Homeಕರ್ನಾಟಕಇತಿಹಾಸ ಪುಟ ಸೇರಿದ ಬಿಬಿಎಂಪಿ: ಗ್ರೇಟರ್‌ ಬೆಂಗಳೂರು ಅಡಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ

ಇತಿಹಾಸ ಪುಟ ಸೇರಿದ ಬಿಬಿಎಂಪಿ: ಗ್ರೇಟರ್‌ ಬೆಂಗಳೂರು ಅಡಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ

- Advertisement -
- Advertisement -

ಸೆಪ್ಟೆಂಬರ್ 1ರಂದು ‘ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ’ ವಿದಾಯ ಹೇಳಲಾಗಿದ್ದು, ಹೊಸದಾಗಿ ರೂಪುಗೊಂಡ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)’ ಅಡಿ ಐದು ಸ್ವತಂತ್ರ ನಗರ ಪಾಲಿಕೆಗಳು ರಚನೆಯಾಗಿವೆ.

‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024’ (ಜಿಬಿಜಿಎ) ಅಡಿಯಲ್ಲಿ ಬಿಬಿಎಂಪಿ ವ್ಯಾಪ್ತಿಯನ್ನು ‘ಗ್ರೇಟರ್‌ ಬೆಂಗಳೂರು ಪ್ರದೇಶ’ (ಜಿಬಿಎ) ಎಂದು ಗುರುತಿಸಿ 2025ರ ಮೇ 15ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದೀಗ ‘ಗ್ರೇಟರ್‌ ಬೆಂಗಳೂರು ಪ್ರದೇಶ’ದಲ್ಲಿ ಐದು ನಗರ ಪಾಲಿಕೆಗಳನ್ನು ರಚಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ಬಿಬಿಎಂಪಿ ತನ್ನ ಅಸ್ತಿತ್ವ ಕಳೆದುಕೊಂಡಿದೆ.

ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಎಂಬ ಐದು ನಗರ ಪಾಲಿಕೆಗಳನ್ನು ರಚಿಸಲಾಗಿದೆ. ಉತ್ತಮ ಆಡಳಿತಾತ್ಮಕ ಅನುಭವ ಹೊಂದಿರುವ ಹಿರಿಯ ಅಧಿಕಾರಿಗಳು ಇವುಗಳನ್ನು ಮುನ್ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

“ನಗರ ಪಾಲಿಕೆಗಳಿಗೆ ಅಧಿಕಾರಿಗಳ ನೇಮಕಾತಿ ಕುರಿತು ನಾವು ಚರ್ಚಿಸಿದ್ದೇವೆ. ಪ್ರಸ್ತುತ ಸ್ಥಳೀಯವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನು ನೇಮಿಸಲು ನಿರ್ಧರಿಸಿದ್ದೇವೆ” ಎಂದು ಡಿಕೆಶಿ ತಿಳಿಸಿದ್ದಾರೆ.

ಪರಿಣಾಮಕಾರಿ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಹೆಚ್ಚು ಅನುಭವಿ ಆಡಳಿತಗಾರರಿಂದ ಆಯುಕ್ತರನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ತನ್ನ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಪ್ರಾಧಿಕಾರಗಳ ಸಮನ್ವಯ ಮತ್ತು ಮೇಲ್ವಿಚಾರಣೆ ಮಾಡಲಿದೆ. ಐದು ನಗರ ಪಾಲಿಕೆಗಳ ಕಾಮನ್ ಕೇಡರ್ ಆಗಿ ಕಾರ್ಯನಿರ್ವಹಿಸಲಿದೆ. ತನ್ನ ವ್ಯಾಪ್ತಿಗೆ ಯೋಜನಾ ಪ್ರಾಧಿಕಾರವಾಗಿ ಇರಲಿದೆ. ಈ ಮೂಲಕ ಪ್ರಮುಖ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಲಿದೆ ಎಂದು ಡಿಕೆಶಿ ಮಾಹಿತಿ ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರದ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ವಾರ್ಡ್‌ ವಿಂಗಡಣೆ ಮಾಡಲಾಗುವುದು. ನವೆಂಬರ್ 1, 2025ರಂದು ವಾರ್ಡ್‌ ಪುನರ್‌ ವಿಂಗಡಣೆ ಅಂತಿಮ ಅಧಿಸೂಚನೆ ಹೊರಡಿಸುತ್ತೇವೆ ಎಂದು ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದೇವೆ. ಅಷ್ಟೇ ಅಲ್ಲದೇ 30 ನವೆಂಬರ್ 2025ರಂದು ವಾರ್ಡ್‌ ಮೀಸಲಾತಿಯ ಅಂತಿಮ ಅಧಿಸೂಚನೆ ಹೊರಡಿಸುತ್ತೇವೆ ಎಂದಿದ್ದಾರೆ.

