Homeಕರ್ನಾಟಕಬೆಂಗಳೂರು | ನರ್ಸಿಂಗ್ ವಿದ್ಯಾರ್ಥಿನಿ ಅಸಹಜ ಸಾವು : ಕಾಲೇಜಿನಲ್ಲಿ ಕಿರುಕುಳ ಆರೋಪ

ಬೆಂಗಳೂರು | ನರ್ಸಿಂಗ್ ವಿದ್ಯಾರ್ಥಿನಿ ಅಸಹಜ ಸಾವು : ಕಾಲೇಜಿನಲ್ಲಿ ಕಿರುಕುಳ ಆರೋಪ

- Advertisement -
- Advertisement -

ರಾಮನಗರ ಜಿಲ್ಲೆ ಕನಕಪುರ ಬಳಿಯ ಡಾ.ಚಂದ್ರಮ್ಮ ದಯಾನಂದಸಾಗರ ವಿಶ್ವವಿದ್ಯಾಲಯದ ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಕೇರಳ ಮೂಲದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಅನಾಮಿಕ ವಿನೀತ್ (19) ಮಂಗಳವಾರ (ಫೆ.4) ಸಾವಿಗೀಡಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಪುತ್ರಿಯ ಸಾವಿಗೆ ಕಾಲೇಜಿನ ಆಡಳಿತ ಮಂಡಳಿಯ ಕಿರುಕುಳವೇ ಕಾರಣ ಎಂದು ಆರೋಪಿಸಿ ಅನಾಮಿಕ ಅವರ ಪೋಷಕರು ನೀಡಿರುವ ದೂರಿನ ಮೇರೆಗೆ ಕಾಲೇಜಿನ ಪ್ರಾಚಾರ್ಯ ಮತ್ತು ಆಡಳಿತ ಮಂಡಳಿ ಸಿಬ್ಬಂದಿ ವಿರುದ್ದ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಬುಧವಾರ (ಫೆ.5) ಪ್ರಕರಣ ದಾಖಲಾಗಿದೆ.

ಅನಾಮಿಕ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು, ಆಡಳಿತ ಮಂಡಳಿಯ ವಿರುದ್ದ ಕಾಲೇಜಿನ ಆವರಣದಲ್ಲಿ ಬುಧವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದ್ದಾರೆ. ಅನಾಮಿಕ ಸಾವಿಗೆ ಕಾರಣರಾದವರ ವಿರುದ್ದ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.

ಕೇರಳದ ಕಣ್ಣೂರು ಜಿಲ್ಲೆಯ ಮುಝಪ್ಪಿಲನಗರ ಗ್ರಾಮದ ನಿವಾಸಿ ಅನಾಮಿಕ ದಯಾನಂದಸಾಗರ ವಿವಿಯ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. ಮಂಗಳವಾರ ರಾತ್ರಿ ಅನಾಮಿಕ ಊಟಕ್ಕೆ ಬಂದಿರಲಿಲ್ಲ. ಸಹಪಾಠಿಗಳು ಆಕೆಯ ಕೊಠಡಿಯ ಬಾಗಿಲು ಬಡಿದಾಗ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ನಂತರ ಕಿಟಕಿ ಬಾಗಿಲು ತೆರೆದು ನೋಡಿದಾಗ ಅನಾಮಿಕ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ವಿದ್ಯಾರ್ಥಿಗಳು ಈ ವಿಷಯವನ್ನು ತಕ್ಷಣ ವಾರ್ಡನ್‌ಗೆ ತಿಳಿಸಿದ್ದಾರೆ. ಅವರು ಆಡಳಿತ ಮಂಡಳಿ ಗಮನಕ್ಕೆ ತಂದು ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ.

ವರದಿಗಳ ಪ್ರಕಾರ, ರೂಮ್‌ಮೇಟ್ ಅನಾರೋಗ್ಯ ನಿಮಿತ್ತ ರಜೆಯಲ್ಲಿದ್ದ ಕಾರಣ, ಕಳೆದ 15 ದಿನಗಳಿಂದ ಅನಾಮಿಕ ಅವರು ತಮ್ಮ ಹಾಸ್ಟೆಲ್ ಕೋಣೆಯಲ್ಲಿ ಒಬ್ಬಂಟಿಯಾಗಿ ಇದ್ದರು.

