Homeಕರ್ನಾಟಕಇತಿಹಾಸ ಪುಟ ಸೇರಿದ ಬಿಬಿಎಂಪಿ: ಗ್ರೇಟರ್‌ ಬೆಂಗಳೂರು ಅಡಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ

ಇತಿಹಾಸ ಪುಟ ಸೇರಿದ ಬಿಬಿಎಂಪಿ: ಗ್ರೇಟರ್‌ ಬೆಂಗಳೂರು ಅಡಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ

- Advertisement -
- Advertisement -

ಸೆಪ್ಟೆಂಬರ್ 1ರಂದು ‘ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ’ ವಿದಾಯ ಹೇಳಲಾಗಿದ್ದು, ಹೊಸದಾಗಿ ರೂಪುಗೊಂಡ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)’ ಅಡಿ ಐದು ಸ್ವತಂತ್ರ ನಗರ ಪಾಲಿಕೆಗಳು ರಚನೆಯಾಗಿವೆ.

‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024’ (ಜಿಬಿಜಿಎ) ಅಡಿಯಲ್ಲಿ ಬಿಬಿಎಂಪಿ ವ್ಯಾಪ್ತಿಯನ್ನು ‘ಗ್ರೇಟರ್‌ ಬೆಂಗಳೂರು ಪ್ರದೇಶ’ (ಜಿಬಿಎ) ಎಂದು ಗುರುತಿಸಿ 2025ರ ಮೇ 15ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದೀಗ ‘ಗ್ರೇಟರ್‌ ಬೆಂಗಳೂರು ಪ್ರದೇಶ’ದಲ್ಲಿ ಐದು ನಗರ ಪಾಲಿಕೆಗಳನ್ನು ರಚಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ಬಿಬಿಎಂಪಿ ತನ್ನ ಅಸ್ತಿತ್ವ ಕಳೆದುಕೊಂಡಿದೆ.

ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಎಂಬ ಐದು ನಗರ ಪಾಲಿಕೆಗಳನ್ನು ರಚಿಸಲಾಗಿದೆ. ಉತ್ತಮ ಆಡಳಿತಾತ್ಮಕ ಅನುಭವ ಹೊಂದಿರುವ ಹಿರಿಯ ಅಧಿಕಾರಿಗಳು ಇವುಗಳನ್ನು ಮುನ್ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

“ನಗರ ಪಾಲಿಕೆಗಳಿಗೆ ಅಧಿಕಾರಿಗಳ ನೇಮಕಾತಿ ಕುರಿತು ನಾವು ಚರ್ಚಿಸಿದ್ದೇವೆ. ಪ್ರಸ್ತುತ ಸ್ಥಳೀಯವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನು ನೇಮಿಸಲು ನಿರ್ಧರಿಸಿದ್ದೇವೆ” ಎಂದು ಡಿಕೆಶಿ ತಿಳಿಸಿದ್ದಾರೆ.

ಪರಿಣಾಮಕಾರಿ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಹೆಚ್ಚು ಅನುಭವಿ ಆಡಳಿತಗಾರರಿಂದ ಆಯುಕ್ತರನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ತನ್ನ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಪ್ರಾಧಿಕಾರಗಳ ಸಮನ್ವಯ ಮತ್ತು ಮೇಲ್ವಿಚಾರಣೆ ಮಾಡಲಿದೆ. ಐದು ನಗರ ಪಾಲಿಕೆಗಳ ಕಾಮನ್ ಕೇಡರ್ ಆಗಿ ಕಾರ್ಯನಿರ್ವಹಿಸಲಿದೆ. ತನ್ನ ವ್ಯಾಪ್ತಿಗೆ ಯೋಜನಾ ಪ್ರಾಧಿಕಾರವಾಗಿ ಇರಲಿದೆ. ಈ ಮೂಲಕ ಪ್ರಮುಖ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಲಿದೆ ಎಂದು ಡಿಕೆಶಿ ಮಾಹಿತಿ ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರದ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ವಾರ್ಡ್‌ ವಿಂಗಡಣೆ ಮಾಡಲಾಗುವುದು. ನವೆಂಬರ್ 1, 2025ರಂದು ವಾರ್ಡ್‌ ಪುನರ್‌ ವಿಂಗಡಣೆ ಅಂತಿಮ ಅಧಿಸೂಚನೆ ಹೊರಡಿಸುತ್ತೇವೆ ಎಂದು ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದೇವೆ. ಅಷ್ಟೇ ಅಲ್ಲದೇ 30 ನವೆಂಬರ್ 2025ರಂದು ವಾರ್ಡ್‌ ಮೀಸಲಾತಿಯ ಅಂತಿಮ ಅಧಿಸೂಚನೆ ಹೊರಡಿಸುತ್ತೇವೆ ಎಂದಿದ್ದಾರೆ.

