Homeಕರ್ನಾಟಕಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

- Advertisement -
- Advertisement -

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯು ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಜಲಾವೃತವಾಗಿದೆ. ಇದರಿಂದ ರಾಜ್ಯದ ರಾಮನಗರ ಸಮೀಪ ಸರಣಿ ಅಪಘಾತ ಸಂಭವಿಸಿ, ಟ್ರಾಫಿಕ್ ಜಾಮ್‌ಗೆ ಕಾರಣವಾಯಿತು.

ರಾಮನಗರ ಜಿಲ್ಲೆ ಬಳಿ 8,480 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರಾಷ್ಟ್ರೀಯ ಹೆದ್ದಾರಿ ಮಳೆಯಿಂದಾಗಿ ಜಲಾವೃತವಾಗಿದೆ. ಹೆದ್ದಾರಿಯಲ್ಲಿನ ಕೆಳಸೇತುವೆಯಲ್ಲಿ ನೀರು ನಿಂತಿದ್ದು, ಬಂಪರ್-ಟು-ಬಂಪರ್ ಸರಣಿ ಅಪಘಾತಗಳಿಗೆ ಕಾರಣವಾಯಿತು. ಇದರಿಂದಾಗಿ ವಾಹನಗಳು ನಿಧಾನವಾಗಿ ಚಲಿಸಿದ್ದರಿಂದ ಬಹಳ ಸಮಯದವರೆಗೂ ಟ್ರಾಫಿಕ್ ಜಾಮ್ ಉಂಟಾಯಿತು.

ಕಳೆದ ವರ್ಷ ಕರ್ನಾಟಕದಲ್ಲಿ ಹಿಂದೆಂದೂ ಕಂಡಿರದ ಮಳೆ ಸುರಿದಾಗಲೂ ಇದೇ ರೀತಿ ಕೆಳಸೇತುವೆಯು ಜಲಾವೃತವಾಗಿತ್ತು.

”ತಮ್ಮ ವಾಹನಗಳಿಗೆ ಹಾನಿ ಮಾಡುವುದಕ್ಕಾಗಿಯೇ ಮುಖ್ಯಮಂತ್ರಿ ಬಿ.ಎಸ್.ಬೊಮ್ಮಾಯಿ ಮತ್ತು ಪ್ರಧಾನಿ ಮೋದಿ ತರಾತುರಿಯಲ್ಲಿ ಈ ಹೆದ್ದಾರಿ ಉದ್ಘಾಟನೆಗೆ ಮಾಡಿದ್ದಾರೆಯೇ?” ಎಂದು ಅಲ್ಲಿ ಪರದಾಡಿದ ಕೆಲ ಪ್ರಯಾಣಿಕರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಸಂಗ್ರಹ: ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್

ಈ ಬಗ್ಗೆ ಪ್ರಯಾಣಿಕ ವಿಕಾಸ್ ಎನ್ನುವವರು ಎನ್‌ಡಿಟಿವಿ ಜೊತೆ ಮಾತನಾಡಿ, ”ನನ್ನ ಮಾರುತಿ ಸ್ವಿಫ್ಟ್ ಕಾರು ಜಲಾವೃತಗೊಂಡ ಕೆಳಸೇತುವೆಯಲ್ಲಿ ಅರ್ಧ ಮುಳುಗಿ ಅಲ್ಲಿಯೇ ನಿಂತುಬಿಟ್ಟಿತ್ತು. ಹಿಂದಿನಿಂದ ಬಂದ ಲಾರಿ ನನ್ನ ಕಾರಿಗೆ ಡಿಕ್ಕಿ ಹೊಡೆದಿದೆ, ಇದಕ್ಕೆ ಯಾರು ಹೊಣೆ? ನನ್ನ ಕಾರನ್ನು ರಿಪೇರಿ ಮಾಡುವಂತೆ ನಾನು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತಿದ್ದೇನೆ ಎಂದರು.

