Homeಕರ್ನಾಟಕಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

- Advertisement -
- Advertisement -

ಜೈನ ದೇವಾಲಯವೊಂದರ ಬ್ಯಾನರ್ ನಲ್ಲಿ ಹಿಂದಿಯಿದ್ದ ಕಾರಣಕ್ಕಾಗಿ ಅದನ್ನು ತೆರವುಗೊಳಿಸಿ ಎಂದು ಕನ್ನಡ ಕಾರ್ಯಕರ್ತರು ಆಗ್ರಹಿಸಿದ್ದಕ್ಕೆ ಅವರನ್ನು ಬಂಧಿಸಲಾಗಿದೆ. ಇದೇ ವೇಳೆ ಈ ಘಟನೆಯನ್ನು ಜೈನರ ಮೇಲೆ ರೌಡಿಗಳಿಂದ ಹಲ್ಲೆ ಎಂದು ಕರೆಯುವ ಮೂಲಕ ಸಂಸದ ತೇಜಸ್ವಿ ಸೂರ್ಯ ಕನ್ನಡ ಭಾಷೆಯ ಪ್ರಕರಣವನ್ನು ಕೋಮುವಾದಿಕರಿಸುತ್ತಿದ್ದಾರೆ ಎಂದು ಹಲವರು ಖಂಡನೆ ವ್ಯಕ್ತಪಡಿಸಿದ್ದಾರೆ.

“ಕೆಲವು ರೌಡಿಗಳಿಂದ ಜೈನ ದೇವಾಲಯದ ಬ್ಯಾನರ್ ಮೇಲೆ ಹಿಂದಿ ಇದ್ದ ಕಾರಣಕ್ಕಾಗಿ ಬೆಂಗಳೂರಿನಲ್ಲಿನ ನಮ್ಮ ಜೈನ ಸಹೋದರರ ಮೇಲೆ ನಡೆಸಿದ ದಾಳಿಯಿಂದ ತೀವ್ರವಾಗಿ ನೋವುಂಟಾಗಿದೆ.

ಅವರು ಬೆಂಗಳೂರಿನಲ್ಲಿ ಉರ್ದು ಬಳಕೆಯನ್ನು ಎಂದಿಗೂ ಪ್ರಶ್ನಿಸುವುದಿಲ್ಲ.

ಕರ್ನಾಟಕಕ್ಕೆ ಕೊಡುಗೆ ನೀಡುವ ಶಾಂತಿಯುತ ಜೈನರನ್ನು ಆಕ್ರಮಣ ಮಾಡುವುದು ನಿಜವಾದ ಕನ್ನಡ ಪ್ರಿಯರಿಗೆ ಮತ್ತು ಕಾರ್ಯಕರ್ತರಿಗೆ ಅಪಚಾರವನ್ನು ತರುತ್ತದೆ”. ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಚಿಂತಕರಾದ ದಿನೇಶ್ ಅಮೀನ್ ಮಟ್ಟುರವರು ಫೇಸ್ ಬುಕ್ ನಲ್ಲಿ ಈ ಕೆಳಗಿನಂತೆ ಪ್ರತಿಕ್ರಿಯಿಸಿದ್ದಾರೆ.

ಹಿಂದಿ ಭಾಷೆಯಲ್ಲಿದ್ದ ಬ್ಯಾನರ್ ಹರಿದುಹಾಕಿದ್ದಕ್ಕಾಗಿ ಈ ಕನ್ನಡ ಹೋರಾಟಗಾರರನ್ನು ಬಂಧಿಸಲಾಗಿದೆ. ಹಿಂದಿ ಹೇರಿಕೆ ವಿರುದ್ಧದ ಪ್ರತಿರೋಧವನ್ನು ಸಂಸದ ತೇಜಸ್ವಿ ಸೂರ್ಯ, ಇದು ಜೈನ ಧರ್ಮದ ಮೇಲಿನ ದಾಳಿ ಎಂಬಂತೆ ಬಿಂಬಿಸಿ ಟ್ವೀಟ್ ಮಾಡಿ ಅನಗತ್ಯವಾಗಿ ಧಾರ್ಮಿಕ ಸಂಘರ್ಷಕ್ಕೆ ಪ್ರಚೋದನೆ ನೀಡುವ ಪ್ರಯತ್ನ ಮಾಡಿದ್ದಾರೆ.