ಆಂತರಿಕ ಪರೀಕ್ಷೆಯ ಸಮಯದಲ್ಲಿ ಮೊಬೈಲ್ ಫೋನ್ ಹೊಂದಿರುವುದು ಪತ್ತೆಯಾದ ನಂತರ ಅನಾಮಿಕಾಳನ್ನು ಕಾಲೇಜಿಗೆ ಹೋಗದಂತೆ ನಿರ್ಬಂಧಿಸಲಾಗಿತ್ತು ಎಂದು ವರದಿಯಾಗಿದೆ.

ಅನಾಮಿಕ ಅವರ ಕೊಠಡಿಯಲ್ಲಿ ವಿದ್ಯಾರ್ಥಿನಿಯರಿಗೆ ಎರಡು ಪತ್ರಗಳು ದೊರೆತಿವೆ. ಒಂದು ಆಕೆಯ ಕುಟುಂಬವನ್ನು ಉದ್ದೇಶಿಸಿ ಬರೆದಿದ್ದರೆ, ಇನ್ನೊಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿಯಿಂದ ಆಕೆ ಅನುಭವಿಸಿದ ಕಿರುಕುಳದ ಬಗ್ಗೆ ವಿವರಿಸಿದೆ. ಆದಾಗ್ಯೂ, ಆಡಳಿತ ಮಂಡಳಿಯ ವಿರುದ್ಧದ ಆರೋಪಗಳನ್ನು ಒಳಗೊಂಡ ಪತ್ರವು ಕಾಣೆಯಾಗಿದೆ ಎಂದು ವಿದ್ಯಾರ್ಥಿಗಳು ಹೇಳಿಕೊಳ್ಳುತ್ತಿದ್ದಾರೆ, ಇದು ಮತ್ತಷ್ಟು ಕಳವಳವನ್ನು ಹುಟ್ಟು ಹಾಕಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

ಅನಾಮಿಕ ಅವರ ಕುಟುಂಬಸ್ಥರು ಮತ್ತು ಸಹ ವಿದ್ಯಾರ್ಥಿಗಳು ಕಾಲೇಜು ಅಧಿಕಾರಿಗಳು ಆಕೆಯನ್ನು ತೀವ್ರ ಮಾನಸಿಕ ಯಾತನೆಗೆ ಒಳಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. “ಕಳೆದ ಕೆಲವು ದಿನಗಳಲ್ಲಿ, ಪ್ರಾಂಶುಪಾಲರಿಂದ ಆಕೆ ತೀವ್ರ ಮಾನಸಿಕ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಪ್ರಾಂಶುಪಾಲರು, ಇತರ ಇಬ್ಬರು ಶಿಕ್ಷಕರೊಂದಿಗೆ ಸೇರಿ ಆಕೆಯನ್ನು ಮಾತಿನ ಮೂಲಕ ನಿಂದಿಸಿ, ಅಸಭ್ಯವಾಗಿ ವರ್ತಿಸಿದ್ದಾರೆ. ಆಕೆ ಇತ್ತೀಚೆಗೆ ತರಗತಿಗಳಿಗೆ ಹೋಗುವುದನ್ನೇ ನಿಲ್ಲಿಸಿದ್ದರು” ಎಂದು ವಿದ್ಯಾರ್ಥಿನಿಯೊಬ್ಬಳು ಮಾಧ್ಯಮಗಳಿಗೆ ತಿಳಿಸಿದ್ದಾಗಿ ವರದಿ ವಿವರಿಸಿದೆ.

ವಿಶ್ವವಿದ್ಯಾನಿಲಯದ ಮಲಯಾಳಿ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ವಿಧಿಸಲಾಗಿರುವ ನಿರ್ಬಂಧಿತ ನೀತಿಗಳ ಬಗ್ಗೆ, ವಿಶೇಷವಾಗಿ ಮೊಬೈಲ್ ಫೋನ್ ಬಳಕೆಗೆ ಸಂಬಂಧಿಸಿದ ಬಗ್ಗೆ ಮಾತನಾಡಿದ್ದಾರೆ. ನಿರ್ಬಂಧಗಳ ಪ್ರಕಾರ, ಎಲ್ಲಾ ವಿದ್ಯಾರ್ಥಿಗಳು ಕಾಲೇಜು ಅವಧಿ ಪ್ರಾರಂಭವಾದಾಗ ತಮ್ಮ ಮೊಬೈಲ್ ಫೋನ್‌ಗಳನ್ನು ಕಾಲೇಜು ಸಿಬ್ಬಂದಿ ಕೈಗೆ ಕೊಡಬೇಕು. ಆಡಳಿತ ಮಂಡಳಿಯ ನಿಯಮಗಳು ಕಠಿಣವಾಗಿವೆ ಎಂದು ಮಲಯಾಳಿ ವಿದ್ಯಾರ್ಥಿಗಳು ಆರೋಪಿಸಿದ್ದಾಗಿ ನ್ಯೂಸ್ ಮಿನಿಟ್ ವರದಿ ಹೇಳಿದೆ.

