Homeಕರ್ನಾಟಕಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

- Advertisement -
- Advertisement -

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯು ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಜಲಾವೃತವಾಗಿದೆ. ಇದರಿಂದ ರಾಜ್ಯದ ರಾಮನಗರ ಸಮೀಪ ಸರಣಿ ಅಪಘಾತ ಸಂಭವಿಸಿ, ಟ್ರಾಫಿಕ್ ಜಾಮ್‌ಗೆ ಕಾರಣವಾಯಿತು.

ರಾಮನಗರ ಜಿಲ್ಲೆ ಬಳಿ 8,480 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರಾಷ್ಟ್ರೀಯ ಹೆದ್ದಾರಿ ಮಳೆಯಿಂದಾಗಿ ಜಲಾವೃತವಾಗಿದೆ. ಹೆದ್ದಾರಿಯಲ್ಲಿನ ಕೆಳಸೇತುವೆಯಲ್ಲಿ ನೀರು ನಿಂತಿದ್ದು, ಬಂಪರ್-ಟು-ಬಂಪರ್ ಸರಣಿ ಅಪಘಾತಗಳಿಗೆ ಕಾರಣವಾಯಿತು. ಇದರಿಂದಾಗಿ ವಾಹನಗಳು ನಿಧಾನವಾಗಿ ಚಲಿಸಿದ್ದರಿಂದ ಬಹಳ ಸಮಯದವರೆಗೂ ಟ್ರಾಫಿಕ್ ಜಾಮ್ ಉಂಟಾಯಿತು.

ಕಳೆದ ವರ್ಷ ಕರ್ನಾಟಕದಲ್ಲಿ ಹಿಂದೆಂದೂ ಕಂಡಿರದ ಮಳೆ ಸುರಿದಾಗಲೂ ಇದೇ ರೀತಿ ಕೆಳಸೇತುವೆಯು ಜಲಾವೃತವಾಗಿತ್ತು.

”ತಮ್ಮ ವಾಹನಗಳಿಗೆ ಹಾನಿ ಮಾಡುವುದಕ್ಕಾಗಿಯೇ ಮುಖ್ಯಮಂತ್ರಿ ಬಿ.ಎಸ್.ಬೊಮ್ಮಾಯಿ ಮತ್ತು ಪ್ರಧಾನಿ ಮೋದಿ ತರಾತುರಿಯಲ್ಲಿ ಈ ಹೆದ್ದಾರಿ ಉದ್ಘಾಟನೆಗೆ ಮಾಡಿದ್ದಾರೆಯೇ?” ಎಂದು ಅಲ್ಲಿ ಪರದಾಡಿದ ಕೆಲ ಪ್ರಯಾಣಿಕರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಸಂಗ್ರಹ: ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್

ಈ ಬಗ್ಗೆ ಪ್ರಯಾಣಿಕ ವಿಕಾಸ್ ಎನ್ನುವವರು ಎನ್‌ಡಿಟಿವಿ ಜೊತೆ ಮಾತನಾಡಿ, ”ನನ್ನ ಮಾರುತಿ ಸ್ವಿಫ್ಟ್ ಕಾರು ಜಲಾವೃತಗೊಂಡ ಕೆಳಸೇತುವೆಯಲ್ಲಿ ಅರ್ಧ ಮುಳುಗಿ ಅಲ್ಲಿಯೇ ನಿಂತುಬಿಟ್ಟಿತ್ತು. ಹಿಂದಿನಿಂದ ಬಂದ ಲಾರಿ ನನ್ನ ಕಾರಿಗೆ ಡಿಕ್ಕಿ ಹೊಡೆದಿದೆ, ಇದಕ್ಕೆ ಯಾರು ಹೊಣೆ? ನನ್ನ ಕಾರನ್ನು ರಿಪೇರಿ ಮಾಡುವಂತೆ ನಾನು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತಿದ್ದೇನೆ ಎಂದರು.

