Homeಕರ್ನಾಟಕಬೆಂಗಳೂರು | ನರ್ಸಿಂಗ್ ವಿದ್ಯಾರ್ಥಿನಿ ಅಸಹಜ ಸಾವು : ಕಾಲೇಜಿನಲ್ಲಿ ಕಿರುಕುಳ ಆರೋಪ

ಬೆಂಗಳೂರು | ನರ್ಸಿಂಗ್ ವಿದ್ಯಾರ್ಥಿನಿ ಅಸಹಜ ಸಾವು : ಕಾಲೇಜಿನಲ್ಲಿ ಕಿರುಕುಳ ಆರೋಪ

- Advertisement -
- Advertisement -

ರಾಮನಗರ ಜಿಲ್ಲೆ ಕನಕಪುರ ಬಳಿಯ ಡಾ.ಚಂದ್ರಮ್ಮ ದಯಾನಂದಸಾಗರ ವಿಶ್ವವಿದ್ಯಾಲಯದ ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಕೇರಳ ಮೂಲದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಅನಾಮಿಕ ವಿನೀತ್ (19) ಮಂಗಳವಾರ (ಫೆ.4) ಸಾವಿಗೀಡಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಪುತ್ರಿಯ ಸಾವಿಗೆ ಕಾಲೇಜಿನ ಆಡಳಿತ ಮಂಡಳಿಯ ಕಿರುಕುಳವೇ ಕಾರಣ ಎಂದು ಆರೋಪಿಸಿ ಅನಾಮಿಕ ಅವರ ಪೋಷಕರು ನೀಡಿರುವ ದೂರಿನ ಮೇರೆಗೆ ಕಾಲೇಜಿನ ಪ್ರಾಚಾರ್ಯ ಮತ್ತು ಆಡಳಿತ ಮಂಡಳಿ ಸಿಬ್ಬಂದಿ ವಿರುದ್ದ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಬುಧವಾರ (ಫೆ.5) ಪ್ರಕರಣ ದಾಖಲಾಗಿದೆ.

ಅನಾಮಿಕ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು, ಆಡಳಿತ ಮಂಡಳಿಯ ವಿರುದ್ದ ಕಾಲೇಜಿನ ಆವರಣದಲ್ಲಿ ಬುಧವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದ್ದಾರೆ. ಅನಾಮಿಕ ಸಾವಿಗೆ ಕಾರಣರಾದವರ ವಿರುದ್ದ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.

ಕೇರಳದ ಕಣ್ಣೂರು ಜಿಲ್ಲೆಯ ಮುಝಪ್ಪಿಲನಗರ ಗ್ರಾಮದ ನಿವಾಸಿ ಅನಾಮಿಕ ದಯಾನಂದಸಾಗರ ವಿವಿಯ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. ಮಂಗಳವಾರ ರಾತ್ರಿ ಅನಾಮಿಕ ಊಟಕ್ಕೆ ಬಂದಿರಲಿಲ್ಲ. ಸಹಪಾಠಿಗಳು ಆಕೆಯ ಕೊಠಡಿಯ ಬಾಗಿಲು ಬಡಿದಾಗ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ನಂತರ ಕಿಟಕಿ ಬಾಗಿಲು ತೆರೆದು ನೋಡಿದಾಗ ಅನಾಮಿಕ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ವಿದ್ಯಾರ್ಥಿಗಳು ಈ ವಿಷಯವನ್ನು ತಕ್ಷಣ ವಾರ್ಡನ್‌ಗೆ ತಿಳಿಸಿದ್ದಾರೆ. ಅವರು ಆಡಳಿತ ಮಂಡಳಿ ಗಮನಕ್ಕೆ ತಂದು ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ.

ವರದಿಗಳ ಪ್ರಕಾರ, ರೂಮ್‌ಮೇಟ್ ಅನಾರೋಗ್ಯ ನಿಮಿತ್ತ ರಜೆಯಲ್ಲಿದ್ದ ಕಾರಣ, ಕಳೆದ 15 ದಿನಗಳಿಂದ ಅನಾಮಿಕ ಅವರು ತಮ್ಮ ಹಾಸ್ಟೆಲ್ ಕೋಣೆಯಲ್ಲಿ ಒಬ್ಬಂಟಿಯಾಗಿ ಇದ್ದರು.

