Homeಕರ್ನಾಟಕಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

- Advertisement -
- Advertisement -

ಜೈನ ದೇವಾಲಯವೊಂದರ ಬ್ಯಾನರ್ ನಲ್ಲಿ ಹಿಂದಿಯಿದ್ದ ಕಾರಣಕ್ಕಾಗಿ ಅದನ್ನು ತೆರವುಗೊಳಿಸಿ ಎಂದು ಕನ್ನಡ ಕಾರ್ಯಕರ್ತರು ಆಗ್ರಹಿಸಿದ್ದಕ್ಕೆ ಅವರನ್ನು ಬಂಧಿಸಲಾಗಿದೆ. ಇದೇ ವೇಳೆ ಈ ಘಟನೆಯನ್ನು ಜೈನರ ಮೇಲೆ ರೌಡಿಗಳಿಂದ ಹಲ್ಲೆ ಎಂದು ಕರೆಯುವ ಮೂಲಕ ಸಂಸದ ತೇಜಸ್ವಿ ಸೂರ್ಯ ಕನ್ನಡ ಭಾಷೆಯ ಪ್ರಕರಣವನ್ನು ಕೋಮುವಾದಿಕರಿಸುತ್ತಿದ್ದಾರೆ ಎಂದು ಹಲವರು ಖಂಡನೆ ವ್ಯಕ್ತಪಡಿಸಿದ್ದಾರೆ.

“ಕೆಲವು ರೌಡಿಗಳಿಂದ ಜೈನ ದೇವಾಲಯದ ಬ್ಯಾನರ್ ಮೇಲೆ ಹಿಂದಿ ಇದ್ದ ಕಾರಣಕ್ಕಾಗಿ ಬೆಂಗಳೂರಿನಲ್ಲಿನ ನಮ್ಮ ಜೈನ ಸಹೋದರರ ಮೇಲೆ ನಡೆಸಿದ ದಾಳಿಯಿಂದ ತೀವ್ರವಾಗಿ ನೋವುಂಟಾಗಿದೆ.

ಅವರು ಬೆಂಗಳೂರಿನಲ್ಲಿ ಉರ್ದು ಬಳಕೆಯನ್ನು ಎಂದಿಗೂ ಪ್ರಶ್ನಿಸುವುದಿಲ್ಲ.

ಕರ್ನಾಟಕಕ್ಕೆ ಕೊಡುಗೆ ನೀಡುವ ಶಾಂತಿಯುತ ಜೈನರನ್ನು ಆಕ್ರಮಣ ಮಾಡುವುದು ನಿಜವಾದ ಕನ್ನಡ ಪ್ರಿಯರಿಗೆ ಮತ್ತು ಕಾರ್ಯಕರ್ತರಿಗೆ ಅಪಚಾರವನ್ನು ತರುತ್ತದೆ”. ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಚಿಂತಕರಾದ ದಿನೇಶ್ ಅಮೀನ್ ಮಟ್ಟುರವರು ಫೇಸ್ ಬುಕ್ ನಲ್ಲಿ ಈ ಕೆಳಗಿನಂತೆ ಪ್ರತಿಕ್ರಿಯಿಸಿದ್ದಾರೆ.

ಹಿಂದಿ ಭಾಷೆಯಲ್ಲಿದ್ದ ಬ್ಯಾನರ್ ಹರಿದುಹಾಕಿದ್ದಕ್ಕಾಗಿ ಈ ಕನ್ನಡ ಹೋರಾಟಗಾರರನ್ನು ಬಂಧಿಸಲಾಗಿದೆ. ಹಿಂದಿ ಹೇರಿಕೆ ವಿರುದ್ಧದ ಪ್ರತಿರೋಧವನ್ನು ಸಂಸದ ತೇಜಸ್ವಿ ಸೂರ್ಯ, ಇದು ಜೈನ ಧರ್ಮದ ಮೇಲಿನ ದಾಳಿ ಎಂಬಂತೆ ಬಿಂಬಿಸಿ ಟ್ವೀಟ್ ಮಾಡಿ ಅನಗತ್ಯವಾಗಿ ಧಾರ್ಮಿಕ ಸಂಘರ್ಷಕ್ಕೆ ಪ್ರಚೋದನೆ ನೀಡುವ ಪ್ರಯತ್ನ ಮಾಡಿದ್ದಾರೆ.

