Homeಕರ್ನಾಟಕಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

- Advertisement -
- Advertisement -

ಜೈನ ದೇವಾಲಯವೊಂದರ ಬ್ಯಾನರ್ ನಲ್ಲಿ ಹಿಂದಿಯಿದ್ದ ಕಾರಣಕ್ಕಾಗಿ ಅದನ್ನು ತೆರವುಗೊಳಿಸಿ ಎಂದು ಕನ್ನಡ ಕಾರ್ಯಕರ್ತರು ಆಗ್ರಹಿಸಿದ್ದಕ್ಕೆ ಅವರನ್ನು ಬಂಧಿಸಲಾಗಿದೆ. ಇದೇ ವೇಳೆ ಈ ಘಟನೆಯನ್ನು ಜೈನರ ಮೇಲೆ ರೌಡಿಗಳಿಂದ ಹಲ್ಲೆ ಎಂದು ಕರೆಯುವ ಮೂಲಕ ಸಂಸದ ತೇಜಸ್ವಿ ಸೂರ್ಯ ಕನ್ನಡ ಭಾಷೆಯ ಪ್ರಕರಣವನ್ನು ಕೋಮುವಾದಿಕರಿಸುತ್ತಿದ್ದಾರೆ ಎಂದು ಹಲವರು ಖಂಡನೆ ವ್ಯಕ್ತಪಡಿಸಿದ್ದಾರೆ.

“ಕೆಲವು ರೌಡಿಗಳಿಂದ ಜೈನ ದೇವಾಲಯದ ಬ್ಯಾನರ್ ಮೇಲೆ ಹಿಂದಿ ಇದ್ದ ಕಾರಣಕ್ಕಾಗಿ ಬೆಂಗಳೂರಿನಲ್ಲಿನ ನಮ್ಮ ಜೈನ ಸಹೋದರರ ಮೇಲೆ ನಡೆಸಿದ ದಾಳಿಯಿಂದ ತೀವ್ರವಾಗಿ ನೋವುಂಟಾಗಿದೆ.

ಅವರು ಬೆಂಗಳೂರಿನಲ್ಲಿ ಉರ್ದು ಬಳಕೆಯನ್ನು ಎಂದಿಗೂ ಪ್ರಶ್ನಿಸುವುದಿಲ್ಲ.

ಕರ್ನಾಟಕಕ್ಕೆ ಕೊಡುಗೆ ನೀಡುವ ಶಾಂತಿಯುತ ಜೈನರನ್ನು ಆಕ್ರಮಣ ಮಾಡುವುದು ನಿಜವಾದ ಕನ್ನಡ ಪ್ರಿಯರಿಗೆ ಮತ್ತು ಕಾರ್ಯಕರ್ತರಿಗೆ ಅಪಚಾರವನ್ನು ತರುತ್ತದೆ”. ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಚಿಂತಕರಾದ ದಿನೇಶ್ ಅಮೀನ್ ಮಟ್ಟುರವರು ಫೇಸ್ ಬುಕ್ ನಲ್ಲಿ ಈ ಕೆಳಗಿನಂತೆ ಪ್ರತಿಕ್ರಿಯಿಸಿದ್ದಾರೆ.

ಹಿಂದಿ ಭಾಷೆಯಲ್ಲಿದ್ದ ಬ್ಯಾನರ್ ಹರಿದುಹಾಕಿದ್ದಕ್ಕಾಗಿ ಈ ಕನ್ನಡ ಹೋರಾಟಗಾರರನ್ನು ಬಂಧಿಸಲಾಗಿದೆ. ಹಿಂದಿ ಹೇರಿಕೆ ವಿರುದ್ಧದ ಪ್ರತಿರೋಧವನ್ನು ಸಂಸದ ತೇಜಸ್ವಿ ಸೂರ್ಯ, ಇದು ಜೈನ ಧರ್ಮದ ಮೇಲಿನ ದಾಳಿ ಎಂಬಂತೆ ಬಿಂಬಿಸಿ ಟ್ವೀಟ್ ಮಾಡಿ ಅನಗತ್ಯವಾಗಿ ಧಾರ್ಮಿಕ ಸಂಘರ್ಷಕ್ಕೆ ಪ್ರಚೋದನೆ ನೀಡುವ ಪ್ರಯತ್ನ ಮಾಡಿದ್ದಾರೆ.