ಪುತ್ರಿಗೆ ತೊಂದರೆ ನೀಡುತ್ತಿದ್ದ ಕಾಲೇಜಿನ ಪ್ರಾಂಶುಪಾಲರು ಆಕೆಯನ್ನು ಬ್ಲಾಕ್‌ಲಿಸ್ಟ್‌ಗೆ ಸೇರಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ವಿದ್ಯಾರ್ಥಿನಿ ತಂದೆ ವಿನೀತ್ ಕುಮಾರ್ ಠಾಣೆಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಪ್ರಜಾವಾಣಿ ವರದಿ ತಿಳಿಸಿದೆ.

ನಾಲ್ಕು ತಿಂಗಳ ಹಿಂದೆ ಕಾಲೇಜಿಗೆ ಸೇರಿದ್ದ ಅನಾಮಿಕ ಒಂದೆರಡು ವಿಷಯದಲ್ಲಿ ಹಿಂದುಳಿದಿದ್ದರು. ಇದನ್ನೇ ನೆಪ ಮಾಡಿಕೊಂಡು ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯವರು ಅವರಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು. ಒಂದು ವಿಷಯದಲ್ಲಿ ಫೇಲಾದರೆ ಇಂತಿಷ್ಟು ಹಣ ಪಾವತಿಸಬೇಕು. ಇಲ್ಲದಿದ್ದರೆ ವರ್ಷದ ಪೂರ್ಣ ಶುಲ್ಕ ಪಾವತಿಸಬೇಕು ಎಂದು ತೊಂದರೆ ಕೊಡುತ್ತಿದ್ದರು. ಕಾಲೇಜು ತೊರೆಯಲು ಮುಂದಾಗಿದ್ದ ಅನಾಮಿಕ ವರ್ಗಾವಣೆ ಪತ್ರ ಕೇಳಿದಾಗ ನಾಲ್ಕು ವರ್ಷದ ಶುಲ್ಕ ಪಾವತಿಸಿದರೆ ಕೊಡುವುದಾಗಿ ಹೇಳಿದ್ದರು. ಇದರಿಂದ ತೀವ್ರ ನೊಂದಿದ್ದ ಅನಾಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ದೂರಿದ್ದಾಗಿ ವರದಿ ವಿವರಿಸಿದೆ.

ಕಿರುಕುಳ ಆರೋಪದ ಮೇಲೆ ಅನಾಮಿಕ ಪೋಷಕರು ನೀಡಿದ ದೂರಿನ ಮೇರೆಗೆ ಕಾಲೇಜು ಪ್ರಾಚಾರ್ಯ ಮತ್ತು ಆಡಳಿತ ಮಂಡಳಿ ಸಿಬ್ಬಂದಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 108ರಡಿ (ಆತ್ಮಹತ್ಯೆಗೆ ಪ್ರಚೋದನೆ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಅನಾಮಿಕ ಅವರ ಸಾವು ಆತ್ಮಹತ್ಯೆಯಿಂದ ಆಗಿದೆ ಎಂದು ವರದಿಗಳು ಹೇಳಿವೆ. ಅದು ಆತ್ಮಹತ್ಯೆಯೂ.. ಕೊಲೆಯೂ? ಅಥವಾ ಇನ್ಯಾವುದೇ ಕಾರಣಕ್ಕೆ ಸಾವಾಗಿದೆಯೂ ಇನ್ನೂ ಖಚಿತವಾಗಿಲ್ಲ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವುದರಿಂದ ನಾವು ಇತ್ಯರ್ಥಕ್ಕೆ ಬರಲು ಸಾಧ್ಯವಿಲ್ಲ. ಹಾಗಾಗಿ, ‘ಆತ್ಮಹತ್ಯೆ’ ಬದಲಾಗಿ ಸುದ್ದಿಯಲ್ಲಿ ‘ಅಸಹಜ ಸಾವು’ ಎಂದಷ್ಟೇ ಉಲ್ಲೇಖಿಸಲಾಗಿದೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಯುಜಿಸಿ ಕರಡು ನಿಯಮಕ್ಕೆ ವಿರೋಧ : ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ 15 ಅಂಶಗಳ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...