ಎಲ್ಲಾ ವಲಯಗಳಿಗೂ ಈಗಾಗಲೇ ಆ ವಲಯ ವ್ಯಾಪ್ತಿಯಲ್ಲಿರುವ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್‌ ರಾವ್‌ ಅವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಐದು ನಗರ ಪಾಲಿಕೆಯ ಆಯುಕ್ತರು ಕಾರ್ಯನಿರ್ವಹಿಸಲಿದ್ದಾರೆ. 27 ವಿಭಾಗಗಳನ್ನು 50 ವಿಭಾಗಗಳಾಗಿ ಪರಿವರ್ತನೆಯನ್ನು ಮಾಡಿದ್ದೇವೆ. 75 ಉಪ ವಿಭಾಗಗಳನ್ನು 150 ಉಪ ವಿಭಾಗಗಳಾಗಿ ಪರಿವರ್ತನೆಯನ್ನು ಮಾಡಿದ್ದೇವೆ. ನಾಳೆಯಿಂದ ಸಂಗ್ರಹವಾಗುವ ತೆರಿಗೆ ಸಂಬಂಧಪಟ್ಟ ಆಯಾ ನಗರ ಪಾಲಿಕೆಗೆ ಸೇರಲಿದೆ ಎಂದು ಮಂಗಳವಾರ (ಸೆ.2) ಡಿಕೆಶಿ ಹೇಳಿದ್ದಾರೆ.

ಪ್ರತಿಯೊಂದು ಪಾಲಿಕೆಗೂ ಅಂದಾಜು 100 ವಾರ್ಡ್‌ಗಳು ರಚನೆಯಾದರೂ ಬೆಂಗಳೂರು ನಗರದಲ್ಲಿ 500 ಹೊಸ ನಾಯಕರು ತಯಾರಾಗುವುದು ಒಂದು ದೊಡ್ಡ ಸಂದೇಶ. ಇದರಲ್ಲಿ 50% ಮಹಿಳೆಯರು ಇದ್ದರೇ ಶೇ.50ರಷ್ಟು ಪುರುಷರು ಇರುತ್ತಾರೆ ಎಂದಿದ್ದಾರೆ.

ಬಿಬಿಎಂಪಿ ಹೋಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕಾರ್ಪೋರೇಶನ್ ವೃತ್ತದ ಬಳಿಯ ಬಿಬಿಎಂಪಿ ಕೇಂದ್ರ ಕಚೇರಿಯ ನಾಮಫಲಕ ಬದಲಾಗಿದೆ. ಮಂಗಳವಾರ ರಾತ್ರಿ ಬಿಬಿಎಂಪಿ ನಾಮಫಲಕ ತೆರವುಗೊಳಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬ ಫಲಕ ಅಳವಡಿಸಲಾಗಿದೆ.

ಒಳಮೀಸಲಾತಿಯಲ್ಲಿ ಅಲೆಮಾರಿಗಳಿಗೆ ಚಾರಿತ್ರಿಕ ದ್ರೋಹ! ತಬ್ಬಲಿ ಸಮುದಾಯಗಳಿಂದ ಬೃಹತ್ ‘ಬೆಂಗಳೂರು ಚಲೋ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Good News for All. Why we fought for south india? All taxes will use in Southern life and issue to Visa card for all visitors and job seekers who would like. It is avoid for unwanted people entry and Crimes. We feel as comfortable in our motherland.

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...