ಇದು ಕನ್ನಡ ಮತ್ತು ಹಿಂದಿಯ ನಡುವೆ ನಡೆಯುತ್ತಿರುವ ಸಂಘರ್ಷ. ಇದರಲ್ಲಿ ಜೈನ, ಹಿಂದು ಎಲ್ಲಿಂದ ಬಂತು? ಈ ರೀತಿ ಧರ್ಮವನ್ನು ಇದಕ್ಕೆ ಎಳೆದು ತರುತ್ತಿರುವವರ ಉದ್ದೇಶವಾದರೂ ಏನು? ಹಿಂದಿಯಲ್ಲಿದ್ದ ಬ್ಯಾನರ್ ಹರಿದುಹಾಕಿರುವುದು ಇದು ಮೊದಲನೇ ಸಲವೇನಲ್ಲ, ಬಹುಷ: ಕೊನೆಯದ್ದೂ ಅಲ್ಲ. ಅದನ್ನು ಅಪರಾಧವೆಂದು ಪರಿಗಣಿಸುವುದಾದರೆ ಆ ಪ್ರತಿರೋಧಕ್ಕೆ ಧರ್ಮವನ್ನು ತಳುಕುಹಾಕಿರುವುದು ಅದಕ್ಕಿಂತಲೂ ದೊಡ್ಡ ಅಪರಾಧ ಅಲ್ಲವೇ?

ಕನ್ನಡಿಗರು ಎಂದರೆ ಕನ್ನಡಿಗರು ಅಷ್ಟೇ, ಅದರಲ್ಲಿ ಹಿಂದು,ಮುಸ್ಲಿಮ್, ಕ್ರಿಶ್ಚಿಯನ್, ಜೈನ ಎಂಬ ಭೇದಗಳಿಲ್ಲ. ಇದು ಎರಡು ಸಾವಿರ ವರ್ಷಗಳ ಕನ್ನಡದ ಇತಿಹಾಸ ಕಲಿಸಿರುವ ಪಾಠ.

ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಸೂಕ್ಷ್ಮಗಳನ್ನೆಲ್ಲ ಗಮನಿಸುವಷ್ಟು ಸಮಯ ಮತ್ತು ಆಸಕ್ತಿ ಇದೆಯೋ ಗೊತ್ತಿಲ್ಲ. ಅವರ ಗಮನಕ್ಕಾದರೂ ಇದು ಬಂದಿದೆಯೋ ತಿಳಿದಿಲ್ಲ. ಕನ್ನಡಿಗರು ಉದ್ಯೋಗಕ್ಕಾಗಿ ನಡೆಸುತ್ತಿರುವ ಹೋರಾಟವನ್ನು ಗುರುತಿಸಿರುವ ಮುಖ್ಯಮಂತ್ರಿಗಳು ಮೊನ್ನೆ ಸ್ವಾತಂತ್ರ್ಯೋತ್ಸವ ಸಮಾರಂಭದ ಭಾಷಣದಲ್ಲಿ ಸಕರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಆದರೆ ಇದ್ದಕ್ಕಿದ್ದ ಹಾಗೆ ಹೋರಾಟಗಾರರನ್ನು ಬೆದರಿಸುವ, ಹತ್ತಿಕ್ಕುವ ಪ್ರಯತ್ನ ಪೊಲೀಸರಿಂದ ನಡೆದಿದೆ.

ಇದು ಸಂವಿಧಾನೇತರ ಶಕ್ತಿಗಳು ಜಾಗೃತಗೊಳ್ಳುತ್ತಿರುವ ಮತ್ತು ಚುನಾಯಿತ ಸರ್ಕಾರದ ಅಧಿಕಾರವನ್ನು ಹೈಜಾಕ್ ಮಾಡುವ ಪ್ರಯತ್ನದ ಆರಂಭ.. ಮುಖ್ಯಮಂತ್ರಿಗಳು ಜಾಗೃತರಾಗಿ ತಕ್ಷಣ ಮಧ್ಯಪ್ರವೇಶಿಸಿ ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸಲು ಆದೇಶ ನೀಡಬೇಕು. ಇದರ ಮೂಲಕ ರಾಜ್ಯಕ್ಕೆ ತಾವೇ ಮುಖ್ಯಮಂತ್ರಿ ಎನ್ನುವುದನ್ನು ಸಾರಿ ಹೇಳಬೇಕು. ಎಂದು ದಿನೇಶ್ ಅಮೀನ್ ಮಟ್ಟು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಯುವ ಕಾಂಗ್ರೆಸ್ ನ ಶ್ರೀವತ್ಸ ರವರು ಟ್ವೀಟ್ ಮಾಡಿದ್ದು,

  1. ಜೈನರ ಮೇಲೆ ಯಾವುದೇ ದಾಳಿ ನಡೆದಿಲ್ಲ. ಕನ್ನಡ ಪರ ಹೋರಾಟಗಾರರು ಹಿಂದಿ ಫ್ಲೆಕ್ಸ್ ಅನ್ನು ಮಾತ್ರ ತೆಗೆದಿದ್ದಾರೆ. ಅವರು ರೌಡಿಗಳಲ್ಲ.

2. ಜೈನ ಧರ್ಮವು ಪ್ರಾಸಂಗಿಕವಾಗಿದೆ. ಫ್ಲೆಕ್ಸ್‌ಗಳಲ್ಲಿ ಕನ್ನಡ ಇರಬೇಕು ಎಂಬುದು ನಿಯಮ.