ಆಂತರಿಕ ಪರೀಕ್ಷೆಯ ಸಮಯದಲ್ಲಿ ಮೊಬೈಲ್ ಫೋನ್ ಹೊಂದಿರುವುದು ಪತ್ತೆಯಾದ ನಂತರ ಅನಾಮಿಕಾಳನ್ನು ಕಾಲೇಜಿಗೆ ಹೋಗದಂತೆ ನಿರ್ಬಂಧಿಸಲಾಗಿತ್ತು ಎಂದು ವರದಿಯಾಗಿದೆ.

ಅನಾಮಿಕ ಅವರ ಕೊಠಡಿಯಲ್ಲಿ ವಿದ್ಯಾರ್ಥಿನಿಯರಿಗೆ ಎರಡು ಪತ್ರಗಳು ದೊರೆತಿವೆ. ಒಂದು ಆಕೆಯ ಕುಟುಂಬವನ್ನು ಉದ್ದೇಶಿಸಿ ಬರೆದಿದ್ದರೆ, ಇನ್ನೊಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿಯಿಂದ ಆಕೆ ಅನುಭವಿಸಿದ ಕಿರುಕುಳದ ಬಗ್ಗೆ ವಿವರಿಸಿದೆ. ಆದಾಗ್ಯೂ, ಆಡಳಿತ ಮಂಡಳಿಯ ವಿರುದ್ಧದ ಆರೋಪಗಳನ್ನು ಒಳಗೊಂಡ ಪತ್ರವು ಕಾಣೆಯಾಗಿದೆ ಎಂದು ವಿದ್ಯಾರ್ಥಿಗಳು ಹೇಳಿಕೊಳ್ಳುತ್ತಿದ್ದಾರೆ, ಇದು ಮತ್ತಷ್ಟು ಕಳವಳವನ್ನು ಹುಟ್ಟು ಹಾಕಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

ಅನಾಮಿಕ ಅವರ ಕುಟುಂಬಸ್ಥರು ಮತ್ತು ಸಹ ವಿದ್ಯಾರ್ಥಿಗಳು ಕಾಲೇಜು ಅಧಿಕಾರಿಗಳು ಆಕೆಯನ್ನು ತೀವ್ರ ಮಾನಸಿಕ ಯಾತನೆಗೆ ಒಳಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. “ಕಳೆದ ಕೆಲವು ದಿನಗಳಲ್ಲಿ, ಪ್ರಾಂಶುಪಾಲರಿಂದ ಆಕೆ ತೀವ್ರ ಮಾನಸಿಕ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಪ್ರಾಂಶುಪಾಲರು, ಇತರ ಇಬ್ಬರು ಶಿಕ್ಷಕರೊಂದಿಗೆ ಸೇರಿ ಆಕೆಯನ್ನು ಮಾತಿನ ಮೂಲಕ ನಿಂದಿಸಿ, ಅಸಭ್ಯವಾಗಿ ವರ್ತಿಸಿದ್ದಾರೆ. ಆಕೆ ಇತ್ತೀಚೆಗೆ ತರಗತಿಗಳಿಗೆ ಹೋಗುವುದನ್ನೇ ನಿಲ್ಲಿಸಿದ್ದರು” ಎಂದು ವಿದ್ಯಾರ್ಥಿನಿಯೊಬ್ಬಳು ಮಾಧ್ಯಮಗಳಿಗೆ ತಿಳಿಸಿದ್ದಾಗಿ ವರದಿ ವಿವರಿಸಿದೆ.

ವಿಶ್ವವಿದ್ಯಾನಿಲಯದ ಮಲಯಾಳಿ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ವಿಧಿಸಲಾಗಿರುವ ನಿರ್ಬಂಧಿತ ನೀತಿಗಳ ಬಗ್ಗೆ, ವಿಶೇಷವಾಗಿ ಮೊಬೈಲ್ ಫೋನ್ ಬಳಕೆಗೆ ಸಂಬಂಧಿಸಿದ ಬಗ್ಗೆ ಮಾತನಾಡಿದ್ದಾರೆ. ನಿರ್ಬಂಧಗಳ ಪ್ರಕಾರ, ಎಲ್ಲಾ ವಿದ್ಯಾರ್ಥಿಗಳು ಕಾಲೇಜು ಅವಧಿ ಪ್ರಾರಂಭವಾದಾಗ ತಮ್ಮ ಮೊಬೈಲ್ ಫೋನ್‌ಗಳನ್ನು ಕಾಲೇಜು ಸಿಬ್ಬಂದಿ ಕೈಗೆ ಕೊಡಬೇಕು. ಆಡಳಿತ ಮಂಡಳಿಯ ನಿಯಮಗಳು ಕಠಿಣವಾಗಿವೆ ಎಂದು ಮಲಯಾಳಿ ವಿದ್ಯಾರ್ಥಿಗಳು ಆರೋಪಿಸಿದ್ದಾಗಿ ನ್ಯೂಸ್ ಮಿನಿಟ್ ವರದಿ ಹೇಳಿದೆ.

