Homeಕರ್ನಾಟಕಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

- Advertisement -
- Advertisement -

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯು ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಜಲಾವೃತವಾಗಿದೆ. ಇದರಿಂದ ರಾಜ್ಯದ ರಾಮನಗರ ಸಮೀಪ ಸರಣಿ ಅಪಘಾತ ಸಂಭವಿಸಿ, ಟ್ರಾಫಿಕ್ ಜಾಮ್‌ಗೆ ಕಾರಣವಾಯಿತು.

ರಾಮನಗರ ಜಿಲ್ಲೆ ಬಳಿ 8,480 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರಾಷ್ಟ್ರೀಯ ಹೆದ್ದಾರಿ ಮಳೆಯಿಂದಾಗಿ ಜಲಾವೃತವಾಗಿದೆ. ಹೆದ್ದಾರಿಯಲ್ಲಿನ ಕೆಳಸೇತುವೆಯಲ್ಲಿ ನೀರು ನಿಂತಿದ್ದು, ಬಂಪರ್-ಟು-ಬಂಪರ್ ಸರಣಿ ಅಪಘಾತಗಳಿಗೆ ಕಾರಣವಾಯಿತು. ಇದರಿಂದಾಗಿ ವಾಹನಗಳು ನಿಧಾನವಾಗಿ ಚಲಿಸಿದ್ದರಿಂದ ಬಹಳ ಸಮಯದವರೆಗೂ ಟ್ರಾಫಿಕ್ ಜಾಮ್ ಉಂಟಾಯಿತು.

ಕಳೆದ ವರ್ಷ ಕರ್ನಾಟಕದಲ್ಲಿ ಹಿಂದೆಂದೂ ಕಂಡಿರದ ಮಳೆ ಸುರಿದಾಗಲೂ ಇದೇ ರೀತಿ ಕೆಳಸೇತುವೆಯು ಜಲಾವೃತವಾಗಿತ್ತು.

”ತಮ್ಮ ವಾಹನಗಳಿಗೆ ಹಾನಿ ಮಾಡುವುದಕ್ಕಾಗಿಯೇ ಮುಖ್ಯಮಂತ್ರಿ ಬಿ.ಎಸ್.ಬೊಮ್ಮಾಯಿ ಮತ್ತು ಪ್ರಧಾನಿ ಮೋದಿ ತರಾತುರಿಯಲ್ಲಿ ಈ ಹೆದ್ದಾರಿ ಉದ್ಘಾಟನೆಗೆ ಮಾಡಿದ್ದಾರೆಯೇ?” ಎಂದು ಅಲ್ಲಿ ಪರದಾಡಿದ ಕೆಲ ಪ್ರಯಾಣಿಕರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಸಂಗ್ರಹ: ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್

ಈ ಬಗ್ಗೆ ಪ್ರಯಾಣಿಕ ವಿಕಾಸ್ ಎನ್ನುವವರು ಎನ್‌ಡಿಟಿವಿ ಜೊತೆ ಮಾತನಾಡಿ, ”ನನ್ನ ಮಾರುತಿ ಸ್ವಿಫ್ಟ್ ಕಾರು ಜಲಾವೃತಗೊಂಡ ಕೆಳಸೇತುವೆಯಲ್ಲಿ ಅರ್ಧ ಮುಳುಗಿ ಅಲ್ಲಿಯೇ ನಿಂತುಬಿಟ್ಟಿತ್ತು. ಹಿಂದಿನಿಂದ ಬಂದ ಲಾರಿ ನನ್ನ ಕಾರಿಗೆ ಡಿಕ್ಕಿ ಹೊಡೆದಿದೆ, ಇದಕ್ಕೆ ಯಾರು ಹೊಣೆ? ನನ್ನ ಕಾರನ್ನು ರಿಪೇರಿ ಮಾಡುವಂತೆ ನಾನು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತಿದ್ದೇನೆ ಎಂದರು.

