Homeಕರ್ನಾಟಕಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

- Advertisement -
- Advertisement -

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯು ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಜಲಾವೃತವಾಗಿದೆ. ಇದರಿಂದ ರಾಜ್ಯದ ರಾಮನಗರ ಸಮೀಪ ಸರಣಿ ಅಪಘಾತ ಸಂಭವಿಸಿ, ಟ್ರಾಫಿಕ್ ಜಾಮ್‌ಗೆ ಕಾರಣವಾಯಿತು.

ರಾಮನಗರ ಜಿಲ್ಲೆ ಬಳಿ 8,480 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರಾಷ್ಟ್ರೀಯ ಹೆದ್ದಾರಿ ಮಳೆಯಿಂದಾಗಿ ಜಲಾವೃತವಾಗಿದೆ. ಹೆದ್ದಾರಿಯಲ್ಲಿನ ಕೆಳಸೇತುವೆಯಲ್ಲಿ ನೀರು ನಿಂತಿದ್ದು, ಬಂಪರ್-ಟು-ಬಂಪರ್ ಸರಣಿ ಅಪಘಾತಗಳಿಗೆ ಕಾರಣವಾಯಿತು. ಇದರಿಂದಾಗಿ ವಾಹನಗಳು ನಿಧಾನವಾಗಿ ಚಲಿಸಿದ್ದರಿಂದ ಬಹಳ ಸಮಯದವರೆಗೂ ಟ್ರಾಫಿಕ್ ಜಾಮ್ ಉಂಟಾಯಿತು.

ಕಳೆದ ವರ್ಷ ಕರ್ನಾಟಕದಲ್ಲಿ ಹಿಂದೆಂದೂ ಕಂಡಿರದ ಮಳೆ ಸುರಿದಾಗಲೂ ಇದೇ ರೀತಿ ಕೆಳಸೇತುವೆಯು ಜಲಾವೃತವಾಗಿತ್ತು.

”ತಮ್ಮ ವಾಹನಗಳಿಗೆ ಹಾನಿ ಮಾಡುವುದಕ್ಕಾಗಿಯೇ ಮುಖ್ಯಮಂತ್ರಿ ಬಿ.ಎಸ್.ಬೊಮ್ಮಾಯಿ ಮತ್ತು ಪ್ರಧಾನಿ ಮೋದಿ ತರಾತುರಿಯಲ್ಲಿ ಈ ಹೆದ್ದಾರಿ ಉದ್ಘಾಟನೆಗೆ ಮಾಡಿದ್ದಾರೆಯೇ?” ಎಂದು ಅಲ್ಲಿ ಪರದಾಡಿದ ಕೆಲ ಪ್ರಯಾಣಿಕರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಸಂಗ್ರಹ: ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್

ಈ ಬಗ್ಗೆ ಪ್ರಯಾಣಿಕ ವಿಕಾಸ್ ಎನ್ನುವವರು ಎನ್‌ಡಿಟಿವಿ ಜೊತೆ ಮಾತನಾಡಿ, ”ನನ್ನ ಮಾರುತಿ ಸ್ವಿಫ್ಟ್ ಕಾರು ಜಲಾವೃತಗೊಂಡ ಕೆಳಸೇತುವೆಯಲ್ಲಿ ಅರ್ಧ ಮುಳುಗಿ ಅಲ್ಲಿಯೇ ನಿಂತುಬಿಟ್ಟಿತ್ತು. ಹಿಂದಿನಿಂದ ಬಂದ ಲಾರಿ ನನ್ನ ಕಾರಿಗೆ ಡಿಕ್ಕಿ ಹೊಡೆದಿದೆ, ಇದಕ್ಕೆ ಯಾರು ಹೊಣೆ? ನನ್ನ ಕಾರನ್ನು ರಿಪೇರಿ ಮಾಡುವಂತೆ ನಾನು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತಿದ್ದೇನೆ ಎಂದರು.