”ಪ್ರಧಾನಿ ಮೋದಿ ಹೆದ್ದಾರಿಯನ್ನು ಉದ್ಘಾಟಿಸಿದರು, ಈ ರಸ್ತೆ ಉದ್ಘಾಟನೆಗೆ ಸಿದ್ಧವಾಗಿದೆಯೇ ಎಂದು ಅವರು ತಮ್ಮ ರಸ್ತೆ ಮತ್ತು ಸಾರಿಗೆ ಸಚಿವಾಲಯದಿಂದ ಪರಿಶೀಲಿಸಿದ್ದೀರಾ? ಅವರ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನಾವು ತೊಂದರೆ ಅನುಭವಿಸಬೇಕೇ? ಅವರು ಹೆಚ್ಚಿನ ಟೋಲ್ ಶುಲ್ಕವನ್ನು ವಿಧಿಸುತ್ತಾರೆ, ಆದರೆ ರಸ್ತೆ ಮಾತ್ರ ಈ ರೀತಿಯಲ್ಲಿದೆ. ನಾವು ಟೋಲ್ ಶುಲ್ಕ್ ಕಟ್ಟಿದರೂ ಏನು ಪ್ರಯೋಜನ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಂಪರ್ ಟು ಬಂಪರ್ ಅಪಘಾತಗಳಲ್ಲಿ ತಮ್ಮ ವಾಹನವೇ ಮೊದಲು ಎಂದು ಆಕ್ರೋಶ ವ್ಯಕ್ತಪಡಿಸಿದ ಮತ್ತೊಬ್ಬ ಪ್ರಯಾಣಿಕ ನಾಗರಾಜು, ”ಅಪಘಾತಗಳಿಗೆ ಯಾರು ಹೊಣೆ? ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಬಂದಿದ್ದರೇ 10 ನಿಮಿಷದಲ್ಲಿ ಈ ಜಲಾವೃತವನ್ನು ರಾಜ್ಯ ಸರ್ಕಾರವು ತೆರವುಗೊಳಿಸುತ್ತಿತ್ತು” ಎಂದು ಅಸಮಾಧಾನ ಹೊರಹಾಕಿದರು.

“ಕೆಳಸೇತುವೆಯಲ್ಲಿ ನೀರು ತುಂಬಲು ಪ್ರಾರಂಭಿಸಿದ ಕೆಲವೇ ಸಮಯದಲ್ಲಿ ಹಲವಾರು ಸರಣಿ ಅಪಘಾತಗಳು ಸಂಭವಿಸಿದ ಬಗ್ಗೆ ವರದಿಯಾದವು. ಅದರಲ್ಲಿ ಮೊದಲು ನನ್ನದು… ಮತ್ತು ನಂತರ ಏಳೆಂಟು ವಾಹನಗಳನ್ನು ಒಳಗೊಂಡ ಸರಣಿ ಅಪಘಾತಗಳು ಸಂಭವಿಸಿದವು” ಎಂದು ತಿಳಿಸಿದರು.

”ರಸ್ತೆ ಮೇಲಿನ ನೀರು ಹೊರ ಹೋಗಲು ಸ್ಥಳವಿಲ್ಲ. ಒಂದುವೇಳೆ ಪ್ರಧಾನಿ ಆಗಮನದ ಸುದ್ದಿ ಬಂದಿದ್ದರೆ, ಅವರು (ಬೊಮ್ಮಾಯಿ) 10 ನಿಮಿಷಗಳಲ್ಲಿ ಈ ಜಲಾವೃತವನ್ನು ತೆರವುಗೊಳಿಸುತ್ತಾರೆ. ನಾವು ಸಾಮಾನ್ಯ ಜನರು, ನಮ್ಮ ಕಷ್ಟ ಕೇಳುವವರು ಯಾರು? ಈ ತೊಂದರೆಗಳಿಗೆ ಯಾರು ಹೊಣೆ?” ಎಂದು ನಾಗರಾಜು ಅಳಲು ತೋಡಿಕೊಂಡಿದ್ದಾರೆ.

ಮಾರ್ಚ್ 12ರಂದು ಪ್ರಧಾನಿ ಮೋದಿ ಅವರು 118 ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಉದ್ಘಾಟಿಸಿದರು. ಉದ್ಘಾಟಿಸಿದ ದಿನದಿಂದ ದಿನನಿತ್ಯ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಒಂದು ಕಡೆ ಹೆಚ್ಚಿನ ಟೋಲ್ ಶುಲ್ಕ್ ವಸೂಲಿ, ಮತ್ತೊಂದಡೆ ರಸ್ತೆ ನಿರ್ಮಾಣದ ಬಗ್ಗೆ ಆರೋಪಗಳು ಕೇಳಿಬರುತ್ತಿವೆ.

ರಸ್ತೆ ಉದ್ಘಾಟನೆಯಾದ ದಿನವೇ ಒಂದು ಅಪಘಾತ ಸಂಭವಿಸಿತ್ತು. ಮರುದಿನವೇ ರಸ್ತೆಯ ಟಾರು ಕಿತ್ತು ಬಂದಿತ್ತು. ಇನ್ನೂ ಟೋಲ್ ವಸೂಲಿ ವಿಚಾರಕ್ಕೆ ಪ್ರತಿನಿತ್ಯ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ವಿಚಾರಕ್ಕೆ ಈಗಾಗಲೇ ಕರ್ನಾಟಕ ಹೈಕೋರ್ಟ್ ಸುಮೋಟೋ ವಿಚಾರಣೆ ಆರಂಭಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....