”ಪ್ರಧಾನಿ ಮೋದಿ ಹೆದ್ದಾರಿಯನ್ನು ಉದ್ಘಾಟಿಸಿದರು, ಈ ರಸ್ತೆ ಉದ್ಘಾಟನೆಗೆ ಸಿದ್ಧವಾಗಿದೆಯೇ ಎಂದು ಅವರು ತಮ್ಮ ರಸ್ತೆ ಮತ್ತು ಸಾರಿಗೆ ಸಚಿವಾಲಯದಿಂದ ಪರಿಶೀಲಿಸಿದ್ದೀರಾ? ಅವರ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನಾವು ತೊಂದರೆ ಅನುಭವಿಸಬೇಕೇ? ಅವರು ಹೆಚ್ಚಿನ ಟೋಲ್ ಶುಲ್ಕವನ್ನು ವಿಧಿಸುತ್ತಾರೆ, ಆದರೆ ರಸ್ತೆ ಮಾತ್ರ ಈ ರೀತಿಯಲ್ಲಿದೆ. ನಾವು ಟೋಲ್ ಶುಲ್ಕ್ ಕಟ್ಟಿದರೂ ಏನು ಪ್ರಯೋಜನ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಂಪರ್ ಟು ಬಂಪರ್ ಅಪಘಾತಗಳಲ್ಲಿ ತಮ್ಮ ವಾಹನವೇ ಮೊದಲು ಎಂದು ಆಕ್ರೋಶ ವ್ಯಕ್ತಪಡಿಸಿದ ಮತ್ತೊಬ್ಬ ಪ್ರಯಾಣಿಕ ನಾಗರಾಜು, ”ಅಪಘಾತಗಳಿಗೆ ಯಾರು ಹೊಣೆ? ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಬಂದಿದ್ದರೇ 10 ನಿಮಿಷದಲ್ಲಿ ಈ ಜಲಾವೃತವನ್ನು ರಾಜ್ಯ ಸರ್ಕಾರವು ತೆರವುಗೊಳಿಸುತ್ತಿತ್ತು” ಎಂದು ಅಸಮಾಧಾನ ಹೊರಹಾಕಿದರು.

“ಕೆಳಸೇತುವೆಯಲ್ಲಿ ನೀರು ತುಂಬಲು ಪ್ರಾರಂಭಿಸಿದ ಕೆಲವೇ ಸಮಯದಲ್ಲಿ ಹಲವಾರು ಸರಣಿ ಅಪಘಾತಗಳು ಸಂಭವಿಸಿದ ಬಗ್ಗೆ ವರದಿಯಾದವು. ಅದರಲ್ಲಿ ಮೊದಲು ನನ್ನದು… ಮತ್ತು ನಂತರ ಏಳೆಂಟು ವಾಹನಗಳನ್ನು ಒಳಗೊಂಡ ಸರಣಿ ಅಪಘಾತಗಳು ಸಂಭವಿಸಿದವು” ಎಂದು ತಿಳಿಸಿದರು.

”ರಸ್ತೆ ಮೇಲಿನ ನೀರು ಹೊರ ಹೋಗಲು ಸ್ಥಳವಿಲ್ಲ. ಒಂದುವೇಳೆ ಪ್ರಧಾನಿ ಆಗಮನದ ಸುದ್ದಿ ಬಂದಿದ್ದರೆ, ಅವರು (ಬೊಮ್ಮಾಯಿ) 10 ನಿಮಿಷಗಳಲ್ಲಿ ಈ ಜಲಾವೃತವನ್ನು ತೆರವುಗೊಳಿಸುತ್ತಾರೆ. ನಾವು ಸಾಮಾನ್ಯ ಜನರು, ನಮ್ಮ ಕಷ್ಟ ಕೇಳುವವರು ಯಾರು? ಈ ತೊಂದರೆಗಳಿಗೆ ಯಾರು ಹೊಣೆ?” ಎಂದು ನಾಗರಾಜು ಅಳಲು ತೋಡಿಕೊಂಡಿದ್ದಾರೆ.

ಮಾರ್ಚ್ 12ರಂದು ಪ್ರಧಾನಿ ಮೋದಿ ಅವರು 118 ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಉದ್ಘಾಟಿಸಿದರು. ಉದ್ಘಾಟಿಸಿದ ದಿನದಿಂದ ದಿನನಿತ್ಯ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಒಂದು ಕಡೆ ಹೆಚ್ಚಿನ ಟೋಲ್ ಶುಲ್ಕ್ ವಸೂಲಿ, ಮತ್ತೊಂದಡೆ ರಸ್ತೆ ನಿರ್ಮಾಣದ ಬಗ್ಗೆ ಆರೋಪಗಳು ಕೇಳಿಬರುತ್ತಿವೆ.

ರಸ್ತೆ ಉದ್ಘಾಟನೆಯಾದ ದಿನವೇ ಒಂದು ಅಪಘಾತ ಸಂಭವಿಸಿತ್ತು. ಮರುದಿನವೇ ರಸ್ತೆಯ ಟಾರು ಕಿತ್ತು ಬಂದಿತ್ತು. ಇನ್ನೂ ಟೋಲ್ ವಸೂಲಿ ವಿಚಾರಕ್ಕೆ ಪ್ರತಿನಿತ್ಯ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ವಿಚಾರಕ್ಕೆ ಈಗಾಗಲೇ ಕರ್ನಾಟಕ ಹೈಕೋರ್ಟ್ ಸುಮೋಟೋ ವಿಚಾರಣೆ ಆರಂಭಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...