ಮೂಲಕ ಕೋಮುವಾದದ ಪ್ರಯತ್ನ ಮಾಡಲಾಗುತ್ತಿದೆ.

ಆಧುನಿಕ ಮಹಾನಗರದ ಸಂಸದ, ಪರಿಹಾರಗಳನ್ನು ಕಂಡುಕೊಳ್ಳಬೇಕೆ ಹೊರತು ಪ್ರಚೋದಿಸಬಾರದು ಎಂದಿದ್ದಾರೆ.

“ತೇಜಸ್ವಿ ಸೂರ್ಯ ಮಾಡಿರುವ ಟ್ವೀಟ್ ಆಕ್ರಮಣಕಾರಿ ನಿರಂಕುಶ ಆಡಳಿತದ ಭಾಗವಾಗಿ ಹೊರಬಂದಿದೆ, ಇದು ಯಾವುದೇ ಕಾರಣಕ್ಕೂ ಸರಿ ಇಲ್ಲ” ಎಂದು ಸಂವಿಧಾನ ಉಳಿವಿಗಾಗಿ ಕರ್ನಾಟಕದ ಮುಖಂಡರಾದ ಕೆ.ಎಲ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.

ಫೇಸ್ ಬುಕ್ ನಲ್ಲಿ Karnataka Jains ಎಂಬ ಪೇಜ್ ನಿಂದ “ಕರ್ನಾಟಕದಲ್ಲಿ ಹಿಂದಿ ಹೇರಿಕೆ ಮಾಡುವವರನ್ನು ನಾವು ಬೆಂಬಲಿಸುವುದಿಲ್ಲ.” ಎಂದು ಪೋಸ್ಟ್ ಹಾಕಲಾಗಿದ್ದು ಅದಕ್ಕೆ ಬಹಳಷ್ಟು ಮೆಚ್ಚುಗೆಗಳು ವ್ಯಕ್ತವಾಗಿವೆ.

ಕಿಡಿಗೇಡಿಗಳೆಲ್ಲಾ ಸಂಸದರಾದರೆ ಏನಾಗುತ್ತೆ ಎಂಬುದಕ್ಕೆ ತೇಜಸ್ವಿ ಸೂರ್ಯನೇ ಸಾಕ್ಷಿ. ಯಾರೋ ಹಿಂದಿಯಲ್ಲಿ ಬೋರ್ಡು ಹಾಕಿಕೊಂಡಿದ್ದನ್ನು ಇನ್ಯಾರೋ ಹರಿದರಂತೆ. ಈ ಮಹಾಶಯ ಇಂತಹ ಸಂದರ್ಭವನ್ನು ಬಳಸಿಕೊಳ್ಳುತ್ತಿರುವ ರೀತಿ ನೋಡಿ….
ಇವನ ಟ್ವೀಟ್ ಎರಡು ಅರ್ಥ ಹೊರಡಿಸುತ್ತೆ
1) ಜೈನರೆಲ್ಲಾ ಹಿಂದಿ ಭಾಷಿಕರು ಅಂತ
2) ಕನ್ನಡಪರ ಹೋರಾಟಗಾರರು ಜೈನರ ವಿರೋಧಿಗಳು ಅಂತ.
ದಯವಿಟ್ಟು ಇಂತಹ ಕಿಡಿಗೇಡಿಗಳನ್ನು ನಂಬಬೇಡಿ. ಎಲ್ಲದ್ದಕ್ಕೂ ಧರ್ಮವನ್ನು ಎಳೆತಂದು ಬೆಂಕಿ ಹಚ್ಚುವುದು, ಗಲಭೆ ಹತ್ತಿಸುವುದು ಇವರುಗಳು ಲಾಗಾಯ್ತಿನಿಂದಲೂ ಮಾಡಿಕೊಂಡು ಬಂದಿರುವ ಚೇಷ್ಟೆಯೇ ಆಗಿದೆ.

ಜೈನರೇ ಆಗಿರಲಿ ಇನ್ಯಾವುದೇ ಧರ್ಮದವರೇ ಆಗಿರಲಿ ಕರ್ನಾಟಕದಲ್ಲಿ ಇದ್ದುಕೊಂಡು ವ್ಯಾಪಾರ/ವ್ಯವಹಾರ ಮಾಡುತ್ತಿದ್ದರೆ ಕನ್ನಡ ಕಲಿಯಲಿ, ಕನ್ನಡಿಗರಿಗೆ ಗೌರವ ಕೊಡಲಿ ಎಂದು ದರ್ಶನ್ ಜೈನ್ ಎಂಬುವವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಕನ್ನಡ ಹೋರಾಟಗಾರರ ಬಂಧನ ಮತ್ತು ಸಂಸದ ತೇಜಸ್ವಿ ಸೂರ್ಯ ಹೇಳಿಕೆಯ ವಿರುದ್ಧ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...