Homeಕರ್ನಾಟಕಬೆಂಗಳೂರು | ನರ್ಸಿಂಗ್ ವಿದ್ಯಾರ್ಥಿನಿ ಅಸಹಜ ಸಾವು : ಕಾಲೇಜಿನಲ್ಲಿ ಕಿರುಕುಳ ಆರೋಪ

ಬೆಂಗಳೂರು | ನರ್ಸಿಂಗ್ ವಿದ್ಯಾರ್ಥಿನಿ ಅಸಹಜ ಸಾವು : ಕಾಲೇಜಿನಲ್ಲಿ ಕಿರುಕುಳ ಆರೋಪ

- Advertisement -
- Advertisement -

ರಾಮನಗರ ಜಿಲ್ಲೆ ಕನಕಪುರ ಬಳಿಯ ಡಾ.ಚಂದ್ರಮ್ಮ ದಯಾನಂದಸಾಗರ ವಿಶ್ವವಿದ್ಯಾಲಯದ ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಕೇರಳ ಮೂಲದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಅನಾಮಿಕ ವಿನೀತ್ (19) ಮಂಗಳವಾರ (ಫೆ.4) ಸಾವಿಗೀಡಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಪುತ್ರಿಯ ಸಾವಿಗೆ ಕಾಲೇಜಿನ ಆಡಳಿತ ಮಂಡಳಿಯ ಕಿರುಕುಳವೇ ಕಾರಣ ಎಂದು ಆರೋಪಿಸಿ ಅನಾಮಿಕ ಅವರ ಪೋಷಕರು ನೀಡಿರುವ ದೂರಿನ ಮೇರೆಗೆ ಕಾಲೇಜಿನ ಪ್ರಾಚಾರ್ಯ ಮತ್ತು ಆಡಳಿತ ಮಂಡಳಿ ಸಿಬ್ಬಂದಿ ವಿರುದ್ದ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಬುಧವಾರ (ಫೆ.5) ಪ್ರಕರಣ ದಾಖಲಾಗಿದೆ.

ಅನಾಮಿಕ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು, ಆಡಳಿತ ಮಂಡಳಿಯ ವಿರುದ್ದ ಕಾಲೇಜಿನ ಆವರಣದಲ್ಲಿ ಬುಧವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದ್ದಾರೆ. ಅನಾಮಿಕ ಸಾವಿಗೆ ಕಾರಣರಾದವರ ವಿರುದ್ದ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.

ಕೇರಳದ ಕಣ್ಣೂರು ಜಿಲ್ಲೆಯ ಮುಝಪ್ಪಿಲನಗರ ಗ್ರಾಮದ ನಿವಾಸಿ ಅನಾಮಿಕ ದಯಾನಂದಸಾಗರ ವಿವಿಯ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. ಮಂಗಳವಾರ ರಾತ್ರಿ ಅನಾಮಿಕ ಊಟಕ್ಕೆ ಬಂದಿರಲಿಲ್ಲ. ಸಹಪಾಠಿಗಳು ಆಕೆಯ ಕೊಠಡಿಯ ಬಾಗಿಲು ಬಡಿದಾಗ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ನಂತರ ಕಿಟಕಿ ಬಾಗಿಲು ತೆರೆದು ನೋಡಿದಾಗ ಅನಾಮಿಕ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ವಿದ್ಯಾರ್ಥಿಗಳು ಈ ವಿಷಯವನ್ನು ತಕ್ಷಣ ವಾರ್ಡನ್‌ಗೆ ತಿಳಿಸಿದ್ದಾರೆ. ಅವರು ಆಡಳಿತ ಮಂಡಳಿ ಗಮನಕ್ಕೆ ತಂದು ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ.

ವರದಿಗಳ ಪ್ರಕಾರ, ರೂಮ್‌ಮೇಟ್ ಅನಾರೋಗ್ಯ ನಿಮಿತ್ತ ರಜೆಯಲ್ಲಿದ್ದ ಕಾರಣ, ಕಳೆದ 15 ದಿನಗಳಿಂದ ಅನಾಮಿಕ ಅವರು ತಮ್ಮ ಹಾಸ್ಟೆಲ್ ಕೋಣೆಯಲ್ಲಿ ಒಬ್ಬಂಟಿಯಾಗಿ ಇದ್ದರು.