ಎಲ್ಲಾ ವಲಯಗಳಿಗೂ ಈಗಾಗಲೇ ಆ ವಲಯ ವ್ಯಾಪ್ತಿಯಲ್ಲಿರುವ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್‌ ರಾವ್‌ ಅವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಐದು ನಗರ ಪಾಲಿಕೆಯ ಆಯುಕ್ತರು ಕಾರ್ಯನಿರ್ವಹಿಸಲಿದ್ದಾರೆ. 27 ವಿಭಾಗಗಳನ್ನು 50 ವಿಭಾಗಗಳಾಗಿ ಪರಿವರ್ತನೆಯನ್ನು ಮಾಡಿದ್ದೇವೆ. 75 ಉಪ ವಿಭಾಗಗಳನ್ನು 150 ಉಪ ವಿಭಾಗಗಳಾಗಿ ಪರಿವರ್ತನೆಯನ್ನು ಮಾಡಿದ್ದೇವೆ. ನಾಳೆಯಿಂದ ಸಂಗ್ರಹವಾಗುವ ತೆರಿಗೆ ಸಂಬಂಧಪಟ್ಟ ಆಯಾ ನಗರ ಪಾಲಿಕೆಗೆ ಸೇರಲಿದೆ ಎಂದು ಮಂಗಳವಾರ (ಸೆ.2) ಡಿಕೆಶಿ ಹೇಳಿದ್ದಾರೆ.

ಪ್ರತಿಯೊಂದು ಪಾಲಿಕೆಗೂ ಅಂದಾಜು 100 ವಾರ್ಡ್‌ಗಳು ರಚನೆಯಾದರೂ ಬೆಂಗಳೂರು ನಗರದಲ್ಲಿ 500 ಹೊಸ ನಾಯಕರು ತಯಾರಾಗುವುದು ಒಂದು ದೊಡ್ಡ ಸಂದೇಶ. ಇದರಲ್ಲಿ 50% ಮಹಿಳೆಯರು ಇದ್ದರೇ ಶೇ.50ರಷ್ಟು ಪುರುಷರು ಇರುತ್ತಾರೆ ಎಂದಿದ್ದಾರೆ.

ಬಿಬಿಎಂಪಿ ಹೋಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕಾರ್ಪೋರೇಶನ್ ವೃತ್ತದ ಬಳಿಯ ಬಿಬಿಎಂಪಿ ಕೇಂದ್ರ ಕಚೇರಿಯ ನಾಮಫಲಕ ಬದಲಾಗಿದೆ. ಮಂಗಳವಾರ ರಾತ್ರಿ ಬಿಬಿಎಂಪಿ ನಾಮಫಲಕ ತೆರವುಗೊಳಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬ ಫಲಕ ಅಳವಡಿಸಲಾಗಿದೆ.

ಒಳಮೀಸಲಾತಿಯಲ್ಲಿ ಅಲೆಮಾರಿಗಳಿಗೆ ಚಾರಿತ್ರಿಕ ದ್ರೋಹ! ತಬ್ಬಲಿ ಸಮುದಾಯಗಳಿಂದ ಬೃಹತ್ ‘ಬೆಂಗಳೂರು ಚಲೋ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Good News for All. Why we fought for south india? All taxes will use in Southern life and issue to Visa card for all visitors and job seekers who would like. It is avoid for unwanted people entry and Crimes. We feel as comfortable in our motherland.

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...