Homeಕರ್ನಾಟಕಇತಿಹಾಸ ಪುಟ ಸೇರಿದ ಬಿಬಿಎಂಪಿ: ಗ್ರೇಟರ್‌ ಬೆಂಗಳೂರು ಅಡಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ

ಇತಿಹಾಸ ಪುಟ ಸೇರಿದ ಬಿಬಿಎಂಪಿ: ಗ್ರೇಟರ್‌ ಬೆಂಗಳೂರು ಅಡಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ

- Advertisement -
- Advertisement -

ಸೆಪ್ಟೆಂಬರ್ 1ರಂದು ‘ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ’ ವಿದಾಯ ಹೇಳಲಾಗಿದ್ದು, ಹೊಸದಾಗಿ ರೂಪುಗೊಂಡ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)’ ಅಡಿ ಐದು ಸ್ವತಂತ್ರ ನಗರ ಪಾಲಿಕೆಗಳು ರಚನೆಯಾಗಿವೆ.

‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024’ (ಜಿಬಿಜಿಎ) ಅಡಿಯಲ್ಲಿ ಬಿಬಿಎಂಪಿ ವ್ಯಾಪ್ತಿಯನ್ನು ‘ಗ್ರೇಟರ್‌ ಬೆಂಗಳೂರು ಪ್ರದೇಶ’ (ಜಿಬಿಎ) ಎಂದು ಗುರುತಿಸಿ 2025ರ ಮೇ 15ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದೀಗ ‘ಗ್ರೇಟರ್‌ ಬೆಂಗಳೂರು ಪ್ರದೇಶ’ದಲ್ಲಿ ಐದು ನಗರ ಪಾಲಿಕೆಗಳನ್ನು ರಚಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ಬಿಬಿಎಂಪಿ ತನ್ನ ಅಸ್ತಿತ್ವ ಕಳೆದುಕೊಂಡಿದೆ.

ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಎಂಬ ಐದು ನಗರ ಪಾಲಿಕೆಗಳನ್ನು ರಚಿಸಲಾಗಿದೆ. ಉತ್ತಮ ಆಡಳಿತಾತ್ಮಕ ಅನುಭವ ಹೊಂದಿರುವ ಹಿರಿಯ ಅಧಿಕಾರಿಗಳು ಇವುಗಳನ್ನು ಮುನ್ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

“ನಗರ ಪಾಲಿಕೆಗಳಿಗೆ ಅಧಿಕಾರಿಗಳ ನೇಮಕಾತಿ ಕುರಿತು ನಾವು ಚರ್ಚಿಸಿದ್ದೇವೆ. ಪ್ರಸ್ತುತ ಸ್ಥಳೀಯವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನು ನೇಮಿಸಲು ನಿರ್ಧರಿಸಿದ್ದೇವೆ” ಎಂದು ಡಿಕೆಶಿ ತಿಳಿಸಿದ್ದಾರೆ.

ಪರಿಣಾಮಕಾರಿ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಹೆಚ್ಚು ಅನುಭವಿ ಆಡಳಿತಗಾರರಿಂದ ಆಯುಕ್ತರನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ತನ್ನ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಪ್ರಾಧಿಕಾರಗಳ ಸಮನ್ವಯ ಮತ್ತು ಮೇಲ್ವಿಚಾರಣೆ ಮಾಡಲಿದೆ. ಐದು ನಗರ ಪಾಲಿಕೆಗಳ ಕಾಮನ್ ಕೇಡರ್ ಆಗಿ ಕಾರ್ಯನಿರ್ವಹಿಸಲಿದೆ. ತನ್ನ ವ್ಯಾಪ್ತಿಗೆ ಯೋಜನಾ ಪ್ರಾಧಿಕಾರವಾಗಿ ಇರಲಿದೆ. ಈ ಮೂಲಕ ಪ್ರಮುಖ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಲಿದೆ ಎಂದು ಡಿಕೆಶಿ ಮಾಹಿತಿ ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರದ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ವಾರ್ಡ್‌ ವಿಂಗಡಣೆ ಮಾಡಲಾಗುವುದು. ನವೆಂಬರ್ 1, 2025ರಂದು ವಾರ್ಡ್‌ ಪುನರ್‌ ವಿಂಗಡಣೆ ಅಂತಿಮ ಅಧಿಸೂಚನೆ ಹೊರಡಿಸುತ್ತೇವೆ ಎಂದು ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದೇವೆ. ಅಷ್ಟೇ ಅಲ್ಲದೇ 30 ನವೆಂಬರ್ 2025ರಂದು ವಾರ್ಡ್‌ ಮೀಸಲಾತಿಯ ಅಂತಿಮ ಅಧಿಸೂಚನೆ ಹೊರಡಿಸುತ್ತೇವೆ ಎಂದಿದ್ದಾರೆ.