ಆಂತರಿಕ ಪರೀಕ್ಷೆಯ ಸಮಯದಲ್ಲಿ ಮೊಬೈಲ್ ಫೋನ್ ಹೊಂದಿರುವುದು ಪತ್ತೆಯಾದ ನಂತರ ಅನಾಮಿಕಾಳನ್ನು ಕಾಲೇಜಿಗೆ ಹೋಗದಂತೆ ನಿರ್ಬಂಧಿಸಲಾಗಿತ್ತು ಎಂದು ವರದಿಯಾಗಿದೆ.

ಅನಾಮಿಕ ಅವರ ಕೊಠಡಿಯಲ್ಲಿ ವಿದ್ಯಾರ್ಥಿನಿಯರಿಗೆ ಎರಡು ಪತ್ರಗಳು ದೊರೆತಿವೆ. ಒಂದು ಆಕೆಯ ಕುಟುಂಬವನ್ನು ಉದ್ದೇಶಿಸಿ ಬರೆದಿದ್ದರೆ, ಇನ್ನೊಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿಯಿಂದ ಆಕೆ ಅನುಭವಿಸಿದ ಕಿರುಕುಳದ ಬಗ್ಗೆ ವಿವರಿಸಿದೆ. ಆದಾಗ್ಯೂ, ಆಡಳಿತ ಮಂಡಳಿಯ ವಿರುದ್ಧದ ಆರೋಪಗಳನ್ನು ಒಳಗೊಂಡ ಪತ್ರವು ಕಾಣೆಯಾಗಿದೆ ಎಂದು ವಿದ್ಯಾರ್ಥಿಗಳು ಹೇಳಿಕೊಳ್ಳುತ್ತಿದ್ದಾರೆ, ಇದು ಮತ್ತಷ್ಟು ಕಳವಳವನ್ನು ಹುಟ್ಟು ಹಾಕಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

ಅನಾಮಿಕ ಅವರ ಕುಟುಂಬಸ್ಥರು ಮತ್ತು ಸಹ ವಿದ್ಯಾರ್ಥಿಗಳು ಕಾಲೇಜು ಅಧಿಕಾರಿಗಳು ಆಕೆಯನ್ನು ತೀವ್ರ ಮಾನಸಿಕ ಯಾತನೆಗೆ ಒಳಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. “ಕಳೆದ ಕೆಲವು ದಿನಗಳಲ್ಲಿ, ಪ್ರಾಂಶುಪಾಲರಿಂದ ಆಕೆ ತೀವ್ರ ಮಾನಸಿಕ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಪ್ರಾಂಶುಪಾಲರು, ಇತರ ಇಬ್ಬರು ಶಿಕ್ಷಕರೊಂದಿಗೆ ಸೇರಿ ಆಕೆಯನ್ನು ಮಾತಿನ ಮೂಲಕ ನಿಂದಿಸಿ, ಅಸಭ್ಯವಾಗಿ ವರ್ತಿಸಿದ್ದಾರೆ. ಆಕೆ ಇತ್ತೀಚೆಗೆ ತರಗತಿಗಳಿಗೆ ಹೋಗುವುದನ್ನೇ ನಿಲ್ಲಿಸಿದ್ದರು” ಎಂದು ವಿದ್ಯಾರ್ಥಿನಿಯೊಬ್ಬಳು ಮಾಧ್ಯಮಗಳಿಗೆ ತಿಳಿಸಿದ್ದಾಗಿ ವರದಿ ವಿವರಿಸಿದೆ.

ವಿಶ್ವವಿದ್ಯಾನಿಲಯದ ಮಲಯಾಳಿ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ವಿಧಿಸಲಾಗಿರುವ ನಿರ್ಬಂಧಿತ ನೀತಿಗಳ ಬಗ್ಗೆ, ವಿಶೇಷವಾಗಿ ಮೊಬೈಲ್ ಫೋನ್ ಬಳಕೆಗೆ ಸಂಬಂಧಿಸಿದ ಬಗ್ಗೆ ಮಾತನಾಡಿದ್ದಾರೆ. ನಿರ್ಬಂಧಗಳ ಪ್ರಕಾರ, ಎಲ್ಲಾ ವಿದ್ಯಾರ್ಥಿಗಳು ಕಾಲೇಜು ಅವಧಿ ಪ್ರಾರಂಭವಾದಾಗ ತಮ್ಮ ಮೊಬೈಲ್ ಫೋನ್‌ಗಳನ್ನು ಕಾಲೇಜು ಸಿಬ್ಬಂದಿ ಕೈಗೆ ಕೊಡಬೇಕು. ಆಡಳಿತ ಮಂಡಳಿಯ ನಿಯಮಗಳು ಕಠಿಣವಾಗಿವೆ ಎಂದು ಮಲಯಾಳಿ ವಿದ್ಯಾರ್ಥಿಗಳು ಆರೋಪಿಸಿದ್ದಾಗಿ ನ್ಯೂಸ್ ಮಿನಿಟ್ ವರದಿ ಹೇಳಿದೆ.