3. ಅರೇಬಿಕ್ ಭಾಷೆಯಲ್ಲಿ ಎಳೆಯುವ ಮೂಲಕ ಕೋಮುವಾದದ ಪ್ರಯತ್ನ ಮಾಡಲಾಗುತ್ತಿದೆ.

ಆಧುನಿಕ ಮಹಾನಗರದ ಸಂಸದ, ಪರಿಹಾರಗಳನ್ನು ಕಂಡುಕೊಳ್ಳಬೇಕೆ ಹೊರತು ಪ್ರಚೋದಿಸಬಾರದು ಎಂದಿದ್ದಾರೆ.

“ತೇಜಸ್ವಿ ಸೂರ್ಯ ಮಾಡಿರುವ ಟ್ವೀಟ್ ಆಕ್ರಮಣಕಾರಿ ನಿರಂಕುಶ ಆಡಳಿತದ ಭಾಗವಾಗಿ ಹೊರಬಂದಿದೆ, ಇದು ಯಾವುದೇ ಕಾರಣಕ್ಕೂ ಸರಿ ಇಲ್ಲ” ಎಂದು ಸಂವಿಧಾನ ಉಳಿವಿಗಾಗಿ ಕರ್ನಾಟಕದ ಮುಖಂಡರಾದ ಕೆ.ಎಲ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.

ಫೇಸ್ ಬುಕ್ ನಲ್ಲಿ Karnataka Jains ಎಂಬ ಪೇಜ್ ನಿಂದ “ಕರ್ನಾಟಕದಲ್ಲಿ ಹಿಂದಿ ಹೇರಿಕೆ ಮಾಡುವವರನ್ನು ನಾವು ಬೆಂಬಲಿಸುವುದಿಲ್ಲ.” ಎಂದು ಪೋಸ್ಟ್ ಹಾಕಲಾಗಿದ್ದು ಅದಕ್ಕೆ ಬಹಳಷ್ಟು ಮೆಚ್ಚುಗೆಗಳು ವ್ಯಕ್ತವಾಗಿವೆ.

ಕಿಡಿಗೇಡಿಗಳೆಲ್ಲಾ ಸಂಸದರಾದರೆ ಏನಾಗುತ್ತೆ ಎಂಬುದಕ್ಕೆ ತೇಜಸ್ವಿ ಸೂರ್ಯನೇ ಸಾಕ್ಷಿ. ಯಾರೋ ಹಿಂದಿಯಲ್ಲಿ ಬೋರ್ಡು ಹಾಕಿಕೊಂಡಿದ್ದನ್ನು ಇನ್ಯಾರೋ ಹರಿದರಂತೆ. ಈ ಮಹಾಶಯ ಇಂತಹ ಸಂದರ್ಭವನ್ನು ಬಳಸಿಕೊಳ್ಳುತ್ತಿರುವ ರೀತಿ ನೋಡಿ….
ಇವನ ಟ್ವೀಟ್ ಎರಡು ಅರ್ಥ ಹೊರಡಿಸುತ್ತೆ
1) ಜೈನರೆಲ್ಲಾ ಹಿಂದಿ ಭಾಷಿಕರು ಅಂತ
2) ಕನ್ನಡಪರ ಹೋರಾಟಗಾರರು ಜೈನರ ವಿರೋಧಿಗಳು ಅಂತ.
ದಯವಿಟ್ಟು ಇಂತಹ ಕಿಡಿಗೇಡಿಗಳನ್ನು ನಂಬಬೇಡಿ. ಎಲ್ಲದ್ದಕ್ಕೂ ಧರ್ಮವನ್ನು ಎಳೆತಂದು ಬೆಂಕಿ ಹಚ್ಚುವುದು, ಗಲಭೆ ಹತ್ತಿಸುವುದು ಇವರುಗಳು ಲಾಗಾಯ್ತಿನಿಂದಲೂ ಮಾಡಿಕೊಂಡು ಬಂದಿರುವ ಚೇಷ್ಟೆಯೇ ಆಗಿದೆ.

ಜೈನರೇ ಆಗಿರಲಿ ಇನ್ಯಾವುದೇ ಧರ್ಮದವರೇ ಆಗಿರಲಿ ಕರ್ನಾಟಕದಲ್ಲಿ ಇದ್ದುಕೊಂಡು ವ್ಯಾಪಾರ/ವ್ಯವಹಾರ ಮಾಡುತ್ತಿದ್ದರೆ ಕನ್ನಡ ಕಲಿಯಲಿ, ಕನ್ನಡಿಗರಿಗೆ ಗೌರವ ಕೊಡಲಿ ಎಂದು ದರ್ಶನ್ ಜೈನ್ ಎಂಬುವವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಕನ್ನಡ ಹೋರಾಟಗಾರರ ಬಂಧನ ಮತ್ತು ಸಂಸದ ತೇಜಸ್ವಿ ಸೂರ್ಯ ಹೇಳಿಕೆಯ ವಿರುದ್ಧ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...