ಇದು ಕನ್ನಡ ಮತ್ತು ಹಿಂದಿಯ ನಡುವೆ ನಡೆಯುತ್ತಿರುವ ಸಂಘರ್ಷ. ಇದರಲ್ಲಿ ಜೈನ, ಹಿಂದು ಎಲ್ಲಿಂದ ಬಂತು? ಈ ರೀತಿ ಧರ್ಮವನ್ನು ಇದಕ್ಕೆ ಎಳೆದು ತರುತ್ತಿರುವವರ ಉದ್ದೇಶವಾದರೂ ಏನು? ಹಿಂದಿಯಲ್ಲಿದ್ದ ಬ್ಯಾನರ್ ಹರಿದುಹಾಕಿರುವುದು ಇದು ಮೊದಲನೇ ಸಲವೇನಲ್ಲ, ಬಹುಷ: ಕೊನೆಯದ್ದೂ ಅಲ್ಲ. ಅದನ್ನು ಅಪರಾಧವೆಂದು ಪರಿಗಣಿಸುವುದಾದರೆ ಆ ಪ್ರತಿರೋಧಕ್ಕೆ ಧರ್ಮವನ್ನು ತಳುಕುಹಾಕಿರುವುದು ಅದಕ್ಕಿಂತಲೂ ದೊಡ್ಡ ಅಪರಾಧ ಅಲ್ಲವೇ?

ಕನ್ನಡಿಗರು ಎಂದರೆ ಕನ್ನಡಿಗರು ಅಷ್ಟೇ, ಅದರಲ್ಲಿ ಹಿಂದು,ಮುಸ್ಲಿಮ್, ಕ್ರಿಶ್ಚಿಯನ್, ಜೈನ ಎಂಬ ಭೇದಗಳಿಲ್ಲ. ಇದು ಎರಡು ಸಾವಿರ ವರ್ಷಗಳ ಕನ್ನಡದ ಇತಿಹಾಸ ಕಲಿಸಿರುವ ಪಾಠ.

ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಸೂಕ್ಷ್ಮಗಳನ್ನೆಲ್ಲ ಗಮನಿಸುವಷ್ಟು ಸಮಯ ಮತ್ತು ಆಸಕ್ತಿ ಇದೆಯೋ ಗೊತ್ತಿಲ್ಲ. ಅವರ ಗಮನಕ್ಕಾದರೂ ಇದು ಬಂದಿದೆಯೋ ತಿಳಿದಿಲ್ಲ. ಕನ್ನಡಿಗರು ಉದ್ಯೋಗಕ್ಕಾಗಿ ನಡೆಸುತ್ತಿರುವ ಹೋರಾಟವನ್ನು ಗುರುತಿಸಿರುವ ಮುಖ್ಯಮಂತ್ರಿಗಳು ಮೊನ್ನೆ ಸ್ವಾತಂತ್ರ್ಯೋತ್ಸವ ಸಮಾರಂಭದ ಭಾಷಣದಲ್ಲಿ ಸಕರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಆದರೆ ಇದ್ದಕ್ಕಿದ್ದ ಹಾಗೆ ಹೋರಾಟಗಾರರನ್ನು ಬೆದರಿಸುವ, ಹತ್ತಿಕ್ಕುವ ಪ್ರಯತ್ನ ಪೊಲೀಸರಿಂದ ನಡೆದಿದೆ.

ಇದು ಸಂವಿಧಾನೇತರ ಶಕ್ತಿಗಳು ಜಾಗೃತಗೊಳ್ಳುತ್ತಿರುವ ಮತ್ತು ಚುನಾಯಿತ ಸರ್ಕಾರದ ಅಧಿಕಾರವನ್ನು ಹೈಜಾಕ್ ಮಾಡುವ ಪ್ರಯತ್ನದ ಆರಂಭ.. ಮುಖ್ಯಮಂತ್ರಿಗಳು ಜಾಗೃತರಾಗಿ ತಕ್ಷಣ ಮಧ್ಯಪ್ರವೇಶಿಸಿ ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸಲು ಆದೇಶ ನೀಡಬೇಕು. ಇದರ ಮೂಲಕ ರಾಜ್ಯಕ್ಕೆ ತಾವೇ ಮುಖ್ಯಮಂತ್ರಿ ಎನ್ನುವುದನ್ನು ಸಾರಿ ಹೇಳಬೇಕು. ಎಂದು ದಿನೇಶ್ ಅಮೀನ್ ಮಟ್ಟು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಯುವ ಕಾಂಗ್ರೆಸ್ ನ ಶ್ರೀವತ್ಸ ರವರು ಟ್ವೀಟ್ ಮಾಡಿದ್ದು,

  1. ಜೈನರ ಮೇಲೆ ಯಾವುದೇ ದಾಳಿ ನಡೆದಿಲ್ಲ. ಕನ್ನಡ ಪರ ಹೋರಾಟಗಾರರು ಹಿಂದಿ ಫ್ಲೆಕ್ಸ್ ಅನ್ನು ಮಾತ್ರ ತೆಗೆದಿದ್ದಾರೆ. ಅವರು ರೌಡಿಗಳಲ್ಲ.

2. ಜೈನ ಧರ್ಮವು ಪ್ರಾಸಂಗಿಕವಾಗಿದೆ. ಫ್ಲೆಕ್ಸ್‌ಗಳಲ್ಲಿ ಕನ್ನಡ ಇರಬೇಕು ಎಂಬುದು ನಿಯಮ.