ಎಲ್ಲಾ ವಲಯಗಳಿಗೂ ಈಗಾಗಲೇ ಆ ವಲಯ ವ್ಯಾಪ್ತಿಯಲ್ಲಿರುವ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್‌ ರಾವ್‌ ಅವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಐದು ನಗರ ಪಾಲಿಕೆಯ ಆಯುಕ್ತರು ಕಾರ್ಯನಿರ್ವಹಿಸಲಿದ್ದಾರೆ. 27 ವಿಭಾಗಗಳನ್ನು 50 ವಿಭಾಗಗಳಾಗಿ ಪರಿವರ್ತನೆಯನ್ನು ಮಾಡಿದ್ದೇವೆ. 75 ಉಪ ವಿಭಾಗಗಳನ್ನು 150 ಉಪ ವಿಭಾಗಗಳಾಗಿ ಪರಿವರ್ತನೆಯನ್ನು ಮಾಡಿದ್ದೇವೆ. ನಾಳೆಯಿಂದ ಸಂಗ್ರಹವಾಗುವ ತೆರಿಗೆ ಸಂಬಂಧಪಟ್ಟ ಆಯಾ ನಗರ ಪಾಲಿಕೆಗೆ ಸೇರಲಿದೆ ಎಂದು ಮಂಗಳವಾರ (ಸೆ.2) ಡಿಕೆಶಿ ಹೇಳಿದ್ದಾರೆ.

ಪ್ರತಿಯೊಂದು ಪಾಲಿಕೆಗೂ ಅಂದಾಜು 100 ವಾರ್ಡ್‌ಗಳು ರಚನೆಯಾದರೂ ಬೆಂಗಳೂರು ನಗರದಲ್ಲಿ 500 ಹೊಸ ನಾಯಕರು ತಯಾರಾಗುವುದು ಒಂದು ದೊಡ್ಡ ಸಂದೇಶ. ಇದರಲ್ಲಿ 50% ಮಹಿಳೆಯರು ಇದ್ದರೇ ಶೇ.50ರಷ್ಟು ಪುರುಷರು ಇರುತ್ತಾರೆ ಎಂದಿದ್ದಾರೆ.

ಬಿಬಿಎಂಪಿ ಹೋಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕಾರ್ಪೋರೇಶನ್ ವೃತ್ತದ ಬಳಿಯ ಬಿಬಿಎಂಪಿ ಕೇಂದ್ರ ಕಚೇರಿಯ ನಾಮಫಲಕ ಬದಲಾಗಿದೆ. ಮಂಗಳವಾರ ರಾತ್ರಿ ಬಿಬಿಎಂಪಿ ನಾಮಫಲಕ ತೆರವುಗೊಳಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬ ಫಲಕ ಅಳವಡಿಸಲಾಗಿದೆ.

ಒಳಮೀಸಲಾತಿಯಲ್ಲಿ ಅಲೆಮಾರಿಗಳಿಗೆ ಚಾರಿತ್ರಿಕ ದ್ರೋಹ! ತಬ್ಬಲಿ ಸಮುದಾಯಗಳಿಂದ ಬೃಹತ್ ‘ಬೆಂಗಳೂರು ಚಲೋ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Good News for All. Why we fought for south india? All taxes will use in Southern life and issue to Visa card for all visitors and job seekers who would like. It is avoid for unwanted people entry and Crimes. We feel as comfortable in our motherland.

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...