”ಪ್ರಧಾನಿ ಮೋದಿ ಹೆದ್ದಾರಿಯನ್ನು ಉದ್ಘಾಟಿಸಿದರು, ಈ ರಸ್ತೆ ಉದ್ಘಾಟನೆಗೆ ಸಿದ್ಧವಾಗಿದೆಯೇ ಎಂದು ಅವರು ತಮ್ಮ ರಸ್ತೆ ಮತ್ತು ಸಾರಿಗೆ ಸಚಿವಾಲಯದಿಂದ ಪರಿಶೀಲಿಸಿದ್ದೀರಾ? ಅವರ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನಾವು ತೊಂದರೆ ಅನುಭವಿಸಬೇಕೇ? ಅವರು ಹೆಚ್ಚಿನ ಟೋಲ್ ಶುಲ್ಕವನ್ನು ವಿಧಿಸುತ್ತಾರೆ, ಆದರೆ ರಸ್ತೆ ಮಾತ್ರ ಈ ರೀತಿಯಲ್ಲಿದೆ. ನಾವು ಟೋಲ್ ಶುಲ್ಕ್ ಕಟ್ಟಿದರೂ ಏನು ಪ್ರಯೋಜನ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಂಪರ್ ಟು ಬಂಪರ್ ಅಪಘಾತಗಳಲ್ಲಿ ತಮ್ಮ ವಾಹನವೇ ಮೊದಲು ಎಂದು ಆಕ್ರೋಶ ವ್ಯಕ್ತಪಡಿಸಿದ ಮತ್ತೊಬ್ಬ ಪ್ರಯಾಣಿಕ ನಾಗರಾಜು, ”ಅಪಘಾತಗಳಿಗೆ ಯಾರು ಹೊಣೆ? ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಬಂದಿದ್ದರೇ 10 ನಿಮಿಷದಲ್ಲಿ ಈ ಜಲಾವೃತವನ್ನು ರಾಜ್ಯ ಸರ್ಕಾರವು ತೆರವುಗೊಳಿಸುತ್ತಿತ್ತು” ಎಂದು ಅಸಮಾಧಾನ ಹೊರಹಾಕಿದರು.

“ಕೆಳಸೇತುವೆಯಲ್ಲಿ ನೀರು ತುಂಬಲು ಪ್ರಾರಂಭಿಸಿದ ಕೆಲವೇ ಸಮಯದಲ್ಲಿ ಹಲವಾರು ಸರಣಿ ಅಪಘಾತಗಳು ಸಂಭವಿಸಿದ ಬಗ್ಗೆ ವರದಿಯಾದವು. ಅದರಲ್ಲಿ ಮೊದಲು ನನ್ನದು… ಮತ್ತು ನಂತರ ಏಳೆಂಟು ವಾಹನಗಳನ್ನು ಒಳಗೊಂಡ ಸರಣಿ ಅಪಘಾತಗಳು ಸಂಭವಿಸಿದವು” ಎಂದು ತಿಳಿಸಿದರು.

”ರಸ್ತೆ ಮೇಲಿನ ನೀರು ಹೊರ ಹೋಗಲು ಸ್ಥಳವಿಲ್ಲ. ಒಂದುವೇಳೆ ಪ್ರಧಾನಿ ಆಗಮನದ ಸುದ್ದಿ ಬಂದಿದ್ದರೆ, ಅವರು (ಬೊಮ್ಮಾಯಿ) 10 ನಿಮಿಷಗಳಲ್ಲಿ ಈ ಜಲಾವೃತವನ್ನು ತೆರವುಗೊಳಿಸುತ್ತಾರೆ. ನಾವು ಸಾಮಾನ್ಯ ಜನರು, ನಮ್ಮ ಕಷ್ಟ ಕೇಳುವವರು ಯಾರು? ಈ ತೊಂದರೆಗಳಿಗೆ ಯಾರು ಹೊಣೆ?” ಎಂದು ನಾಗರಾಜು ಅಳಲು ತೋಡಿಕೊಂಡಿದ್ದಾರೆ.

ಮಾರ್ಚ್ 12ರಂದು ಪ್ರಧಾನಿ ಮೋದಿ ಅವರು 118 ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಉದ್ಘಾಟಿಸಿದರು. ಉದ್ಘಾಟಿಸಿದ ದಿನದಿಂದ ದಿನನಿತ್ಯ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಒಂದು ಕಡೆ ಹೆಚ್ಚಿನ ಟೋಲ್ ಶುಲ್ಕ್ ವಸೂಲಿ, ಮತ್ತೊಂದಡೆ ರಸ್ತೆ ನಿರ್ಮಾಣದ ಬಗ್ಗೆ ಆರೋಪಗಳು ಕೇಳಿಬರುತ್ತಿವೆ.

ರಸ್ತೆ ಉದ್ಘಾಟನೆಯಾದ ದಿನವೇ ಒಂದು ಅಪಘಾತ ಸಂಭವಿಸಿತ್ತು. ಮರುದಿನವೇ ರಸ್ತೆಯ ಟಾರು ಕಿತ್ತು ಬಂದಿತ್ತು. ಇನ್ನೂ ಟೋಲ್ ವಸೂಲಿ ವಿಚಾರಕ್ಕೆ ಪ್ರತಿನಿತ್ಯ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ವಿಚಾರಕ್ಕೆ ಈಗಾಗಲೇ ಕರ್ನಾಟಕ ಹೈಕೋರ್ಟ್ ಸುಮೋಟೋ ವಿಚಾರಣೆ ಆರಂಭಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...