3. ಅರೇಬಿಕ್ ಭಾಷೆಯಲ್ಲಿ ಎಳೆಯುವ ಮೂಲಕ ಕೋಮುವಾದದ ಪ್ರಯತ್ನ ಮಾಡಲಾಗುತ್ತಿದೆ.

ಆಧುನಿಕ ಮಹಾನಗರದ ಸಂಸದ, ಪರಿಹಾರಗಳನ್ನು ಕಂಡುಕೊಳ್ಳಬೇಕೆ ಹೊರತು ಪ್ರಚೋದಿಸಬಾರದು ಎಂದಿದ್ದಾರೆ.

“ತೇಜಸ್ವಿ ಸೂರ್ಯ ಮಾಡಿರುವ ಟ್ವೀಟ್ ಆಕ್ರಮಣಕಾರಿ ನಿರಂಕುಶ ಆಡಳಿತದ ಭಾಗವಾಗಿ ಹೊರಬಂದಿದೆ, ಇದು ಯಾವುದೇ ಕಾರಣಕ್ಕೂ ಸರಿ ಇಲ್ಲ” ಎಂದು ಸಂವಿಧಾನ ಉಳಿವಿಗಾಗಿ ಕರ್ನಾಟಕದ ಮುಖಂಡರಾದ ಕೆ.ಎಲ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.

ಫೇಸ್ ಬುಕ್ ನಲ್ಲಿ Karnataka Jains ಎಂಬ ಪೇಜ್ ನಿಂದ “ಕರ್ನಾಟಕದಲ್ಲಿ ಹಿಂದಿ ಹೇರಿಕೆ ಮಾಡುವವರನ್ನು ನಾವು ಬೆಂಬಲಿಸುವುದಿಲ್ಲ.” ಎಂದು ಪೋಸ್ಟ್ ಹಾಕಲಾಗಿದ್ದು ಅದಕ್ಕೆ ಬಹಳಷ್ಟು ಮೆಚ್ಚುಗೆಗಳು ವ್ಯಕ್ತವಾಗಿವೆ.

ಕಿಡಿಗೇಡಿಗಳೆಲ್ಲಾ ಸಂಸದರಾದರೆ ಏನಾಗುತ್ತೆ ಎಂಬುದಕ್ಕೆ ತೇಜಸ್ವಿ ಸೂರ್ಯನೇ ಸಾಕ್ಷಿ. ಯಾರೋ ಹಿಂದಿಯಲ್ಲಿ ಬೋರ್ಡು ಹಾಕಿಕೊಂಡಿದ್ದನ್ನು ಇನ್ಯಾರೋ ಹರಿದರಂತೆ. ಈ ಮಹಾಶಯ ಇಂತಹ ಸಂದರ್ಭವನ್ನು ಬಳಸಿಕೊಳ್ಳುತ್ತಿರುವ ರೀತಿ ನೋಡಿ….
ಇವನ ಟ್ವೀಟ್ ಎರಡು ಅರ್ಥ ಹೊರಡಿಸುತ್ತೆ
1) ಜೈನರೆಲ್ಲಾ ಹಿಂದಿ ಭಾಷಿಕರು ಅಂತ
2) ಕನ್ನಡಪರ ಹೋರಾಟಗಾರರು ಜೈನರ ವಿರೋಧಿಗಳು ಅಂತ.
ದಯವಿಟ್ಟು ಇಂತಹ ಕಿಡಿಗೇಡಿಗಳನ್ನು ನಂಬಬೇಡಿ. ಎಲ್ಲದ್ದಕ್ಕೂ ಧರ್ಮವನ್ನು ಎಳೆತಂದು ಬೆಂಕಿ ಹಚ್ಚುವುದು, ಗಲಭೆ ಹತ್ತಿಸುವುದು ಇವರುಗಳು ಲಾಗಾಯ್ತಿನಿಂದಲೂ ಮಾಡಿಕೊಂಡು ಬಂದಿರುವ ಚೇಷ್ಟೆಯೇ ಆಗಿದೆ.

ಜೈನರೇ ಆಗಿರಲಿ ಇನ್ಯಾವುದೇ ಧರ್ಮದವರೇ ಆಗಿರಲಿ ಕರ್ನಾಟಕದಲ್ಲಿ ಇದ್ದುಕೊಂಡು ವ್ಯಾಪಾರ/ವ್ಯವಹಾರ ಮಾಡುತ್ತಿದ್ದರೆ ಕನ್ನಡ ಕಲಿಯಲಿ, ಕನ್ನಡಿಗರಿಗೆ ಗೌರವ ಕೊಡಲಿ ಎಂದು ದರ್ಶನ್ ಜೈನ್ ಎಂಬುವವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಕನ್ನಡ ಹೋರಾಟಗಾರರ ಬಂಧನ ಮತ್ತು ಸಂಸದ ತೇಜಸ್ವಿ ಸೂರ್ಯ ಹೇಳಿಕೆಯ ವಿರುದ್ಧ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...