ಇದು ಕನ್ನಡ ಮತ್ತು ಹಿಂದಿಯ ನಡುವೆ ನಡೆಯುತ್ತಿರುವ ಸಂಘರ್ಷ. ಇದರಲ್ಲಿ ಜೈನ, ಹಿಂದು ಎಲ್ಲಿಂದ ಬಂತು? ಈ ರೀತಿ ಧರ್ಮವನ್ನು ಇದಕ್ಕೆ ಎಳೆದು ತರುತ್ತಿರುವವರ ಉದ್ದೇಶವಾದರೂ ಏನು? ಹಿಂದಿಯಲ್ಲಿದ್ದ ಬ್ಯಾನರ್ ಹರಿದುಹಾಕಿರುವುದು ಇದು ಮೊದಲನೇ ಸಲವೇನಲ್ಲ, ಬಹುಷ: ಕೊನೆಯದ್ದೂ ಅಲ್ಲ. ಅದನ್ನು ಅಪರಾಧವೆಂದು ಪರಿಗಣಿಸುವುದಾದರೆ ಆ ಪ್ರತಿರೋಧಕ್ಕೆ ಧರ್ಮವನ್ನು ತಳುಕುಹಾಕಿರುವುದು ಅದಕ್ಕಿಂತಲೂ ದೊಡ್ಡ ಅಪರಾಧ ಅಲ್ಲವೇ?

ಕನ್ನಡಿಗರು ಎಂದರೆ ಕನ್ನಡಿಗರು ಅಷ್ಟೇ, ಅದರಲ್ಲಿ ಹಿಂದು,ಮುಸ್ಲಿಮ್, ಕ್ರಿಶ್ಚಿಯನ್, ಜೈನ ಎಂಬ ಭೇದಗಳಿಲ್ಲ. ಇದು ಎರಡು ಸಾವಿರ ವರ್ಷಗಳ ಕನ್ನಡದ ಇತಿಹಾಸ ಕಲಿಸಿರುವ ಪಾಠ.

ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಸೂಕ್ಷ್ಮಗಳನ್ನೆಲ್ಲ ಗಮನಿಸುವಷ್ಟು ಸಮಯ ಮತ್ತು ಆಸಕ್ತಿ ಇದೆಯೋ ಗೊತ್ತಿಲ್ಲ. ಅವರ ಗಮನಕ್ಕಾದರೂ ಇದು ಬಂದಿದೆಯೋ ತಿಳಿದಿಲ್ಲ. ಕನ್ನಡಿಗರು ಉದ್ಯೋಗಕ್ಕಾಗಿ ನಡೆಸುತ್ತಿರುವ ಹೋರಾಟವನ್ನು ಗುರುತಿಸಿರುವ ಮುಖ್ಯಮಂತ್ರಿಗಳು ಮೊನ್ನೆ ಸ್ವಾತಂತ್ರ್ಯೋತ್ಸವ ಸಮಾರಂಭದ ಭಾಷಣದಲ್ಲಿ ಸಕರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಆದರೆ ಇದ್ದಕ್ಕಿದ್ದ ಹಾಗೆ ಹೋರಾಟಗಾರರನ್ನು ಬೆದರಿಸುವ, ಹತ್ತಿಕ್ಕುವ ಪ್ರಯತ್ನ ಪೊಲೀಸರಿಂದ ನಡೆದಿದೆ.

ಇದು ಸಂವಿಧಾನೇತರ ಶಕ್ತಿಗಳು ಜಾಗೃತಗೊಳ್ಳುತ್ತಿರುವ ಮತ್ತು ಚುನಾಯಿತ ಸರ್ಕಾರದ ಅಧಿಕಾರವನ್ನು ಹೈಜಾಕ್ ಮಾಡುವ ಪ್ರಯತ್ನದ ಆರಂಭ.. ಮುಖ್ಯಮಂತ್ರಿಗಳು ಜಾಗೃತರಾಗಿ ತಕ್ಷಣ ಮಧ್ಯಪ್ರವೇಶಿಸಿ ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸಲು ಆದೇಶ ನೀಡಬೇಕು. ಇದರ ಮೂಲಕ ರಾಜ್ಯಕ್ಕೆ ತಾವೇ ಮುಖ್ಯಮಂತ್ರಿ ಎನ್ನುವುದನ್ನು ಸಾರಿ ಹೇಳಬೇಕು. ಎಂದು ದಿನೇಶ್ ಅಮೀನ್ ಮಟ್ಟು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಯುವ ಕಾಂಗ್ರೆಸ್ ನ ಶ್ರೀವತ್ಸ ರವರು ಟ್ವೀಟ್ ಮಾಡಿದ್ದು,

  1. ಜೈನರ ಮೇಲೆ ಯಾವುದೇ ದಾಳಿ ನಡೆದಿಲ್ಲ. ಕನ್ನಡ ಪರ ಹೋರಾಟಗಾರರು ಹಿಂದಿ ಫ್ಲೆಕ್ಸ್ ಅನ್ನು ಮಾತ್ರ ತೆಗೆದಿದ್ದಾರೆ. ಅವರು ರೌಡಿಗಳಲ್ಲ.

2. ಜೈನ ಧರ್ಮವು ಪ್ರಾಸಂಗಿಕವಾಗಿದೆ. ಫ್ಲೆಕ್ಸ್‌ಗಳಲ್ಲಿ ಕನ್ನಡ ಇರಬೇಕು ಎಂಬುದು ನಿಯಮ.