ಪುತ್ರಿಗೆ ತೊಂದರೆ ನೀಡುತ್ತಿದ್ದ ಕಾಲೇಜಿನ ಪ್ರಾಂಶುಪಾಲರು ಆಕೆಯನ್ನು ಬ್ಲಾಕ್‌ಲಿಸ್ಟ್‌ಗೆ ಸೇರಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ವಿದ್ಯಾರ್ಥಿನಿ ತಂದೆ ವಿನೀತ್ ಕುಮಾರ್ ಠಾಣೆಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಪ್ರಜಾವಾಣಿ ವರದಿ ತಿಳಿಸಿದೆ.

ನಾಲ್ಕು ತಿಂಗಳ ಹಿಂದೆ ಕಾಲೇಜಿಗೆ ಸೇರಿದ್ದ ಅನಾಮಿಕ ಒಂದೆರಡು ವಿಷಯದಲ್ಲಿ ಹಿಂದುಳಿದಿದ್ದರು. ಇದನ್ನೇ ನೆಪ ಮಾಡಿಕೊಂಡು ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯವರು ಅವರಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು. ಒಂದು ವಿಷಯದಲ್ಲಿ ಫೇಲಾದರೆ ಇಂತಿಷ್ಟು ಹಣ ಪಾವತಿಸಬೇಕು. ಇಲ್ಲದಿದ್ದರೆ ವರ್ಷದ ಪೂರ್ಣ ಶುಲ್ಕ ಪಾವತಿಸಬೇಕು ಎಂದು ತೊಂದರೆ ಕೊಡುತ್ತಿದ್ದರು. ಕಾಲೇಜು ತೊರೆಯಲು ಮುಂದಾಗಿದ್ದ ಅನಾಮಿಕ ವರ್ಗಾವಣೆ ಪತ್ರ ಕೇಳಿದಾಗ ನಾಲ್ಕು ವರ್ಷದ ಶುಲ್ಕ ಪಾವತಿಸಿದರೆ ಕೊಡುವುದಾಗಿ ಹೇಳಿದ್ದರು. ಇದರಿಂದ ತೀವ್ರ ನೊಂದಿದ್ದ ಅನಾಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ದೂರಿದ್ದಾಗಿ ವರದಿ ವಿವರಿಸಿದೆ.

ಕಿರುಕುಳ ಆರೋಪದ ಮೇಲೆ ಅನಾಮಿಕ ಪೋಷಕರು ನೀಡಿದ ದೂರಿನ ಮೇರೆಗೆ ಕಾಲೇಜು ಪ್ರಾಚಾರ್ಯ ಮತ್ತು ಆಡಳಿತ ಮಂಡಳಿ ಸಿಬ್ಬಂದಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 108ರಡಿ (ಆತ್ಮಹತ್ಯೆಗೆ ಪ್ರಚೋದನೆ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಅನಾಮಿಕ ಅವರ ಸಾವು ಆತ್ಮಹತ್ಯೆಯಿಂದ ಆಗಿದೆ ಎಂದು ವರದಿಗಳು ಹೇಳಿವೆ. ಅದು ಆತ್ಮಹತ್ಯೆಯೂ.. ಕೊಲೆಯೂ? ಅಥವಾ ಇನ್ಯಾವುದೇ ಕಾರಣಕ್ಕೆ ಸಾವಾಗಿದೆಯೂ ಇನ್ನೂ ಖಚಿತವಾಗಿಲ್ಲ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವುದರಿಂದ ನಾವು ಇತ್ಯರ್ಥಕ್ಕೆ ಬರಲು ಸಾಧ್ಯವಿಲ್ಲ. ಹಾಗಾಗಿ, ‘ಆತ್ಮಹತ್ಯೆ’ ಬದಲಾಗಿ ಸುದ್ದಿಯಲ್ಲಿ ‘ಅಸಹಜ ಸಾವು’ ಎಂದಷ್ಟೇ ಉಲ್ಲೇಖಿಸಲಾಗಿದೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಯುಜಿಸಿ ಕರಡು ನಿಯಮಕ್ಕೆ ವಿರೋಧ : ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ 15 ಅಂಶಗಳ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...