”ಪ್ರಧಾನಿ ಮೋದಿ ಹೆದ್ದಾರಿಯನ್ನು ಉದ್ಘಾಟಿಸಿದರು, ಈ ರಸ್ತೆ ಉದ್ಘಾಟನೆಗೆ ಸಿದ್ಧವಾಗಿದೆಯೇ ಎಂದು ಅವರು ತಮ್ಮ ರಸ್ತೆ ಮತ್ತು ಸಾರಿಗೆ ಸಚಿವಾಲಯದಿಂದ ಪರಿಶೀಲಿಸಿದ್ದೀರಾ? ಅವರ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನಾವು ತೊಂದರೆ ಅನುಭವಿಸಬೇಕೇ? ಅವರು ಹೆಚ್ಚಿನ ಟೋಲ್ ಶುಲ್ಕವನ್ನು ವಿಧಿಸುತ್ತಾರೆ, ಆದರೆ ರಸ್ತೆ ಮಾತ್ರ ಈ ರೀತಿಯಲ್ಲಿದೆ. ನಾವು ಟೋಲ್ ಶುಲ್ಕ್ ಕಟ್ಟಿದರೂ ಏನು ಪ್ರಯೋಜನ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಂಪರ್ ಟು ಬಂಪರ್ ಅಪಘಾತಗಳಲ್ಲಿ ತಮ್ಮ ವಾಹನವೇ ಮೊದಲು ಎಂದು ಆಕ್ರೋಶ ವ್ಯಕ್ತಪಡಿಸಿದ ಮತ್ತೊಬ್ಬ ಪ್ರಯಾಣಿಕ ನಾಗರಾಜು, ”ಅಪಘಾತಗಳಿಗೆ ಯಾರು ಹೊಣೆ? ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಬಂದಿದ್ದರೇ 10 ನಿಮಿಷದಲ್ಲಿ ಈ ಜಲಾವೃತವನ್ನು ರಾಜ್ಯ ಸರ್ಕಾರವು ತೆರವುಗೊಳಿಸುತ್ತಿತ್ತು” ಎಂದು ಅಸಮಾಧಾನ ಹೊರಹಾಕಿದರು.

“ಕೆಳಸೇತುವೆಯಲ್ಲಿ ನೀರು ತುಂಬಲು ಪ್ರಾರಂಭಿಸಿದ ಕೆಲವೇ ಸಮಯದಲ್ಲಿ ಹಲವಾರು ಸರಣಿ ಅಪಘಾತಗಳು ಸಂಭವಿಸಿದ ಬಗ್ಗೆ ವರದಿಯಾದವು. ಅದರಲ್ಲಿ ಮೊದಲು ನನ್ನದು… ಮತ್ತು ನಂತರ ಏಳೆಂಟು ವಾಹನಗಳನ್ನು ಒಳಗೊಂಡ ಸರಣಿ ಅಪಘಾತಗಳು ಸಂಭವಿಸಿದವು” ಎಂದು ತಿಳಿಸಿದರು.

”ರಸ್ತೆ ಮೇಲಿನ ನೀರು ಹೊರ ಹೋಗಲು ಸ್ಥಳವಿಲ್ಲ. ಒಂದುವೇಳೆ ಪ್ರಧಾನಿ ಆಗಮನದ ಸುದ್ದಿ ಬಂದಿದ್ದರೆ, ಅವರು (ಬೊಮ್ಮಾಯಿ) 10 ನಿಮಿಷಗಳಲ್ಲಿ ಈ ಜಲಾವೃತವನ್ನು ತೆರವುಗೊಳಿಸುತ್ತಾರೆ. ನಾವು ಸಾಮಾನ್ಯ ಜನರು, ನಮ್ಮ ಕಷ್ಟ ಕೇಳುವವರು ಯಾರು? ಈ ತೊಂದರೆಗಳಿಗೆ ಯಾರು ಹೊಣೆ?” ಎಂದು ನಾಗರಾಜು ಅಳಲು ತೋಡಿಕೊಂಡಿದ್ದಾರೆ.

ಮಾರ್ಚ್ 12ರಂದು ಪ್ರಧಾನಿ ಮೋದಿ ಅವರು 118 ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಉದ್ಘಾಟಿಸಿದರು. ಉದ್ಘಾಟಿಸಿದ ದಿನದಿಂದ ದಿನನಿತ್ಯ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಒಂದು ಕಡೆ ಹೆಚ್ಚಿನ ಟೋಲ್ ಶುಲ್ಕ್ ವಸೂಲಿ, ಮತ್ತೊಂದಡೆ ರಸ್ತೆ ನಿರ್ಮಾಣದ ಬಗ್ಗೆ ಆರೋಪಗಳು ಕೇಳಿಬರುತ್ತಿವೆ.

ರಸ್ತೆ ಉದ್ಘಾಟನೆಯಾದ ದಿನವೇ ಒಂದು ಅಪಘಾತ ಸಂಭವಿಸಿತ್ತು. ಮರುದಿನವೇ ರಸ್ತೆಯ ಟಾರು ಕಿತ್ತು ಬಂದಿತ್ತು. ಇನ್ನೂ ಟೋಲ್ ವಸೂಲಿ ವಿಚಾರಕ್ಕೆ ಪ್ರತಿನಿತ್ಯ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ವಿಚಾರಕ್ಕೆ ಈಗಾಗಲೇ ಕರ್ನಾಟಕ ಹೈಕೋರ್ಟ್ ಸುಮೋಟೋ ವಿಚಾರಣೆ ಆರಂಭಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...