3. ಅರೇಬಿಕ್ ಭಾಷೆಯಲ್ಲಿ ಎಳೆಯುವ ಮೂಲಕ ಕೋಮುವಾದದ ಪ್ರಯತ್ನ ಮಾಡಲಾಗುತ್ತಿದೆ.

ಆಧುನಿಕ ಮಹಾನಗರದ ಸಂಸದ, ಪರಿಹಾರಗಳನ್ನು ಕಂಡುಕೊಳ್ಳಬೇಕೆ ಹೊರತು ಪ್ರಚೋದಿಸಬಾರದು ಎಂದಿದ್ದಾರೆ.

“ತೇಜಸ್ವಿ ಸೂರ್ಯ ಮಾಡಿರುವ ಟ್ವೀಟ್ ಆಕ್ರಮಣಕಾರಿ ನಿರಂಕುಶ ಆಡಳಿತದ ಭಾಗವಾಗಿ ಹೊರಬಂದಿದೆ, ಇದು ಯಾವುದೇ ಕಾರಣಕ್ಕೂ ಸರಿ ಇಲ್ಲ” ಎಂದು ಸಂವಿಧಾನ ಉಳಿವಿಗಾಗಿ ಕರ್ನಾಟಕದ ಮುಖಂಡರಾದ ಕೆ.ಎಲ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.

ಫೇಸ್ ಬುಕ್ ನಲ್ಲಿ Karnataka Jains ಎಂಬ ಪೇಜ್ ನಿಂದ “ಕರ್ನಾಟಕದಲ್ಲಿ ಹಿಂದಿ ಹೇರಿಕೆ ಮಾಡುವವರನ್ನು ನಾವು ಬೆಂಬಲಿಸುವುದಿಲ್ಲ.” ಎಂದು ಪೋಸ್ಟ್ ಹಾಕಲಾಗಿದ್ದು ಅದಕ್ಕೆ ಬಹಳಷ್ಟು ಮೆಚ್ಚುಗೆಗಳು ವ್ಯಕ್ತವಾಗಿವೆ.

ಕಿಡಿಗೇಡಿಗಳೆಲ್ಲಾ ಸಂಸದರಾದರೆ ಏನಾಗುತ್ತೆ ಎಂಬುದಕ್ಕೆ ತೇಜಸ್ವಿ ಸೂರ್ಯನೇ ಸಾಕ್ಷಿ. ಯಾರೋ ಹಿಂದಿಯಲ್ಲಿ ಬೋರ್ಡು ಹಾಕಿಕೊಂಡಿದ್ದನ್ನು ಇನ್ಯಾರೋ ಹರಿದರಂತೆ. ಈ ಮಹಾಶಯ ಇಂತಹ ಸಂದರ್ಭವನ್ನು ಬಳಸಿಕೊಳ್ಳುತ್ತಿರುವ ರೀತಿ ನೋಡಿ….
ಇವನ ಟ್ವೀಟ್ ಎರಡು ಅರ್ಥ ಹೊರಡಿಸುತ್ತೆ
1) ಜೈನರೆಲ್ಲಾ ಹಿಂದಿ ಭಾಷಿಕರು ಅಂತ
2) ಕನ್ನಡಪರ ಹೋರಾಟಗಾರರು ಜೈನರ ವಿರೋಧಿಗಳು ಅಂತ.
ದಯವಿಟ್ಟು ಇಂತಹ ಕಿಡಿಗೇಡಿಗಳನ್ನು ನಂಬಬೇಡಿ. ಎಲ್ಲದ್ದಕ್ಕೂ ಧರ್ಮವನ್ನು ಎಳೆತಂದು ಬೆಂಕಿ ಹಚ್ಚುವುದು, ಗಲಭೆ ಹತ್ತಿಸುವುದು ಇವರುಗಳು ಲಾಗಾಯ್ತಿನಿಂದಲೂ ಮಾಡಿಕೊಂಡು ಬಂದಿರುವ ಚೇಷ್ಟೆಯೇ ಆಗಿದೆ.

ಜೈನರೇ ಆಗಿರಲಿ ಇನ್ಯಾವುದೇ ಧರ್ಮದವರೇ ಆಗಿರಲಿ ಕರ್ನಾಟಕದಲ್ಲಿ ಇದ್ದುಕೊಂಡು ವ್ಯಾಪಾರ/ವ್ಯವಹಾರ ಮಾಡುತ್ತಿದ್ದರೆ ಕನ್ನಡ ಕಲಿಯಲಿ, ಕನ್ನಡಿಗರಿಗೆ ಗೌರವ ಕೊಡಲಿ ಎಂದು ದರ್ಶನ್ ಜೈನ್ ಎಂಬುವವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಕನ್ನಡ ಹೋರಾಟಗಾರರ ಬಂಧನ ಮತ್ತು ಸಂಸದ ತೇಜಸ್ವಿ ಸೂರ್ಯ ಹೇಳಿಕೆಯ ವಿರುದ್ಧ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...