ಪುತ್ರಿಗೆ ತೊಂದರೆ ನೀಡುತ್ತಿದ್ದ ಕಾಲೇಜಿನ ಪ್ರಾಂಶುಪಾಲರು ಆಕೆಯನ್ನು ಬ್ಲಾಕ್‌ಲಿಸ್ಟ್‌ಗೆ ಸೇರಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ವಿದ್ಯಾರ್ಥಿನಿ ತಂದೆ ವಿನೀತ್ ಕುಮಾರ್ ಠಾಣೆಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಪ್ರಜಾವಾಣಿ ವರದಿ ತಿಳಿಸಿದೆ.

ನಾಲ್ಕು ತಿಂಗಳ ಹಿಂದೆ ಕಾಲೇಜಿಗೆ ಸೇರಿದ್ದ ಅನಾಮಿಕ ಒಂದೆರಡು ವಿಷಯದಲ್ಲಿ ಹಿಂದುಳಿದಿದ್ದರು. ಇದನ್ನೇ ನೆಪ ಮಾಡಿಕೊಂಡು ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯವರು ಅವರಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು. ಒಂದು ವಿಷಯದಲ್ಲಿ ಫೇಲಾದರೆ ಇಂತಿಷ್ಟು ಹಣ ಪಾವತಿಸಬೇಕು. ಇಲ್ಲದಿದ್ದರೆ ವರ್ಷದ ಪೂರ್ಣ ಶುಲ್ಕ ಪಾವತಿಸಬೇಕು ಎಂದು ತೊಂದರೆ ಕೊಡುತ್ತಿದ್ದರು. ಕಾಲೇಜು ತೊರೆಯಲು ಮುಂದಾಗಿದ್ದ ಅನಾಮಿಕ ವರ್ಗಾವಣೆ ಪತ್ರ ಕೇಳಿದಾಗ ನಾಲ್ಕು ವರ್ಷದ ಶುಲ್ಕ ಪಾವತಿಸಿದರೆ ಕೊಡುವುದಾಗಿ ಹೇಳಿದ್ದರು. ಇದರಿಂದ ತೀವ್ರ ನೊಂದಿದ್ದ ಅನಾಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ದೂರಿದ್ದಾಗಿ ವರದಿ ವಿವರಿಸಿದೆ.

ಕಿರುಕುಳ ಆರೋಪದ ಮೇಲೆ ಅನಾಮಿಕ ಪೋಷಕರು ನೀಡಿದ ದೂರಿನ ಮೇರೆಗೆ ಕಾಲೇಜು ಪ್ರಾಚಾರ್ಯ ಮತ್ತು ಆಡಳಿತ ಮಂಡಳಿ ಸಿಬ್ಬಂದಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 108ರಡಿ (ಆತ್ಮಹತ್ಯೆಗೆ ಪ್ರಚೋದನೆ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಅನಾಮಿಕ ಅವರ ಸಾವು ಆತ್ಮಹತ್ಯೆಯಿಂದ ಆಗಿದೆ ಎಂದು ವರದಿಗಳು ಹೇಳಿವೆ. ಅದು ಆತ್ಮಹತ್ಯೆಯೂ.. ಕೊಲೆಯೂ? ಅಥವಾ ಇನ್ಯಾವುದೇ ಕಾರಣಕ್ಕೆ ಸಾವಾಗಿದೆಯೂ ಇನ್ನೂ ಖಚಿತವಾಗಿಲ್ಲ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವುದರಿಂದ ನಾವು ಇತ್ಯರ್ಥಕ್ಕೆ ಬರಲು ಸಾಧ್ಯವಿಲ್ಲ. ಹಾಗಾಗಿ, ‘ಆತ್ಮಹತ್ಯೆ’ ಬದಲಾಗಿ ಸುದ್ದಿಯಲ್ಲಿ ‘ಅಸಹಜ ಸಾವು’ ಎಂದಷ್ಟೇ ಉಲ್ಲೇಖಿಸಲಾಗಿದೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಯುಜಿಸಿ ಕರಡು ನಿಯಮಕ್ಕೆ ವಿರೋಧ : ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ 15 ಅಂಶಗಳ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...